ಸಾರಿಗೆ ಸಚಿವರ ತವರಲ್ಲಿ ಸಾರಿಗೆ ನೌಕರ ಆತ್ಮಹತ್ಯೆಗೆ ಶರಣು belagavi
ಬೆಳಗಾವಿ : ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
40 ವರ್ಷದ ಶಿವಕುಮಾರ್ ನೀಲಗಾರ ಆತ್ಮಹತ್ಯೆ ಮಾಡಿಕೊಂಡಿರುವ ನೌಕರರಾಗಿದ್ದಾರೆ.
ಇವರು ಅಧಿಕಾರಿಗಳ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಶಿವಕುಮಾರ್ ಅವರು ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿ ಕಳೆದ 12 ವರ್ಷಗಳಿಂದ ಕೆಲಸ ಮಾಡುತ್ತಿದ್ದರು.
ಸವದತ್ತಿಯಲ್ಲಿರುವ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.