ADVERTISEMENT
Sunday, May 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಈ ನಗರಕ್ಕಿದೆ ಭವ್ಯ ಇತಿಹಾಸ..! ಇಲ್ಲಿನ ಪ್ರಾಕೃತಿಕ ಸೌಂದರ್ಯಕ್ಕೆ ಎಂಥವರೂ ಮಾರಿ ಹೋಗದೇ ಇರಲ್ಲ..!

Namratha Rao by Namratha Rao
June 14, 2021
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

ಈ ನಗರಕ್ಕಿದೆ ಭವ್ಯ ಇತಿಹಾಸ..! ಇಲ್ಲಿನ ಪ್ರಾಕೃತಿಕ ಸೌಂದರ್ಯಕ್ಕೆ ಎಂಥವರೂ ಮಾರಿ ಹೋಗದೇ ಇರಲ್ಲ..!

ಬಂದರು ನಗರಿ ಎಂತಲೇ ಖ್ಯಾತಿ ಪಡೆದ ವಿಶಾಖಪಟ್ಟಣಂ ಅಥವಾ ವೈಜಾಗ್ ಮಾನ್ಸೂನ್ ನಲ್ಲಿ ಭೇಟಿ ನೀಡಲೇಬೇಕಾದ ಸ್ಥಳ. ಭಾರತದ ಆಗ್ನೇಯ ಕರಾವಳಿಯಲ್ಲಿರುವ ಇದು, ಆಂಧ್ರ ಪ್ರದೇಶದ ಎರಡನೇ ದೊಡ್ಡ ನಗರವಾಗಿದೆ. ಪ್ರಾಥಮಿಕವಾಗಿ ಒಂದು ಕೈಗಾರಿಕಾ ನಗರವಾಗಿರುವ ವೈಜಾಗ್ ತನ್ನ ಸುಂದರ ತೀರ,ರಮಣೀಯ ದಿಣ್ಣೆಗಳು, ಸಮೃದ್ಧ ಹಸಿರು ಮತ್ತು ಶ್ರೀಮಂತ ಇತಿಹಾಸ ಹಾಗೂ ಸಂಸ್ಕೃತಿಗಳಿಂದಾಗಿ ಉತ್ತಮ ಪ್ರವಾಸಿ ತಾಣವಾಗಿಯೂ ಮಾರ್ಪಡುತ್ತಿರುವುದು ಸ್ವಾಗತಾರ್ಹ. ಹಿಂದೂಗಳ ಶೌರ್ಯ ದೇವತೆಯಾದ ವಿಶಾಖಾದಿಂದ ಈ ನಗರಕ್ಕೆ ವಿಶಾಖಪಟ್ಟಣಂ ಎಂಬ ಹೆಸರು ಬಂದಿದೆ.

Related posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

May 10, 2026
ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

May 10, 2026

ಈ ನಗರಕ್ಕಿದೆ ಭವ್ಯ ಇತಿಹಾಸ..!
ವಿಶಾಖಪಟ್ಟಣ ಮೊದಲು ಕಳಿಂಗ ರಾಜ್ಯದ ಭಾಗವಾಗಿತ್ತು. ನಂತರ ವೆಂಗಿ, ಪಲ್ಲವ, ಪೂರ್ವ ಗಂಗ ಸಾಮ್ರಾಜ್ಯಗಳಿಗೆ ಸೇರಿತ್ತು. ದಾಖಲೆಗಳ ಪ್ರಕಾರ ೧೧ ಮತ್ತು ೧೩ನೇ ಶತಮಾನದ ಕಾಲದಲ್ಲಿ ಚೋಳ ಹಾಗೂ ಗಜಪತಿ ಸಾಮ್ರಾಜ್ಯಗಳ ತಿಕ್ಕಾಟದ ಅವಧಿಯಲ್ಲಿ ಕಟ್ಟಲ್ಪಟ್ಟಿತು. ಅನಂತರ ೧೫ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯವು ವಶಪಡಿಸಿಕೊಂಡಿತು. ೧೬ನೇ ಶತಮಾನದಲ್ಲು ಮೊಘಲ್ ಸಾಮ್ರಾಜ್ಯಕ್ಕೆ ಸೇರಿ ಅನಂತರ ಯುರೋಪಿಯನ್ ದೇಶಗಳು ವ್ಯಾಪಾರಾಸಕ್ತಿ ಚಟುವಟಿಕೆಗಳ ನೆಲೆಯಾಯಿತು. ೧೮ನೇ ಶತಮಾನದ ಕೊನೆಯ ವೇಳೆಗೆ ಇದು ಫ್ರೆಂಚರ ಆಳ್ವಿಕೆಗೆ ಒಳಪಟ್ಟಿತು. ೧೮೦೪ರಿಂದ ೧೯೪೭ರ ಭಾರತದ ಸ್ವಾತಂತ್ರ್ಯದವರೆಗೆ ಬ್ರಿಟಿಶರ ಆಳ್ವಿಕೆಗೆ ಒಳಪಟ್ಟಿತ್ತು.

ಈ ನಗರವು ಅತಿಹಳೆಯ ಹಡಗುನೆಲೆ ಹಾಗೂ ಪೂರ್ವಕರಾವಳಿಯ ನೈಸರ್ಗಿಕ ಬಂದರನ್ನು ಹೊಂದಿದೆ. ಭಾರತೀಯ ನೌಕಾಸೇನೆಯ ಪೂರ್ವ ಕಮಾಂಡ್ ನ ಹಾಗೂ ಪೂರ್ವಕರಾವಳಿ ರೈಲ್ವೆ ವಲಯದ ಪ್ರಧಾನ ಕಛೇರಿಗಳು ಇಲ್ಲಿವೆ.

ವಿಶಾಖಪಟ್ಟಣವು ಶ್ರೀ ವೆಂಕಟೇಶ್ವರ ಕೊಂಡ, ರೋಸ್ ಹಿಲ್ ಮತ್ತು ದರ್ಗಾ ಕೊಂಡ ಎಂಬ ಬೆಟ್ಟಗಳಿಂದ ಸುತ್ತುವರೆದಿವೆ. ಇಲ್ಲಿನ ಪ್ರತಿ ಬೆಟ್ಟಗಳಲ್ಲಿಯೂ ವಿವಿಧ ಧರ್ಮಗಳ ಪುಣ್ಯಕ್ಷೇತ್ರಗಳು ನೆಲೆಸಿವೆ. ವೆಂಕಟೇಶ್ವರ ಬೆಟ್ಟದಲ್ಲಿ ಶಿವನ ದೇವಸ್ಥಾನವಿದ್ದರೆ, ರೋಸ್ ಹಿಲ್ ನಲ್ಲಿ ವರ್ಜಿನ್ ಮೇರಿ ಚರ್ಚ್ ಮತ್ತು ದರ್ಗಾ ಕೊಂಡ ಇಸ್ಲಾಮಿಕ್ ಸಂತ ಬಾಬಾ ಇಶಾಕ್ ಮದಿನಾರ ಸಮಾಧಿಯನ್ನು ಹೊಂದಿದೆ.

ರಿಷಿಕೊಂಡ ಬೀಚ್, ಗಂಗಾವರಂ ಬೀಚ್, ಭಿಮ್ಲಿ ಮತ್ತು ಯರಡ ಬೀಚ್ ಗಳು ನಗರದ ಪೂರ್ವ ಭಾಗದಲ್ಲಿನ ಕಡಲತೀರಗಳು. ಇತರ ಪ್ರವಾಸಿ ಆಕರ್ಷಣೆಗಳಲ್ಲಿ ಕೈಲಾಸಗಿರಿ ಹಿಲ್ ಪಾರ್ಕ್, ಸಿಂಹಾಚಲಂ ಬೆಟ್ಟಗಳು, ಅರಕು ಕಣಿವೆ, ಕಂಬಲಕೊಂಡ ವನ್ಯಮೃಗ ಅಭಯಾರಣ್ಯ, ಜಲಾಂತರ್ಗಾಮಿ ವಸ್ತುಸಂಗ್ರಹಾಲಯ, ವಾರ್ ಮೆಮೋರಿಯಲ್ ಮತ್ತು ನೌಕಾ ವಸ್ತುಸಂಗ್ರಹಾಲಯಗಳು ಸೇರಿವೆ.

ಇಲ್ಲಿ ಸಮುದ್ರ ತೀರಗಳನ್ನು ಇಷ್ಟಪಡುವವರು ಮಾತ್ರವಲ್ಲದೇ ರಮಣೀಯ ಕಣಿವೆ ಮತ್ತು ಗುಡ್ಡಗಳನ್ನು ನೋಡಿ ಆನಂದಿಸಲು ಸಹ ಸಹಸ್ರಾರು ಪ್ರವಾಸಿಗರು ಆಗಮಿಸುತ್ತಾರೆ. ಇನ್ನು ವಿಶಾಖಪಟ್ಟಣಂ ಸಿನಿಮಾ ಮಂದಿಗೆ ಅಚ್ಚುಮೆಚ್ಚಿನ ತಾಣ. ತೆಲುಗು, ತಮಿಳು ಸೇರಿದಂತೆ ದಕ್ಷಿಣ ಭಾರತದ ಬಹುತೇಕ ಸಿನಿಮಾಗಳು ಇಲ್ಲಿ ಚಿತ್ರೀಕರಣಗೊಂಡಿವೆ. ನಟ ಶ್ರೀಧರ್, ನಟಿ ಸರಿತಾ ಅಭಿನಯದ ಬ್ರಹ್ಮಗಂಟು ಚಿತ್ರದ ಚಿತ್ರೀಕರಣವಾಗಿದ್ದು ಇಲ್ಲಿಯೇ.

ವಿಶಾಖಪಟ್ಟಣಂ ಗೆ ರಸ್ತೆ, ರೈಲು ಮತ್ತು ವಾಯು ಮಾರ್ಗದ ಮೂಲಕ ತೆರಳಬಹುದು. ನಿಮ್ಮ ಬಜೆಟ್ ಗನುಗುಣವಾಗಿ ಇಲ್ಲಿ ತಂಗಲು ಹೊಟೇಲ್ ಮತ್ತು ರೆಸಾರ್ಟ್ ಗಳಿವೆ. ಮಾನ್ಸೂನ್ ಎಂಜಾಯ್ ಮಾಡುವವರು ವಿಶಾಖಪಟ್ಟಣಂ ಗೆ ಭೇಟಿ ನೀಡಲೇಬೇಕು. 

Tags: tourismtrvellingvishakhapattanam
ShareTweetSendShare
Join us on:

Related Posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

by Shwetha
May 10, 2026
0

ಕನ್ನಡ ಚಿತ್ರರಂಗದ ವಿಭಿನ್ನ ಆಲೋಚನೆಗಳ ಸರದಾರ ರಿಯಲ್ ಸ್ಟಾರ್ ಉಪೇಂದ್ರ ಅವರು ಪ್ರಜಾಕೀಯ ಎಂಬ ಹೊಸ ರಾಜಕೀಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪನೆಯಾದಾಗಿನಿಂದಲೂ ಎಲ್ಲರ...

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

by Shwetha
May 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ. ದಶಕಗಳ ಕಾಲ ರಾಜ್ಯವನ್ನು ಆಳಿದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದಿದೆ. ಬಿಜೆಪಿಯ...

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

by Shwetha
May 10, 2026
0

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಗುವಾಗ ಟೋಲ್ ಪ್ಲಾಜಾಗಳ ಮುಂದೆ ಗಂಟೆಗಟ್ಟಲೆ ಕಾಯುವ ಕಿರಿಕಿರಿಗೆ ಈಗ ಕೊನೆಗಾಲ ಬಂದಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ...

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

by Shwetha
May 10, 2026
0

ಉದ್ಯೋಗಸ್ಥರಿಗೆ ಮತ್ತು ಕೆಲಸ ಬಿಟ್ಟಿರುವ ಲಕ್ಷಾಂತರ ಜನರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಬಾಕಿ ಉಳಿದಿದ್ದು, ಅದನ್ನು ಪಡೆಯಲು...

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

by Shwetha
May 10, 2026
0

ಕಲಬುರಗಿ: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುವ ಸಮಯ ಹತ್ತಿರವಾಗಿದ್ದು, ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲಾಗುವುದು ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram