ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪುಣೆಯಲ್ಲಿರುವ ಶಿವಾಜಿಯ ಶಿವನೇರಿ ಕೋಟೆ ಚಾರಣಿಗರ ಸ್ವರ್ಗ – ಈ ಕೋಟೆಯ ವಿಶೇಷತೆಗಳೇನು ಗೊತ್ತಾ?

Namratha Rao by Namratha Rao
June 8, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಪುಣೆಯಲ್ಲಿರುವ ಶಿವಾಜಿಯ ಶಿವನೇರಿ ಕೋಟೆ ಚಾರಣಿಗರ ಸ್ವರ್ಗ – ಈ ಕೋಟೆಯ ವಿಶೇಷತೆಗಳೇನು ಗೊತ್ತಾ?

ಛತ್ರಪತಿ ಶಿವಾಜಿ.. ವೀರ ಶೂರ ಪರಾಕ್ರಮಿ. ತನ್ನ ಅತ್ಯದ್ಭುತ ಪರಾಕ್ರಮ ದಿಂದ ಪ್ರಸಿದ್ದಿ ಪಡೆದ ಶಿವಾಜಿಗೆ ಸಂಬಂಧಿಸಿದ ಕೋಟೆಗಳಲ್ಲಿ ಪುಣೆ ಬಳಿಯ ಶಿವನೇರಿ ಕೋಟೆಯೂ ಒಂದು.

Related posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

March 27, 2026
ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

March 27, 2026

ಶಿವನೇರಿ ಕೋಟೆಯು ಪುಣೆಯ ಉತ್ತರ ಭಾಗದಲ್ಲಿ ಬರುವ ಜುನ್ನರ್ ತಾಲೂಕಿನಲ್ಲಿದೆ. ಇದು ಛತ್ರಪತಿ ಶಿವಾಜಿಯ ಜನ್ಮ ಸ್ಥಳ. ಮರಾಠಾ ಸಾಮ್ರಾಜ್ಯದಲ್ಲಿ ಬರುವ ಈ ಕೋಟೆಯನ್ನು ಶಿವಾಜಿಯ ತಂದೆ ಶಹಾಜಿ ಅವರು ನಿರ್ಮಿಸಿದ್ದರು. ಈ ಕೋಟೆಯನ್ನು ಶಹಾಜಿ ತನ್ನ ಹೆಂಡತಿ ಮತ್ತು ಮಗನ ಸುರಕ್ಷೆಗಾಗಿ ಈ ಕೋಟೆಯ ನಿರ್ಮಿಸಿದ್ದರು ಎನ್ನಲಾಗುತ್ತದೆ.

ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು. ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.

ಇಂಥ ಮಹಾನ್ ಪರಾಕ್ರಮಿ ತನ್ನ ಬಾಲ್ಯದ ಕೆಲಕಾಲ ಕಳೆದದ್ದು ಇದೇ ಕೋಟೆಯಲ್ಲಿ.

ತನ್ನ ವಾಸ್ತುಶಿಲ್ಪ ಶೈಲಿಯಿಂದ ಜನಪ್ರಿಯ ಸ್ಥಳವಾಗಿದೆ. ಮರಾಠರ ಮಹಾನ್ ರಾಜನಾದ ಛತ್ರಪತಿ ಖ್ಯಾತಿ ಹೊಂದ ಶಿವಾಜಿಯು 1630 ರಲ್ಲಿ ಈ ಕೋಟಿಯಲ್ಲಿ ಜನಿಸಿದ್ದಲ್ಲದೇ, ಇಲ್ಲಿ ತನ್ನ ಯುದ್ಧ ತರಬೇತಿಯನ್ನೂ ಕೂಡ ಪಡೆದಿದ್ದರು.

ಮುಖ್ಯ ಕೋಟೆಯನ್ನು ಪ್ರವೇಶಿಸುವದಕ್ಕಿಂತ ಮೊದಲು ಏಳು ಮಹಾದ್ವಾರಗಳನ್ನು ದಾಟುವ ಆಲೋಚನೆಯೇ ಪ್ರವಾಸಿಗರಿಗೆ ಒಂದುರೀತಿಯ ಮುದವನ್ನುಂಟುಮಾಡುತ್ತದೆ. ಕೋಟೆಯ ಆವರಣದಲ್ಲಿ, ಸರಿಯಾಗಿ ಕೋಟೆಯ ಮಧ್ಯದಲ್ಲಿ ಬಾದಾಮಿ ತಲಾವ್ ಎಂಬ ನೀರಿನ ಸಣ್ಣ ಕೊಳವಿದೆ. ಶಿವಾಜಿಯ ತಾಯಿಯಾದ ಜೀಜಾಬಾಯಿ ಮತ್ತು ಶಿವಾಜಿಯ ವಿಗ್ರಹಗಳನ್ನು ಇಲ್ಲಿ ಕಾಣಬಹುದು.

ಚಾರಣಿಗರ ಸ್ವರ್ಗ ಈ ಸ್ಥಳ..!

ಚಾರಣಿಗರಿಗೆ ಈ ಕೋಟೆ ಹಾಟ್ ಫೇವರೇಟ್. ಅದರಲ್ಲೂ ವಾರಾಂತ್ಯದಲ್ಲಿ ಇಲ್ಲಿ ಸಾಕಷ್ಟು ಜನರು ಚಾರಣಕ್ಕಾಗಿ ಆಗಮಿಸ್ತಾರೆ. ಇಲ್ಲಿಗೆ ಬರಲು ಎರಡು ರಸ್ತೆ ಮಾರ್ಗಗಳಿವೆ. ಒಂದು ರಸ್ತೆಮಾರ್ಗ ಕೋಟೆಯ ತುದಿಯವರೆಗೂ ಕರೆದೊಯ್ಯುತ್ತದೆ. ಇನ್ನೊಂದು ಮಾರ್ಗದಲ್ಲಿ ಚಾರಣ ಮಾಡುವುದರ ಮೂಲಕ ತಲುಪಬಹುದು. ಈ ಕೋಟೆಗೆ 400 ಮೆಟ್ಟಿಲು ಹಾಗೂ ಏಳು ಭವ್ಯವಾದ ಗೇಟ್‍ಗಳಿವೆ. ಈ ಮಾರ್ಗದ ಮಧ್ಯೆ ಕಲ್ಲಿನಲ್ಲಿ ಕತ್ತರಿಸಲಾದ ಗುಹೆಗಳು ಸಿಗುತ್ತವೆ. ಇದರಲ್ಲಿ ಕೆಲವೊಂದನ್ನು ಪ್ರವೇಶಿಸಲು ಅಸಾಧ್ಯ. ಇಲ್ಲಿರುವ ಕಲ್ಲಿನ ಮೆಟ್ಟಿಲುಗಳು ಹಾಳಾಗಿರುವುದರಿಂದ ಅಲ್ಲಿಗೆ ತಲುಪಲು ಕಡಿಮೆ ಎಂದರೂ ಒಂದು ತಾಸು ಬೇಕಾಗುತ್ತದೆ.

ಆಗಸ್ಟ್ ನಿಂದ ಫೆಬ್ರವರಿ ಸಮಯದಲ್ಲಿ ಹೆಚ್ಚು ಹಸಿರುಮಯ ಪರಿಸರ ಹೊಂದಿರುತ್ತದೆ. ಇಂಥ ಸಮಯದಲ್ಲಿ ಇಲ್ಲಿಗೆ ಭೇಟಿ ನೀಡಿದರೆ ಚಾರಣ ಮಾಡುತ್ತಾ, ಇಲ್ಲಿಯ ಸೌಂದರ್ಯ ಸವಿಯಬಹುದು.

ಈ ಕೋಟೆಯ ವಿಶೇಷತೆಗಳೇನು ಗೊತ್ತಾ?

ಇಲ್ಲಿ ಅಂಬರ್‍ಖಾನ ಮತ್ತು ಧನ್ಯಕೋಟಿ ಎನ್ನುವ ಎರಡು ಆಹಾರ ಕಣಜ ಇರುವುದನ್ನು ಕಾಣಬಹುದು. ಆ ಕಾಲದಲ್ಲಿ ವರ್ಷಕ್ಕೆ ಬೇಕಾಗುವಷ್ಟು ಆಹಾರ ಧಾನ್ಯಗಳನ್ನು ಇದರಲ್ಲೇ ಸಂಗ್ರಹಿಸಿಡುತ್ತಿದ್ದರು. ನೆಲ ಮಾಳಿಗೆಯಲ್ಲಿ ಗಂಗಾ-ಜಮುನ ಎನ್ನುವ ಎರಡು ನೀರಿನ ಟ್ಯಾಂಕ್ ಇರುವುದನ್ನು ನೋಡಬಹುದು. ಇದು ಸರಿಸುಮಾರು 2000 ವರ್ಷಗಳಷ್ಟು ಹಳೆಯದ್ದು ಎಂದು ಹೇಳಲಾಗುತ್ತದೆ.

ಇನ್ನು ಈ ಕೋಟೆಯಲ್ಲಿ ಗಂಗಾ ಮತ್ತು ಯಮುನಾ ಎಂಬ ಎರಡು ನೀರಿನ ಬುಗ್ಗೆಗಳಿವೆ. ಇವು ವರ್ಷದುದ್ದಕ್ಕೂ ನೀರನ್ನು ಹೊಂದಿರುತ್ತವೆ.

ಶನಿವಾರ ಮತ್ತು ಭಾನುವಾರ ಸೇರಿದಂತೆ ವಾರದ ಎಲ್ಲ ದಿನಗಳಲ್ಲಿಯೂ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೋಟೆ ಪ್ರವಾಸಿಗರಿಗೆ ತೆರೆದಿರುತ್ತದೆ.

ಈ ಕೋಟೆಯ ಬಳಿ ಊಟ-ವಸತಿಯ ವ್ಯವಸ್ಥೆಗೆ ಅನುಕೂಲವಿಲ್ಲ. ಹೀಗಾಗಿ ಚಾರಣಿಗರು ಮತ್ತು ಪ್ರವಾಸಿಗರು ಇಲ್ಲಿಗರೆ ಭೇಟಿ ನೀಡುವ ಮುನ್ನ ಸೂಕ್ತ ತಯಾರಿಗಳನ್ನು ಮಾಡಿಕೊಳ್ಳಬೇಕು.

Tags: chathrapathi shivajihinduPuneshivaneri forttravell
ShareTweetSendShare
Join us on:

Related Posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

by Shwetha
March 27, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

by Shwetha
March 27, 2026
0

ರಾಜ್ಯದಲ್ಲಿ ವಾಹನ ನೋಂದಣಿ ತೆರಿಗೆಯನ್ನು ಇಳಿಸುವ ಮಹತ್ವದ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿದೆ. ಈ ಮೂಲಕ 2026-27ನೇ ಸಾಲಿನಲ್ಲಿ ಹೊಸ ವಾಹನಗಳ ನೋಂದಣಿಯಿಂದ ಸುಮಾರು ₹250 ಕೋಟಿ ಆದಾಯ...

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

by Shwetha
March 27, 2026
0

ಬೆಂಗಳೂರು: ರಾಜ್ಯದಲ್ಲಿ ಐಪಿಎಲ್ ಕ್ರಿಕೆಟ್ ಜ್ವರ ತಾರಕಕ್ಕೇರಿದ್ದು, ಈ ಬಿಸಿಯು ಈಗ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧಕ್ಕೂ ವ್ಯಾಪಿಸಿದೆ. ಅಭಿಮಾನಿಗಳು ಟಿಕೆಟ್‌ಗಾಗಿ ಕ್ರೀಡಾಂಗಣದ ಹೊರಗೆ ಮತ್ತು ಆನ್‌ಲೈನ್‌ನಲ್ಲಿ...

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

by Shwetha
March 27, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಮತ್ತು ರಾಜತಾಂತ್ರಿಕ ವೈಫಲ್ಯಗಳಿಂದಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸ್ಥಿರವಾಗಿದ್ದ ಪಾಕಿಸ್ತಾನವು ಇಂದು ಜಾಗತಿಕ...

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

by Shwetha
March 27, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ಬಂಡಾಯದ ಬಿರುಗಾಳಿ ಎದ್ದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram