ಡಿಕೆಶಿ ಅವರೇ ಮುಂದಿನ ಸಿಎಂ – ಮಹಮ್ಮದ್ ಹ್ಯಾರಿಸ್ ನಲಪಾಡ್
ಉಡುಪಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಯೂತ್ ಕಾಂಗ್ರೆಸ್ ನ ಮುಂದಿನ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿದರು. ಉಡುಪಿಯಲ್ಲಿ ಮಾತನಾಡಿದ ನಲಪಾಡ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ. ಅವರನ್ನು ಎಲ್ಲರೂ ಬೆಂಬಲಿಸಬೇಕು ಎಂದು ಹೇಳಿಕೊಂಡಿದ್ದಾರೆ.
ಇನ್ನೂ ಮುಂದೆ 2 ವರ್ಷಗಳಲ್ಲಿ ಚುನಾವಣೆ ಬರುತ್ತದೆ. ಎಲ್ಲರೂ ಮತ ಹಾಕಿದ್ರೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ. ಕಾಂಗ್ರೆಸ್ ನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗ್ತಾರೆ ಎಂದು ಹೇಳಿದ್ದಾರೆ.
ಈ ಮೂಲಕ ಮುಂದೆ ಕಾಂಗ್ರೆಸ್ ಗೆಲ್ಲೋದು ಖಚಿತ ಅನ್ನೋ ವಿಶ್ವಾಸ ವ್ಯಕ್ತಪಡಿಸುವ ಜೊತೆಗೆ ಕಾಂಗ್ರೆಸ್ ನಲ್ಲಿ ಡಿಕೆಶಿ ಸಿಎಂ ಕ್ಯಾಂಡಿಡೇಟ್ ಅಂತ ಹೇಳಿಕೊಂಡಿದ್ದಾರೆ.. ಈ ಮೂಲಕ ಸಿದ್ದು ಬಣದ ಕೆಂಗಣ್ಣಿಗೂ ಗುರಿಯಾಗಿದ್ದಾರೆ.. ಸಿಎಂ ಪಟ್ಟಕ್ಕಾಗಿ ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಬಣ ಹಾಗೂ ಡಿಕೆ ಶಿವಕುಮಾರ್ ಬಣದ ನಡುವೆ ಒಳಜಗಳವಿದೆ..