Mangaluru | ಪೊಲೀಸರ ಮೇಲೆ ಹಲ್ಲೆ | ಮೂವರ ಬಂಧನ
ಮಂಗಳೂರು : ತಡರಾತ್ರಿ ಕುಡಿದು ಪೊಲೀಸರ ಮೇಲೆ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಮಂಗಳೂರಿನ ಉರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಉರ್ವ ಠಾಣಾ ಪೊಲೀಸರು ನೈಟ್ ರೌಂಡ್ ಮಾಡುತ್ತಿದ್ದರು.
ಈ ವೇಳೆ ಚಿಲಿಂಬಿ ಗುಡ್ಡದಲ್ಲಿ ಯುವಕರ ತಂಡವೊಂದು ಸಾರ್ವಜನಿಕ ಸ್ಥಳದಲ್ಲೇ ಮದ್ಯ ಸೇವನೆ ಮಾಡುತ್ತಿತ್ತು.
ಈ ಬಗ್ಗೆ ವಿಚಾರಣೆ ನಡೆಸುವಾಗ ಕುಡಿದ ಅಮಲಿನಲ್ಲಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ.
ಅಲ್ಲದೇ ಮದ್ಯದ ಮತ್ತಿನಲ್ಲಿ ಮೂವರು ಯುವಕರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ವೇಳೆ ಓರ್ವ ಪೊಲೀಸ್ ಸಿಬ್ಬಂದಿಯ ಕೈ ಮತ್ತು ಕಾಲಿಗೆ ಗಾಯಗಳಾಗಿವೆ.
ಇನ್ನು ಈ ಸಂಬಂಧ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನು ಬಂಧಿಸಲಾಗಿದೆ.