ಭೂ ಕಬಳಿಕೆ ಆರೋಪ : ಶಾಸಕ ಸ್ಥಾನಕ್ಕೆ ಈಟಲ ರಾಜೇಂದರ್ ರಾಜೀನಾಮೆ
ಹೈದರಾಬಾದ್ : ರೈತರ ಜಮೀನುಗಳನ್ನು ಬಲವಂತವಾಗಿ ಕಿತ್ತುಕೊಂಡಿದ್ದಾರೆ ಅನ್ನೋ ಆರೋಪ ಎದುರಿಸುತ್ತಿರುವ ತೆಲಂಗಾಣ ರಾಜ್ಯದ ಮಾಜಿ ಆರೋಗ್ಯ ಸಚಿವ ಈಟಲ ರಾಜೇಂದರ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈಟಲ್ ರಾಜೇಂದರ್ ಅವರ ವಿರುದ್ಧ ಮೇದಕ್ ಜಿಲ್ಲೆಯಲ್ಲಿನ ರೈತರ ಜಮೀನುಗಳನ್ನು ಬಲವಂತಾಗಿ ಕಿತ್ತುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಇದರಿಂದ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರು ರಾಜೇಂದರ್ ಬಳಿಯಿದ್ದ ವೈದ್ಯಕೀಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಗಳನ್ನು ಕಿತ್ತುಕೊಂಡಿದ್ದರು.
ಆ ಬಳಿಕ ರಾಜೇಂದರ್, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್ ) ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಇವತ್ತು ವಿಧಾನಸಭೆ ಸ್ಪೀಕರ್ ಪೋಚಾರಾಮ್ ಶ್ರೀನಿವಾಸ್ ರೆಡ್ಡಿ ಅವರಿಗೆ ರಾಜೇಂದರ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಜುರಾಬಾದ್ನಲ್ಲಿ ಮುಂದಿನ ಚುನಾವಣೆಯಲ್ಲಿ ‘ಧರ್ಮ’ ಮತ್ತು ‘ಅಧರ್ಮ’ದ ನಡುವೆ ಯುದ್ಧ ನಡೆಯಲಿದೆ.
ನ್ಯಾಯವು ಮೇಲುಗೈ ಸಾಧಿಸುತ್ತದೆ ಮತ್ತು ಹಣದ ಅಧಿಕಾರವನ್ನು ಸೋಲಿಸಲಾಗುತ್ತದೆ. ತೆಲಂಗಾಣದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ನಾನು ಇದರ ವಿರುದ್ಧ ಹೋರಾಡುತ್ತೇನೆ ಎಂದು ಹೇಳಿದ್ದಾರೆ.