ಪ್ರಿಯಾಂಕಾ ಗಾಂಧಿ ಅರೆಸ್ಟ್ : ರಾಹುಲ್ ಗಾಂಧಿ ಹೇಳಿದ್ದೇನು..?
ಲಕ್ನೋ : ಉತ್ತರ ಪ್ರದೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ಬಂಧಿಸಿದ್ದು, ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧೈರ್ಯ ತುಂಬಿದ್ದಾರೆ.
ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ, ಈ ಪ್ರಕರಣದಿಂದ ನೀವು ಹಿಂದೆ ಸರಿಯಲ್ಲ ಎಂದು ನನಗೆ ಗೊತ್ತು. ಈ ನಿಮ್ಮ ಧೈರ್ಯಕ್ಕೆ ಅವರೇ ಹೆದರುತ್ತಾರೆ.
ಈ ಅಹಿಂಸಾತ್ಮಕ ಹೋರಾಟದ ನ್ಯಾಯಕ್ಕಾಗಿ ನಾವು ದೇಶದ ರೈತರನ್ನು ಗೆಲ್ಲುವಂತೆ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಲಖೀಂಪುರ ಖೇರಿಗೆ ತೆರಳುವಾಗ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಪ್ರಿಯಾಂಕಾ ಗಾಂಧಿ ಅವರನ್ನು ಸೀತಾಪುರದ ಹರಗಾಂವ್ ಬಳಿ ಇಂದು ಮುಂಜಾನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪೊಲೀಸರು ಮಾತನಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ.
ಅಲ್ಲದೆ ‘ಈ ದೇಶದಲ್ಲಿ ಏನಾಗುತ್ತಿದೆ? ಝಡ್+ ಭದ್ರತೆಯಿರುವ ನಾಯಕಿಯನ್ನು ಯಾವುದೇ ವಾರಂಟ್ ಇಲ್ಲದೇ ಪೊಲೀಸರು ಬಂಧಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.









