ಯುಪಿ ಜಿಲ್ಲಾ ಪಂಚಾಯತಿ ಎಲೆಕ್ಷನ್ : ಕೇಸರಿಪಡೆಗೆ ಭರ್ಜರಿ ಜಯ
ಲಖನೌ : ಯೋಗಿನಾಡು ಉತ್ತರ ಪ್ರದೇಶದಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕೇಸರಿ ಪಡೆ ಭರ್ಜರಿ ಜಯ ಸಾಧಿಸಿದೆ.
ಉತ್ತರ ಪ್ರದೇಶದ 75 ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯು 67ರಲ್ಲಿ ಜಯ ಗಳಿಸಿದೆ.
ಇತ್ತ ಸಮಾಜವಾದಿ ಪಾರ್ಟಿಯು ಕೇವಲ 6 ಜಿಲ್ಲೆಗಳಲ್ಲಿ ಜಯ ಗಳಿಸಿದೆ. ಮುಖ್ಯವಾಗಿ 21 ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರದೇವ್ ಸಿಂಗ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರದ ಆಡಳಿತವನ್ನು ಜನ ಮೆಚ್ಚಿದ್ದಾರೆ ಎಂಬುದಕ್ಕೆ ಪಂಚಾಯಿತಿ ಫಲಿತಾಂಶ ಸಾಕ್ಷಿ.
ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿಯೂ ನಾವೇ ಗೆಲುವು ಸಾಧಿಸುತ್ತೇವೆ.
ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಪ್ರಧಾನಿ, ಮುಖ್ಯಮಂತ್ರಿಯವರ ಜನಪ್ರಿಯತೆ ಕಾರಣದಿಂದ ಈ ಗೆಲುವು ಲಭಿಸಿದೆ ಎಂದಿದ್ದಾರೆ.
ಮಾಯಾವತಿ ಅವರ ಬಹುಜನ ಸಮಾಜ ಪಾರ್ಟಿಯು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ.