ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ.ಸಾಹೇಬ
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಧ್ಯೆ ಶೀತಲ ಸಮರ ನಡೆಯುತ್ತಿದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಅದರಲ್ಲೂ ಮೈಸೂರು ಮೇಯರ್ ಚುನಾವಣೆಯಲ್ಲಿ ಸಿದ್ದರಾಮಯ್ಯಅವರನ್ನ ಸೈಡ್ ಲೈನ್ ಮಾಡಿ ಡಿಕೆಶಿವಕುಮಾರ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು, ಟಗರು ಸಿದ್ದುಗೆ ಪಿತ್ತನೆತ್ತಿರೇಗುವಂತೆ ಮಾಡಿತ್ತು. ಡಿಕೆಶಿವಕುಮಾರ್ ಅವರ ಈ ನಡೆ ವಿರುದ್ಧ ಸಿದ್ದರಾಮಯ್ಯ ಅವರ ಬೆಂಬಲಿಗರು ತಿರುಗಿ ಬಿದ್ದಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಇಬ್ಬರ ಅಭಿಮಾನಿಗಳ ಮಧ್ಯೆ ಸಣ್ಣ ಯುದ್ಧವೇ ನಡೆದಿತ್ತು.
ಈ ಘಟನೆಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಫೋಟೋ ಒಂದು ಇದೀಗ ವೈರಲ್ ಆಗುತ್ತಿದೆ.
ಇನ್ನು ಈ ಫೋಟೋ ಹಿಂದಿನ ರಹಸ್ಯ ಏನು ಅಂತಾ ನೋಡಿದ್ರೆ… ಈ ಫೋಟೋ ಜನಧ್ವನಿ ಜಾಥಾ ಕಾರ್ಯಕ್ರಮದ ವೇಳೆ ತೆಗೆದಿರುವುದು. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಜನಧ್ವನಿ ಜಾಥಾ ಆರಂಭಕ್ಕು ಮುನ್ನಾ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ರಹೆಮಾನ್ ಖಾನ್, ಸಿದ್ದರಾಮಯ್ಯ ಅವರ ಕಾಲು ಮುಟ್ಟಿ ಆರ್ಶೀವಾದ ಪಡೆದ್ರು. ಈ ಫೋಟೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಇನ್ನು ಈ ಫೋಟೊಗೆ ಸಿದ್ದರಾಮಯ್ಯ ಅಭಿಮಾನಿಗಳು ಹೇಗೆ ನಮ್ಮ ಬಾಸ್, ನಮ್ಮ ಬಾಸ್ ಪವರ್ ಎಂದು ಹಲವು ಬಗೆಯ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ.