ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

ಬಗೆ ಬಗೆಯ ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ

Namratha Rao by Namratha Rao
October 7, 2021
in Cooking, Newsbeat, ಅಡುಗೆ
Fasting - food - sawan
Share on FacebookShare on TwitterShare on WhatsappShare on Telegram

ಬಗೆ ಬಗೆಯ ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ

1. ಮೊಳಕೆ ಬರಿಸಿದ ಹೆಸರು ಬೇಳೆ ದೋಸೆ

ಬೇಕಾಗುವ ಪದಾರ್ಥಗಳು

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

August 10, 2026

3/4 ಕಪ್ ಮೊಳಕೆ ಬರಿಸಿದ ಹೆಸರು ಬೇಳೆ
3/4 ಕಪ್ ನೆನೆಸಿದ ನವಣೆ ಅಕ್ಕಿ
1 ಇಂಚು ತಾಜಾ ಶುಂಠಿ ತುಂಡು
1-2 ಹಸಿರು ಮೆಣಸಿನಕಾಯಿಗಳು
1 ಟೀಸ್ಪೂನ್ ಜೀರಿಗೆ
ರುಚಿಗೆ ತಕ್ಕಂತೆ ಉಪ್ಪು
ತಾಜಾ ಕೊತ್ತಂಬರಿ ಸೊಪ್ಪು
ಎಣ್ಣೆ/ತುಪ್ಪ
Saakshatv cooking recipes moong dosa

ನವಣೆ ಅಕ್ಕಿಯನ್ನು ಚೆನ್ನಾಗಿ ತೊಳೆದು ಅದನ್ನು ಕನಿಷ್ಠ 2-3 ಗಂಟೆಗಳ ಕಾಲ ನೆನೆಸಿಡಿ.
ನೆನೆದ ನವಣೆ ಅಕ್ಕಿಯನ್ನು ನೀರಿನಿಂದ ಸೋಸಿ. ಮಿಕ್ಸರ್ ಗೆ ನವಣೆ ಅಕ್ಕಿ, ಹೆಸರು ಕಾಳು, ಶುಂಠಿ, ಮೆಣಸಿನಕಾಯಿ, ಜೀರಿಗೆ, ಉಪ್ಪು ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿ, ರುಬ್ಬಿಕೊಳ್ಳಿ. ಸುಮಾರು 1/2 ಕಪ್ ನೀರು ಸೇರಿಸಿ ಚೆನ್ನಾಗಿ ರುಬ್ಬಿ.

ದೋಸೆ ಕಾವಲಿಯನ್ನು ಬಿಸಿ ಮಾಡಿ. ಕಾದಾಗ ಸ್ವಲ್ಪ ಎಣ್ಣೆ/ತುಪ್ಪ ಹಾಕಿ

ನಂತರ ರುಬ್ಬಿಕೊಂಡ ಹಿಟ್ಟನ್ನು ತೆಗೆದುಕೊಂಡು, ಕಾವಲಿ ಮೇಲೆ ಬಿಡಿ. ವೃತ್ತಾಕಾರದಲ್ಲಿ ಹರಡಿ.
Saakshatv cooking recipes moong dosa

ಎಣ್ಣೆಯನ್ನು ಚಿಮುಕಿಸಿ, ಎರಡು ಬದಿಗಳನ್ನು ಬೇಯಿಸಿ.

ನಿಮಗಿಷ್ಟವಾದ ಚಟ್ನಿಯೊಂದಿಗೆ ಬಿಸಿಯಾಗಿ ನವಣೆ ಅಕ್ಕಿ ಹೆಸರು ಬೇಳೆ ದೋಸೆ ಸೇವಿಸಿ .

ಇದು ರುಚಿಕರವಾದ ಮತ್ತು ಎಲ್ಲಾ ವಯಸ್ಸಿನವರಿಗೆ ಆರೋಗ್ಯಕರ ಉಪಹಾರವಾಗಿದೆ.

2. ಗರಿಗರಿಯಾದ ಬೆಳ್ಳುಳ್ಳಿ ಮಂಡಕ್ಕಿ / ಹುರಿಯಕ್ಕಿ

ಬೇಕಾಗುವ ಸಾಮಗ್ರಿಗಳು

ಮಂಡಕ್ಕಿ / ಹುರಿಯಕ್ಕಿ 1 ಲೀಟರ್
ಬೆಳ್ಳುಳ್ಳಿ 15-20 ಎಸಳು
ಜೀರಿಗೆ 1 ಚಮಚ
ಸಣ್ಣಗೆ ಕತ್ತರಿಸಿದ ಹಸಿಮೆಣಸಿನ ಕಾಯಿ 4
ಕರಿಬೇವಿನ ಸೊಪ್ಪು ಸ್ವಲ್ಪ
ಚಿಕ್ಕದಾಗಿ ಹೆಚ್ಚಿದ ಕೊಬ್ಬರಿ 1/2 ಕಪ್
ಶೇಂಗಾ/ಕಡಲೆಕಾಯಿ 1/4 ಕಪ್
ಹುರಿಗಡಲೆ 200 gms
ನಿಂಬೆ 1/2
ಮೆಣಸಿನ ಹುಡಿ 1 ಚಮಚ
ಅರಿಶಿಣ ಪುಡಿ 1/2 ಚಮಚ
ಚಾಟ್ ಮಸಾಲಾ 1/2 ಚಮಚ
ಸಕ್ಕರೆ ಪೌಡರ್ 1 ಚಮಚ (optional)
ರುಚಿಗೆ ತಕ್ಕಷ್ಟು ಉಪ್ಪು
ಎಣ್ಣೆ ಸ್ವಲ್ಪ
Saakshatv cooking recipes Garlic mandakki

Saakshatv cooking recipes Garlic mandakki

ಮಾಡುವ ವಿಧಾನ

ಬಾಣಲೆಗೆ ಎಣ್ಣೆ ಹಾಕಿ ಬಿಸಿ ಮಾಡಿ. ನಂತರ ಜೀರಿಗೆ ಸೇರಿಸಿ, ಬಳಿಕ ಜಜ್ಜಿದ ಬೆಳ್ಳುಳ್ಳಿ ಹಾಕಿ ಹುರಿಯಿರಿ. ಅದಕ್ಕೆ ಶೇಂಗಾ ಬೇರೆಸಿ 30 ಸೆಕೆಂಡ್ ಹುರಿಯಿರಿ. ನಂತರ ಹಸಿ ಮೆಣಸು, ಕೊಬ್ಬರಿ ಹಾಕಿ ಹುರಿಯಿರಿ. ಬಳಿಕ ಅದಕ್ಕೆ ‌ಹುರಿಗಡಲೆ ಕರಿಬೇವಿನ ಸೊಪ್ಪು ಸೇರಿಸಿ, ಹುರಿಯಿರಿ. ನಿಂಬೇರಸ ಹಿಂಡಿ. ಈಗ ಮೆಣಸಿನ ಪುಡಿ, ಅರಿಶಿಣ ಪುಡಿ, ಸಕ್ಕರೆ ಪುಡಿ, ಚಾಟ್ ಮಸಾಲಾ, ಉಪ್ಪು ಹಾಕಿ ತಿರುವಿ.

Saakshatv cooking recipes Garlic mandakki

ಈಗ ಅದಕ್ಕೆ ಮಂಡಕ್ಕಿ/ ಹುರಿಯಕ್ಕಿ ಸೇರಿಸಿ ತಿರುವಿ. 2 ನಿಮಿಷ ಚೆನ್ನಾಗಿ ಮಿಕ್ಸ್ ಮಾಡಿ. ‌ಈಗ ಗರಿಗರಿಯಾದ ಬೆಳ್ಳುಳ್ಳಿ ಮಂಡಕ್ಕಿ ಸವಿಯಲು ಸಿದ್ಧ.
ಇನ್ನಷ್ಟು ಅಡುಗೆ ರೆಸಿಪಿಗಾಗಿ ಗೂಗಲ್ ನಲ್ಲಿ Saakshatv cooking ಎಂದು ಸರ್ಚ್ ಮಾಡಿ.

3. ಧಿಡೀರ್ (instant) ಅವಲಕ್ಕಿ ಉತ್ತಪ್ಪ

ಬೇಕಾಗುವ ಸಾಮಗ್ರಿಗಳು :

ಅವಲಕ್ಕಿ 1/2 ಕಪ್
ಮೊಸರು 1/2 ಕಪ್
ರವೆ 1/2 ಕಪ್
ಚಿಕ್ಕದಾಗಿ ಕತ್ತರಿಸಿದ ತರಕಾರಿಗಳು (ಈರುಳ್ಳಿ, ಕ್ಯಾಪ್ಸಿಕಂ, ಕ್ಯಾರೆಟ್, ಹಸಿಮೆಣಸು, ಬೀನ್ಸ್)
ಕೊತ್ತಂಬರಿ ಸೊಪ್ಪು ಸ್ವಲ್ಪ
ರುಚಿಗೆ ತಕ್ಕಷ್ಟು ಉಪ್ಪು
ಎಣ್ಣೆ
Saakshatv cooking recipe poha uttappa

ಮಾಡುವ ವಿಧಾನ :
ಮೊದಲಿಗೆ ಅವಲಕ್ಕಿಯನ್ನು ನೀರಿನಲ್ಲಿ ಚೆನ್ನಾಗಿ ನೆನೆಸಿ. ಬಳಿಕ ನೆನೆದ ಅವಲಕ್ಕಿಯನ್ನು ಮಿಕ್ಸಿಯಲ್ಲಿ ಹಾಕಿ ನುಣ್ಣಗೆ ರುಬ್ಬಿ. ಇದಕ್ಕೆ ರವೆ, ಮೊಸರು ಸೇರಿಸಿ ಚೆನ್ನಾಗಿ ಕಲಸಿ. ಬೇಕಿದ್ದರೆ ಸ್ವಲ್ಪ ನೀರು ಸೇರಿಸಿ, ದೋಸೆ ಹಿಟ್ಟಿನ ಹದಕ್ಕೆ ತಯಾರಿಸಿಕೊಳ್ಳಿ. ಉಪ್ಪು ಸೇರಿಸಿ ‌20 ನಿಮಿಷ ಹಾಗೆ ಬಿಡಿ.
Saakshatv cooking recipe poha uttappa
ಇನ್ನೊಂದು ಪಾತ್ರೆಯಲ್ಲಿ ಸಣ್ಣಗೆ ಹೆಚ್ಚಿದ ತರಕಾರಿಗಳಿಗೆ ಸ್ವಲ್ಪ ಉಪ್ಪು ಹಾಕಿ ಮಿಶ್ರ ಮಾಡಿ ಪಕ್ಕದಲ್ಲಿ ಇಟ್ಟುಕೊಳ್ಳಿ. ನಂತರ ದೋಸೆ ಕಾವಲಿಯನ್ನು ಬಿಸಿ ಮಾಡಿ. ಮಾಡಿಟ್ಟುಕೊಂಡ ಅವಲಕ್ಕಿ ಹಿಟ್ಟನ್ನು ಕಾವಲಿ ಮೇಲೆ ದೋಸೆಯಂತೆ ಹುಯ್ಯಿರಿ. ಬಳಿಕ ದೋಸೆ ಮೇಲೆ ಹೆಚ್ಚಿಟ್ಟುಕೊಂಡ ತರಕಾರಿಯನ್ನು ಉದುರಿಸಿ. ಸ್ವಲ್ಪ ಎಣ್ಣೆ ಹಾಕಿ ಎರಡೂ ಬದಿ ಚೆನ್ನಾಗಿ ಬೇಯಿಸಿ. ರುಚಿಯಾದ ಅವಲಕ್ಕಿ ಉತ್ತಪ್ಪ ಸವಿಯಲು ರೆಡಿ.

4. ಆಲೂ ಟಿಕ್ಕಿ

ಬೇಕಾಗುವ ಸಾಮಗ್ರಿಗಳು

ಬೇಯಿಸಿದ ಆಲೂಗಡ್ಡೆ – 6
ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು – 1 ಕಪ್
ಹಸಿಮೆಣಸಿನಕಾಯಿ – 3-4
ಮೆಣಸಿನ ಪುಡಿ ‌- 1 ಚಮಚ
ಗರಂ‌ಮಸಾಲೆ – 1 ಚಮಚ
ಚಾಟ್ ಮಸಾಲಾ ‌1 ಚಮಚ
ಕಾರ್ನ್ ಫ್ಲೋರ್ 2 ಚಮಚ
ಎಣ್ಣೆ
Saakshatv cooking aloo tikki
ಮಾಡುವ ವಿಧಾನ

ಮೊದಲಿಗೆ ಬೇಯಿಸಿದ ಆಲೂಗಡ್ಡೆಗಳನ್ನು ಚೆನ್ನಾಗಿ ಮ್ಯಾಶ್(ಹುಡಿ) ಮಾಡಿ. ನಂತರ ಅದಕ್ಕೆ ಕೊತ್ತಂಬರಿ ಸೊಪ್ಪು, ಹಸಿಮೆಣಸು, ಮೆಣಸಿನ ಪುಡಿ, ಗರಂ‌ಮಸಾಲೆ, ಚಾಟ್ ಮಸಾಲಾ ಕಾರ್ನ್ ಫ್ಲೋರ್ ಸೇರಿಸಿ ಚೆನ್ನಾಗಿ ಕಲಸಿ. ಈಗ ಚಿಕ್ಕ ಚಿಕ್ಕ ಉಂಡೆಗಳನ್ನು ಮಾಡಿ ಚಪ್ಪಟೆಯಾಗಿ ತಟ್ಟಿ.
Saakshatv cooking aloo tikki
ಪ್ಯಾನ್ ಗೆ ಎಣ್ಣೆಯನ್ನು ಹಾಕಿ ಬಿಸಿ ಮಾಡಿ. ಟಿಕ್ಕಿಯನ್ನು ಹಾಕಿ ಎರಡೂ ಕಡೆ ಹೊಂಬಣ್ಣ ಬರುವವರೆಗೆ ಹುರಿಯಿರಿ .
ಚಟ್ನಿ ಅಥವಾ ಸಾಸ್ ನೊಂದಿಗೆ ಬಿಸಿಯಾಗಿ ಸವಿಯಿರಿ.

5. ಕಡಲೆ ಹಿಟ್ಟಿನ ಹಲ್ವಾ

ಬೇಕಾಗುವ ಸಾಮಾಗ್ರಿಗಳು

ಕಡಲೇ ಹಿಟ್ಟು – 1 ಕಪ್
ತುಪ್ಪ – 1/2 ಕಪ್
ಸಕ್ಕರೆ – 1 ಕಪ್
ನೀರು – 1/2 ಕಪ್
ಏಲಕ್ಕಿ 2 ರಿಂದ 3
ಸಣ್ಣಗೆ ಕತ್ತರಿಸಿದ ಗೋಡಂಬಿ – ಸ್ವಲ್ಪ
ಒಣದ್ರಾಕ್ಷಿ – ಸ್ವಲ್ಪ
Saakshatv cooking recipe Besan halwa‌

ಮಾಡುವ ವಿಧಾನ

ಮೊದಲಿಗೆ ಬಾಣಲೆಯನ್ನು ಬಿಸಿ ‌ಮಾಡಿ. ನಂತರ ಕಡಲೇ ಹಿಟ್ಟನ್ನು ಕೆಂಪಗಾಗುವವರೆಗೆ ಹುರಿಯಿರಿ. ನಂತರ ತುಪ್ಪ ಮತ್ತು ಸಕ್ಕರೆ ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ನಿಧಾನವಾಗಿ ಕೈಯಾಡಿಸುತ್ತಾ ನೀರು ಸೇರಿಸಿ. ಚೆನ್ನಾಗಿ ಮಿಶ್ರ ಮಾಡಿ. ನಂತರ ಮಿಶ್ರಣವನ್ನು ಕುದಿಯಲು ಬಿಡಿ.
ಮಿಶ್ರಣ ಗಟ್ಟಿಯಾಗುತ್ತಾ ಬರುತ್ತಿದ್ದಂತೆ ಗಂಟಾಗದ ರೀತಿಯಲ್ಲಿ ಕೈಯಾಡಿಸುತ್ತಾ ಇರಿ. ಹಾಗೆಯೇ ಏಲಕ್ಕಿಯನ್ನು ಹುಡಿ ಮಾಡಿ ಸೇರಿಸಿ ಚೆನ್ನಾಗಿ ಕಲಸಿ.‌ ಗಟ್ಟಿಯಾದ ಬಳಿಕ ಬಾಣಲೆಯನ್ನು ಕೆಳಗಿಳಿಸಿ ಮಿಶ್ರಣವನ್ನು ತಣ್ಣಗಾಗಲು ಬಿಡಿ. ಬಳಿಕ ಹಲ್ವಾದ ಮೇಲೆ ಗೋಡಂಬಿ ಒಣದ್ರಾಕ್ಷಿಯನ್ನು ಉದುರಿಸಿ. ರುಚಿಕರವಾದ ಕಡಲೆ ಹಿಟ್ಟಿನ ಹಲ್ವಾ ಸವಿಯಲು ಸಿದ್ಧ.

Tags: #saakshatvcookingfood recipies
ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram