ADVERTISEMENT
Sunday, May 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

10 ಸಿಂಪಲ್ ಮತ್ತು ರುಚಿಕರ ವೆಜ್ ಬಿರಿಯಾನಿ / ಬಾತ್ ಗಳ ರೆಸಿಪಿಗಳು ನಿಮಗಾಗಿ..!

Namratha Rao by Namratha Rao
September 24, 2021
in Cooking, Newsbeat, ಅಡುಗೆ
Share on FacebookShare on TwitterShare on WhatsappShare on Telegram

10 ಸಿಂಪಲ್ ಮತ್ತು ರುಚಿಕರ ವೆಜ್ ಬಿರಿಯಾನಿ / ಬಾತ್ ಗಳ ರೆಸಿಪಿಗಳು ನಿಮಗಾಗಿ..!

1. ಪನೀರ್ ಬಿರಿಯಾನಿ

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

May 23, 2026
‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

May 23, 2026

ಬೇಕಾಗುವ ಸಾಮಗ್ರಿಗಳು

ಪನೀರ್ – 500 ಗ್ರಾಂ
ಬಾಸುಮತಿ ಅಕ್ಕಿ – 2 ಕಪ್,
ತುಪ್ಪ- 5 ಚಮಚ
ಜೀರಿಗೆ – 1 ಚಮಚ
ಎಣ್ಣೆ – 2 ಚಮಚ
ಈರುಳ್ಳಿ – 3 ಉದ್ದಕ್ಕೆ ಸೀಳಿಕೊಳ್ಳಿ,
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 2 ಚಮಚ
ಚಕ್ಕೆ-1 ತುಂಡು,
ಏಲಕ್ಕಿ – 2
ಲವಂಗ – 4
ಪಲಾವ್ ಎಲೆ – 1
ಹಸಿಮೆಣಸು – 5
ಕ್ಯಾರೆಟ್ – 2
ಕೊತ್ತಂಬರಿ ಸೊಪ್ಪು – ಸ್ವಲ್ಪ
ಪುದೀನಾ ಸೊಪ್ಪು – ಸ್ವಲ್ಪ
ನೀರು – 4 ಕಪ್
ರುಚಿಗೆ ತಕ್ಕಷ್ಟು ಉಪ್ಪು
Saakshatv cooking recipe how to prepare paneer biryani
ಮಾಡುವ ವಿಧಾನ:

ಅಕ್ಕಿಯನ್ನು ಚೆನ್ನಾಗಿ ತೊಳೆದು 20 ನಿಮಿಷಗಳ ಕಾಲ ನೆನೆಸಿಡಿ. ನಂತರ ಪಾತ್ರೆಗೆ ತುಪ್ಪ, ಎಣ್ಣೆ ಹಾಕಿ ಬಿಸಿ ಮಾಡಿ. ಇದಕ್ಕೆ ಪನೀರ್ ಅನ್ನು ಕತ್ತರಿಸಿ ಹಾಕಿ ಕೆಂಪಗಾಗುವಂತೆ ಹುರಿದು ತೆಗೆಯಿರಿ. ನಂತರ ಆ ಪಾತ್ರೆಗೆ ಚಕ್ಕೆ, ಲವಂಗ, ಏಲಕ್ಕಿ, ಪಲಾವ್ ಎಲೆ ಹಾಕಿ ಸ್ವಲ್ಪ ಹೊತ್ತು ಹುರಿಯಿರಿ. ನಂತರ ಉದ್ದಕ್ಕೆ ತೆಳುವಾಗಿ ಕತ್ತರಿಸಿದ ಈರುಳ್ಳಿ ಸೇರಿಸಿ ಕೆಂಪಗಾಗುವವರೆಗೆ ಹುರಿಯಿರಿ. ‌ಬಳಿಕ ಇದಕ್ಕೆ ಉದ್ದಕ್ಕೆ ಕತ್ತರಿಸಿದ ಹಸಿಮೆಣಸು, ಸಣ್ಣಗೆ ಕತ್ತರಿಸಿದ ಕ್ಯಾರೆಟ್, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ ಹುರಿಯಿರಿ. ನಂತರ ಇದಕ್ಕೆ ಅಗತ್ಯವಿರುವಷ್ಟು ನೀರು ಸೇರಿಸಿ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕುದಿಸಿ. ಬಳಿಕ ಅಕ್ಕಿ ಸೇರಿಸಿ, ಚೆನ್ನಾಗಿ ಬೇಯಿಸಿ. ನಂತರ ಹುರಿದ ಪನೀರ್, ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿಸೊಪ್ಪು, ಪುದೀನಾ ಸೊಪ್ಪು ಹಾಕಿ ಒಂದು ಮುಚ್ಚಳ ಮುಚ್ಚಿ ಸಣ್ಣ ಉರಿಯಲ್ಲಿ 10 ನಿಮಿಷಗಳ ಕಾಲ ಬೇಯಿಸಿಕೊಳ್ಳಿ. ರುಚಿಯಾದ ಪನೀರ್ ಬಿರಿಯಾನಿ ಸವಿಯಲು ಸಿದ್ಧವಾಗಿದೆ.

2. ಬಟಾಣಿ ಬಾತ್

ಬೇಕಾಗುವ ಸಾಮಾಗ್ರಿಗಳು

ಅಕ್ಕಿ 1 ಕಪ್
ನೆನೆಸಿದ ಒಣ ಬಟಾಣಿ/ಹಸಿ ಬಟಾಣಿ – 1ಕಪ್
ಈರುಳ್ಳಿ – 1
ಟೊಮೆಟೊ – 1
ಹಸಿಮೆಣಸು – 3
ಕೆಂಪು ಮೆಣಸು – 5
ಕೊತ್ತಂಬರಿಸೊಪ್ಪು – ಸ್ವಲ್ಪ
ಶುಂಠಿ ಬೆಳ್ಳುಳಿ ಪೇಸ್ಟ್ – 1 ಚಮಚ
ಗರಂಮಸಾಲೆ ಪುಡಿ – 1 ಚಮಚ
ಚೆಕ್ಕೆ – 1 ಇಂಚು
ಲವಂಗ – 2
ಮರಾಠಿಮೊಗ್ಗು – 2
ಏಲಕ್ಕಿ – 2
ಪಲಾವ್ ಎಲೆ – 1
ರುಚಿಗೆ ತಕ್ಕಷ್ಟು ಉಪ್ಪು.
ಎಣ್ಣೆ/ತುಪ್ಪ – 2 ಚಮಚ
Saakshatv cooking recipes batani bath

ಮಾಡುವ ವಿಧಾನ

ಮೊದಲಿಗೆ ಅಕ್ಕಿಯನ್ನು ತೊಳೆದು ನೀರನ್ನು ಸೋಸಿ ಪಕ್ಕದಲ್ಲಿ ಇಡಿ. ಬಳಿಕ ಕೆಂಪು ಮೆಣಸುಗಳನ್ನು 10 ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿ ಇಡಿ. ನಂತರ ಮಿಕ್ಸಿ ಜಾರಿನಲ್ಲಿ ಹಸಿಮೆಣಸಿನಕಾಯಿ. ಕೊತ್ತಂಬರಿಸೊಪ್ಪು ಮತ್ತು ನೆನೆಸಿದ ಕೆಂಪು ಮೆಣಸು ಸೇರಿಸಿ ಚೆನ್ನಾಗಿ ರುಬ್ಬಿ.

ಈಗ ಕುಕ್ಕರಿಗೆ ಎಣ್ಣೆ ಅಥವಾ ತುಪ್ಪ ಹಾಕಿ. ಬಿಸಿಯಾದ ಮೇಲೆ ಚೆಕ್ಕೆ, ಲವಂಗ, ಮರಾಠಿಮೊಗ್ಗು, ಏಲಕ್ಕಿ, ಪಲಾವ್ ಎಲೆ ಸೇರಿಸಿ. ‌ಬಳಿಕ ಸಣ್ಣಗೆ ಹೆಚ್ಚಿದ ಈರುಳ್ಳಿ ಸೇರಿಸಿ ಕೆಂಪಗಾಗುವವರೆಗೆ ಹುರಿಯಿರಿ. ನಂತರ ಹೆಚ್ಚಿದ ಟೊಮೆಟೊ ಸೇರಿಸಿ, ಮೃದುವಾಗುವವರೆಗೆ ಬೇಯಿಸಿ. ಬಳಿಕ ಶುಂಠಿ. ಬೆಳ್ಳುಳಿ ಪೇಸ್ಟ್, ರುಬ್ಬಿದ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಗರಂ ಮಸಾಲೆ ಪುಡಿ ಸೇರಿಸಿ ಎಲ್ಲವನ್ನೂ ಚೆನ್ನಾಗಿ ಕಲಸಿ.
ನಂತರ ಬಟಾಣಿ, ಅಕ್ಕಿ, ಉಪ್ಪು, ಅಗತ್ಯವಿರುವಷ್ಟು ನೀರು ಸೇರಿಸಿ ಮುಚ್ಚಳ ಮುಚ್ಚಿ 3 ವಿಷಲ್ ಬರುವವರೆಗೆ ಬೇಯಿಸಿ.
ಈಗ ರುಚಿಯಾದ ಬಟಾಣಿ ಬಾತ್ ಸವಿಯಲು ಸಿದ್ಧ.

3. ಪನ್ನೀರ್ ಬಿರಿಯಾನಿ

ಬೇಕಾಗುವ ಸಾಮಾಗ್ರಿಗಳು

ಪನ್ನೀರ್ – 1 ಕಪ್
ಭಾಸ್ಮತಿ ಅಕ್ಕಿ 1 ಕಪ್

ಪಲಾವ್ ಎಲೆ 2,
ಚಕ್ಕೆ 1,
ಲವಂಗ 4,
ಏಲಕ್ಕಿ 2,
ಗೋಡಂಬಿ 8-10,
ಪುದೀನಾ ಸೊಪ್ಪು 1 ಕಟ್ಟು
ಕೊತ್ತಂಬರಿಸೊಪ್ಪು – ಸ್ವಲ್ಪ
ಬೆಳ್ಳುಳ್ಳಿ ಎಸಳು – 5-6
ಶುಂಠಿ – ಸಣ್ಣ ತುಂಡು
ಸೋಂಪು – 1 ಚಮಚ
ಗಟ್ಟಿ ಮೊಸರು – 2 ಚಮಚ

ಉದ್ದಕ್ಕೆ ಹೆಚ್ಚಿದ ಈರುಳ್ಳಿ – 1,
ಸಣ್ಣಗೆ ಕತ್ತರಿಸಿದ ಹಸಿಮೆಣಸು – 2
ಹೆಚ್ಚಿದ ಟೊಮೆಟೊ – 1

ಮೆಣಸಿನ ಪುಡಿ 1 ಚಮಚ,
ಬಿರಿಯಾನಿ ಮಸಾಲಾ 1 ಚಮಚ
ರುಚಿಗೆ ತಕ್ಕಷ್ಟು ಉಪ್ಪು
Saakshatv cooking recipe how to cook paneer biryani

ಮಾಡುವ ವಿಧಾನ

ಮೊದಲಿಗೆ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ನಂತರ ಕತ್ತರಿಸಿಕೊಂಡ ಪನ್ನೀರ್ ತುಂಡುಗಳನ್ನು ಸ್ವಲ್ಪ ಕೆಂಪಗೆ ಆಗುವವರೆಗೆ ಹುರಿಯಿರಿ.
ನಂತರ ಮಿಕ್ಸಿ ಜಾರಿಗೆ ಪುದೀನಾ ಸೊಪ್ಪು, ಕೊತ್ತಂಬರಿಸೊಪ್ಪು, ಬೆಳ್ಳುಳ್ಳಿ ಎಸಳು, ಚಿಕ್ಕ ಶುಂಠಿ, ಸೋಂಪ್ ಹಾಕಿ ನೀರು ಹಾಕದೆ ನುಣ್ಣಗೆ ರುಬ್ಬಿ. ನಂತರ ಅದಕ್ಕೆ 2 ಚಮಚ ಗಟ್ಟಿ ಮೊಸರು ಸೇರಿಸಿ ಮತ್ತೊಮ್ಮೆ ರುಬ್ಬಿ.

ಈಗ ಕುಕ್ಕರಿನಲ್ಲಿ ಎಣ್ಣೆ ಬಿಸಿ ಮಾಡಿ ಪಲಾವ್ ಎಲೆ, ಚಕ್ಕೆ, ಲವಂಗ, ಏಲಕ್ಕಿ, ಗೋಡಂಬಿ ಗಳನ್ನು ಹುರಿಯಿರಿ. ನಂತರ
ಈರುಳ್ಳಿ, ಹಸಿಮೆಣಸು ಸೇರಿಸಿ ಚೆನ್ನಾಗಿ ಹುರಿಯಿರಿ. ನಂತರ ಹೆಚ್ಚಿಕೊಂಡ ಟೊಮೆಟೊ ಸೇರಿಸಿ ಹುರಿಯಿರಿ.
ಈಗ ರುಬ್ಬಿಕೊಂಡ ಮಿಶ್ರಣವನ್ನು ಸೇರಿಸಿ, ಉಪ್ಪು, ಮೆಣಸಿನ ಪುಡಿ, ಬಿರಿಯಾನಿ ಮಸಾಲಾ ಹಾಕಿ ಚೆನ್ನಾಗಿ ಮಿಶ್ರ ಮಾಡಿ. ನಂತರ ಹುರಿದಿಟ್ಟುಕೊಂಡ ಪನ್ನೀರ್ ಸೇರಿಸಿ ಚೆನ್ನಾಗಿ ಬೆರೆಸಿ.

ಈಗ ಈ ಮಿಶ್ರಣಕ್ಕೆ ಅರ್ಧ ಗಂಟೆ ನೆನೆಸಿಟ್ಟುಕೊಂಡ ಅಕ್ಕಿಯನ್ನು ಸೇರಿಸಿ. (1 ಅಳತೆಗೆ ಒಂದುವರೆ ಅಳತೆ ನೀರು) ಮುಚ್ಚಳ ಮುಚ್ಚಿ ಮಧ್ಯಮ ಉರಿಯಲ್ಲಿ 1 ವಿಷಲ್ ಬರುವವರೆಗೆ ಬೇಯಿಸಿ.
ರುಚಿಯಾದ ಪನ್ನೀರ್ ಬಿರಿಯಾನಿ ರೆಡಿಯಾಗಿದೆ. ಇದನ್ನು ರಾಯತ ಜೊತೆ ಸವಿಯಿರಿ.

4. ಕ್ಯಾಬೇಜ್ ರೈಸ್

ಬೇಕಾಗುವ ಸಾಮಗ್ರಿಗಳು

ಅಕ್ಕಿ 11/2 ಲೋಟ
ಚಿಕ್ಕದಾಗಿ ಹೆಚ್ಚಿದ ಕ್ಯಾಬೇಜ್ 1/2ಕಪ್
ಆಲೂಗಡ್ಡೆ 1
ಗರಂ ಮಸಾಲ – 1ಚಮಚ
ಕೊತ್ತಂಬರಿ ಪುಡಿ – 1/4 ಚಮಚ
ಅರಸಿನ ಪುಡಿ – 1/4 ಚಮಚ,
ಜೀರಿಗೆ ಪುಡಿ – 1/2ಚಮಚ
ಆಲ್ ಸ್ಪೈಸ್ ಎಲೆ – 3
ಕೊತ್ತಂಬರಿ ಸೊಪ್ಪು – ಸ್ವಲ್ಪ
ತುರಿದ ಶುಂಠಿ – 1/4ಚಮಚ
ತುಪ್ಪ – 3 ಚಮಚ
ರುಚಿಗೆ ತಕ್ಕಷ್ಟು ಉಪ್ಪು
Saakshatv cooking recipe cabbage rice

ಮಾಡುವ ವಿಧಾನ

ಮೊದಲಿಗೆ ಅಕ್ಕಿಯನ್ನು ಚೆನ್ನಾಗಿ ತೊಳೆದು ಇಟ್ಟುಕೊಳ್ಳಿ. ಆಲೂಗೆಡ್ಡೆಯ ಸಿಪ್ಪೆ ತೆಗೆದು ಅದನ್ನು ಚಿಕ್ಕದಾಗಿ ಕತ್ತರಿಸಿಕೊಳ್ಳಿ.
ನಂತರ ಕುಕ್ಕರ್ ನಲ್ಲಿ ತುಪ್ಪ ಬಿಸಿ ಮಾಡಿ. ತುಪ್ಪ ಬಿಸಿಯಾದ ಬಳಿಕ ಅದಕ್ಕೆ ಕತ್ತರಿಸಿದ ಕ್ಯಾಬೇಜ್, ಆಲೂಗಡ್ಡೆ, ಶುಂಠಿ ತುರಿ ಸೇರಿಸಿ ಹುರಿಯಿರಿ. ನಂತರ ಅದಕ್ಕೆ ಅರಿಶಿನ ಪುಡಿ, ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಆಲ್ ಸ್ಪೈಸ್ ಎಲೆ ಹಾಕಿ ಚೆನ್ನಾಗಿ ಬೆರೆಸಿ. ನಂತರ ಅದಕ್ಕೆ ಅಕ್ಕಿ, ರುಚಿಗೆ ತಕ್ಕಷ್ಟು ಉಪ್ಪು, ಅಗತ್ಯವಿರುವಷ್ಟು ನೀರು ಸೇರಿಸಿ. ನಂತರ ಕುಕ್ಕರ್ ಗೆ ಮುಚ್ಚಳವನ್ನು ಮುಚ್ಚಿ 3 ವಿಸಲ್ ಕೂಗಿಸಿ. ನಂತರ ಸಣ್ಣದಾಗಿ ಕತ್ತರಿಸಿದ ಕೊತ್ತಂಬರಿ ಸೊಪ್ಪು ಹಾಕಿ ಬೆರೆಸಿ. ಈಗ ರುಚಿಯಾದ ಕ್ಯಾಬೇಜ್ ರೈಸ್ ರಾಯತದ ಜೊತೆ ಸವಿಯಲು ಸಿದ್ಧವಾಗಿದೆ.

ರುಚಿ ಜೊತೆ ಆರೋಗ್ಯಕ್ಕಾಗಿ 5 ಜ್ಯೂಸ್ ಗಳ ರೆಸಿಪಿಗಳು ನಿಮಗಾಗಿ..!

5. ವೆಜ್ ಪನೀರ್ ಫ್ರೈಡ್ ರೈಸ್

ಬೇಕಾಗುವ ಸಾಮಾಗ್ರಿಗಳು

ಅಕ್ಕಿ – 1 ಕಪ್
ಪನೀರ್ – ಸ್ವಲ್ಪ
ಬೀನ್ಸ್ – 10
ಕ್ಯಾರೆಟ್ – 1
ಆಲೂಗಡ್ಡೆ -2
ಮ್ಯಾಗಿ ಮಸಾಲಾ – ರುಚಿಗೆ ತಕ್ಕಷ್ಟು
ಎಣ್ಣೆ/ತುಪ್ಪ – 2 ಚಮಚ

ಮಾಡುವ ವಿಧಾನ
Saakshatv cooking recipe how to prepare veg paneer fried rice
ಮೊದಲಿಗೆ ಅಕ್ಕಿಯನ್ನು ತೊಳೆದು ಆನ್ನ ಮಾಡಿಟ್ಟುಕೊಳ್ಳಿ. ನಂತರ ಬಾಣಲೆಗೆ ಎಣ್ಣೆ/ತುಪ್ಪ ಹಾಕಿ ಬಿಸಿ ಮಾಡಿ.ನಂತರ ಚಿಕ್ಕದಾಗಿ ಕತ್ತರಿಸಿದ ಬೀನ್ಸ್, ಕ್ಯಾರೆಟ್, ಆಲೂಗಡ್ಡೆ ಸೇರಿಸಿ ಹುರಿಯಿರಿ. ಬಳಿಕ ಪನೀರ್ ಹಾಕಿ ಚೆನ್ನಾಗಿ ಬಾಡಿಸಿ. ನಂತರ ಮ್ಯಾಗಿ ಮಸಾಲಾ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಬೆರೆಸಿ. ಈಗ ಇದಕ್ಕೆ ಮಾಡಿಟ್ಟುಕೊಂಡ ಅನ್ನವನ್ನು ಹಾಕಿ ಕಲಸಿದರೆ ವೆಜ್ ಪನೀರ್ ಫ್ರೈಡ್ ರೈಸ್ ಸವಿಯಲು ಸಿದ್ಧ.

5 ರುಚಿಕರ , ಸುಲಭ, ಆರೋಗ್ಯಕರ ಸಿಹಿ ತಿಂಡಿಗಳು ರೆಸಿಪಿಗಳು ನಿಮಗಾಗಿ..!

5 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

6. ರುಚಿಯಾದ ಕ್ಯಾಪ್ಸಿಕಂ ಬಾತ್

ಬೇಕಾಗುವ ಸಾಮಾಗ್ರಿಗಳು

ಅಕ್ಕಿ – 1 ಕಪ್
ಸಣ್ಣಗೆ ಹೆಚ್ಚಿದ ಕ್ಯಾಪ್ಸಿಕಂ – 1 ಕಪ್
ಸಣ್ಣಗೆ ಹೆಚ್ಚಿದ ಈರುಳ್ಳಿ – 1
ಜೀರಿಗೆ – 1/2 ಚಮಚ
ಟೊಮೆಟೊ – 1
ಅರಿಶಿನ – ಚಿಟಿಕೆ
ಬೆಳ್ಳುಳ್ಳಿ ಶುಂಠಿ ಪೇಸ್ಟ್ – 1 ಚಮಚ
ಮೆಣಸಿನ ಹುಡಿ – 1/2 ಚಮಚ
ಪಾವ್ ಬಾಜಿ ಮಸಾಲೆ – 1 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಕೊತ್ತಂಬರಿ ಸೊಪ್ಪು ಸ್ವಲ್ಪ

Capsicum bath

ತಯಾರಿಸುವ ವಿಧಾನ

ಮೊದಲು ಉದುರುದುರಾಗಿ ಅನ್ನ ಮಾಡಿಕೊಳ್ಳಿ. ನಂತರ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ, ಜೀರಿಗೆ, ಈರುಳ್ಳಿ ಸೇರಿಸಿ ಕೆಂಪಗಾಗುವವರೆಗೆ ಹುರಿಯಿರಿ. ‌ನಂತರ ಸಣ್ಣದಾಗಿ ಕತ್ತರಿಸಿದ ಟೊಮೆಟೊ ಸೇರಿಸಿ. ಮೃದುವಾಗುವವರೆಗೆ ಬೇಯಿಸಿ. ಬಳಿಕ ಉಪ್ಪು, ಅರಿಶಿನ, ಬೆಳ್ಳುಳ್ಳಿ ಶುಂಠಿ ಪೇಸ್ಟ್ ಸೇರಿಸಿ ಸಣ್ಣ ಉರಿಯಲ್ಲಿ ಹುರಿಯಿರಿ. ಈಗ ಅದಕ್ಕೆ ಸಣ್ಣಗೆ ಹೆಚ್ಚಿದ ಕ್ಯಾಪ್ಸಿಕಂ ಸೇರಿಸಿ ಬೇಯಿಸಿಕೊಳ್ಳಿ. ಬಳಿಕ ಮೆಣಸಿನ ಪುಡಿ ಮತ್ತು ಪಾವ್ ಬಾಜಿ ಮಸಾಲೆ ಸೇರಿಸಿ 5 ನಿಮಿಷ ಚೆನ್ನಾಗಿ ಕಲಸಿ. ನಂತರ ಚಿಕ್ಕದಾಗಿ ಹೆಚ್ಚಿದ ಕೊತ್ತಂಬರಿ ಸೊಪ್ಪು ಮತ್ತು ಅನ್ನ ಸೇರಿಸಿ ಚೆನ್ನಾಗಿ ಬೆರೆಸಿ. ರುಚಿಯಾದ ಕ್ಯಾಪ್ಸಿಕಂ ಬಾತ್ ಸವಿಯಲು ಸಿದ್ಧವಾಗಿದೆ.

7. ಸೂಪರ್ ಟೇಸ್ಟಿ ಮಿಕ್ಸೆಡ್ ವೆಜ್ ಫ್ರೈಡ್ ರೈಸ್

ಬೇಕಾಗುವ ಸಾಮಗ್ರಿಗಳು

ಅಕ್ಕಿ – 1 ಕಪ್
ದೊಡ್ಡ ಈರುಳ್ಳಿ – 1
ಸಣ್ಣಗೆ ಹೆಚ್ಚಿದ ಕ್ಯಾಪ್ಸಿಕಂ – 1/2 ಕಪ್
ಸಣ್ಣಗೆ ಹೆಚ್ಚಿದ ಕ್ಯಾರೆಟ್ – 1/2 ಕಪ್
ಸಣ್ಣಗೆ ಹೆಚ್ಚಿದ ಬೀನ್ಸ್ – 1/4 ಕಪ್
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಚಮಚ
ಟೊಮೆಟೊ ಸಾಸ್ – 1 ಚಮಚ
ಸೋಯಾ ಸಾಸ್ – 1 ಚಮಚ
ರೆಡ್ ಚಿಲ್ಲಿ ಸಾಸ್ – 1 ಚಮಚ
ಗಾರ್ಲಿಕ್ ಫ್ರೈಡ್ ರೈಸ್ ಹುಡಿ – 1 ಚಮಚ
ಎಣ್ಣೆ – 3 ಚಮಚ

ಮಾಡುವ ವಿಧಾನ
Saakshatv cooking recipe super tasty fried rice

ಮೊದಲಿಗೆ ಅಕ್ಕಿಯನ್ನು ತೊಳೆದು ಉದುರಾಗಿ ಅನ್ನವನ್ನು ಮಾಡಿಟ್ಟುಕೊಳ್ಳಿ. ನಂತರ ಒಂದು ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಿ. ಅದಕ್ಕೆ ಹೆಚ್ಚಿದ ಈರುಳ್ಳಿ ಸೇರಿಸಿ ಕೆಂಪಗಾಗುವವರೆಗೆ ಹುರಿಯಿರಿ. ನಂತರ ಕ್ಯಾಪ್ಸಿಕಂ, ಕ್ಯಾರೆಟ್, ಬೀನ್ಸ್ ಸೇರಿಸಿ ಹುರಿಯಿರಿ. ಬಳಿಕ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಸೇರಿಸಿ. ಈಗ ಟೊಮೆಟೊ ಸಾಸ್, ಸೋಯಾ ಸಾಸ್, ರೆಡ್ ಚಿಲ್ಲಿ ಸಾಸ್, ಗಾರ್ಲಿಕ್ ಫ್ರೈಡ್ ರೈಸ್ ಪೌಡರ್ ಸೇರಿಸಿ ಚೆನ್ನಾಗಿ ಬೆರೆಸಿ ಸ್ವಲ್ಪ ಹೊತ್ತು ಹುರಿಯಿರಿ. ನಂತರ ಅದಕ್ಕೆ ಮಾಡಿಟ್ಟುಕೊಂಡ ಅನ್ನವನ್ನು ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ.‌ ಈಗ ಸೂಪರ್ ಟೇಸ್ಟಿ ಫ್ರೈಡ್ ರೈಸ್ ಸವಿಯಲು ಸಿದ್ಧವಾಗಿದೆ.

8. ಬದನೆ ಪಲಾವ್

ಬೇಕಾಗುವ ಸಾಮಗ್ರಿಗಳು

ಅಕ್ಕಿ – 2ಕಪ್
ಕೊತ್ತಂಬರಿ ಬೀಜ – 4 ಚಮಚ
ಚಕ್ಕೆ – 2 ತುಂಡು
ಲವಂಗ – 4
ಏಲಕ್ಕಿ – 2
ಪಲಾವ್ ಎಲೆ – 2
ಚಕ್ರಿ ಹೂ – 1
ಎಳ್ಳು – 2 ಚಮಚ
ತುಪ್ಪ – 3 ಚಮಚ
ಎಣ್ಣೆ – 2 ಚಮಚ
ಜೀರಿಗೆ – 1ಚಮಚ
ಈರುಳ್ಳಿ – 2
ಹಸಿಮೆಣಸಿನಕಾಯಿ – 4
ಆಲೂಗಡ್ಡೆ – 1
ಬದನೆಕಾಯಿ – 2
ಬೀನ್ಸ್ – 4
ಕೆಂಪು ಮೆಣಸಿನ ಪುಡಿ – 1ಚಮಚ
ಅರಿಶಿನ ಪುಡಿ – 1/2ಚಮಚ
ನಿಂಬೆ ರಸ – 2ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಕೊತ್ತಂಬರಿಸೊಪ್ಪು – ಸ್ವಲ್ಪ
Saakshatv cookingrecipe brinjal pulav

ಮಾಡುವ ವಿಧಾನ

ಮೊದಲಿಗೆ ಅಕ್ಕಿಯನ್ನು ತೊಳೆದು 10 ನಿಮಿಷ ನೆನೆಸಿಡಿ.
ಒಂದು ಬಾಣಲೆಯಲ್ಲಿ ‌ಕೊತ್ತಂಬರಿ ಬೀಜ, ಚಕ್ಕೆ, ಲವಂಗ, ಏಲಕ್ಕಿ, ಪಲಾವ್ ಎಲೆ, ಚಕ್ರಿ ಹೂ, ಎಳ್ಳು ಹಾಕಿ ಚೆನ್ನಾಗಿ ಹುರಿದು ತಣ್ಣಗಾದ ಮೇಲೆ ಮಿಕ್ಸಿ ಜಾರಿಗೆ ಹಾಕಿ ಪೌಡರ್ ಮಾಡಿಟ್ಟುಕೊಳ್ಳಿ.
ಈಗ ಕುಕ್ಕರ್ ನಲ್ಲಿ ತುಪ್ಪ ಮತ್ತು ‌ಎಣ್ಣೆ ಬಿಸಿ ‌ಮಾಡಿ‌. ಇದಕ್ಕೆ ಜೀರಿಗೆ, ಹೆಚ್ಚಿದ ಈರುಳ್ಳಿ ಹಾಕಿ ಹುರಿಯಿರಿ. ಈರುಳ್ಳಿ ಕೆಂಪಗಾದ ಬಳಿಕ ಕತ್ತರಿಸಿದ ‌ಹಸಿಮೆಣಸಿನಕಾಯಿ ಸೇರಿಸಿ ಹುರಿಯಿರಿ. ಈಗ ಚಿಕ್ಕದಾಗಿ ಕತ್ತರಿಸಿದ ಆಲೂಗಡ್ಡೆ, ಬದನೆಕಾಯಿ, ಬೀನ್ಸ್ ಸೇರಿಸಿ ಚೆನ್ನಾಗಿ ಹುರಿಯಿರಿ. ನಂತರ ಕೆಂಪು ಮೆಣಸಿನ ಪುಡಿ, ಅರಿಶಿನ ಪುಡಿ, ರುಬ್ಬಿಟ್ಟುಕೊಂಡ ಪೌಡರ್, ಉಪ್ಪು ಸೇರಿಸಿ ಚೆನ್ನಾಗಿ ಕಲಸಿ. ನಂತರ ನೆನೆಸಿಟ್ಟ ಅಕ್ಕಿಯ ನೀರನ್ನು ಸೋಸಿ ಅಕ್ಕಿಯನ್ನು ಸೇರಿಸಿ. 2 ನಿಮಿಷ ಚೆನ್ನಾಗಿ ಬೆರೆಸಿ. ನಂತರ ನೀರು ಸೇರಿಸಿ. ‌ಲಿಂಬೆರಸ ಹಿಂಡಿ.‌ ಕುಕ್ಕರ್ ಮುಚ್ಚಿ ಎರಡು ವಿಸಲ್ ಬರುವವರೆಗೆ ಬೇಯಿಸಿ. ನಂತರ ಅದಕ್ಕೆ ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿಸೊಪ್ಪು ಉದುರಿಸಿದರೆ, ರುಚಿಯಾದ ಬದನೆ ಪಲಾವ್ ಸವಿಯಲು ಸಿದ್ಧ.

9. ಸುಲಭವಾಗಿ ತಯಾರಿಸಿ ವೆಜಿಟೇಬಲ್ ಫ್ರೈಡ್ ರೈಸ್

ಬೇಕಾಗುವ ಪದಾರ್ಥಗಳು:

ಅಕ್ಕಿ – 2 ಕಪ್
ತರಕಾರಿಗಳು (ಬೀನ್ಸ್ ಕ್ಯಾರೆಟ್ ಈರುಳ್ಳಿ ಕ್ಯಾಪ್ಸಿಕಂ ಎಲೆಕೋಸು)
ಚಿಕ್ಕದಾಗಿ ಹೆಚ್ಚಿದ‌ ಹಸಿಮೆಣಸು 6
ಈರುಳ್ಳಿ 2
ಬೆಳ್ಳುಳ್ಳಿ 4 ಎಸಳು
ಶುಂಠಿ 1 ಇಂಚು
ಮೆಣಸಿನ ಪುಡಿ – 11/2 ಟೀಸ್ಪೂನ್
ಸೋಯಾ ಸಾಸ್ 2/3 ಟೀಸ್ಪೂನ್
ವಿನೆಗರ್ 2 ಟೀಸ್ಪೂನ್
ಉಪ್ಪು ರುಚಿಗೆ ತಕ್ಕಷ್ಟು
ಎಣ್ಣೆ
Saakshatv cooking recipe fried rice

ಮಾಡುವ ವಿಧಾನ:

ಅಕ್ಕಿಯನ್ನು ತೊಳೆದು ಅನ್ನ ಮಾಡಿಟ್ಟುಕೊಳ್ಳಿ. ನಂತರ ಎಲ್ಲಾ ತರಕಾರಿಗಳನ್ನು ಸಣ್ಣದಾಗಿ ಕತ್ತರಿಸಿ.
ಕಡಾಯಿಯಲ್ಲಿ ಎಣ್ಣೆ ಹಾಕಿ ಬಿಸಿ ಮಾಡಿ. ಜಜ್ಜಿದ ಬೆಳ್ಳುಳ್ಳಿ ಶುಂಠಿ ಮತ್ತು ಹಸಿಮೆಣಸು ಸೇರಿಸಿ ಸುವಾಸನೆ ಬರುವವರೆಗೆ ಹುರಿಯಿರಿ. ನಂತರ ಕತ್ತರಿಸಿದ ತರಕಾರಿಗಳನ್ನು ಸೇರಿಸಿ ಅದನ್ನು ಫ್ರೈ ಮಾಡಿ.
Saakshatv cooking recipe fried rice
ನಂತರ ಸೋಯಾ ಸಾಸ್, ವಿನೆಗರ್, ಉಪ್ಪು, ಮೆಣಸಿನ ಹುಡಿ ಸೇರಿಸಿ ಹುರಿಯಿರಿ. ತರಕಾರಿ ಬೆಂದ ಬಳಿಕ‌ ಮಾಡಿಟ್ಟುಕೊಂಡ ಅನ್ನ ಸೇರಿಸಿ. ಚೆನ್ನಾಗಿ ಮಿಶ್ರಣ ಮಾಡಿ. ಈಗ ವೆಜಿಟೇಬಲ್ ಫ್ರೈಡ್ ರೈಸ್ ಸಿದ್ಧವಾಗಿದೆ. ಇದನ್ನು ಸಾಸ್‌ನೊಂದಿಗೆ ಸವಿಯಿರಿ.

10. ರುಚಿಯಾದ ಮಸಾಲ ಚಿತ್ರಾನ್ನ

ಬೇಕಾಗುವ ಪದಾರ್ಥಗಳು

ಅಕ್ಕಿ 1 1/2 ಪಾವ್
ಎಣ್ಣೆ 4 ಟೀಸ್ಪೂನ್
ಸಾಸಿವೆ 1/2 ಟೀಸ್ಪೂನ್
ನೆಲಕಡಲೆ/ಶೇಂಗಾ 2 ಟೀಸ್ಪೂನ್
ಉದ್ದಿನ ಬೇಳೆ 1 ಟೀಸ್ಪೂನ್
ಕಡ್ಲೆಬೇಳೆ 1ಟೀಸ್ಪೂನ್
ಉಪ್ಪು ರುಚಿಗೆ ‌ತಕ್ಕಷ್ಟು
ನಿಂಬೆ ರಸ 2 ಚಮಚ
Saakshatv cooking recipe masala chitranna

ಮಸಾಲೆಗೆ

ತುರಿದ ತೆಂಗಿನಕಾಯಿ 1/2 ಕಪ್
ಕೆಂಪು ಮೆಣಸು 4
ಬ್ಯಾಡಗಿ ಮೆಣಸು 14
ಕೊತ್ತಂಬರಿ ಬೀಜ 2 ಟೀಸ್ಪೂನ್
ಜೀರಿಗೆ 1 ಟೀಸ್ಪೂನ್
ಬೆಲ್ಲ 1 ಸಣ್ಣ ತುಂಡು

ಮಾಡುವ ವಿಧಾನ
ಅಕ್ಕಿಯನ್ನು ತೊಳೆದು ಅನ್ನ ತಯಾರಿಸಿ ಇಟ್ಟುಕೊಳ್ಳಿ.‌ ನಂತರ ತುರಿದ ತೆಂಗಿನಕಾಯಿ, ಕೆಂಪು ಮೆಣಸು, ಬ್ಯಾಡಗಿ ಮೆಣಸು, ಕೊತ್ತಂಬರಿ ಬೀಜ, ಜೀರಿಗೆ, ಬೆಲ್ಲವನ್ನು ಮಿಕ್ಸಿ ಜಾರಿಗೆ ಹಾಕಿ ರುಬ್ಬಿ.
Saakshatv cooking recipe masala chitranna
ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಸಾಸಿವೆಯನ್ನು ಸೇರಿಸಿ.‌ ಅದು ಸಿಡಿದ ನಂತರ ನೆಲಕಡಲೆ, ಉದ್ದಿನ ಬೇಳೆ, ಕಡ್ಲೆಬೇಳೆ ಸೇರಿಸಿ ಹುರಿಯಿರಿ. ನಂತರ ರುಬ್ಬಿದ ಮಸಾಲೆಯನ್ನು ಸೇರಿಸಿ. ‌ಎಣ್ಣೆ ಬೇರ್ಪಡುವವರೆಗೆ ಹುರಿಯಿರಿ. ನಂತರ ಉಪ್ಪು ನಿಂಬೆ ರಸ ಸೇರಿಸಿ ತಯಾರಾದ ಅನ್ನದಲ್ಲಿ ಬೆರೆಸಿ.
ರುಚಿಕರವಾದ ಮಸಾಲಾ ಚಿತ್ರಾನ್ನ ಸವಿಯಲು ಸಿದ್ಧ

Tags: #saakshatvcookingfood recipies
ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

by Shwetha
May 23, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವಾಕಾಂಕ್ಷಿ ಶಾಸಕರು ಹಾಗೂ ಹಾಲಿ ಸಚಿವರು ದೆಹಲಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್...

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

by Shwetha
May 23, 2026
0

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ...

ಮಂತ್ರಿ ಆಗೋಕೆ ₹200 ಕೋಟಿಯ ಬೇಡಿಕೆ – ಛಲವಾದಿ ನಾರಾಯಣಸ್ವಾಮಿ ಸ್ಫೋಟಕ ಆರೋಪ

ಮನೆ ನಿರ್ಮಿಸಲು ಜಮೀನು ಪಡೆದು ಸ್ಟೇಡಿಯಂ ಕಟ್ಟುವುದು ಎಷ್ಟು ಸರಿ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

by Shwetha
May 23, 2026
0

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram