Belgaum | ಸಿಡಿಲು ಬಡಿದು ಯುವತಿ ಸಾವು
ಬೆಳಗಾವಿ : ಸಿಡಿಲು ಬಡಿದು ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿಯ ಸವದತ್ತಿ ತಾಲೂಕಿನ ದಡೇರಕೊಪ್ಪ ಗ್ರಾಮದಲ್ಲಿ ನಡೆದಿದೆ. 23 ವರ್ಷದ ಕವಿತಾ ಸಿದ್ದಪ್ಪ ಕರಿಕಟ್ಟಿ ಮೃತಪಟ್ಟ ದುರ್ದೈವಿ.
ರಾಜ್ಯಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದೆ. ಇನ್ನೂ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲೂ ಮಳೆರಾಯ ರೌದ್ರನರ್ತನ ಮುಂದುವರೆದಿದ್ದು, ಜಿಲ್ಲೆಯಾದ್ಯಂತ ನಾನಾ ಅವಾಂತರಗಳು ಸೃಷ್ಟಿಯಾಗಿವೆ.
ಈ ನಡುವೆ ಕವಿತಾ ಕರಿಕಟ್ಟಿ ಕೃಷಿ ಕೆಲಸಕ್ಕೆ ಎಂದು ಜಮೀನಿಗೆ ಹೋಗಿದ್ದರು.
ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುವಾಗ ಸಿಡಿಲು ಬಡಿದಿದೆ. ಪರಿಣಾಮ ಸ್ಥಳದಲ್ಲಿಯೇ ಆಕೆ ಕೊನೆಯುಸಿರೆಳೆದಿದ್ದಾರೆ.
ಈ ಸಂಬಂಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








