ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಕಪ್ ಗೆಲ್ಲದಿದ್ರೂ ಜನಮನ ಗೆದ್ದ ಆರ್ ಸಿಬಿ ಕ್ಯಾಪ್ಟನ್ ವಿರಾಟ್ ಕೊಹ್ಲಿ..!

admin by admin
September 30, 2021
in IPL 2021, Newsbeat, ಐಪಿಎಲ್ 2021
virat kohli ishan kishan ipl 2021 saakshatv
Share on FacebookShare on TwitterShare on WhatsappShare on Telegram

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ಐಪಿಎಲ್ 2021- ಕಪ್ ಗೆಲ್ಲದಿದ್ರೂ ಜನಮನ ಗೆದ್ದ ಆರ್ ಸಿಬಿ ಕ್ಯಾಪ್ಟನ್ ವಿರಾಟ್ ಕೊಹ್ಲಿ..!

virat kohli and kkr ipl 2021 saakshatvವಿರಾಟ್ ಕೊಹ್ಲಿ.. ಟೀಮ್ ಇಂಡಿಯಾದ ನಾಯಕ.. ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಪ್ತಾನ. ಹಾಗೇ ಮುಂದಿನ ದಿನಗಳಲ್ಲಿ ಮಾಜಿ ಕ್ಯಾಪ್ಟನ್ ಆಗಬಹುದು.. ಆಗುತ್ತಾರೆ ಕೂಡ. ಅದರಲ್ಲಿ ಯಾವುದೇ ಸಂದೇಹವೂ ಇಲ್ಲ.
ಸದ್ಯದ ಮಟ್ಟಿಗೆ ವಿಶ್ವ ಕ್ರಿಕೆಟ್ ನ ಅತ್ಯಂತ ಜನಪ್ರಿಯ ಕ್ರಿಕೆಟಿಗ. ಐಸಿಸಿಯ ಯಾವುದೇ ಪ್ರಶಸ್ತಿಗಳನ್ನು ಗೆಲ್ಲದಿದ್ರೂ ವಿಶ್ವ ಕ್ರಿಕೆಟ್ ನಲ್ಲಿ ಅತ್ಯಂತ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಮೂರು ಮಾದರಿಯ ಕ್ರಿಕೆಟ್ ನಲ್ಲೂ ಅದ್ಭುತ ಪ್ರದರ್ಶನವನ್ನು ನೀಡಿದೆ. ಜೊತೆಗೆ ಹಲವು ಮಹತ್ವದ ಗೆಲುವುಗಳನ್ನು ದಾಖಲಿಸಿದೆ.
ಇನ್ನು ವಿರಾಟ್ ಕೊಹ್ಲಿ ಆಟದಷ್ಟೇ ಇನ್ನಿತರ ಚಟುವಟಿಕೆಗಳಲ್ಲೂ ಒಂದು ಹೆಜ್ಜೆ ಮುಂದಿದ್ದಾರೆ. ಭಾರತದ ಶ್ರೀಮಂತ ಕ್ರೀಡಾಪಟು ಅನ್ನೋ ಗೌರವಕ್ಕೆ ಪಾತ್ರರಾಗಿರುವ ವಿರಾಟ್ ಜಾಹಿರಾತು ಲೋಕದ ಕಣ್ಮನಿ. ಅಷ್ಟೇ ಅಲ್ಲ, ಸಾಮಾಜಿಕ ಜಾಲ ತಾಣದಲ್ಲೂ ಅತೀ ಹೆಚ್ಚು ಫಾಲೋವರ್ಸ್ ಅನ್ನೂ ಹೊಂದಿರುವ ಕ್ರೀಡಾಪಟು. ಕ್ರಿಕೆಟ್ ಆಟಗಾರರನ್ನು ಹೊರತುಪಡಿಸಿ ಇನ್ನಿತರ ಕ್ರೀಡೆಗಳ ಕ್ರೀಡಾಪಟುಗಳಿಗೂ ಕೊಹ್ಲಿ ಉತ್ತೇಜನ ನೀಡುತ್ತಿದ್ದಾರೆ.
virat kohli and ipl rahul tripati saakshatvಹಾಗೇ ಆಟದ ವಿಚಾರದಲ್ಲಿ ಕೊಹ್ಲಿಗೆ ಸರಿಸಾಟಿ ಯಾರು ಇಲ್ಲ. ಫಿಟ್ ಆಂಡ್ ಫೈನ್ ಆಗಿರುವ ಕೊಹ್ಲಿ ಬ್ಯಾಟ್ ನಿಂದ ಕಳೆದ ಎರಡು ವರ್ಷಗಳಿಂದ ಶತಕಗಳು ಹರಿದು ಬಂದಿಲ್ಲ. ರನ್ ಬರವನ್ನು ಎದುರಿಸುತ್ತಿದ್ದಾರೆ. ಆದ್ರೂ ಕೊಹ್ಲಿ ಹಲವು ದಾಖಲೆಗಳ ಒಡೆಯನಾಗಿದ್ದಾರೆ.
ಇನ್ನು ಮೈದಾನದಲ್ಲಿ ಕೊಹ್ಲಿಯ ವರ್ತನೆಯ ಬಗ್ಗೆ ಟೀಕೆ -ಟಿಪ್ಪಣಿಗಳು ಇದ್ದೇ ಇದೆ. ಸೋಲನ್ನು ಒಪ್ಪಿಕೊಳ್ಳಲು ತಯಾರಿಲ್ಲದ ಕೊಹ್ಲಿಯ ಮನೋಭಾವನೆಯಿಂದಾಗಿ ಕೆಲವೊಂದು ಬಾರಿ ತಾನು ತಂಡದ ನಾಯಕ ಎಂಬುದನ್ನು ಮರೆತುಬಿಡುತ್ತಾರೆ. ಆಕ್ರಮಣಕಾರಿ ಪ್ರವೃತ್ತಿಯ ಕೊಹ್ಲಿಯ ವರ್ತನೆಯ ಕುರಿತು ಕೆಲವು ಕ್ರಿಕೆಟಿಗರಿಗೆ ಅಸಮಾಧಾನವಿದೆ. ಅದನ್ನು ಹೊರತುಪಡಿಸಿ ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್ ನ ಕಿಂಗ್ ಎಂಬುದನ್ನು ಒಪ್ಪಿಕೊಳ್ಳಲೇಬೇಕು.
ಈ ನಡುವೆ ಮೈದಾನದಲ್ಲಿ ಕೊಹ್ಲಿಯ ವರ್ತನೆಯ ಬಗ್ಗೆ ಎಷ್ಟೇ ಅಸಮಾಧಾನವಿದ್ರೂ ಮೈದಾನದ ಹೊರಗೆ ಒಳ್ಳೆಯ ಗೆಳೆಯನಾಗಿರುತ್ತಾರೆ. ಸಹ ಆಟಗಾರರಿಗೆ ಸ್ಪೂರ್ತಿಯ ಚಿಲುಮೆಯಾಗಿರುತ್ತಾರೆ. ಐಪಿಎಲ್ ಇರಲಿ, ಬೇರೆ ಯಾವುದೇ ತಂಡವಿರಲಿ… ಆಟದ ವೇಳೆ ವಿರಾಟ್ ಕೊಹ್ಲಿ ಎದುರಾಳಿ ಆಟಗಾರರ ವಿರುದ್ಧ ಸವಾರಿ ನಡೆಸುವುದನ್ನು ನೋಡಿದ್ದೇವೆ. ಮಾತಿನ ಸಮರ ನಡೆಸುವುದನ್ನು ನೋಡಿದ್ದೇವೆ. ಆದ್ರೆ ಅದು ಆ ಕ್ಷಣಕ್ಕಷ್ಟೇ ಸೀಮಿತವಾಗಿರುತ್ತದೆ.
ಹೌದು, ಈ ಬಾರಿಯ ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ಗುರುವಾಗಿ ಗಮನ ಸೆಳೆಯುತ್ತಿದ್ದಾರೆ. ಸಾಮಾನ್ಯವಾಗಿ ವಿಶ್ವ ಕ್ರಿಕೆಟ್ ನ ಯುವ ಆಟಗಾರರು ಮತ್ತು ಸಹ ಆಟಗಾರರು ಶ್ರೇಷ್ಠ ಆಟಗಾರರಿಂದ ಸಲಹೆ ಮಾರ್ಗದರ್ಶನನಗಳನ್ನು ಪಡೆದುಕೊಳ್ಳುವುದು ಸಾಮಾನ್ಯ ಸಂಗತಿ. ಅದೇ ರೀತಿ ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್ ನಲ್ಲಿ ಎದುರಾಳಿ ತಂಡಗಳ ಯುವ ಆಟಗಾರರಿಗೆ ಗುರುವಾಗಿ ಕ್ಲಾಸ್ ಕೂಡ ತೆಗೆದುಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಫಾರ್ಮ್ ಕಳೆದುಕೊಂಡಿದ್ದ ಇಶಾನ್ ಕಿಶಾನ್ ಕಣ್ಣೀರು ಹಾಕುತ್ತಿದ್ದಾಗ ವಿರಾಟ್ ಕೊಹ್ಲಿ ಬೆನ್ನು ತಟ್ಟಿ ಧೈರ್ಯ ತುಂಬಿದ್ದರು.
ಹಾಗೇ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಯುವ ಆಟಗಾರರಿಗೂ ವಿರಾಟ್ ಕೊಹ್ಲಿ ಸಲಹೆ ಸೂಚನೆಗಳನ್ನು ನೀಡಿದ್ದರು. ಅದ್ರಲ್ಲೂ ರಾಹುಲ್ ತ್ರಿಪಾಠಿಗೆ ಪ್ರತ್ಯೇಕವಾಗಿ ಕ್ಲಾಸ್ ಕೂಡ ತೆಗೆದುಕೊಂಡಿದ್ದರು.
ಇನ್ನು ರಾಜಸ್ತಾನ ರಾಯಲ್ಸ್ ತಂಡದ ಆಟಗಾರರಿಗೂ ವಿರಾಟ್ ಕೊಹ್ಲಿ ಹಿರಿಯಣ್ಣನಾಗಿ ಕೆಲವೊಂದು ಟಿಪ್ಸ್ ಗಳನ್ನು ನೀಡಿದ್ದರು.
ಒಟ್ಟಿನಲ್ಲಿ ವಿರಾಟ್ ಕೊಹ್ಲಿ ಎಷ್ಟೇ ಒರಟ, ಮುಂಗೋಪಿಯಾದ್ರೂ ಯುವ ಆಟಗಾರರಿಗೆ ಮಾರ್ಗದರ್ಶನ , ಸಲಹೆಗಳನ್ನು ನೀಡಿ ಉತ್ತೇಜನ ನೀಡುತ್ತಿರುವುದು ಖುಷಿಯ ಸಂಗತಿ. ಹಾಗಂತ ಇದರಲ್ಲಿ ಯಾವುದೇ ಅಚ್ಚರಿ ಇಲ್ಲ.

ಕಪ್ ಗೆಲ್ಲದಿದ್ರೂ ಜನಮನ ಗೆದ್ದ ಆರ್ ಸಿಬಿ ಕ್ಯಾಪ್ಟನ್ ವಿರಾಟ್ ಕೊಹ್ಲಿ..!

Tags: ipl 2021ishan koshankkrmumbai indiansrahul tripatirajastan royalsRCBuae ipl 2021virat kohli
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram