ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

Namratha Rao by Namratha Rao
October 4, 2021
in Cooking, Newsbeat, ಅಡುಗೆ
food
Share on FacebookShare on TwitterShare on WhatsappShare on Telegram

5 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

1. ಸೀಗಡಿ ಸುಕ್ಕಾ

ಬೇಕಾಗುವ ಸಾಮಾಗ್ರಿಗಳು
ಸೀಗಡಿ – 2 ಕಪ್
ಈರುಳ್ಳಿ – 1
ಹುರಿದ ಕೊತ್ತಂಬರಿ ಬೀಜ – 1 ಚಮಚ
ಹುಣಸೆಹಣ್ಣು – ಸ್ವಲ್ಪ
ಹುರಿದ ಕೆಂಪು ಮೆಣಸು – 10 -12
ತಾಜಾ ತುರಿದ ತೆಂಗಿನಕಾಯಿ – 1 ಕಪ್
ಜೀರಿಗೆ – 1 ಚಮಚ
ಬೆಳ್ಳುಳ್ಳಿ ಎಸಳು – 4
ಅರಿಶಿನ ಪುಡಿ 1/4 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಎಣ್ಣೆ – 3 ಚಮಚ

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026
Saakshatv cooking tips prepare prawns sukka

ಮಾಡುವ ವಿಧಾನ

ಸೀಗಡಿಗಳನ್ನು ಸ್ವಚ್ಛಗೊಳಿಸಿ ತೊಳೆಯಿರಿ. ನಂತರ ‌ ಉಪ್ಪು ಮತ್ತು ಅರಿಶಿನ ಪುಡಿಯೊಂದಿಗೆ ಮ್ಯಾರಿನೇಟ್ ಮಾಡಿ.
10 ನಿಮಿಷಗಳ ನಂತರ 1/4 ಕಪ್ ನೀರು ಸೇರಿಸಿ 3 -4 ನಿಮಿಷ ಬೇಯಿಸಿ ಇಟ್ಟುಕೊಳ್ಳಿ.

ನಂತರ ಕೆಂಪು ಮೆಣಸು, ಹುಣಸೆಹಣ್ಣು, ಹುರಿದ ಕೊತ್ತಂಬರಿ ಬೀಜಗಳು ಮತ್ತು ಕತ್ತರಿಸಿದ 1 ಈರುಳ್ಳಿಯನ್ನು ರುಬ್ಬಿ ನಯವಾದ ಪೇಸ್ಟ್ ಮಾಡಿ. ನಂತರ ತುರಿದ ತೆಂಗಿನಕಾಯಿ, ಜೀರಿಗೆ, ಬೆಳ್ಳುಳ್ಳಿ ಸೇರಿಸಿ ಸ್ವಲ್ಪ ನೀರು ಸೇರಿಸಿ ತರಿ ತರಿಯಾಗಿ ರುಬ್ಬಿ.
ನಂತರ ಕಡಾಯಿಯನ್ನು ಬಿಸಿ ಮಾಡಿ ಎಣ್ಣೆಯನ್ನು ಸೇರಿಸಿ. ಈಗ ಸಣ್ಣದಾಗಿ ಕತ್ತರಿಸಿದ 1 ಈರುಳ್ಳಿಯನ್ನು ಕೆಂಪಗಾಗುವವರೆಗೆ ಹುರಿಯಿರಿ. ರುಬ್ಬಿಟ್ಟ ಮಸಾಲಾ ಪೇಸ್ಟ್ ಸೇರಿಸಿ. ಮುಚ್ಚಳ ಮುಚ್ಚಿ 10 ನಿಮಿಷ ಬೇಯಿಸಿ. ನಂತರ ಬೇಯಿಸಿದ ಸೀಗಡಿ ಮತ್ತು ಉಪ್ಪು ಸೇರಿಸಿ (ಬೇಕಿದ್ದರೆ) 2 ನಿಮಿಷ ಬೇಯಿಸಿ. ಈಗ ಸೀಗಡಿ ಸುಕ್ಕಾ ಸವಿಯಲು ಸಿದ್ಧವಾಗಿದೆ.

5 ಸುಲಭ ಮತ್ತು ಬಹಳ ರುಚಿಕರ ಪಾಯಸಗಳ ರೆಸಿಪಿಗಳು..!

2. ಕೇರಳದ ಆಪಂ

ಬೇಕಾಗುವ ಸಾಮಗ್ರಿಗಳು

ಅಕ್ಕಿ – 2 ಕಪ್
ಉದ್ದಿನಬೇಳೆ – ಒಂದು ‌ಮುಷ್ಟಿ
ದಪ್ಪ ತೆಂಗಿನಕಾಯಿ ಹಾಲು – 1 ಕಪ್‌
ಸಕ್ಕರೆ – 1 ಚಮಚ
ಯೀಸ್ಟ್ – 1/2 ಚಮಚ
ರುಚಿಗೆ ತಕ್ಕಷ್ಟು ಉಪ್ಪು

Saakshatv cooking recipe prepare Kerala apam

ಮಾಡುವ ‌ವಿಧಾನ

ಮೊದಲಿಗೆ ಅಕ್ಕಿ ಮತ್ತು ಉದ್ದಿನಬೇಳೆಯನ್ನು ನೀರಿನಲ್ಲಿ ‌4 ಗಂಟೆ ನೆನೆಸಿಡಿ. ನಂತರ ನುಣ್ಣಗೆ ಕಡೆದುಕೊಳ್ಳಿ. 5-6 ಗಂಟೆ ಹುದುಗು ಬರಿಸಲು ಬಿಡಿ. ನಂತರ ಸಕ್ಕರೆ, ಉಪ್ಪು, ತೆಂಗಿನ ಹಾಲು ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ. ಇದಕ್ಕೆ ಯೀಸ್ಟ್ ಸೇರಿಸಿ ಚೆನ್ನಾಗಿ ಮಿಶ್ರ ಮಾಡಿಕೊಳ್ಳಿ.

ಈಗ ಚಿಕ್ಕ ಬಾಣಲೆಯನ್ನು ಬಿಸಿ ಮಾಡಿ ತುಪ್ಪ ಸವರಿ. ಒಂದು ಸೌಟು ಹಿಟ್ಟನ್ನು ಹಾಕಿ ಮೆಲ್ಲಗೆ ವೃತ್ತಾಕಾರವಾಗಿ ಒಮ್ಮೆ ತಿರುಗಿಸಿ. ನಂತರ ಬಾಣಲೆಯ ಬಾಯಿಮುಚ್ಚಿ ಬೇಯಿಸಿ, ನಂತರ ತೆಗೆಯಿರಿ. ರುಚಿಕರವಾದ ಆಪಂ ಸವಿಯಲು ಸಿದ್ಧವಾಗಿದೆ.

5 ಸುಲಭ ಬ್ರೇಕ್ ಫಾಸ್ಟ್ ರೆಸಿಪಿಗಳು – ರೈಸ್ ಬಾತ್ / ಪಲಾವ್ / ಪ್ರೈಡ್ ರೈಸ್..!

3. ರುಚಿಯಾದ ಬ್ರೆಡ್ ಪಕೋಡ

ಬೇಕಾಗುವ ಸಾಮಗ್ರಿಗಳು

ಬ್ರೆಡ್ – 4 ತುಂಡು
ಬೇಯಿಸಿದ ಆಲೂಗಡ್ಡೆ – 3
ಹಸಿಮೆಣಸಿನಕಾಯಿ – 1
ಶುಂಠಿ – 1 ಇಂಚು
ಮೆಣಸಿನ ಪುಡಿ – 1/2 ಚಮಚ
ಕೊತ್ತಂಬರಿ ಪುಡಿ – 2 ಚಮಚ
ಚಾಟ್ ಮಸಾಲ – 1/2 ಚಮಚ
ಕಡಲೆ ಹಿಟ್ಟು – 1 ಕಪ್
ಅಕ್ಕಿ ಹಿಟ್ಟು – 2 ಚಮಚ
ಸೋಡಾ – ಚಿಟಿಕೆಯಷ್ಟು
ಗ್ರೀನ್ ಚಟ್ನಿ – 4 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಅಗತ್ಯವಿರುವಷ್ಟು ನೀರು
Saakshatv cooking recipe how to cook bread pakoda
ಮಾಡುವ ವಿಧಾನ

ಮೊದಲಿಗೆ ಪಾತ್ರೆಯಲ್ಲಿ ಬೇಯಿಸಿದ ಆಲೂಗಡ್ಡೆ, ಚಿಕ್ಕದಾಗಿ ಕತ್ತರಿಸಿದ ಹಸಿಮೆಣಸು, ಶುಂಠಿ, ಕೊತ್ತಂಬರಿಪುಡಿ, 1/4 ಚಮಚ ಮೆಣಸಿನ ಪುಡಿ, ಚಾಟ್ ಮಸಾಲ ಹಾಕಿ ಚೆನ್ನಾಗಿ ಬೆರೆಸಿ.
ನಂತರ ಬ್ರೆಡ್ ಗೆ ಗ್ರೀನ್ ಚಟ್ನಿ ಸವರಿ. ಅದನ್ನು ಅರ್ಧ ತುಂಡಾಗಿ ಕತ್ತರಿಸಿ. ಒಂದು ಅರ್ಧ ಬ್ರೆಡ್ ತುಂಡಿನ ಮೇಲೆ ಆಲೂಗಡ್ಡೆ ಮಿಶ್ರಣವನ್ನು ಹಾಕಿ ಉಳಿದ ಅರ್ಧ ತುಂಡು ಬ್ರೆಡ್ ಅನ್ನು ಅದರ ಮೇಲಿರಿಸಿ.

ಬಳಿಕ ಒಂದು ಪಾತ್ರೆಯಲ್ಲಿ ಕಡಲೆಹಿಟ್ಟು, ಅಕ್ಕಿಹಿಟ್ಟು, 1/4 ಚಮಚ ಮೆಣಸಿನ ಪುಡಿ, ಉಪ್ಪು, ಸೋಡಾ, ನೀರು ಹಾಕಿ ಚೆನ್ನಾಗಿ ಮಿಶ್ರ ಮಾಡಿ. ಈಗ ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಿ ಬ್ರೆಡ್ ಅನ್ನು ಈ ಮಿಶ್ರಣದಲ್ಲಿ ಅದ್ದಿ ಎಣ್ಣೆಯಲ್ಲಿ ಬಿಡಿ. ರುಚಿಯಾದ ಬ್ರೆಡ್ ಪಕೋಡ ಸವಿಯಲು ಸಿದ್ಧವಾಗಿದೆ.

3 ಸುಲಭ ಮತ್ತು ಬಹಳ ರುಚಿಕರ ಮೊಟ್ಟೆಯಿಂದ ತಯಾರಿಸಬಹುದಾದ ಅಡುಗೆಗಳು..!

4. ವೆಜಿಟೆಬಲ್ ದೋಸೆ

ಬೇಕಾಗುವ ಪದಾರ್ಥ:

ಅಕ್ಕಿ – 1 ಕಪ್
ಉದ್ದಿನ ಬೇಳೆ – 1/2 ಕಪ್
ರುಚಿಗೆ ತಕ್ಕಷ್ಟು ಉಪ್ಪು
ಕರಿಬೇವಿನ ಸೊಪ್ಪು – ಸ್ವಲ್ಪ
ಇಂಗು – ಚಿಟಿಕೆಯಷ್ಟು
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಚಮಚ
ಚಿಕ್ಕದಾಗಿ ‌ಕತ್ತರಿಸಿದ ತರಕಾರಿ – 1ಕಪ್
ಟೊಮೆಟೊ – 1
ಈರುಳ್ಳಿ ‌- 1
Saakshatv cooking recipe prepare vegetable dosa
ಮಾಡುವ ವಿಧಾನ
ಮೊದಲಿಗೆ ಅಕ್ಕಿ ಹಾಗೂ ಉದ್ದಿನ ಬೇಳೆಯನ್ನು 4 ಗಂಟೆಗಳ ಕಾಲ ನೆನೆ ಹಾಕಿ. ನಂತರ ಮಿಕ್ಸಿ ಜಾರಿಗೆ ಹಾಕಿ ರುಬ್ಬಿ. ಬಳಿಕ ಅದಕ್ಕೆ ಉಪ್ಪು, ಕರಿಬೇವು, ಇಂಗು, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಚಿಕ್ಕದಾಗಿ ಕತ್ತರಿಸಿದ ಈರುಳ್ಳಿ, ಟೊಮೋಟೋ, ತರಕಾರಿ ಹಾಕಿ ಚೆನ್ನಾಗಿ ಮಿಶ್ರ ಮಾಡಿ. ಕೆಲವು ಸಮಯದ ವರೆಗೆ ಇದನ್ನು ಹಾಗೆ ಬಿಡಿ. ನಂತರ ದೋಸೆ ತವೆಯನ್ನು ಬಿಸಿ ಮಾಡಿ ಅದರ ಮೇಲೆ ಎಣ್ಣೆಯನ್ನು ಸವರಿ. ಮಿಶ್ರಣವನ್ನು ಹಾಕಿ ವೃತ್ತಾಕಾರವಾಗಿ ಹರಡಿ. ಸ್ವಲ್ಪ ಎಣ್ಣೆ ಹಾಕಿ ಎರಡೂ ಬದಿಯನ್ನು ಹೊಂಬಣ್ಣಕ್ಕೆ ತಿರುಗುವವರೆಗೆ ಬೇಯಿಸಿ. ಈಗ ಚಟ್ನಿ ಜೊತೆ ಬಿಸಿ ಬಿಸಿ ವೆಜಿಟೆಬಲ್ ದೋಸೆಯನ್ನು ಸವಿಯಿರಿ.

5 ಸುಲಭ ಮತ್ತು ರುಚಿಕರ ಸಿಹಿ ತಿನಿಸುಗಳು ರೆಸಿಪಿಗಳು ನಿಮಗಾಗಿ..!

5. ಮೊಟ್ಟೆಯ ಕಬಾಬ್‌

ಬೇಕಾಗುವ ಸಾಮಗ್ರಿಗಳು

ಮೊಟ್ಟೆಗಳು – 6
ಕೆಂಪು ಮೆಣಸು ಹುಡಿ 2 ಚಮಚ
ಕಡ್ಲೆಹಿಟ್ಟು 2 ಚಮಚ
ಕೊತ್ತಂಬರಿ ಹುಡಿ 1 ಚಮಚ
ಗರಂ ಮಸಾಲ 1/2 ಟೀಸ್ಪೂನ್
ಸಣ್ಣದಾಗಿ ಕತ್ತರಿಸಿದ ಈರುಳ್ಳಿ -1
ಪೆಪ್ಪರ್ ಪುಡಿ 1 ಚಮಚ
ಬ್ರೆಡ್ ಹುಡಿ – 1 ಕಪ್
ರುಚಿಗೆ ತಕ್ಕಷ್ಟು ಉಪ್ಪು
ಹುರಿಯಲು ಎಣ್ಣೆ

ಮಾಡುವ ವಿಧಾನ

ಮೊದಲಿಗೆ ಮೊಟ್ಟೆಗಳನ್ನು 15 ನಿಮಿಷಗಳ ಕಾಲ ಚೆನ್ನಾಗಿ ಕುದಿಸಿ, ಒಂದು ಬಟ್ಟಲಿನಲ್ಲಿ ಮೊಟ್ಟೆಯ ಸಿಪ್ಪೆ ತೆಗೆದು ಅವುಗಳನ್ನು ಚಿಕ್ಕದಾಗಿ ಕತ್ತರಿಸಿಕೊಳ್ಳಿ.

ಇದರ ನಂತರ, ಪೆಪ್ಪರ್ ಪುಡಿ, ಕೊತ್ತಂಬರಿ ಹುಡಿ, ಈರುಳ್ಳಿ, ಗರಂ ಮಸಾಲ, ಕಡ್ಲೆಹಿಟ್ಟು, ಕೆಂಪು ಮೆಣಸು ಪುಡಿ ಮತ್ತು ಉಪ್ಪು ಸೇರಿಸಿ. ನಂತರ ಸ್ವಲ್ಪ ನೀರು ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ. ಇದಕ್ಕೆ ಕತ್ತರಿಸಿದ ಮೊಟ್ಟೆಗಳನ್ನು ಸೇರಿಸಿ ಮಿಶ್ರ ಮಾಡಿ.

ಈಗ ಈ ಮಿಶ್ರಣದಿಂದ ಸಣ್ಣ ಕಬಾಬ್‌ಗಳನ್ನು ತಯಾರಿಸಿ ಅದಕ್ಕೆ ಬ್ರೆಡ್‌ ಹುಡಿ ಲೇಪಿಸಿ.

ಈಗ ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಿ. ‌ನಂತರ ಕಬಾಬ್‌ಗಳನ್ನು ಬಿಸಿ ಎಣ್ಣೆಯಲ್ಲಿ ಬಿಡಿ. ಹೊಂಬಣ್ಣಕ್ಕೆ ಬರುವವರೆಗೆ ಡೀಪ್ ಫ್ರೈ ಮಾಡಿ. ಬಿಸಿಯಾದ ಮೊಟ್ಟೆಯ ಕಬಾಬ್‌ ಸವಿಯಲು ಸಿದ್ಧವಾಗಿದೆ.

Tags: #saakshatvcookingfood recipies
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram