ಆಧುನಿಕ ಭಗೀರಥ ಕಾಮೇಗೌಡರ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
ಮಂಡ್ಯ : ಪ್ರಕೃತಿ ಸಂರಕ್ಷಕ ಹಾಗೂ ಪ್ರಾಣಿ-ಪಕ್ಷಿಗಳಿಗೆ ಆಸರೆಯಾಗಲು ಹತ್ತಾರು ಕೆರೆಗಳನ್ನು ನಿರ್ಮಿಸಿ ಆಸರೆಯಾಗಿದ್ದ ದಾಸನ ದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸದ್ಯ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿ ಸಲಾಗಿದೆ.
ತೀವ್ರ ನಿಶಕ್ತಿ, ಬಲಗಾಲಿನ ನೋವು, ಕಫದ ಸಮಸ್ಯೆ ಹಾಗೂ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವ ಕಾಮೇಗೌಡರು ಬೆಳಕವಾಡಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆದು ಮನೆಯಲ್ಲಿ ಹಾಸಿಗೆ ಹಿಡಿದಿದ್ದರು.
ಈ ಬಗ್ಗೆ ಮಾಹಿತಿ ಪಡೆದ ತಹಶೀಲ್ದಾರ್ ಎಂ. ವಿ ಜಿಯಣ್ಣ ಕಾಮೇಗೌಡರನ್ನು ಪಟ್ಟಣದ ಸಾರ್ವ ಜನಿಕ ಆಸ್ಪತ್ರೆಗೆ ದಾಖಲಿಸಿದ್ದರು.
ನಂತರ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾ ಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಕಾಮೇಗೌಡರಿಗೆ ಚಿಕಿತ್ಸೆ ಮುಂದುವರೆದಿದೆ.
ಅಂತರ್ಜಲ ಅಭಿವೃದ್ಧಿಗೆ ಕೆರೆ ಕಟ್ಟೆ ನಿರ್ಮಿಸಿ ಲಕ್ಷಾಂತರ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಕಾಯಕದಲ್ಲಿ ತೊಡಗಿದ್ದ ಕಾಮೇಗೌಡರು ಕಳೆದ 40-50 ವರ್ಷಗಳಿಂದ ಸ್ವಂತ ಖರ್ಚಿನಲ್ಲಿ ಮರ ಗಿಡಗಳ ಪೋಷಣೆ ಮಾಡುತ್ತಾ ಬಂದಿದ್ದಾರೆ.
ಆಧುನಿಕ ಭಗೀರಥ ಕಾಮೇಗೌಡರ ಈ ಕಾರ್ಯಗಳನ್ನು ಮೆಚ್ಚಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕಾಮೇಗೌಡರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದರು.









