Congress | ಸಂತ್ರಸ್ತರ ನೋವಿನ ರೋಧನೆ, ಬಿಜೆಪಿಯದ್ದು ಮೋಜಿನ ನರ್ತನೆ
ಬೆಂಗಳೂರು : ಬಿಜೆಪಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಚಿವ ಎಂಟಿಬಿ ನಾಗರಾಜ್, ಶಾಸಕ ವಿಶ್ವನಾಥ್ ಅವರು ಡ್ಯಾನ್ಸ್ ಮಾಡಿದ್ದಾರೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಘಟಕ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದೆ.
ಕಾಂಗ್ರೆಸ್ ತನ್ನ ಟ್ವಿಟ್ಟರ್ ನಲ್ಲಿ….
ಯಾವ ಕಾರಣಕ್ಕಾಗಿ ಈ ಸಂತೋಷ, ಸಡಗರ, ಸಂಭ್ರಮ ಬಿಜೆಪಿ? ಅತಿವೃಷ್ಟಿಯಲ್ಲಿ ಜನರ ಬದುಕು ಮುಳುಗಿರುವುದಕ್ಕಾ? ಆತ್ಮಹತ್ಯೆಯಲ್ಲಿ ಕರ್ನಾಟಕ 5ನೇ ಸ್ಥಾನ ಪಡೆದಿರುವುದಕ್ಕಾ? ಸರ್ಕಾರಿ ಹುದ್ದೆಗಳು ಲಾಭದಾಯಕವಾಗಿ ಸೇಲ್ ಆಗಿರುವುದಕ್ಕಾ? 40% ಕಮಿಷನ್ ಲೂಟಿಯನ್ನು ಯಶಸ್ವಿಯಾಗಿ ಮಾಡುತ್ತಿರುವುದಕ್ಕಾ?

ರಾಜ್ಯದಲ್ಲಿ ಮಳೆಯ ರುದ್ರನರ್ತನೆ, ಸಂತ್ರಸ್ತರ ನೋವಿನ ರೋಧನೆ,ಬಿಜೆಪಿಯದ್ದು ಮೋಜಿನ ನರ್ತನೆ. ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ಪತ್ತೆ! ಅತ್ತ ಜನತೆ ಕಣ್ಣೀರಲ್ಲಿ ಕೈ ತೊಳೆಯುತ್ತಿರುವಾಗ ಇತ್ತ ಸಂಭ್ರಮಾಚರಣೆಯಲ್ಲಿದೆ ಬಿಜೆಪಿ ಸರ್ಕಾರ. ಇದು ಲಜ್ಜೆಗೇಡಿತನದ ಪರಮಾವಧಿ.
ಇನ್ನೂ ಸಂಪುಟ ಸಚಿವರೊಬ್ಬರ ಸಾವಿನ ಸೂತಕವೇ ಕಳೆದಿಲ್ಲ,ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಆರಿಲ್ಲ.ತಮ್ಮವರ ಸಾವುಗಳೇ ಬಿಜೆಪಿಗೆ ಕೊಂಚವೂ ಬೇಸರ ಮೂಡಿಸಿಲ್ಲ ಎಂದಾದರೆ ಜನರ ನೋವಿಗೆ ಮರುಕಪಡುವರೆ? ಬಿಜೆಪಿಗೆ ಕನಿಷ್ಠ ಅಂತಃಕರಣವಿಲ್ಲ.#BJPBrashtotsava ದ ಮುಂದೆ ಮಾನವೀಯತೆ ಕಳೆದುಹೋಗಿದೆ ಎಂದು ಕುಟುಕಿದೆ.








