ನಕ್ಸಲ್ ರ ಗುಂಡಿನ ದಾಳಿ : ಗದಗದ ಯೋಧ ಹುತಾತ್ಮ gadag
ಗದಗ : ಛತ್ತೀಸ್ ಗಢ ಗಡಿ ಭಾಗದಲ್ಲಿ ನಕ್ಸಲರು ಹಾಗೂ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮರಾಗಿದ್ದಾರೆ.
ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋಜನೂರ ಗ್ರಾಮದ ಯೋಧ ಲಕ್ಷ್ಮಣ್ ಗೌರಣ್ಣವರ(31) ಹತಾತ್ಮರಾಗಿದ್ದಾರೆ.
ಛತ್ತೀಸ್ ಗಢ ಗಡಿ ಭಾಗದಲ್ಲಿ ನಕ್ಸಲರು ಹಾಗೂ ಯೋಧರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ನಕ್ಸಲರ ಗುಂಡು ಎದೆ ಹೊಕ್ಕಿದ್ದು, ಸ್ಥಳದಲ್ಲೇ ಲಕ್ಷ್ಮಣ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಲಕ್ಷ್ಮಣ್ ಕಳೆದ 12 ವರ್ಷಗಳಿಂದ ಬಿಎಸ್ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದು, 2 ತಿಂಗಳ ಹಿಂದಷ್ಟೇ ಊರಿಗೆ ಬಂದು ಹೋಗಿದ್ದರು.
ನಾಳೆ ಸಂಜೆ ವೇಳೆಗೆ ಗೋಜನೂರು ಗ್ರಾಮದಲ್ಲಿ ಸರ್ಕಾರಿ ಸಕಲ ಗೌರವಗಳೊಂದಿಗೆ ವೀರಯೋಧನ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ.