ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah | ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು

Mahesh M Dhandu by Mahesh M Dhandu
February 23, 2022
in Newsbeat, Politics, ರಾಜಕೀಯ
Siddaramaih Saaksha Tv
Share on FacebookShare on TwitterShare on WhatsappShare on Telegram

Siddaramaiah | ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ತಕ್ಷಣ ವಿರೋಧ ಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಂ ಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ರಾಜ್ಯದ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡಾ ಸಂಗ್ರಹಿಸಿದೆ. ರಾಜ್ಯ ಬಿಜೆಪಿ ಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಂ ಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು.

ಸಾಮಾಜಿಕ-ಆರ್ಥಿಕ ಸಮೀಕ್ಷೆಗಾಗಿ ಪ್ರತ್ಯೇಕ ಆಯೋಗ ರಚಿಸಲು ಹೇಳಿರುವ ಸುಪ್ರೀಂ ಕೋರ್ಟ್ ‘ರಾಜ್ಯ ಸರ್ಕಾರಗಳು ಈಗಾಗಲೇ ನಡೆಸಿರುವ ಸಮೀಕ್ಷೆಯ ಅಂಕಿ-ಅಂಶ ಮತ್ತು ಮಾಹಿತಿಯನ್ನು ಹೊಸ ಆಯೋಗಕ್ಕೆ ನೀಡಬಹುದು. ಆ ಮಾಹಿತಿಯನ್ನು ಆಧರಿಸಿ 2 ವಾರದೊಳಗೆ ಆಯೋಗ ಹಿಂದುಳಿದ ಜಾತಿಗಳ ಮೀಸಲಾತಿ ಬಗ್ಗೆ ಮಧ್ಯಂತರ ವರದಿಯನ್ನು ನೀಡಬಹುದು’ ಎಂದು ಕೂಡಾ ಹೇಳಿದೆ.

ಸುಪ್ರೀಂ ಕೋರ್ಟ್‌ನ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ.

Siddaramaiah Justice should be provided to the backward castes saaksha tv

ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ನಮ್ಮ ಸರ್ಕಾರ ದೇಶದಲ್ಲಿಯೇ ಮೊದಲ ಬಾರಿ ಮನೆಮನೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧವಾಗಿದೆ.

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಲು ಪ್ರತ್ಯೇಕವಾದ ಆಯೋಗವನ್ನು ರಚಿಸಬೇಕೆಂದು ಹೇಳಿದೆ. ಆದರೆ ಕರ್ನಾಟಕದಲ್ಲಿ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಇದೇ ಉದ್ದೇಶದಿಂದ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ.

ರಾಜ್ಯದ ಬಿಜೆಪಿ  ಸರ್ಕಾರ ಕಾಲವ್ಯಯಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ತನ್ನ ವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿರುವುದರಿಂದ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು.

2010ರಲ್ಲಿಯೇ ಸುಪ್ರೀಂ ಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರಕ್ಕೆ ಪ್ರಯತ್ನಿಸಬೇಕು

ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂ ಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದಕ್ಕೆ ಕರ್ನಾಟಕದಲ್ಲಿ ನಡೆದಂತ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ.

ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧವಿರುವುದರಿಂದ ಸುಪ್ರೀಂ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು.

ಸುಪ್ರೀಂ ಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್ – ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಬಿಜೆಪಿ ಸರ್ಕಾರ ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ಧೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು.

ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ.

ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದ ಕಾರಣಕ್ಕೆ ನ್ಯಾಯಬದ್ಧ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಂ ಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ ಎಂದು ವಿವರಿಸಿದ್ದಾರೆ.

Siddaramaiah Justice should be provided to the backward castes saaksha tv

Tags: #Saaksha TVCongresskarnatakaSiddaramaiah
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram