ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Bangalore | ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ

Mahesh M Dhandu by Mahesh M Dhandu
March 22, 2022
in Hale Mysore, Newsbeat
bhagavad gita Saaksha Tv
Share on FacebookShare on TwitterShare on WhatsappShare on Telegram

Bangalore | ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ

ಬೆಂಗಳೂರು : ಹಣ ಗಳಿಸುವ ಉದ್ದೇಶವನ್ನು ಕಲಿಸುವ ಬ್ರಿಟೀಷ್‌ ಶಿಕ್ಷಣ ವ್ಯವಸ್ಥೆಯ ಹೊರತಾಗಿ, ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುವ, ಜೀವನಕ್ಕೆ ಸಾರ್ಥಕತೆಯನ್ನು ನೀಡುವಂತಹ ಶಕ್ತಿಯನ್ನು ಹೊಂದಿರುವ ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಭೋಧಿಸಿದ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ ಎಂದು ವಿಧಾನಸಭಾಧ್ಯಕ್ಷರಾದ  ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಪ್ರಾಯಪಟ್ಟರು.

Related posts

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

March 2, 2026
ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

ಸಿದ್ದು ಲೆಕ್ಕ : ಗ್ಯಾರಂಟಿ ಯೋಜನೆಗಳ ಭವಿಷ್ಯವೇನು 2026ರ ಕರ್ನಾಟಕ ಬಜೆಟ್ ಮಹಾ ಲೆಕ್ಕಾಚಾರ ಇಲ್ಲಿದೆ

March 2, 2026

ಇಂದು ಬೆಂಗಳೂರಿನ ಜಯನಗರದಲ್ಲಿರುವ ಶ್ರೀ ಚರಣ್ ಬ್ಯಾಂಕ್ ಶಾಖೆಯ ನ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಅಳವಡಿಸಬೇಕು ಎನ್ನುವಂತಹ ವಿಷಯದ ಬಗ್ಗೆ ಬಹಳಷ್ಟು ಚರ್ಚೆ ನಡೆಯುತ್ತಿದೆ. ಇಂದಿನ ಶಿಕ್ಷಣ ವ್ಯವಸ್ಥೆ ಹಣವನ್ನು ಗಳಿಸುವ ಉದ್ದೇಶದ ಬ್ರಿಟೀಷ್‌ ಪದ್ಧತಿಯಾಗಿದೆ. ನನ್ನದೊಂದು ನಂಬಿಕೆ ಇದೆ ಅದನ್ನು ಹೇಳಿದರೆ ತಪ್ಪಾಗಲಾರದು, ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಇದೆ ಎಂದು ಅನಿಸುತ್ತದೆ. ಏಕೆಂದರೆ ಅದರಲ್ಲಿ ಯಾವ ಜಾತಿ, ಉಪಜಾತಿ, ಆ ರಾಜ್ಯ, ಈ ಭಾಷೆ ಆ ಗಡಿ, ಈ ಗಡಿ ಎನ್ನುವ ತಾರತಮ್ಯ ಇರಲಿಲ್ಲ. ಯಾವ ಭೇದಬಾವ ಕೂಡ ಇಲ್ಲ. ಸೃಷ್ಟಿಯ ಸತ್ಯ ಏನಿದೆಯೋ ಅದು ಭಗವದ್ಗೀತೆಯಲ್ಲಿ ತಿಳಿಸಲಾಗಿದೆ. ಸೃಷ್ಟಿಯ ಸತ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕು, ಹಾಗಾಗಿ ಅದನ್ನು ತಿಳಿದುಕೊಳ್ಳುವ ಶಿಕ್ಷಣ ಭಗವದ್ಗೀತೆಯಲ್ಲಿದೆ. ಹಾಗಾಗಿ ಭಗವದ್ಗೀತೆಯ ಶಿಕ್ಷಣವನ್ನು ನಾವು ಕಲಿಸಿದರೆ ತಪ್ಪಾಗಲಾರದು ಎನ್ನುವುದು ನನ್ನ ನಂಬಿಕೆ. ಹಾಗೂ ಅದನ್ನು ಕಲಿಸಬೇಕೆಂಬ ಆಗ್ರಹ ನನ್ನದಾಗಿದೆ.

ಶಿಕ್ಷಣ ಮಂತ್ರಿಯಾಗಿದ್ದಾಗ ಭಗವದ್ಗೀತಾ ಅಭಿಯಾನ ನಡೆಯಿತು. ಸ್ವರ್ಣವಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದಂತಹ ಅಭಿಯಾನದಲ್ಲಿ ರಾಜ್ಯದ 20 ಲಕ್ಷ ವಿದ್ಯಾರ್ಥಿಗಳು ಭಗವದ್ಗೀತೆ ಕಲಿಯುವ ಅವಕಾಶವನ್ನು ನಾನು ಶಿಕ್ಷಣ ಮಂತ್ರಿಯಾಗಿ ಮಾಡಿಕೊಟ್ಟಿದ್ದೇನೆ. ಇಂದು ಅದು ಕಡ್ಡಾಯವಾಗಿ ಶಿಕ್ಷಣದಲ್ಲಿ ಅಳವಡಿಕೆ ಆಗಬೇಕು ಎನ್ನುವ ಚರ್ಚೆ ನಡೆಯುತ್ತಿದೆ. ಅದು ಬರಲಿ ಎಂದು ಆಶಿಸೋಣ ಭಗವದ್ಗೀತೆ ಶಿಕ್ಷಣದ ಭಾಗ ಆಗಬೇಕು, ಏಕೆಂದರೆ ಅದರಿಂದಾಗಿ ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುತ್ತದೆ. ಜೀವನದ ಸಾರ್ಥಕತೆಯನ್ನು ಅದು ನೀಡುತ್ತದೆ. ಹಣಗಳಿಸುವ ಶಿಕ್ಷಣ ವ್ಯವಸ್ಥೆಯಿಂದ, ನಮ್ಮ ಜೀವನ ಸಾರ್ಥಕಗೊಳಿಸುವ ಶಿಕ್ಷಣ ವ್ಯವಸ್ಥೆಯ ಕಡೆಗೆ ಹೋಗಲು ಭಗವದ್ಗೀತೆಯಂತಹ ಶಿಕ್ಷಣ ಬೇಕು. ನಾವು ಹಣಗಳಿಸುವ ವ್ಯವಸ್ಥೆಯಿಂದ ಪರಿವರ್ತನೆ ತರಬೇಕು ಎನ್ನುವುದಾದರೆ ಆಧ್ಯಾತ್ಮಿಕ ತಳಹದಿಯ ಶಿಕ್ಷಣ ನಮಗೆ ಅಗತ್ಯ ಇದೆ ಆಧ್ಯಾತ್ಮಿಕ ತಳಹದಿಯ ಶಿಕ್ಷಣ ಭಗವದ್ಗೀತೆಯಂತಹ ಶಿಕ್ಷಣದಲ್ಲಿ ಸಿಗುತ್ತದೆ ಎನ್ನುವುದು ನಮ್ಮ ನಂಬಿಕೆಯಾಗಿದೆ ಎಂದು ಹೇಳಿದರು.

ಹಣ ಮುಖ್ಯ ಆದರೆ ಹಣವನ್ನು ಹೇಗಾದರೂ ಗಳಿಸಲೇಬೇಕು ಎನ್ನುವಂತಹ ಹಪಾಹಪಿತನ ದುರಾಸೆಯನ್ನು ಸಮಾಜದಲ್ಲಿ ಕಾಣುತ್ತಿದ್ದೇವೆ. ಯಾವ ಮಾರ್ಗದಿಂದಲಾದರೂ ಹಣ ಗಳಿಸಬೇಕು ಎನ್ನುವ ದುರಾಸೆ ಹೆಚ್ಚಾಗಿದೆ. ಆಸೆ ಇರಬೇಕು ನಿಜ ಆದರೆ ದುರಾಸೆ ಶುರುವಾದರೆ ವ್ಯವಸ್ಥೆಯಲ್ಲಿನ ಶಿಥಿಲತೆ ಶುರುವಾಗುತ್ತದೆ. ನಮಗೆ ಬೇಕಾಗಿರುವುದು ಧರ್ಮಮಾರ್ಗದಿಂದ ಗಳಿಸಿದಂತ ಹಣ ಮಾತ್ರ. ಈ ಹಿನ್ನಲೆಯಲ್ಲಿ ನಾವು ಆಧ್ಯಾತಿಕ ತಳಹದಿಯ ಶಿಕ್ಷಣವನ್ನು ಅಳವಡಿಸಿಕೊಳ್ಳುವದತ್ತ ಹೆಚ್ಚಿನ ಗಮನ ನೀಡಬೇಕಾಗಿದೆ ಎಂದರು.

bangalore-Bhagavad-Gita Vishweshwar Hegde Kageri  saaksha tv

ಚರಣ್ ಬ್ಯಾಂಕ್ ಕಳೆದ 25 ವರ್ಷಗಳಲ್ಲಿ ಬಹಳಷ್ಟನ್ನು ಸಾಧಿಸಿದೆ. ಹಣಕಾಸಿನ ಸಂಸ್ಥೆ ವಿಶ್ವಾಸಾರ್ಹತೆಯನ್ನು ಗಳಿಸಿಕೊಳ್ಳುವುದು ಬಹಳ ಮುಖ್ಯವಾದ ವಿಷಯ. ಈ ನಿಟ್ಟಿನಲ್ಲಿ ಚರಣ್ ಬ್ಯಾಂಕ್ ಬಹಳಷ್ಟು ಸಾಧಿಸುವುದನ್ನು ನಾವು ಕಂಡಿದ್ದೇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಮಾರು ಐದು ದಶಕಗಳ ಅನುಭವವನ್ನು ಹೊಂದಿರುವಂತಹ ದ್ವಾರಕಾನಾಥ್ ನೇತೃತ್ವದ ಚರಣ್ ಬ್ಯಾಂಕ್ ಜನರಲ್ಲಿ ವಿಶ್ವಾರ್ಹತೆಯನ್ನು ಗಳಿಸಿಕೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಚರಣ್‌ ಸೌಹಾರ್ದ ಕೋ ಆಪರೇಟೀವ್‌ ಬ್ಯಾಂಕ್‌ ಲಿಮಿಟೆಡ್‌ನ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಬಿ.ವಿ ದ್ವಾರಕಾನಾಥ್‌, ಉಪಾಧ್ಯಕ್ಷರಾದ ಶುಭಪ್ರದ ಇಟಗಿ ಉಪಸ್ಥಿತರಿದ್ದರು. bangalore-Bhagavad-Gita Vishweshwar Hegde Kageri

Tags: #Saaksha TVbangalorevishweshwara hegde kageri
ShareTweetSendShare
Join us on:

Related Posts

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

by Shwetha
March 2, 2026
0

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ವಿರೋಧ ಪಕ್ಷವೇ ಇಲ್ಲದಂತಾಗಿದೆ, ಅದು...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

ಸಿದ್ದು ಲೆಕ್ಕ : ಗ್ಯಾರಂಟಿ ಯೋಜನೆಗಳ ಭವಿಷ್ಯವೇನು 2026ರ ಕರ್ನಾಟಕ ಬಜೆಟ್ ಮಹಾ ಲೆಕ್ಕಾಚಾರ ಇಲ್ಲಿದೆ

by Shwetha
March 2, 2026
0

ರಾಜ್ಯದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಆಯವ್ಯಯ ಮಂಡನೆಗೆ ಸಜ್ಜಾಗಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿರಲಿದ್ದು,...

ಅಂಗನವಾಡಿ ಹುದ್ದೆಗಳಿಗೆ ಬೃಹತ್ ನೇಮಕಾತಿ: ಪರೀಕ್ಷೆ ಇಲ್ಲದೆ ನೇರ ಉದ್ಯೋಗ ಪಡೆಯುವ ಸುವರ್ಣಾವಕಾಶ

ಅಂಗನವಾಡಿ ಹುದ್ದೆಗಳಿಗೆ ಬೃಹತ್ ನೇಮಕಾತಿ: ಪರೀಕ್ಷೆ ಇಲ್ಲದೆ ನೇರ ಉದ್ಯೋಗ ಪಡೆಯುವ ಸುವರ್ಣಾವಕಾಶ

by Shwetha
March 2, 2026
0

ಕಲಬುರಗಿ: ಜಿಲ್ಲೆಯ ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಕಲಬುರಗಿ ಜಿಲ್ಲೆಯಾದ್ಯಂತ ಖಾಲಿ ಇರುವ ಒಟ್ಟು 412...

ಬೆಂಗಳೂರಿಗರೇ ಎಚ್ಚರ ಇನ್ಮುಂದೆ ಮಿಶ್ರ ಕಸ ನೀಡಿದರೆ ಬೀಳುತ್ತೆ ಭಾರೀ ದಂಡ ತ್ಯಾಜ್ಯ ವಿಂಗಡಣೆ ಕಡ್ಡಾಯಗೊಳಿಸಿದ ಬಿಎಸ್‌ಡಬ್ಲ್ಯೂಎಂಎಲ್

ಬೆಂಗಳೂರಿಗರೇ ಎಚ್ಚರ ಇನ್ಮುಂದೆ ಮಿಶ್ರ ಕಸ ನೀಡಿದರೆ ಬೀಳುತ್ತೆ ಭಾರೀ ದಂಡ ತ್ಯಾಜ್ಯ ವಿಂಗಡಣೆ ಕಡ್ಡಾಯಗೊಳಿಸಿದ ಬಿಎಸ್‌ಡಬ್ಲ್ಯೂಎಂಎಲ್

by Shwetha
March 2, 2026
0

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಸದ ಸಮಸ್ಯೆ ನಿವಾರಣೆಗೆ ಇದೀಗ ಆಡಳಿತ ವ್ಯವಸ್ಥೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಮನೆಯಿಂದ ಕಸ ನೀಡುವಾಗ ಹಸಿ ಮತ್ತು ಒಣ...

ಖಾಲಿ ಹುದ್ದೆ ಭರ್ತಿ ಮಾಡದೇ ಯುವಶಕ್ತಿಗೆ ಅನ್ಯಾಯ: ಸರಕಾರದ ವಿರುದ್ಧ ಜನ ದಂಗೆ ಏಳುವ ಮುನ್ನ ಎಚ್ಚೆತ್ತುಕೊಳ್ಳಿ ;ಸಿದ್ದರಾಮಯ್ಯ ಸರಕಾರಕ್ಕೆ ವಿಜಯೇಂದ್ರ ಖಡಕ್ ಎಚ್ಚರಿಕೆ

ಖಾಲಿ ಹುದ್ದೆ ಭರ್ತಿ ಮಾಡದೇ ಯುವಶಕ್ತಿಗೆ ಅನ್ಯಾಯ: ಸರಕಾರದ ವಿರುದ್ಧ ಜನ ದಂಗೆ ಏಳುವ ಮುನ್ನ ಎಚ್ಚೆತ್ತುಕೊಳ್ಳಿ ;ಸಿದ್ದರಾಮಯ್ಯ ಸರಕಾರಕ್ಕೆ ವಿಜಯೇಂದ್ರ ಖಡಕ್ ಎಚ್ಚರಿಕೆ

by Shwetha
March 2, 2026
0

ಚಿಕ್ಕಮಗಳೂರು: ಅಹಿಂದ ಮಂತ್ರ ಪಠಿಸುವ ಮೂಲಕ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಇದೀಗ ಅದೇ ಸಮುದಾಯಗಳಿಗೆ ಮತ್ತು ರಾಜ್ಯದ ಯುವಜನತೆಗೆ ಅನ್ಯಾಯ ಮಾಡುತ್ತಿದೆ. ಖಾಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram