ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಚುನಾವಣಾ ಆಯೋಗ ಮಹತ್ವದ ಸ್ಪಷ್ಟನೆ ನೀಡಿದೆ. ಹಲವು ಬಾರಿ ಇವಿಎಂ ಕಾರ್ಯವೈಖರಿ ಬಗ್ಗೆ ಆರೋಪ ಮಾಡ್ತಿದ್ದ ರಾಜಕೀಯ ಪಕ್ಷಗಳ ಕುರಿತು, ಈಗಾಗಲೇ ಇವಿಎಂ ಹ್ಯಾಕಿಂಗ್ ಅಸಾಧ್ಯ ಎಂದು ಸಾಭೀತಾಗಿದೆ. ಮುಂದಿನ ಯಾವುದೇ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಆರೋರಾ ತಿಳಿಸಿದ್ದಾರೆ. ಇವಿಎಂಗಳ ಕಾರ್ಯವೈಖರಿ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಇದ್ದಾಗಲೇ ಈ ಸ್ಪಷ್ಟನೆ ನೀಡಿದ್ದು, ಮುಂಬರುವ ಇಪ್ಪತ್ತು ವರ್ಷಗಳ ಕಾಲ ಇದೇ ಇವಿಎಂ ಗಳನ್ನು ಬಳಸಬಹುದು ಎಂದಿದ್ದಾರೆ. ಈ ಮೂಲಕ ಮತ್ತೆ ಬ್ಯಾಲೆಟ್ ಪೇಪರ್ ಎಲೆಕ್ಷನ್ ಬೇಕು, ಇವಿಎಂ ಬೇಡವೇ ಬೇಡ ಎನ್ನುತ್ತಿದ್ದ ರಾಜಕೀಯ ಪಕ್ಷಗಳಿಗೆ ಹಿನ್ನಡೆಯಾದಂತಾಗಿದೆ.
ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ...








