ನಿಧಾನಗತಿ ಬ್ಯಾಟಿಂಗ್ : ಟೀಕೆಗಳಿಗೆ Don’t Care ಎಂದ ರಹಾನೆ
ಬೆಂಗಳೂರು : ಲಾಡ್ರ್ಸ್ ಅಂಗಳದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಜಯ ಸಾಧಿಸಿದೆ. ಆದ್ರೆ ಭಾರತದ ಪರ ಎರಡನೇ ಇನ್ನಿಂಗ್ಸ್ ನಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ ಚೇತೇಶ್ವರ್ ಪೂಜಾರಾ, ಉಪನಾಯಕ ಅಜಿಂಕ್ಯಾ ರಹಾನೆ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಟೀಕೆಗಳು ವ್ಯಕ್ತವಾಗುತ್ತಿವೆ.
ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ರಹಾನೆ 146 ಎಸೆತಗಳಲ್ಲಿ 61, ಪೂಜಾರ 206 ಎಸೆತಗಳಲ್ಲಿ 45 ರನ್ ಗಳಿಸಿದ್ದರು. ಈ ಜೋಡಿ ಸುಮಾರು 50 ಓವರ್ ಗಳಲ್ಲಿ 100 ರನ್ ಗಳ ಜೊತೆಯಾಟ ನೀಡಿದ್ದರು.
ಇದು ತಂಡದ ಗೆಲುವಿನಲ್ಲಿ ಪ್ರಮುಖ ಪ್ರಾತವಹಿಸಿದ್ದು ನೂರಕ್ಕೆ ನೂರರಷ್ಟು ಸತ್ಯ. ಆದ್ರೆ ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಪೂಜಾರಾ, ರಹಾನೆ ಬ್ಯಾಟಿಂಗ್ ಬಗ್ಗೆ ಟೀಕೆ ಮಾಡಿದ್ದಾರೆ. ಅಲ್ಲದೆ ಅವರ ಬದಲಿಗೆ ಬೇರೆ ಆಟಗಾರರಿಗೆ ಚಾನ್ಸ್ ನೀಡುವಂತೆ ಸಲಹೆ ನೀಡಿದ್ದಾರೆ.
ಇದೀಗ ಈ ವಿಚಾರವಾಗಿ ಅಜಿಂಕ್ಯಾ ರಹಾನೆ ಪ್ರತಿಕ್ರಿಯೆ ನೀಡಿದ್ದು, ನಾವು ತಂಡಕ್ಕೆ ಅಗತ್ಯಕ್ಕೆ ತಕ್ಕಂತೆ ಎಷ್ಟು ಸಾಧ್ಯವೋ ಅಷ್ಟು ದೀರ್ಘವಾಗಿ ಆಡಲು ಬಯಸಿದ್ದೆವು. ಜನರು ನನ್ನ ಬಗ್ಗೆ ಮಾತನಾಡುತ್ತಿರುವುದಕ್ಕೆ ನಾನು ಖುಷಿಯಾಗಿದ್ದೇನೆ.
ಜನರು ಯಾವಾಗಲೂ ಪ್ರಮುಖ ವ್ಯಕ್ತಿಗಳ ಬಗ್ಗೆ ಮಾತನಾಡುತ್ತಾರೆ ಎಂದು ನಂಬಿದ್ದೇನೆ. ಆದ್ದರಿಂದ ನಾನು ಆ ಬಗ್ಗೆ ತುಂಬಾ ತಲೆಕೆಡಿಸಿಕೊಳ್ಳಲ್ಲ. ನನ್ನ ಸಂಪೂರ್ಣ ಗಮನವೇನಿದ್ದರೂ ತಂಡಕ್ಕೆ ಉತ್ತಮ ಕೊಡುಗೆ ನೀಡುವುದರ ಕಡೆಗೆ ಎಂದಿದ್ದಾರೆ.