ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಆರೋಗ್ಯ ಕರ್ನಾಟಕಕ್ಕೆ ಅಭಿಯಾನ, ಕ್ಷಯ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ

Mahesh M Dhandu by Mahesh M Dhandu
September 17, 2022
in Health, Newsbeat, ಆರೋಗ್ಯ
Campaign for Health Karnataka Launch of Tuberculosis Free India Campaign

Campaign for Health Karnataka Launch of Tuberculosis Free India Campaign

Share on FacebookShare on TwitterShare on WhatsappShare on Telegram

ಆರೋಗ್ಯ ಕರ್ನಾಟಕಕ್ಕೆ ಅಭಿಯಾನ, ಕ್ಷಯ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ವತಿಯಿಂದ ಗಾಂಧಿ ಜಯಂತಿಯವರೆಗೆ ನಡೆಯಲಿರುವ ʼಆರೋಗ್ಯ ಕರ್ನಾಟಕಕ್ಕೆ ಅಭಿಯಾನʼಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಚಾಲನೆ ನೀಡಿದರು.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಬಿಎಂಸಿಆರ್‌ಐ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಕ್ತದಾನ ಅಮೃತ ಮಹೋತ್ಸವ, ಪ್ರಧಾನಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನದ ಜೊತೆಗೆ, ಆರೋಗ್ಯ ಕರ್ನಾಟಕಕ್ಕೆ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ, ಮಹಾತ್ಮ ಗಾಂಧೀಜಿ ಜಯಂತಿ, ದೀನ್‌ ದಯಾಳ್‌ ಉಪಾಧ್ಯಾಯರ ಜಯಂತಿಯನ್ನು ಪರಿಗಣಿಸಿ, ಸೆಪ್ಟೆಂಬರ್‌ 17 ರಿಂದ ಅಕ್ಟೋಬರ್‌ 2 ರವರೆಗೆ 15 ದಿನಗಳ ಕಾಲ ಅಭಿಯಾನ ಮಾಡಲಾಗುತ್ತಿದೆ. ಅರಿವಿನ ಕೊರತೆಯಿಂದಾಗಿ ಜನರಿಗೆ ರೋಗ ಇರುವುದೇ ಗೊತ್ತಾಗುವುದಿಲ್ಲ. ಮಧುಮೇಹ ಅತಿಯಾದ ನಂತರವೇ ಅವರಿಗೆ ಆ ರೋಗ ಇದೆ ಎಂದು ತಿಳಿಯುತ್ತದೆ. ಇದರ ಬದಲು ನಿಯಮಿತವಾಗಿ ತಪಾಸಣೆ ಮಾಡಿಸಿದರೆ ಸಮಸ್ಯೆ ಉಂಟಾಗುವುದಿಲ್ಲ. ಈ ಉದ್ದೇಶವನ್ನು ಅಭಿಯಾನ ಹೊಂದಿದೆ ಎಂದರು.

ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ಬಗೆಯ ತಪಾಸಣೆ ಉಚಿತವಾಗಿದೆ. ಪ್ರತಿ ವರ್ಷವೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂಬ ಭಾವನೆ ಜನರಲ್ಲಿ ಬರಬೇಕು. ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್‌ ಸೇರಿದಂತೆ ಅಸಾಂಕ್ರಾಮಿಕ ಕಾಯಿಲೆಗಳು ಎಷ್ಟು ಜನರಿಗೆ ಇದೆ ಎಂಬುದನ್ನು ಅಭಿಯಾನದಲ್ಲಿ ಪತ್ತೆ ಮಾಡಬೇಕಿದೆ. ಈ ಮೂಲಕ ಜನರ ಜೀವನ ವಿಧಾನದಲ್ಲಿ ಬದಲಾವಣೆ ತಂದು ಅವರ ಆರೋಗ್ಯ ವೃದ್ಧಿಗೆ ಶ್ರಮಿಸಬೇಕಿದೆ ಎಂದರು.

ರೋಗಿಗಳು ಬರುತ್ತಾರೆ, ಅವರಿಗೆ ಚಿಕಿತ್ಸೆ ನೀಡಬೇಕು ಎಂಬುದು ನಮ್ಮ ಆರೋಗ್ಯ ಇಲಾಖೆಯ ಧ್ಯೇಯವಲ್ಲ. ಜನರು ರೋಗಿಗಳಾಗಿ ಆಸ್ಪತ್ರೆಗೆ ಬರುವಂತಹ ಸ್ಥಿತಿಯೇ ಬರಬಾರದು ಎಂಬುದು ನಮ್ಮ ಧ್ಯೇಯ. ರೋಗ ಬರುವುದನ್ನೇ ತಡೆಗಟ್ಟುವುದೇ ಇಲಾಖೆಯ ಗುರಿ. ಇದಕ್ಕಾಗಿ ಆಶಾ ಕಾರ್ಯಕರ್ತೆಯರು, ವೈದ್ಯರು ಈ ಅಭಿಯಾನದಲ್ಲಿ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. 15-20 ಲಕ್ಷ ಮಕ್ಕಳಿಗೆ ಕಣ್ಣಿನ ಪರೀಕ್ಷೆ ಮಾಡಿ, ಅಗತ್ಯವಿದ್ದರೆ ಕನ್ನಡಕ ನೀಡಬೇಕು. ಅನೀಮಿಯಾದಿಂದ ಬಳಲುವವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದರು.

ಅನ್ನದಾನ ಮಹಾದಾನವಾದರೆ, ರಕ್ತದಾನವು ಶ್ರೇಷ್ಠದಾನವಾಗಿದೆ. ಅದೇ ರೀತಿ ಅಂಗಾಂಗಗಳ ದಾನ ಸರ್ವಶ್ರೇಷ್ಠ ದಾನವಾಗಿದೆ. ರಕ್ತದಾನ ಮಾಡುವುದರಿಂದ ದೇಹ ದುರ್ಬಲಗೊಳ್ಳುತ್ತದೆ ಎಂಬ ತಪ್ಪು ಭಾವನೆ ಇತ್ತು. ಆದರೆ ರಕ್ತ ನೀಡುವುದರಿಂದ ಅನೇಕ ರೋಗಗಳಿಂದ ದೂರವಿರಲು ಸಾಧ್ಯವಿದೆ. ರಕ್ತದೊತ್ತಡ, ಬೊಜ್ಜು, ಹೃದಯ ಸಂಬಂಧಿ ರೋಗಗಳ ಸಾಧ್ಯತೆ ರಕ್ತದಾನದಿಂದಲೇ ಕಡಿಮೆಯಾಗುತ್ತದೆ. ವರ್ಷಕ್ಕೆ ದೇಶದಲ್ಲಿ 1.28 ಲಕ್ಷ ಯುನಿಟ್‌ ಹಾಗೂ ರಾಜ್ಯದಲ್ಲಿ 6.80 ಲಕ್ಷ ಯುನಿಟ್‌ ರಕ್ತ ಬೇಕಿದೆ. ಪ್ರತಿಯೊಬ್ಬರೂ ವರ್ಷದಲ್ಲಿ ಒಂದು ಬಾರಿ ರಕ್ತದಾನ ಮಾಡಿದರೆ ರಕ್ತದ ಕೊರತೆಯೇ ಇರುವುದಿಲ್ಲ. ಭಾರತ ಯುವಜನರ ದೇಶವಾಗಿದ್ದು, ಈ ರೀತಿಯ ಪರೋಪಕಾರದ ಕೆಲಸದಲ್ಲಿ ತೊಡಗಬೇಕು. ವರ್ಷಕ್ಕೆ ಒಬ್ಬ ಪುರುಷ 3 ಬಾರಿ ಹಾಗೂ ಮಹಿಳೆ 4 ಬಾರಿ ರಕ್ತದಾನ ಮಾಡಬಹುದು. ಆದರೆ ಒಬ್ಬರು ವರ್ಷಕ್ಕೆ ಒಮ್ಮೆ ರಕ್ತದಾನ ಮಾಡಿದರೂ ಕೊರತೆ ನೀಗಿಸಬಹುದು ಎಂದರು.

Campaign for Health Karnataka Launch of Tuberculosis Free India Campaign
Campaign for Health Karnataka Launch of Tuberculosis Free India Campaign

ಇದೇ ವೇಳೆ ಕ್ಷಯ ಮುಕ್ತ ಭಾರತ ಅಭಿಯಾನವೂ ನಡೆಯುತ್ತಿದ್ದು, 2025 ಕ್ಕೆ ರಾಜ್ಯವನ್ನು ಕ್ಷಯ ಮುಕ್ತ ಮಾಡುವ ಗುರಿ ಇದೆ. ರಾಜ್ಯದಲ್ಲಿ 36 ಸಾವಿರ ಜನರು ಕ್ಷಯದಿಂದ ಬಳಲುತ್ತಿದ್ದು, 30 ಸಾವಿರ ಜನರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರ ನೆರವಿಗಾಗಿ ಕಾರ್ಯಕ್ರಮವೊಂದನ್ನು ಜಾರಿ ಮಾಡಿದ್ದು, ಇದರಡಿ 6 ತಿಂಗಳಿಗಾಗಿ 6 ಸಾವಿರ ರೂ. ನೀಡಿ, ರೋಗಿಗಳಿಗೆ ಪೌಷ್ಟಿಕ ಆಹಾರ ನೀಡಬಹುದು ಎಂದು ತಿಳಿಸಿದರು.

ರಾಜ್ಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ನಿರ್ಮಿಸಿದ್ದು, ಇವುಗಳಲ್ಲಿ ಸುಮಾರು 5 ಸಾವಿರ ಸಮುದಾಯ ಆರೋಗ್ಯ ಅಧಿಕಾರಿಗಳಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲೇ ಈ ಕೇಂದ್ರಗಳಿದ್ದು, ಜನರು ಅಲ್ಲಿಗೆ ಹೋಗಿ ಆರೋಗ್ಯ ತಪಾಸಣೆಯ ಲಾಭ ಪಡೆಯಬೇಕು. ಕೋವಿಡ್‌ ಮೂರನೇ ಡೋಸ್‌ ಕೂಡ ಅಭಿಯಾನದಲ್ಲಿ ನೀಡಲಾಗುವುದು ಎಂದರು.

5 ಕೋಟಿ ಕಾರ್ಡ್‌ ವಿತರಣೆಯ ಗುರಿ

ಈ 15 ದಿನಗಳಲ್ಲಿ 1 ಕೋಟಿ ಆಯುಷ್ಮಾನ್‌ ಕಾರ್ಡ್‌ ವಿತರಿಸುವುದು ಹಾಗೂ 100 ದಿನಗಳಲ್ಲಿ 5 ಕೋಟಿ ಕಾರ್ಡ್‌ ನೀಡುವ ಗುರಿ ಹೊಂದಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

40 ಸಾವಿರ ಆಶಾ ಕಾರ್ಯಕರ್ತೆಯರು ಭಾಗಿ

ಈ ಅಭಿಯಾನದಲ್ಲಿ 10 ಸಾವಿರ ಆರೋಗ್ಯ ಸಿಬ್ಬಂದಿ ಹಾಗೂ 40 ಸಾವಿರ ಆಶಾ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.

Tags: #Saaksha TVHealth Karnatakaindia
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram