Vijayapura | ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ವಿಜಯಪುರ : ಅಕ್ರಮವಾಗಿ ಒಣ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಜಿಲ್ಲಾ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಪರಸಪ್ಪ ಸಿಂಗೆ ಬಂಧಿತ ಆರೋಪಿಯಾಗಿದ್ದಾನೆ.
ಪರಸಪ್ಪ ಸಿಂಗೆ ಬೈಕ್ ನಲ್ಲಿ ಒಣ ಗಾಂಜಾ ಸಾಗಾಟ ಮಾಡುತ್ತಿದ್ದ.
ಇದರ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಬಲೇಶ್ವರ ತಾಲೂಕಿನ ಸಂಗಾಪೂರ ಗ್ರಾಮದ ಬಳಿ ಬಂಧಿಸಿದ್ದಾರೆ.
ಬಂಧಿತನಿಂದ 980 ಗ್ರಾಂ ಒಣ ಗಾಂಜಾ ಹಾಗೂ ಗಾಂಜಾ ಸಾಗಾಟ ಮಾಡಲು ಬಳಕೆ ಮಾಡಿದ ಬೈಕ್ ವಶಕ್ಕೆ ಪಡೆಯಲಾಗಿದೆ.
ಅಬಕಾರಿ ಸಿಪಿಐ ಮಹಾದೇವ ಶಿರಹಟ್ಟಿ ನೇತೃತ್ವದಲ್ಲಿ ದಾಳಿ ನಡೆದಿದೆ.
ಈ ಸಂಬಂಧ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.