ಹಾನಗಲ್ ಶಾಸಕ ಸಿ.ಎಂ.ಉದಾಸಿ(85) ನಿಧನ
ಬೆಂಗಳೂರು : ಮಾಜಿ ಸಚಿವ, ಹಾನಗಲ್ ಶಾಸಕ ಸಿ.ಎಂ.ಉದಾಸಿ ವಿಧಿವಶರಾಗಿದ್ದಾರೆ.
ರಕ್ತಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ನಗರದ ಕಿರಣ್ ಮಜುಂದಾರ್ ಷಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಸಿಎಂ ಉದಾಸಿ ಅವರು ಹಾನಗಲ್ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು.
ಎರಡಕ್ಕೂ ಹೆಚ್ಚು ಬಾರಿ ಸಚಿವರಾಗಿ ಅವರು ಕಾರ್ಯ ನಿರ್ವಹಿಸಿದ್ದಾರೆ.
ಜನತಾ ಪರಿವಾರದಿಂದ ರಾಜಕೀಯಕ್ಕೆ ಬಂದ ಅವರು, ಬಳಿಕ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಆ ಬಳಿಕ ಯಡಿಯೂರಪ್ಪನವರ ಕೆಜೆಪಿದಿಂದ ಸ್ಪರ್ಧಿಸಿ ಹಾನಗಲ್ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರು.
2018 ರಲ್ಲಿ ಬಿಜೆಪಿಯಿಂದ ಅದೇ ಕ್ಷೇತ್ರದಿಂದ ಗೆಲುವು ಸಾಧಿಸಿ ಶಾಸಕರಾಗಿದ್ದರು.
ಇನ್ನು ಉದಾಸಿ ಅವರ ನಿಧನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.