ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ರುಚಿಕರ , ಸುಲಭ, ಆರೋಗ್ಯಕರ ಸಿಹಿ ತಿಂಡಿಗಳು ರೆಸಿಪಿಗಳು ನಿಮಗಾಗಿ..!

Namratha Rao by Namratha Rao
September 20, 2021
in Cooking, Newsbeat, ಅಡುಗೆ
Share on FacebookShare on TwitterShare on WhatsappShare on Telegram

5 ರುಚಿಕರ , ಸುಲಭ, ಆರೋಗ್ಯಕರ ಸಿಹಿ ತಿಂಡಿಗಳು ರೆಸಿಪಿಗಳು ನಿಮಗಾಗಿ..!

1. ಕಾಯಿ ಕಡುಬು

Related posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

July 9, 2026
ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

July 9, 2026

ಬೇಕಾಗುವ ಸಾಮಗ್ರಿಗಳು
ದೋಸೆ ಅಕ್ಕಿ – 1.5 ಕಪ್
ಬೆಲ್ಲ – 3/4 ಕಪ್
ಕಾಯಿತುರಿ – 1 ಕಪ್
ರುಚಿಗೆ ತಕ್ಕಷ್ಟು ಉಪ್ಪು
ಎಣ್ಣೆ ‌- 2 ಚಮಚ
Saakshatv cooking recipe how to prepare kayi kadubu
ಮಾಡುವ ವಿಧಾನ
ಮೊದಲು ದೋಸೆ ಅಕ್ಕಿಯನ್ನು ಚೆನ್ನಾಗಿ ತೊಳೆದು 2 ಗಂಟೆ ಗಳ ಕಾಲ ನೆನೆಸಿಡಿ. ನಂತರ ಉಪ್ಪು ಅಗತ್ಯವಿರುವಷ್ಟು ನೀರು ಹಾಕಿ ನುಣ್ಣಗೆ ರುಬ್ಬಿ. ಬಳಿಕ ಬೆಲ್ಲ ಮತ್ತು ಕಾಯಿತುರಿಯನ್ನು ಚೆನ್ನಾಗಿ ಬೆರೆಸಿ ಪಕ್ಕದಲ್ಲಿಡಿ. ನಂತರ ನುಣ್ಣಗೆ ರುಬ್ಬಿ ದ ಹಿಟ್ಟನ್ನು ಬಾಣಲೆಗೆ ಹಾಕಿ ಇದಕ್ಕೆ ಎಣ್ಣೆ 2 ಚಮಚ ಹಾಕಿ ನೀರಿನಂಶ ಇಂಗುವವರೆಗೆ ಕಾಯಿಸಿ. ನಂತರ ಅದರಿಂದ ಉಂಡೆಗಳನ್ನು ಮಾಡಿ ಬಾಳೆ ಎಲೆಗೆ ಸ್ವಲ್ಪ ಎಣ್ಣೆ ಸವರಿ ಒತ್ತಿ .ಕರ್ಜಿ ಕಾಯಿ ಮಣೆಯಲ್ಲಿ ಇಟ್ಟು ಅದಕ್ಕೆ ಬೆಲ್ಲ ಮತ್ತು ಕಾಯಿತುರಿ ಮಿಶ್ರಣ ಸೇರಿಸಿ ಒತ್ತಿ . ನಂತರ ಹಬೆಯಲ್ಲಿ ಬೇಯಿಸಿಕೊಳ್ಳಿ.

2. ಅವಲಕ್ಕಿ ‌ಲಡ್ಡು

ಬೇಕಾಗುವ ‌ಸಾಮಾಗ್ರಿ

ಅವಲಕ್ಕಿ – 2 ಕಪ್
ಬೆಲ್ಲ – 1 ಕಪ್
ತೆಂಗಿನ ಕಾಯಿತುರಿ – 1/2 ಕಪ್
ತುಪ್ಪ – 2 ಚಮಚ
ದ್ರಾಕ್ಷಿ, ಗೋಡಂಬಿ – ಸ್ವಲ್ಪ
ಏಲಕ್ಕಿ- ಚಿಟಿಕೆಯಷ್ಟು

ಮಾಡುವ ‌ವಿಧಾನ
Saakshatv cooking recipe avalakki laddu recipe

ಮೊದಲಿಗೆ ‌ಬಾಣಲೆ ಬಿಸಿ ಮಾಡಿ ‌ಅವಲಕ್ಕಿಯನ್ನು 2 ನಿಮಿಷ ಕಾಲ ಚೆನ್ನಾಗಿ ಹುರಿಯಿರಿ. ನಂತರ ಇದನ್ನು ಮಿಕ್ಸಿ ಜಾರಿಗೆ ಹಾಕಿ ಪುಡಿ ಮಾಡಿ ಇಟ್ಟುಕೊಳ್ಳಿ.
ನಂತರ ಬಾಣಲೆ ಬಿಸಿ ಮಾಡಿ 2 ಚಮಚ ತುಪ್ಪ ಹಾಕಿ ಗೋಡಂಬಿ, ದ್ರಾಕ್ಷಿಯನ್ನು ಹುರಿಯಿರಿ. ನಂತರ 1 ಕಪ್ ಬೆಲ್ಲಕ್ಕೆ 1 ಕಪ್ ನೀರನ್ನು ಸೇರಿಸಿ ಕರಗಿಸಿಕೊಳ್ಳಿ. ನಂತರ ಇದಕ್ಕೆ ತೆಂಗಿನ ಕಾಯಿತುರಿ ಸೇರಿಸಿ ‌ಚೆನ್ನಾಗಿ ಮಿಶ್ರ ‌ಮಾಡಿ. ಬಳಿಕ ಕಡಿಮೆ ಉರಿಯಲ್ಲಿ ಬೇಯಿಸುತ್ತಾ ಏಲಕ್ಕಿ ಪುಡಿ ಮಿಶ್ರ ಮಾಡಿ.‌ ಈಗ ಪುಡಿ ಮಾಡಿ ಇಟ್ಟುಕೊಂಡ ಅವಲಕ್ಕಿ ಪುಡಿ ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ಹುರಿದಿಟ್ಟುಕೊಂಡ ದ್ರಾಕ್ಷಿ, ಗೋಡಂಬಿ ಸೇರಿಸಿ. ಬಿಸಿ ಇರುವಾಗಲೇ ಮಿಶ್ರಣದಿಂದ ಲಡ್ಡುಗಳನ್ನು ತಯಾರಿಸಿ ಕೊಳ್ಳಿ. ಈಗ ರುಚಿಯಾದ ಅವಲಕ್ಕಿ ಲಡ್ಡು ಸವಿಯಲು ಸಿದ್ಧವಾಗಿದೆ.

3. ಕ್ಯಾರೆಟ್ ಹಲ್ವಾ

ಬೇಕಾಗುವ ಸಾಮಗ್ರಿಗಳು

ಕ್ಯಾರೆಟ್ ತುರಿ – 3 ಕಪ್
ತುಪ್ಪ – 1/4 ಕಪ್
ಸಕ್ಕರೆ -1 ಕಪ್
ಹಾಲು – 3 ಕಪ್
ಡ್ರೈ ಫ್ರೂಟ್ಸ್ – ಸ್ವಲ್ಪ
ಏಲಕ್ಕಿ ಪುಡಿ – ಚಿಟಿಕೆಯಷ್ಟು
Saakshatv cooking recipe preparation of carrot halva
ಮಾಡುವ ವಿಧಾನ
ಮೊದಲಿಗೆ ಬಾಣಲೆಯನ್ನು ಬಿಸಿ ಮಾಡಿ, ತುಪ್ಪವನ್ನು ಹಾಕಿ ಕರಗಿಸಿ. ನಂತರ ಡ್ರೈ ಫ್ರೂಟ್ಸ್ ಗಳನ್ನು ಹುರಿದು ಪಕ್ಕದಲ್ಲಿ ಇಟ್ಟುಕೊಳ್ಳಿ. ನಂತರ ಅದೇ ಬಾಣಲೆಗೆ ಕ್ಯಾರೆಟ್ ತುರಿ ಸೇರಿಸಿ ಕೆಲವು ನಿಮಿಷ ಹುರಿಯಿರಿ. ಬಳಿಕ ಇದಕ್ಕೆ ಹಾಲನ್ನು ಸೇರಿಸಿ ಬೇಯಿಸಿಕೊಳ್ಳಿ.
ಹಾಲು ಇಂಗುವವರೆಗೆ ಕ್ಯಾರೆಟ್ ತುರಿಯನ್ನು ಬೇಯಿಸಿ ಕೊಳ್ಳಿ. ನಂತರ ಇದಕ್ಕೆ ಸಕ್ಕರೆಯನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಸಕ್ಕರೆ ಕರಗಿದ ಬಳಿಕ ತುಪ್ಪವನ್ನು ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ಈ ಮಿಶ್ರಣ ತಳ ಬಿಡುವವರೆಗೂ ಕೈಯಾಡಿಸುತ್ತಾ ಇರಿ. ನಂತರ ಏಲಕ್ಕಿ ಪುಡಿ ಮತ್ತು ಹುರಿದಿಟ್ಟುಕೊಂಡ ಡ್ರೈಫ್ರೂಟ್ಸ್ ಸೇರಿಸಿ. ಈಗ ರುಚಿಯಾದ ಕ್ಯಾರೆಟ್ ಹಲ್ವಾ ಸವಿಯಲು ಸಿದ್ಧ.

4. ಅನಾನಸ್ ಕೇಸರಿ ಬಾತ್

ಬೇಕಾಗುವ ಸಾಮಗ್ರಿಗಳು

ರವೆ – 1 ಕಪ್
ಚಿಕ್ಕದಾಗಿ ಹೆಚ್ಚಿದ ಅನಾನಸ್ – 1ಕಪ್
ತುಪ್ಪ – 1ಕಪ್
ಗೋಡಂಬಿ, ದ್ರಾಕ್ಷಿ ಸ್ವಲ್ಪ
ಏಲಕ್ಕಿ – 1
ಕೇಸರಿ ಬಣ್ಣ ಚಿಟಿಕೆಯಷ್ಟು
ಲವಂಗ – 2
pineapple kesari bath
ಮಾಡುವ ವಿಧಾನ

ಮೊದಲಿಗೆ ಬಾಣಲೆ ಬಿಸಿ ಮಾಡಿ 1 ಚಮಚ ತುಪ್ಪವನ್ನು ಕಾಯಿಸಿ. ನಂತರ ದ್ರಾಕ್ಷಿ ಗೋಡಂಬಿ, ಲವಂಗ ಹುರಿದು ಪಕ್ಕದಲ್ಲಿ ಇಟ್ಟುಕೊಳ್ಳಿ.
ನಂತರ ಅದೇ ಬಾಣಲೆಗೆ ಉಳಿದ ತುಪ್ಪ ಸೇರಿಸಿ ಬಿಸಿ‌ ಮಾಡಿ. ನಂತರ ರವೆಯನ್ನು ಸೇರಿಸಿ ಸಣ್ಣ ಉರಿಯಲ್ಲಿ ಕೆಂಪಗೆ ಹುರಿಯಿರಿ. ಅದಕ್ಕೆ ಚಿಕ್ಕದಾಗಿ ಹೆಚ್ಚಿದ ಅನಾನಸ್ ಹೋಳುಗಳನ್ನು ಸೇರಿಸಿ ಐದು ನಿಮಿಷ ಕೈಯಾಡಿಸಿ. ನಂತರ ಸ್ವಲ್ಪ ಸ್ವಲ್ಪವೇ ಬಿಸಿನೀರನ್ನು ಸೇರಿಸಿ. ರವೆ ಬೆಂದ ಬಳಿಕ ಏಲಕ್ಕಿಪುಡಿ, ಕೇಸರಿ ಬಣ್ಣ, ಸಕ್ಕರೆ ಸೇರಿಸಿ 3 ನಿಮಿಷ ಹುರಿದು ಕೆಳಗಿಳಿಸಿ. ಈಗ ಮೊದಲೇ ಹುರಿದಿಟ್ಟುಕೊಂಡ ದ್ರಾಕ್ಷಿ, ಗೋಡಂಬಿ ಹಾಕಿ ಅಲಂಕರಿಸಿ.ರುಚಿಯಾದ ಅನಾನಸ್ ಕೇಸರಿ ಬಾತ್ ಸವಿಯಲು ಸಿದ್ಧವಾಗಿದೆ.

5. ಕೇಸರಿಬಾತ್

ಬೇಕಾಗುವ ಸಾಮಾಗ್ರಿಗಳು

ರವೆ -1/4 ಕಪ್
ಬಿಸಿ ನೀರು – 1 ಕಪ್
ಸಕ್ಕರೆ – 1/2 ಕಪ್
ಕೇಸರಿ ಬಣ್ಣ – ಒಂದು ‌ಪಿಂಚ್
ತುಪ್ಪ – 4 ಚಮಚ
ಏಲಕ್ಕಿ ಪುಡಿ – 1/4 ಚಮಚ
ಕೇಸರಿ ಎಳೆಗಳು -8
ಗೋಡಂಬಿ, ಡ್ರೈಫ್ರೂಟ್ಸ್ – ಸ್ವಲ್ಪ
Saakshatv cooking recipes Mangalore sheera
ಮಾಡುವ ವಿಧಾನ
ಮೊದಲಿಗೆ ಬಾಣಲೆಯಲ್ಲಿ 3 ಚಮಚ ತುಪ್ಪ ಬಿಸಿ ಮಾಡಿ, ನಂತರ ರವೆಯನ್ನು ಸೇರಿಸಿ ಕೆಂಪಗಾಗುವಂತೆ ಹುರಿಯಿರಿ. ನಂತರ ಸ್ವಲ್ಪ ಸ್ವಲ್ಪ ಬಿಸಿನೀರು ಸೇರಿಸಿ ಉಂಡೆಗಳಿಲ್ಲದಂತೆ ಮಿಶ್ರ ಮಾಡಿ ಬೇಯಿಸಿ.
ಈಗ ಸಕ್ಕರೆ, ಕೇಸರಿ ಬಣ್ಣ ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ನಂತರ ಒಂದು ಚಮಚ ತುಪ್ಪ ಸೇರಿಸಿ. ಏಲಕ್ಕಿ ಪುಡಿ ಮತ್ತು ಗೋಡಂಬಿ ಸೇರಿಸಿ ಮಿಶ್ರ ಮಾಡಿ.
ಕೇಸರಿ ಎಳೆಗಳು ಮತ್ತು ಡ್ರೈಫ್ರೂಟ್ಸ್‌ಗಳಿಂದ ಅಲಂಕರಿಸಿ . ರುಚಿಯಾದ ಕೇಸರಿಬಾತ್ ಸವಿಯಲು ಸಿದ್ಧವಾಗಿದೆ.

5 ಸುಲಭ, ಆರೋಗ್ಯಕರ ಮತ್ತು ರುಚಿಕರ ತರಕಾರಿ ಚೆಟ್ನಿ, ಪಲ್ಯಗಳ ರೆಸಿಪಿಗಳು..!

5 ಸುಲಭ , ರುಚಿಕರ , ಆರೋಗ್ಯಕರ ಸಾರು , ಗೊಜ್ಜು , ಗ್ರೇವಿ ರೆಸಿಪಿಗಳು..!

5 ಸುಲಭ ರುಚಿಕರ ಪಾಯಸ, ಹಲ್ವಾ , ಕೇಸರಿಬಾತ್ ರೆಸಿಪಿಗಳು ನಿಮಗಾಗಿ..!

5 ಆರೋಗ್ಯಕರ ಹಾಗೂ ರುಚಿಕರ ಚೆಟ್ನಿಗಳ ರೆಸಿಪಿಗಳು ನಿಮಗಾಗಿ..!

Tags: #saakshatvccokingFoodfood recipiessweets
ShareTweetSendShare
Join us on:

Related Posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

by Shwetha
July 9, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram