ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಕಳೆದ 7 ವರ್ಷಗಳಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ : ಡಾ. ಕೆ ಸುಧಾಕರ್

Mahesh M Dhandu by Mahesh M Dhandu
April 29, 2022
in Newsbeat, State, ರಾಜ್ಯ
D K Sudakar Saaksha Tv
Share on FacebookShare on TwitterShare on WhatsappShare on Telegram

Bangalore | ಕಳೆದ 7 ವರ್ಷಗಳಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ : ಡಾ. ಕೆ ಸುಧಾಕರ್

ಬೆಂಗಳೂರು : ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ ಕಂಡಿದೆ. ಪ್ರತೀ ವರ್ಷ 65000 ಎಂಬಿಬಿಎಸ್ ವೈದ್ಯರು ಮತ್ತು 30,000 ವೈದ್ಯರು ಸ್ನಾತಕೋತ್ತರ ಪದವಿ ಪಡೆದು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಬೆಂಗಳೂರು ಮೆಡಿಕಲ್ ಕಾಲೇಜಿನ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಇದು ದೇಶದಲ್ಲಿ ಮಹಿಳಾ ಸಬಲೀಕರಣದ ಸಂಕೇತ. ಸಮಾಜದಲ್ಲಿ ಬದಲಾವಣೆಗಳು ಆಗುತ್ತಿವೆ. ಬಡವರ ಮಕ್ಕಳು ಕೂಡ ವೈದ್ಯರಾಗಬೇಕೆಂಬ ಕನಸು ಈಡೇರುತ್ತಿದೆ ಎಂದು ಹೇಳಿದರು.

ಬೆಂಗಳೂರು ಮೆಕಲ್ ಕಾಲೇಜು (ಬಿಎಂಸಿ) ದೇಶದ ಹೆಮ್ಮೆಯ ಕಾಲೇಜುಗಳುಗಳಲ್ಲಿ ಒಂದು. ಇಲ್ಲಿ ಪ್ರವೇಶ ಪಡೆಯುವ ಕನಸು ಹಲವು ವಿದ್ಯಾರ್ಥಿಗಳಿಗೆ ಇರುತ್ತದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಅದೃಷ್ಟವಂತರಲ್ಲಿ ಅದೃಷ್ಟವಂತರು. ಅತ್ಯುತ್ತಮ ಸಂಸ್ಥೆಯಲ್ಲಿ ಕಲಿತನ ಅನುಭವ ಜೊತೆಗೆ ಸಮಾಜದಲ್ಲಿ ವಿಭಿನ್ನ ಮತ್ತು ವಿಶಿಷ್ಟ ಗೌರವ ಸಿಗುತ್ತದೆ. ವೈದ್ಯರಿಗೆ ಸಮಾಜದ ಎಲ್ಲಾ ಕಡೆಯೂ ವಿಶಿಷ್ಟ ಗೌರವ ಇದೆ. ವೈದ್ಯ ವಿದ್ಯಾರ್ಥಿಗಳು, ಪದವಿ ಪಡೆದವರು ಈ ಸಮಾಜದ ಹೆಮ್ಮೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಒಟ್ಟು 65 ಮೆಡಿಕಲ್ ಕಾಲೇಜುಗಳಿವೆ. 4 ಸರ್ಕಾರಿ ಮೆಡಿಕಲ್ ಕಾಲೇಜುಗಳು ಶೀಘ್ರದಲ್ಲಿ ಆರಂಭವಾಗಲಿವೆ. ಖಾಸಗಿಯಲ್ಲಿ 3 ಹೆಚ್ವುವರಿ ಮೆಡಿಕಲ್ ಕಾಲೇಜುಗಳಿಗೆ ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ 9 ಜಿಲ್ಲೆಗಳಲ್ಲಿ ಹೊಸತಾಗಿ 9 ಮೆಡಿಕಲ್ ಕಾಲೇಜುಗಳು ಆರಂಭ ಮಾಡಲು ತಯಾರಿಗಳು ನಡೆಯುತ್ತಿವೆ. ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇಕಡಾ 30.5 ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ನಂತರ ಕರ್ನಾಟಕದಲ್ಲಿ ಅತೀ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. 2014ಕ್ಕೂ ಮೊದಲು ದೇಶದಲ್ಲಿ ಕೆಲವೇ ಕೆಲವು ಮೆಡಿಕಲ್ ಕಾಲೇಜಿಗಳಿದ್ದವು. ಆದರೆ ಕಳೆದ 7 ವರ್ಷಗಳಲ್ಲಿ ಹೊಸತಾಗಿ 150 ಕ್ಕೂ ಅಧಿಕ ಮೆಡಿಕಲ್ ಕಾಲೇಜುಗಳು ಆರಂಭವಾಗಿವೆ. 65,000 ಎಂಬಿಬಿಎಸ್ ಡಾಕ್ಟರ್ ಗಳು ಪ್ರತೀ ವರ್ಷ ಹೊರ ಬರುಯತ್ತಾರೆ. 30,000 ಸ್ನಾತಕೋತ್ತರ ಪದವಿ ಪಡೆದ ವೈದ್ಯರು ಸಮಾಜ ಸೇವೆಗೆ ಲಭ್ಯರಾಗುತ್ತಿದ್ದಾರೆ. ವೈದ್ಯಕೀಯ ಶಿಕ್ಷಣದ ಕ್ಷೇತ್ರ ದುಬಾರಿ ವೆಚ್ಚವನ್ನು ಬಯಸುತ್ತಿದೆ. ಆದರೆ ಇದನ್ನು ಸರ್ಕಾರ ಹಂತ ಹಂತವಾಗಿ ಕಡಿಮೆ ಮಾಡಲು ಯೋಜನೆ ರೂಪಿಸಿದೆ. ಬಡವರಿಗೂ ಸಹ ವೈದ್ಯಕೀಯ ಶಿಕ್ಷಣ ಸಿಗಬೇಕು ಅನ್ನುವುದೇ ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ ಎಂದು ಹೇಳಿದರು.

Medical education system changes in the last 7 years: Dr. K Sudhakar saaksha tv

ಕೊರೊನಾ ಸಾಂಕ್ರಾಮಿಕ ರೋಗದ ವೇಳೆ ವೈದ್ಯಕೀಯ ವಿದ್ಯಾರ್ಥಿಗಳು ಅನನ್ಯ ಸೇವೆ ಸಲ್ಲಿಸಿದ್ದಾರೆ. ಜೀವನದಲ್ಲಿ ಎದುರಾಗಬಹುದುದಾದ ಸಂಕಷ್ಟಗಳು ಕಲಿಕೆಯ ಹಂತದಲ್ಲೇ ಅನುಭವಕ್ಕೆ ಬಂದಿದೆ. ಇದು ಜೀವನದ ಅಂತ್ಯವಲ್ಲ, ಆರಂಭ ಎಂದು ಪ್ರಧಾನಿಯವರು ಹೇಳಿದರಂತೆ ಎಲ್ಲಾ ವೈದ್ಯಕೀಯ ವಿದ್ಯಾರ್ಥಿಗಳ ಹೊಸ ಜೀವನ ಇಂದಿನಿಂದ ಆರಂಭವಾಗಿದೆ. ಕಳೆದ 5 ವರ್ಷಗಳಲ್ಲಿ ತೋರಿದ ಬದ್ಧತೆ, ಶ್ರದ್ಧೆ ಮತ್ತು ಅಧ್ಯಯನ ಶೀಲತೆಯನ್ನು ಬದುಕಿನ ಉದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಆಶಿಸಿದರು.

ಭಾರತ ವೈದ್ಯಕೀಯ ವಿಜ್ಞಾನಕ್ಕೆಅದ್ಭುತ ಇತಿಹಾಸವಿದೆ. ಆಯುರ್ವೇದದಲ್ಲಿ ಚರಕ, ಶುಶ್ರೂತರ ಕೊಡುಗೆ ಅಮೂಲ್ಯವಾದದ್ದು. ಬಿಎಂಸಿ ಕೂಡ ಕೇವಲ ವೈದ್ಯರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿಲ್ಲ. ಬದಲಾಗಿ ಸಂಶೋಧನೆ ಮತ್ತು ಅಭಿವೃದ್ಧಿ ಕಡೆಗೂ ಗಮನ ಹರಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಬಿಎಂಸಿಯ ವಿದ್ಯಾರ್ಥಿಗಳು ನೀಡಿದ ಸೇವೆಗೆ ಧನ್ಯವಾಧಗಳು. ಇವರ ಶ್ರಮದಿಂದ ಲಸಿಕೆ ಬರುವ ಹಂತದ ವರೆಗೆ ಕೊರೊನಾವನ್ನು ಕಂಟ್ರೋಲ್ ಮಾಡಲು ಸಾಧ್ಯವಾಯಿತು ಎಂದರು.

ವೈದ್ಯರ ಸೇವೆ ಸಮಾಜದಲ್ಲಿ ವಿಭಿನ್ನ ಗೌರವವನ್ನು ಹೊಂದಿದೆ. ಮನುಷ್ಯತ್ವ ಮತ್ತುಸೇವೆಯನ್ನು ಒಂದೇ ಕಾಲದಲ್ಲಿ ಅಪೇಕ್ಷೆ ಮಾಡುವ ಕೆಲಸ ಇದಾಗಿದೆ. ಇದರಲ್ಲಿ ಆತ್ಮ ತೃಪ್ತಿಯೂ ಇದೆ. ಎಲ್ಲವನ್ನೂ ಮರೆತು ಸಮಾಜಕ್ಕಾಗಿ, ಇನ್ನೊಬ್ಬರಿಗಾಗಿ ಕೆಲಸ ಮಾಡಬೇಕಾಗುತ್ತದೆ. ಎಲ್ಲಾ ತ್ಯಾಗವನ್ನು ಮಾಡಲು ಸದಾ ಸಿದ್ಧರಿರಬೇಕಾದ ಕೆಲಸ ಇದು. ಎಲ್ಲಾ ಕ್ಷಣದಲ್ಲೂ, ಎಲ್ಲಾ ದಿನವೂ ವೈದ್ಯರು ಸಮಾಜದ ಬಗ್ಗೆ ಮಾತ್ರ ಯೋಚನೆ ಮಾಡಬೇಕು ಎಂದು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿರುವ ಆಯುಷ್ಮಾನ್ ಭಾರತ್ ಯೋಜನೆ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ನೀಡುತ್ತಿದೆ. ಉಚಿತವಾಗಿ ಆರೋಗ್ಯ ವಿಮೆ ನೀಡುತ್ತಿರುವ ಏಕೈಕ ದೇಶ ಭಾರತವಾಗಿದೆ. ಶೂನ್ಯ ಪ್ರಿಮಿಯಂನಲ್ಲಿ 5 ಲಕ್ಷ ರೂಪಾಯಿ ತನಕ ಶಾಶ್ವತ ಆರೋಗ್ಯ ವಿಮೆಯನ್ನು ಸರ್ಕಾರ ನೀಡುತ್ತಿದೆ. ದೇಶದ ಬಡವರ ಆರೋಗ್ಯದ ಮೇಲೆ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ ಎಂದು ಹೇಳಿದರು.

Medical education system changes in the last 7 years: Dr. K Sudhakar

Tags: #Saaksha TVbangaloreDr K Sudakar
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram