“ಇನ್ಮುಂದೆ ದಾನ ಬೇಡ” ಎಂದು ಕೈ ಮುಗಿದ ಉಪ್ಪಿ
ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ನಟ ಉಪೇಂದ್ರ ತಮ್ಮ ಉಪ್ಪಿ ಫೌಂಡೇಷನ್ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ಸಾಕಷ್ಟು ಸಹಾಯ ಮಾಡುತ್ತಿದ್ದಾರೆ.
ರೈತರಿಂದ ತಾವೇ ಬೆಳೆಗಳನ್ನು ಖರೀದಿ ಮಾಡಿ ಅದನ್ನು ಅಗತ್ಯ ಇರುವವರಿಗೆ ಉಚಿತವಾಗಿ ಹಂಚುತ್ತಿದ್ದರು.
ಉಪ್ಪಿ ಅವರ ಈ ಕಾರ್ಯಕ್ಕೆ ಮೆಚ್ಚಿದ ಅದೆಷ್ಟೋ ಜನ ರೈತರು, ಜನ ಸಾಮಾನ್ಯರು, ಉಚಿತವಾಗಿಯೇ ಹಣ್ಣು-ತರಕಾರಿ, ದಿನಸಿ, ಧನ ಸಹಾಯವನ್ನು ಮಾಡಿದ್ದಾರೆ.
ಆದ್ರೆ ಇದೀಗ ಈ ಕಾರ್ಯಕ್ಕೆ ಉಪ್ಪಿ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ. ಇನ್ಮೆಂದೆ ಯಾವುದೇ ದಾನವನ್ನು ಉಪ್ಪಿ ಫೌಂಡೇಶನ್ ಸ್ವೀಕರಿಸೋದಿಲ್ಲ ಎಂದು ಅಧಿಕೃತವಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಉಪೇಂದ್ರ, ಇಲ್ಲಿಯವರೆಗೂ ನಾವು ಯಾರನ್ನೂ ಏನೂ ಕೇಳದಿದ್ದರೂ ತುಂಬಾ ಹೃದಯವಂತರು ನಮ್ಮ ಮೂಲಕ ವಿತರಣೆಯಾಗಲೆಂದು ದಿನಸಿ ಹಣ್ಣು, ತರಕಾರಿ ಹೀಗೆ ಮುಂತಾದವುಗಳನ್ನು ಕೊಟ್ಟಿದ್ದಾರೆ.
ನಮ್ಮ ಉಪ್ಪಿ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ಗೆ ಧನ ಸಹಾಯವನ್ನೂ ಮಾಡಿದ್ದಾರೆ.
ಅವುಗಳೆಲ್ಲವನ್ನೂ ಸೂಕ್ತವಾಗಿ ಬೇರೆ ಬೇರೆ ಕಡೆ ಸಂಕಷ್ಟದಲ್ಲಿರುವವರಿಗೆ ವಿತರಿಸಲಾಗಿದೆ, ಇನ್ನೂ ವಿತರಿಸಲಾಗುತ್ತದೆ ಸಹೃದಯತೆ ಮೆರೆದಂತಹ ತಮ್ಮೆಲ್ಲರಿಗೂ ಅನಂತಾನಂತ ಧನ್ಯವಾದಗಳು.
ಇನ್ನು ಮುಂದೆ ತಾವುಗಳು ಯಾರಿಗಾದರೂ ಸಹಾಯ ಮಾಡಬೇಕೆಂದರೆ ನಿಮ್ಮ ಸುತ್ತಮುತ್ತ ಸಂಕಷ್ಟದಲ್ಲಿ ಇರುವವರನ್ನು ಗುರುತಿಸಿ ನೀವೇ ನೇರವಾಗಿ ಸಹಾಯ ಮಾಡಿ.
ನಾವು ಉಪ್ಪಿ ಫೌಂಡೇಶನ್ ಗೆ ಹಣ ಮತ್ತು ಯಾವುದೇ ಕೊಡುಗೆಗಳನ್ನು ಮುಂದೆ ಸ್ವೀಕರಿಸುವುದನ್ನು ನಿಲ್ಲಿಸುತ್ತಿದ್ದೇವೆ.
ಇಲ್ಲಿಯವರೆಗೂ ಉಪ್ಪಿ ಫೌಂಡೇಶನ್ ಗೆ ಹಣ ಮತ್ತು ಯಾವುದೇ ಕೊಡುಗೆಗಳನ್ನು ಮುಂದೆ ಸ್ವೀಕರಿಸುವುದನ್ನು ನಿಲ್ಲಿಸುತ್ತಿದ್ದೇವೆ.
ಇಲ್ಲಿಯವರೆಗೂ ಉಪ್ಪಿ ಫೌಂಡೇಶನ್ ಗೆ ಉಪೇಂದ್ರರವರ ಹಣ, ನಿಮ್ಮೆಲ್ಲರಿಂದ ಬಂದಿರುವ ಹಣ, ಅದರ ಖರ್ಚು ಮತ್ತು ಎಲ್ಲಾ ಅಕೌಂಟ್ಸ್ ಸ್ಟೇಟ್ಮೆಂಟ್ ಮಾಹಿತಿಗಳನ್ನು ಸದ್ಯದಲ್ಲೇ ಬಹಿರಂಗ ಪಡಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.