ಗ್ರಾ.ಪಂ ಸದಸ್ಯನ ಮೇಲೆ ಮಂಗಳಮುಖಿಯರಿಂದ ಹಲ್ಲೆ
ತುಮಕೂರು : ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿರುವ ಘಟನೆ ಮಧುಗಿರಿ ಪಟ್ಟಣದಲ್ಲಿ ನಡೆದಿದೆ.
ಕೋಡ್ಲಾಪುರ ಗ್ರಾಮಪಂಚಾಯತ್ ಸದಸ್ಯ ರಂಗನಾಥ್ ಹಲ್ಲೆಗೊಳಗಾಗಿದ್ದವರಾಗಿದ್ದಾರೆ.
ಇಬ್ಬರು ಮಂಗಳಮುಖಿಯರು ರಂಗನಾಥ್ ಅವರ ಬೈಕನ್ನು ಅಡ್ಡಗಟ್ಟಿ ಹಣ ಕೇಳಿದ್ದಾರೆ.
ರಂಗನಾಥ್ ಹಣ ನೀಡಲು ನಿರಾಕರಿಸಿದಾಗ ರಂಗನಾಥ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.