Aalanda |ಆಳಂದದಲ್ಲಿ ಗುಂಪು ಗಲಾಟೆ.. 167 ಮಂದಿ ಬಂಧನ
ಕಲಬುರಗಿ : ಆಳಂದ ನಗರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರತ್ಯೇಕ ಎಫ್ ಐ ಆರ್ ಗಳು ದಾಖಲಾಗಿವೆ.
ಘಟನೆ ಕುರಿತಂತೆ ಇಂದು ಬೆಳಗ್ಗೆಯಿಂದ ಕಾರ್ಯಾಚರಣೆ ಆರಂಭಿಸಿದ್ದ ಪೊಲೀಸರು ಈವರೆಗೂ 167 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ
ಮಹಾಶಿವರಾತ್ರಿ ಪ್ರಯುಕ್ತ ಆಳಂದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಗಂಗಾಭೀಷೇಕ ಹಾಗೂ ಪೂಜೆ ಸಲ್ಲಿಸಲು ಹೋದಾಗ ಎರಡು ಸಮುದಾಯಗಳ ಮದ್ಯೆ ಘರ್ಷಣೆ ಉಂಟಾಗಿತ್ತು.
ಗಲಾಟೆ ಸಂದರ್ಭದಲ್ಲಿ ಸಂಸದ, ಶಾಸಕರು, ಪೊಲೀಸ್, ಮಾಧ್ಯಮದವರ ವಾಹನಗಳ ಮೇಲೆ ಕಲ್ಲು ತೂರಾಟ ಕೂಡ ನಡೆದಿತ್ತು. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.
ಈ ಸಂಬಂಧ ಪೊಲೀಸರು 10 ಮಹಿಳೆಯರು ಸೇರಿದಂತೆ 167 ಜನರನ್ನು ಬಂಧಿಸಿದ್ದಾರೆ. ಸದ್ಯ ಆಳಂದಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಲಾಡ್ಲೇ ಮಶಾಕ್ ದರ್ಗಾಕ್ಕೆ ಜನರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ದರ್ಗಾ ಸೇರಿದಂತೆ ಎಲ್ಲಡೆ ಪೊಲೀಸರ ನಿಯೋಜನೆ ಮಾಡಲಾಗಿದೆ. ದರ್ಗಾ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿನ ಅಂಗಡಿಗಳು ಬಂದ್ ಮಾಡಲಾಗಿದೆ. ಸೂಕ್ತ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿದೆ.