ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮೀಸಲಾತಿ ಜಾರಿ ಮಾಡದಿದ್ದರೇ ರಾಜ್ಯಾದ್ಯಂತ ಜನಾಂದೋಲನ 

Mahesh M Dhandu by Mahesh M Dhandu
March 14, 2022
in Newsbeat, Sports, ಕ್ರಿಕೆಟ್, ಕ್ರೀಡೆ
bangalore-shanakar guha dwarakanath press meet saaksha tv
Share on FacebookShare on TwitterShare on WhatsappShare on Telegram

Bangalore | ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮೀಸಲಾತಿ ಜಾರಿ ಮಾಡದಿದ್ದರೇ ರಾಜ್ಯಾದ್ಯಂತ ಜನಾಂದೋಲನ

ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರ ಸರ್ಕಾರ ಶೇ. 10ರಷ್ಟುಮೀಸಲಾತಿ ಘೋಷಣೆ ಮಾಡಿದ್ದು, ಈಗ ಹಲವು ರಾಜ್ಯಗಳಲ್ಲಿ ಕಾರ್ಯರೂಪಕ್ಕೂ ಬರುತ್ತಿದೆ. ಆದ್ರೆ ನಮ್ಮ ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ಮೀನಾಮೇಷ ಎನಿಸುತ್ತಿದೆ. ಒಂದು ವೇಳೆ ಈ ಕಾಯ್ದೆಯನ್ನು ಜಾರಿಗೊಳಿಸದಿದ್ರೆ ರಾಜ್ಯಾದ್ಯಂತ ಜನಾಂದೋಲನ ಹೋರಾಟ ನಡೆಸುವುದಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮೀಸಲಾತಿ ಹೋರಾಟ ಸಮಿತಿಯ ಅಧ್ಯಕ್ಷ ಡಾ. ಶಂಕರ್ ಗುಹಾ ದ್ವಾರಕನಾಥ್ ಬೆಳ್ಳೂರು ಅವರು ಎಚ್ಚರಿಕೆ ನೀಡಿದ್ದಾರೆ.

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026

2019ರ ಜನವರಿ ತಿಂಗಳಿನಲ್ಲಿ ಕೇಂದ್ರದ ಸಚಿವ ಸಂಪುಟಸಭೆಯಲ್ಲಿ ಅನುಮೋದನೆ ಪಡೆದುಕೊಂಡ ಈ ಮೀಸಲಾತಿ ಕಾಯ್ದೆಯನ್ನು ಜನವರಿ 8, 2019ರಲ್ಲಿ 124ನೇ ವಿದಿ ತಿದ್ದುಪಡಿಯನ್ವಯ ಲೋಕಸಭೆಯಲ್ಲಿ ಮತ್ತು ರಾಜ್ಯಸಭೆಯಲೂ ಅಂಗೀಕರಿಸಿ ಕಾಯ್ದೆ ಜಾರಿ ಮಾಡಲಾಗಿದೆ. ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯಗಳಿಗೆ ಸರ್ಕಾರಿ ಉದ್ಯೋಗ ನೀಡುವಲ್ಲಿ ಹಾಗೂ ಪ್ರತಿಭಾನ್ವಿತ ಬಡವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮುಂದೆ ಬರಲು ಶೇ. 10ರಷ್ಟು ಮೀಸಲಾತಿ ನೀಡುವ ಕಾಯ್ದೆ ಇದಾಗಿದೆ ಎಂದು ಅವರು ಹೇಳಿದರು.

ಯೂಥ್ ಫರ್ ಈಕ್ವಾಲಿಟಿ ಎಂಬ ಎನ್ ಜಿ ಒ ಸಂಸ್ಥೆಯು ಜನವರಿ 10ರಂದು ಜಾತಿ ಆಧಾರಿತ ಮೀಸಲಾತಿ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಆ ಅರ್ಜಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯಗಳ ಮೀಸಲಾತಿಯನ್ನು ಶೇ. 50ರ ಮೀಸಲಾತಿ ಅಡಿಯಲ್ಲಿ ಸೇರಿಸಲು ಮನವಿ ಮಾಡಿಕೊಂಡಿತ್ತು. ಈ ಮೀಸಲಾತಿಯು ಶೇ.50 ಮೀಸಲಾತಿಯನ್ನು ಹೊರತುಪಡಿಸಿದ್ದಾಗಿತ್ತು. ಆದರೆ ಸುಪ್ರೀಂಕೋರ್ಟ್ ಈ ಮನವಿಯನ್ನು ತಿರಸ್ಕರಿಸಿ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು. 2021ರ ಆಗಸ್ಟ್ 6ರಂದು ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಜೊತೆಗೆ 5 ಸದಸ್ಯರ ವಿಸ್ಕೃತ ಪೀಠಕ್ಕೆ ಈ ಅರ್ಜಿಯನ್ನು ವರ್ಗಾಯಿಸಿತು ಎಂದು ಡಾ. ಶಂಕರ್ ಗುಹಾ ಅವರು ಮಾಹಿತಿ ನೀಡಿದರು.

ಈ ಮೀಸಲಾತಿಯನ್ನು ಜಾರಿಮಾಡಲು ಪ್ರತಿಯೊಂದು ರಾಜ್ಯವೂ ತನಗೆ ಬೇಕಾದಂತೆ ಅರ್ಹತಾ ಮಾನದಂಡಗಳನ್ನು ರಚಿಸಲು ಸ್ವತಂತ್ರ ಎಂದು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಸದ್ಯ ಈ ಮೀಸಲಾತಿಯನ್ನು ವಾರ್ಷಿಕ ಸಂಪಾದನೆ 8 ಲಕ್ಷಕ್ಕಿಂತ ಕಡಿಮೆ, 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವವರು, ಮನೆಯ ನಿವೇಶನ 1000 ಕ್ಕಿಂತ ಕಡಿಮೆ ಇರುವವರು, ಪಟ್ಟಣ ಪಂಚಾಯತ್ ವ್ಯಾಪ್ತಿಯಲಿ 100 ಚದರಡಿ ಒಳಗೆ ಹಾಗೂ ಮುನಿಸಿಪಾಲಿಟಿ ವ್ಯಾಪ್ತಿಯ ಹೊರಗಿರುವವರು 200 ಚದರಡಿಯ ಮನೆ ಹೊಂದಿರುವವರು ಹಾಗೂ ಇಡಬ್ಲ್ಯೂಎಸ್ ಸರ್ಟಿಫಿಕೇಟ್ ಕಡ್ಡಾಯವಾಗಿ ಹೊಂದಿರುವವರುಮೀಸಲಾತಿಗೆ ಅರ್ಜಿಸಲ್ಲಿಸಬಹುದು ಎನ್ನುವ ನಿಯಮ ಮಾಡಲಾಗಿದೆ ಎಂದರು.

ಈಗಾಗಲೇ 11 ರಾಜ್ಯಗಳು ಈ ಮೀಸಲಾತಿಯನ್ನುಜಾರಿಗೆ ತಂದಿವೆ. ಕೇರಳ, ಮಹಾರಾಷ, ಗುಜರಾತ್ ಉತ್ತರಾಖಂಡ್, ಜಾರ್ಖಂಡ್, ಮಿಜೋರಾಂ, ದೆಹಲಿ, ಅಸ್ಸಾಂ, ಜಮ್ಮು ಕಾಶ್ಮೀರ, ಗೋವಾ, ತೆಲಂಗಾಣ ಮತು ಆಂಧ್ರ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಶೇ.10ರಷ್ಟು ಮೀಸಲಾತಿ ಯೋಜನೆ ಜಾರಿಯಲ್ಲಿದೆ. ನಮ್ಮ ರಾಜ್ಯದಲ್ಲಿ ಈ ಹಿಂದೆ ಬಿ.ಎಸ್ ಯಡಿಯೂರಪ್ಪನವರು ಮುಖ್ಯ ಮಂತ್ರಿಯಾಗಿದ್ದಾಗ, ರಾಜೀನಾಮೆ ನೀಡುವ ಒಂದು ದಿನ ಮೊದಲು ಸಚಿವ ಸಂಪುಟದಲ್ಲಿ ಈ ವಿಚಾರ ಚರ್ಚೆಗೆ ತಂದಿದ್ದರು ಎಂದು ಡಾ. ಶಂಕರ್ ಗುಹಾ ಹೇಳಿದರು.

bangalore-shanakar guha dwarakanath press meet saaksha tv

ನಂತರ ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರ್ಕಾರ ಮೀಸಲಾತಿ ಅನುಷ್ಠಾನಕ್ಕೆ ಮನಸು ಮಾಡುತ್ತಿಲ್ಲ. ಈ ಮೀಸಲಾತಿ ಜಾರಿಯಾದರೇ, ಬಡಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಾನ್ವೇಷಣೆಯಲ್ಲಿ ನಿರತ ಬಡ ಯುವಕ/ಯುವತಿಯರಿಗೆ ಸಹಾಯವಾಗುತ್ತದೆ. ಸರ್ಕಾರ ಇದನ್ನು ಕೂಡಲೆ ಜಾರಿಗೆ ತರಬೇಕು, ಆರ್ಥಿಕವಾಗಿ ಹಿಂದುಳಿದ ಸಮುದಾಯದ ನಿರ್ಲಕ್ಷ್ಯ ತೀವ್ರ ಖಂಡನಾರ್ಹವಾಗಿದೆ ಎಂದರು.

ಹೀಗಾಗಿ ಹಾಲಿ ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಗಡವು ನೀಡುತ್ತಿದ್ದೇವೆ. ಈ ಮೀಸಲಾತಿಯನ್ನು ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಲು ಇಡಬ್ಲ್ಯುಎಸ್ ಮೀಸಲಾತಿ ಹೋರಾಟ ಸಮಿತಿ ರಚಿಸಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ಕಾರ್ಯಪ್ರವೃತ್ತರಾಗಿ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಮೀಸಲಾತಿ ಜಾರಿ ಮಾಡಬೇಕು. ಇಲ್ಲದಿದ್ದಲಿ ರಾಜ್ಯಾದ್ಯಂತ ಜನಜಾಗೃತಿ ಮೂಡಿಸಲು ಯೋಜನೆ ರೂಪಿಸಿಕೊಂಡಿದ್ದೇವೆ. ಮುಂಬರುವ ದಿನಗಳಲ್ಲಿ ಬೀದಿಗಿಳಿದುಹೋರಾಟನಡೆಸಲು ಸಿದ್ಧರಿದ್ದೇವೆ. ನಾವು ಆರ್ಥಿಕವಾಗಿ ಹಿಂದುಳಿದಿದ್ದೇವೆಯೇ ವಿನಃ ದೈಹಿಕ ಹೋರಾಟದಲ್ಲಿ ಹಿಂದೆ ಬೀಳುವುದಿಲ್ಲ. ಈಗಲಾದರೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೇ ಉಗ್ರ ಹೋರಾಟ ನಡೆಸುವುದಾಗಿ ಡಾ. ಶಂಕರ್ ಗುಹಾ ದ್ವಾರಕನಾಥ್ ಬೆಳ್ಳೂರು ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮೀಸಲಾತಿ ಹೋರಾಟ ಸಮಿತಿಯ ಮುಖ್ಯ ಸಲಹೆಗಾರ ಪ್ರೊ.. ಕೆ.ಇ. ರಾಧಾಕೃಷ್ಣ, ಕಾರ್ಯದರ್ಶಿ ಎಚ್.ಎ. ಶ್ರೀನಿವಾಸ್, ಸದಸ್ಯರುಗಳಾದ ಡಾ. ಆಡೂರು ಗುರುಚರಣ್ ಮತ್ತು ಬಿ.ಎಸ್. ದತ್ತಾತ್ರೇಯ ಅವರು ಉಪಸ್ಥಿತರಿದ್ದರು.

Tags: #Saaksha TVbangaloreShankar guha dwarakanath
ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram