ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಕೋರಮಂಗಲದಲ್ಲಿ ಭೀಕರ ಕಾರು ಅಪಘಾತ – ಶಾಸಕನ ಪುತ್ರ , ಭಾವಿ ಪತ್ನಿ ಸೇರಿ 7 ಮಂದಿ ಸಾವು

Namratha Rao by Namratha Rao
August 31, 2021
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

Related posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026

ಕೋರಮಂಗಲದಲ್ಲಿ ಭೀಕರ ಕಾರು ಅಪಘಾತ – ಶಾಸಕನ ಪುತ್ರ , ಭಾವಿ ಪತ್ನಿ ಸೇರಿ 7 ಮಂದಿ ಸಾವು

ಸಿಲಿಕಾನ್ ಸಿಟಿ ಬೆಂಗಳೂರಿನ ಕೋರಮಂಗಲದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಹೊಸೂರಿನ ಡಿಎಂಕೆ ಶಾಸಕ ವೈ  ಪ್ರಕಾಶ್​ ಪುತ್ರ ಕರುಣಾ ಸಾಗರ್,​ ಭಾವಿ ಸೊಸೆ ಬಿಂದು ಸೇರಿದಂತೆ 7 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮಧ್ಯ ರಾತ್ರಿ 1.30ರ ಸುಮಾರಿಗೆ ಕೋರಮಂಗಲದ ಮಂಗಳ ಕಲ್ಯಾಣಮಂಟಪದ ಬಳಿ  ಈ ಘಟನೆ ನಡೆದಿದೆ.  ಕರುಣಾ ಸಾಗರ್, ಭಾವಿ ಪತ್ನಿ ಬಿಂದು (28), ಇಶಿತಾ (21), ಡಾ.ಧನುಶಾ (21), ಕೇರಳ ಮೂಲದ ಅಕ್ಷಯ್ ಗೋಯೆಲ್ (23), ಹರಿಯಾಣ ಮೂಲದ ಉತ್ಸವ್ (23) ಹುಬ್ಬಳ್ಳಿಯ ರೋಹಿತ್ (23) ಘಟನೆಯಲ್ಲಿ ದಾರುಣವಾಗಿ ಸಾವಿಗೀಡಾಗಿದ್ದಾರೆ.

ಅಪಘಾತಕ್ಕೀಡಾದ ಕಾರು ಕೆಎ 03 ಎಂವೈ 6666 ನಂಬರಿನ ಡೀಸೆಲ್ ಮಾಡೆಲ್ ಕಾರಾಗಿದ್ದು, ಇದು ತಮಿಳುನಾಡಿನ ಸಂಜೀವಿನಿ ಬ್ಲೂ ಮೆಟಲ್ಸ್ ಕಂಪನಿಗೆ ಸೇರಿದ್ದಾಗಿದೆ.  2015ರಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ ನೋಂದಣಿಯಾಗಿದೆ. ಅರುಣಾಸಾಗರ್ ಸ್ನೇಹಿತರ ಜೊತೆ ಕೋರಮಂಗಲದ ಝೋಲೋ ಪಿಜಿಯಲ್ಲಿ ನೆಲೆಸಿದ್ದರು. ಸೋಮವಾರ ರಾತ್ರಿ ಪಾರ್ಟಿ ಮುಗಿಸಿ ಬರುವಾಗ ಅಪಘಾತ ಸಂಭವಿಸಿರಬಹುದು ಎಂಬ ಮಾಹಿತಿ ಸಿಕ್ಕಿದೆ. ವೇಗವಾಗಿ ಬಂದು ಫುಟ್ ಪಾತ್ ಮೇಲಿದ್ದ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಆಡಿ ಕ್ಯೂ 3 ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ನಾಲ್ವರು ಪುರುಷರಿದ್ದು, ಎಲ್ಲರೂ ಮೃತಪಟ್ಟಿದ್ದಾರೆ. 6 ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದು, ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.   ಇನ್ನೂ ಅತಿವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗ್ತಿದೆ. ಒಂದೇ ಪಿಜಿಯಲ್ಲಿ ವಾಸವಿದ್ದ ಈ 7 ಮಂದಿ ರಾತ್ರಿ ಪಾರ್ಟಿ ಮುಗಿಸಿ ರ್ಯಾಶ್​ ಡ್ರೈವಿಂಗ್​ ಮಾಡುತ್ತಿದ್ದರು ಎನ್ನಲಾಗಿದೆ.

ಆದರೆ ತಿರುವಿನಲ್ಲಿ ಆಡಿ ಕ್ಯೂ 3 ಕಾರು ನಿಯಂತ್ರಣಕ್ಕೆ ಸಿಗದ ಪರಿಣಾಮ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ 7 ಮಂದಿಯೂ ಸಾವನ್ನಪ್ಪಿದ್ದಾರೆ. ಅಪಘಾತದ ಭೀಕರ ದೃಶ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಮೃತಪಟ್ಟ ಬಿಂದು, ಕರುಣಾಸಾಗರ್​ ಸ್ವಂತ ಮಾವನ ಮಗಳು. ಕರುಣಾ ಸಾಗರ್​ ಜೊತೆಯಲ್ಲಿ ಇದ್ದವರೆಲ್ಲ ಅವರ ಸ್ನೇಹಿತರು ಎನ್ನಲಾಗಿದೆ. ಆದರೆ ಇವರೆಲ್ಲ ಯಾರು ಎಂಬ ಪರಿಚಯ ಕರುಣಾ ಸಾಗರ್​ ಕುಟುಂಬಸ್ಥರಿಗೆ ಇಲ್ಲ. ಪ್ರತ್ಯಕ್ಷದರ್ಶಿ ಸತೀಶ್​ ಎಂಬವರು ಅಪಘಾತ ಸಂಬಂಧ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

Tags: #saakshatvbenagluruCar Accidentdmk mlakoramagala
ShareTweetSendShare
Join us on:

Related Posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram