ಆತ್ಮೀಯನ ಸ್ಥಿತಿ ಕಂಡು ಗಳಗಳನೆ ಅತ್ತ ಜನಾರ್ದನ ಪೂಜಾರಿ janardhan-poojary saakshatv
ಮಂಗಳೂರು : ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿ ಆಸ್ಪತ್ರೆಯಿಂದ ಹೊರ ಬಂದು ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ ಪೂಜಾರಿ ಮಾಧ್ಯಮಗಳ ಮುಂದೆ ಗಳಗಳನೆ ಅತ್ತಿದ್ದಾರೆ.
ಯೋಗ ಮಾಡುವ ವೇಳೆ ಜಾರಿ ಬಿದ್ದು ಯೆನೆಪೊಯ ಆಸ್ಪತ್ರೆಗೆ ಆಸ್ಕರ್ ಫರ್ನಾಂಡಿಸ್ ದಾಖಲಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.
ಇಂದು ಅವರ ಆರೋಗ್ಯ ವಿಚಾರಿಸಲು ಜನಾರ್ದನ ಪೂಜಾರಿ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಅವರ ಆರೋಗ್ಯ ವಿಚಾರಿಸಿ ಹೊರಬಂದ ಜನಾರ್ದನ ಪೂಜಾರಿ ಅವರು, ಅವರ ಆರೋಗ್ಯ ಸ್ಥಿತಿ ನೆನೆದು ಮಾಧ್ಯಮಗಳ ಮುಂದೆ ಗಳಗಳನೆ ಕಣ್ಣೀರಿಟ್ಟರು.
ಅವರಿಗೆ ಖಂಡಿತ ಏನೂ ಆಗುವುದಿಲ್ಲ, ದೇವರು ಅವರನ್ನು ಬದುಕಿಸುತ್ತಾರೆ. ಅವರು ಖಂಡಿತ ಬದುಕುತ್ತಾರೆ.
ಸಾರ್ ಸಾರ್ ಎಂದು ನನ್ನ ಜೊತೆಗೆ ಮಾತನಾಡುತ್ತಿದ್ದರು ಎಂದು ನೆನೆದು ಭಾವುಕರಾದರು.