ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಂಬಿದ ಭಕ್ತರನ್ನು ಕಾಪಾಡುವ ಇತಿಹಾಸ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರೀ ಕಟೀಲು ಪುಣ್ಯಕ್ಷೇತ್ರದ ಬಗ್ಗೆ ನಿಮಗೆಷ್ಟು ಗೊತ್ತು?

Shwetha by Shwetha
October 8, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology shreee durgaparameshwari kateel punyakshetra
Share on FacebookShare on TwitterShare on WhatsappShare on Telegram

ನಂಬಿದ ಭಕ್ತರನ್ನು ಕಾಪಾಡುವ ಇತಿಹಾಸ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರೀ ಕಟೀಲು ಪುಣ್ಯಕ್ಷೇತ್ರದ ಬಗ್ಗೆ ನಿಮಗೆಷ್ಟು ಗೊತ್ತು?

ನಂದಿನಿ ನದಿಯ ಮಧ್ಯ ಭಾಗದಲ್ಲಿ ನೆಲೆಯಾಗಿರುವ ದೇವಿ ದುರ್ಗಾಪರಮೇಶ್ವರಿ
ಕಟೀಲು ದಕ್ಷಿಣ ಕನ್ನಡ ಜಿಲ್ಲೆಯ ಪ್ರೇಕ್ಷಣೀಯ, ಪುಣ್ಯಸ್ಥಳಗಳಲ್ಲಿ ಒಂದು. ನಂದಿನಿ ನದಿಯ ದಂಡೆಯ ಮೇಲಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲೊಂದು. ಜಿಲ್ಲೆಯ ಅನೇಕ ದೇವಾಲಯಗಳಂತೆ ಕಟೀಲು ದೇಗುಲವೂ ವಿದ್ಯಾದಾನ ಮತ್ತು ಅನ್ನದಾನಗಳ ಮೂಲಕ ಸಮಾಜೋನ್ನತಿಗೆ ತನ್ನ ಕಾಣಿಕೆ ಸಲ್ಲಿಸುತ್ತಿದೆ. ಈ ದೇವಾಲಯವು ನಂದಿನಿ ಎಂಬ ಒಂದು ಪುಟ್ಟ ನದಿಯ ಮಧ್ಯದಲ್ಲಿರುವ ಒಂದು ಸಣ್ಣ ದ್ವೀಪದಲ್ಲಿ ನೆಲೆಗೊಂಡಿದೆ. ಪ್ರತಿ ವರ್ಷವೂ ಸಾವಿರಾರು ಯಾತ್ರಿಕರು ಇಲ್ಲಿಗೆ ತಾಯಿ ದುರ್ಗಾ ಪರಮೇಶ್ವರಿಯ ದರ್ಶನಕ್ಕಾಗಿ ಭೇಟಿ ನೀಡುತ್ತಾರೆ.
Saakshatv astrology Kateel
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಸ್ಥಳ ಪುರಾಣ

ದೀರ್ಘವಾದ ಧ್ಯಾನದಲ್ಲಿ ಮುಳುಗಿದ್ದ ಮಹಾಜ್ಞಾನಿಯಾದ ಜಬಲಿ ಮಹರ್ಷಿ ಜನರ ಕಷ್ಟಗಳನ್ನು ತನ್ನ ದಿವ್ಯ ದೃಷ್ಟಿಯಲ್ಲಿ ಕಂಡನು. ಅವರ ಮೇಲಿನ ಕನಿಕರದಿಂದ ಅವರನ್ನು ನೋವುಗಳಿಂದ ಮುಕ್ತಿಗೊಳಿಸುವ ನಿರ್ಧಾರವನ್ನು ಕೈಗೊಂಡನು. ಆತನು ಒಂದು ಯಜ್ಞವನ್ನು ನಡೆಸಲು ನಿರ್ಣಯಿಸಿ ಪುಣ್ಯ ಹಸುವಾಗಿದ್ದ ಕಾಮಧೇನುವನ್ನು ಭೂಮಿಗೆ ಕರೆತರಲು ನಿರ್ಧರಿಸಿದನು.ಕಾಮಧೇನು ತರಲು ದೇವತೆಗಳ ಒಡೆಯನಾದ ಇಂದ್ರನ ಒಪ್ಪಿಗೆ ಕೇಳಿದಾಗ, ಇಂದ್ರನು ಕಾಮಧೇನುವು ವರುಣ ಲೋಕಕ್ಕೆ ಹೋಗಿರುವುದಾಗಿಯೂ ಅದರ ಬದಲು ಆತನ ಪುತ್ರಿಯಾದ ನಂದಿನಿಯನ್ನು ಕರೆದೊಯ್ಯಬಹುದಾಗಿ ತಿಳಿಸಿದನು. ಆದರೆ ನಂದಿನಿಯು ಜಬಲಿ ಮಹರ್ಷಿ ಜತೆಗೆ ಭೂಲೋಕಕ್ಕೆ ಹೋಗಲು ಅತ್ಯಂತ ನಿಷ್ಠುರದಿಂದ ನಿರಾಕರಿಸಿತು. ಭೂಲೋಕವು ಪಾಪಿಗಳ ಲೋಕವಾಗಿದ್ದರಿಂದ ತಾನೆಂದೂ ಅಲ್ಲಿ ಕಾಲಿಡುವುದಿಲ್ಲವೆಂದು ಹೇಳಿತು.

ಆದರೆ ಜಬಲಿ ಮಹರ್ಷಿಯು ಆಕೆಯ ಮನವೊಲಿಸಲು ಸಾಕಷ್ಟು ಪರಿಪರಿಯಾಗಿ ಬೇಡಿಕೊಂಡನು. ಭೂಮಿಯಲ್ಲಿಹ ಜನರು ಅನುಭವಿಸುತ್ತಿರುವ ಕಷ್ಟಕಾರ್ಪಣ್ಯಗಳ ಬಗ್ಗೆಯೂ ಆಕೆಯೂ ಬಂದು ಅವರ ನೋವನ್ನು ನೀಗಿಸಲು ಸಹಕರಿಸುವಂತೆಯೂ ಕೇಳಿಕೊಂಡನು. ಆದರೆ ಜಬಲಿ ಮಹರ್ಷಿಯ ಮಾತಿಗೆ ಜಪ್ಪೆನ್ನದೇ ನಂದಿನಿಯು ತನ್ನದೇ ಹಠ ಹಿಡಿಕೊಂಡಿತು. ಇದರಿಂದ ಕೋಪಗೊಂಡ ಜಬಲಿ ಮಹರ್ಷಿಯು ಭೂಲೋಕಕ್ಕೆ ಬರಲೊಪ್ಪದ ನಂದಿನಿಯು ಇನ್ನು ಮುಂದೆ ನದಿಯ ರೂಪದಲ್ಲಿ ಭೂಮಿಗಿಳಿಯುವಂತೆ ಶಾಪವಿತ್ತನು. ಶಾಪಕ್ಕೊಳಗಾದ ನಂದಿನಿಯು ಚಿಂತೆಗೀಡಾಗಿ ಮಹರ್ಷಿ ಜಬಲಿಗೆ ಕರುಣೆ ಮಾಡಿ ಶಾಪ ಹಿಂತೆಗೆದುಕೊಳ್ಳಬೇಕು ಇಲ್ಲವಾದರಲ್ಲಿ ಶಾಪ ವಿಮೋಚನೆಯನ್ನಾದರೂ ತಿಳಿಸಬೇಕೆಂದು ಬೇಡಿಕೊಂಡಿತು. ಆಗ ಜಬಲಿ ಮಹರ್ಷಿಯು ನಿರಂತರವಾಗಿ ದುರ್ಗಾದೇವಿಯನ್ನು ಪ್ರಾರ್ಥಿಸಿದರೆ ಶಾಪ ವಿಮೋಚನೆಯನ್ನು ಆ ತಾಯಿಯೇ ತೋರಿಸುತ್ತಾಳೆ ಎಂದು ಹೇಳಿದನು.

ನಂದಿನಿಯು ಅನಂತರ ದೇವಿಯನ್ನು ಪ್ರಾರ್ಥಿಸಲು, ದುರ್ಗಿಯು ಪ್ರತ್ಯಕ್ಷವಾಗಿ ಜಬಲಿ ಮಹರ್ಷಿಯ ಶಾಪದಂತೆ ನದಿಯಾಗಿ ಹರಿಯುವಂತೆ ಹೇಳಿದಳು. ನಂತರ ತಾನೇ ಆಕೆಯ ಮಗಳಂತೆ ಹುಟ್ಟಿ ಮಹರ್ಷಿ ಜಬಲಿಯ ಶಾಪ ವಿಮೋಚನೆಗೊಳಿಸುವುದಾಗಿ ಆಶೀರ್ವದಿಸಿದಳು.ಅದರಂತೆ ಕಟೀಲಿನ ಕನಕ ಗಿರಿಯಿಂದ ನಂದಿನಿ ನದಿಯ ರೂಪದಲ್ಲಿ ಹರಿದಳು. ಈ ನದಿಯ ದಂಡೆಯ ಮೇಲೆ ಜಬಲಿ ಮಹರ್ಷಿಯು ಯಜ್ಞ ಯಾಗಾದಿಗಳನ್ನು ನಡೆಸಿದ. ನಂತರ ಎಲ್ಲೆಡೆ ಸಮೃದ್ಧ ಮಳೆಯಾಗಿ ಆ ಜನರಲ್ಲಿ ಶಾಂತಿ ನೆಮ್ಮದಿ ನೆಲೆಸಿ ಅಭ್ಯುದಯ ಹೊಂದಿದರು.

ನಂದಿನಿಯ ಶಾಪ ವಿಮೋಚನೆಯಾಯಿತು. ನಂದಿನಿಯ ಕಟಿ (ಸೊಂಟ/ನಡು) ಭಾಗದಲ್ಲಿರುವ ಇಳೆ (ಭೂಮಿ) ಯಲ್ಲಿ ದೇವಿಯು ಉದ್ಭವಿಸಿದ ಕಾರಣ ಆ ಕ್ಷೇತ್ರಕ್ಕೆ ಕಟೀಲು ಎಂಬ ಹೆಸರಾಯಿತು. ಪುಷ್ಪಾಲಂಕಾರ ಪೂಜೆ ಎಂದರೆ ದೇವರಿಗೆ ಇಷ್ಟ ಎನ್ನುವುದು ಭಕ್ತರ ನಂಬಿಕೆ. ಮಲ್ಲಿಗೆ ಹೂ ದೇವರಿಗೆ ಪ್ರೀಯವಂತೆ. ಆದರೆ ಸಂಪಿಗೆ ಹೂವನ್ನು ಇಲ್ಲಿ ದೇವರಿಗೆ ಅರ್ಪಿಸಲಾಗುವುದಿಲ್ಲ.

ಪೌರಾಣಿಕ ಕಥೆಯನ್ನು ಇನ್ನೂ ಕೆದಕಿದಾಗ:

ಇತ್ತ ನಂದಿನಿಯು ನದಿಯಾಗಿ ಹರಿಯುತ್ತಿದ್ದಂತೆಯೇ, ಅರುಣಾಸುರನೆಂಬ ರಾಕ್ಷಸನ ಮುಂದೆ ದೇವಿಯು ಸುಂದರ ಕನ್ಯೆಯ ರೂಪದಲ್ಲಿ ಪ್ರತ್ಯಕ್ಷವಾದಳು. ಆ ಕನ್ಯೆಯ ಸೌಂದರ್ಯವನ್ನು ಕಂಡು ಮೋಹಿತನಾದ ಅರಣಾಸುರನು ಆಕೆಯನ್ನು ಹಿಂಬಾಲಿಸಿದನು. ಸುಂದರ ಕನ್ಯೆಯ ರೂಪದಲ್ಲಿದ್ದ ದೇವಿಯು ತನ್ನ ನಿಜ ರೂಪವನ್ನು ತೋರಿದಳು. ಆಗ ಅರುಣಾಸುರನು ಅವಳನ್ನು ಕೊಲ್ಲಲು ಪ್ರಯತ್ನಿಸಿದನು ಆದರೆ ಅಷ್ಟರಲ್ಲಿಯೇ ದೇವಿಯು ಕಲ್ಲು ಬಂಡೆಯಾದಳು. ಅದೇ ಕಲ್ಲಿನಿಂದ ದುಂಬಿಗಳ ಗುಂಪೊಂದು ಸೃಷ್ಟಿಯಾಗಿ ಬಂದು ಅರುಣಾಸುರನನ್ನು ಕುಟುಕಿ ಕುಟುಕಿ ಸಾಯಿಸಿದವು. ದುಂಬಿಗಳಿಂದ ಅರುಣಾಸುರ ಸಾಯಲು ಕಾರಣವೆಂದರೆ ಆತನು ಪಡೆದಿದ್ದ ವರ. ಎರಡು ಅಥವಾ ನಾಲ್ಕು ಕಾಲಿನ ಯಾವುದೇ ಪ್ರಾಣಿಯಾಗಲಿ ಹಾಗೂ ಆಯುಧದಿಂದಾಗಲಿ ತನಗ ಸಾವು ಬರಬಾರದೆಂದು ಆತ ವರ ಪಡೆದಿದ್ದ. ನಂತರ ದೇವತೆಗಳಲೆಲ್ಲಾ ಸೇರಿಕೊಂಡು ಭ್ರಮರಾಂಬಿಕೆಗೆ (ದುಂಬಿಗಳ ರಾಣಿ) ಉಗ್ರರೂಪದಿಂದ ತನ್ನ ಚೆಲುವಿನ ಮತ್ತು ಶಾಂತಿ ಸ್ವಭಾವವನ್ನು ಹೊಂದಲು ಪ್ರಾರ್ಥಿಸಿದರು. ಆಗ ದೇವಿಯು ತನ್ನ ಸುಂದರವಾದ ರೂಪದಲ್ಲಿ ನಂದಿನಿ ನದಿಯ ಕೇಂದ್ರ ಭಾಗದಲ್ಲಿ ಬಂದು ಅವತರಿಸಿ, ನಂದಿನಿಗೆ ನೀಡಿದ್ದ ಆಕೆಯ ಮಗಳಾಗಿ ಹುಟ್ಟುವ ವಚನವನ್ನು ಈಡೇರಿಸಿದಳು. ಆಕೆ ನೆಲೆಸಿದ ಸಣ್ಣ ದ್ವೀಪಕ್ಕೆ ಕಟೀಲು ಎಂಬ ಹೆಸರು ಬಂದಿತು.

ಸಂಸ್ಕೃತ ಭಾಷೆಯಲ್ಲಿ ಕಟಿ ಎಂದರೆ ಮಧ್ಯ ಭಾಗ ಮತ್ತು ಇಳ ಎಂದರೆ ಭೂಮಿ ಅದರಿಂದ ಈ ಸ್ಥಳವು ನದಿಯ ಮಧ್ಯ ಭಾಗದಲ್ಲಿದ್ದುದ್ದರಿಂದ ಕಟಿ ಇಳ, ಕಟೀಲ್ ಎಂಬ ಹೆಸರು ಬಂದಿದೆ ಎಂಬ ಪ್ರತೀತಿಯಿದೆ. ಈ ಸಣ್ಣ ದ್ವೀಪದಲ್ಲಿ ದೇವಾಲಯವನ್ನು ನಿರ್ಮಿಸಿ ಅಲ್ಲಿರುವ ಮೂರ್ತಿಯನ್ನು ದುರ್ಗಾದೇವಿಗೆ ಮುಡಿಪಾಗಿರಿಸಲಾಗಿದೆ.

ಈ ಸ್ತೋತ್ರವನ್ನು ತಪ್ಪದೆ ಹೇಳಿ ಒಂಬತ್ತು ದಿನ ನವರಾತ್ರಿಯಲ್ಲಿ ಧನಧಾನ್ಯಸೌಭಾಗ್ಯ ಪ್ರಾಪ್ತಿಗೆ

ಪ್ರಾರ್ಥನೆಮಾಡಿ ದೇಹಿ ದೇವಿ ಪರಂ ಜ್ಞಾನಂ ದೇಹಿ ದೇವಿ ಪರಂ ಸುಖಂ | ಧನಂದೇಹಿ ಯಶೋದೇಹಿ ಕಾಮಂ ಮೋಕ್ಷಂ ಚ ದೇಹಿಮೇ || ವತ್ಸತುಭ್ಯಂ ಯಥಾವತ್ರಂ ಪೀತಶೇಷಂ ಕುಲಾಽಮೃತಂ । ತ್ವಚ್ಚತ್ರೂನ್ ಸಂಹರಿಷ್ಯಾಮಿ ತವಾಽಭೀಷ್ಟಂ ದದಾಮ್ಯಹಮ್ || ಪೂಜಾಫಲ ಸಿದ್ಧ್ಯರ್ಥಂ ಸೌಭಾಗ್ಯ ಕವಚಂ ಪಠೇತ್ ಸೌಭಾಗ್ಯಕವಚಂ ಈಶ್ವರ ಉವಾಚ | ಶೃಣುದೇವಿ ಪ್ರವಕ್ಷ್ಯಾಮಿ ಕವಚಂ ಮಂತ್ರವಿಗ್ರಹಂ | ಸರ್ವಾರ್ಥಸಾಧಕಂ ದೇವಿ ಸರ್ವಸಂಪತ್ಪದಾಯಕಂ ಋಷಿಸ್ಯಾದಕ್ಷಿಣಾ ಮೂರ್ತಿಶ್ಚಂದೋನುಷ್ಟುಪ್ ಪ್ರಕೀರ್ತಿತಾ | ದೇವತಾ ಸುಂದರೀ ಪ್ರೋಕ್ತಾವಿನಿಯೋಗಃ ಪ್ರಕೀರ್ತಿತಃ ಕಕಾರಃ ಪಾತು ಶೀರ್ಷ೦ ಮೇ ಏಕಾರಃ ಪಾತುಫಾಲಕಂ । ಈಕಾರಃ ಪಾತುವಕ್ತ್ರಂ ಮೇ ಲಕಾರಃ ಪಾತುಕರ್ಣಯೋ ಹ್ರೀಂಕಾರಃ ಪಾತುಹೃದಯಂ ವಾಗ್ದವಂ ಚ ಸದಾವತು | ಹಕಾರಃ ಪಾತು ಜಠರಂ ಸಕಾರೋ ನಾಭಿದೇಶಕಂ ಕಕಾರೋವ್ಯಾದಸ್ಥಿಭಾಗಂ ಹಕಾರಃ ಪಾತುಲಿಂಗಕಂ | ಲಕಾರೋ ಜಾನುನೀಪಾತು ಹ್ರೀಂಕಾರೋ ಜಂಘಯುಗ್ಯಕಂ ಕಾಮರಾಜಂ ಸದಾಪಾತು ಜಠರಾದಿ ಪ್ರದೇಶಕಂ । ಸಕಾರಃ ಪಾತು ಕಂಠಂ ಮೇ ಕಕಾರಃ ಪಾತುಪೃಷ್ಟಕೇ ಲಕಾರೋವ್ಯಾನ್ನಿತಂಬಂ ಮೇ ಹೀಂಕಾರಃ ಪಾತುಮೂಲಕೇ । ಶಕ್ತಿಬೀಜಂ ಸದಾಪಾತು ಮೂಲವಿದ್ಯಾ ಸದಾವತು ತ್ರಿಪುರಾ ಮಾಂ ಸದಾಪಾತು ತ್ರಿಪುರೇಶೀ ಚ ಸದಾ | ತ್ರಿಪುರಾಂಬಾ ಸದಾಪಾತು ಪಾತುತ್ರಿಪುರಭೈರವೀ ಅಣಿಮಧ್ಯಾಸ್ತಥಾ ಪಾತು ಬ್ರಾಹ್ಮಾದ್ಯಾ ಪಾತುಮಾಂ ಸದಾ | ನವಮುದಾ ಸಥಾಪಾತು ಕಾಮಾಕರ್ಷಿಣೀ ಪೂರ್ವಿಕಾಃ ಪಾತು ಮಾಂ ಷೋಡಶಾರೇತು ಅನಂಙ್ಗ ಕುಸುಮಾದಿಕಾಃ | ಪಾತು ಮಾಂ ಅಷ್ಟಪತ್ರೇಷು ಸರ್ವಸಂಕ್ಷೋಭಣಾಧಿಕಾಃ ಪಾತು ಮಾಂ ತತ್ತ್ರಿಕೋಣೇಷು ಮಧ್ಯ ದಿಕ್ಕೋಣಕೇ ತಥಾ । ಸರಜಾದ್ಯಾಸ್ತಥಾ ಪಾತು ಸರ್ವಾಭೀಷ್ಟ ಪ್ರದಾಯಿಕಾಃ ವಶಿನ್ಯಾದ್ಯಾಸ್ತಥಾ ಪಾತು ವಸು ಪತ್ರೇಶ್ಚದೇವತಾಃ | ತ್ರಿಕೋಣಸ್ಯಾನ್ತರಾಳೇಷು ಪಾತು ಮಾಂ ಮಾಯುದಾನಿ ಚ ಕಾಮೇಶ್ವರಾದಿಕಾಃ ಪಾತು ತ್ರಿಕೋಣೇ ಕೋಣ ಸಂಸ್ಥಿತಾಃ | ಬಿಂದು ಚಕ್ರೇ ಸದಾ ಪಾತು ಶ್ರೀಮತ್ರಿ ಪುರಸುಂದರೀ ಇತಿದಂ ಕವಚಂ ದೇವೀ ಕವಚಂ ಮಂತ್ರಸೂಚಕಂ। ಯಸ್ಮೈ ತಸ್ಮೈ ನದಾತವ್ಯಂ ನ ಪ್ರಕಾಶಂ ಕದಾಚನ ಯಸ್ತಿ ಸನ್ದ್ಯಾ ಪಠೇದ್ದೇವೀ ಲಕ್ಷ್ಮೀಸ್ತಸ್ಯ ಪ್ರಜಾಯತೇ | ಅಷ್ಟಮ್ಯಾಂ ಚ ಚತುರ್ದಶ್ಯಾಂ ಯಃ ಪಠೇತ್ರಿತಯ ಸದಾ | ಪ್ರಸನ್ನಾಸುಂದರೀ ತಸ್ಯ ಸರ್ವ ಸೌಭಾಗ್ಯದಾಯಿನೀ || ಶ್ರೀಚಕ್ರ ತ್ರಿಪುರಸುಂದರೀ ದೇವತಾ ಪ್ರೀತ್ಯರಂ ಸೌಭಾಗ್ಯ ಕವಚಂ ಸಂಪೂರ್ಣ೦ ||

ಇಲ್ಲಿನ ವಿಶೇಷ :-ಉತ್ಸವಗಳಲ್ಲಿ ಏಪ್ರಿಲ್ ತಿಂಗಳಿನಲ್ಲಿ ಆಚರಿಸಲ್ಪಡುವ ಮೇಷ ಸಂಕ್ರಮಣ, ನವರಾತ್ರಿ ಆಚರಣೆಗಳು, ನಂದಿನಿ ನದಿಯ ಜನ್ಮ ಪೂರಕವಾಗಿ ಆಚರಿಸುವ ಮಹಾ ಶುದ್ಧ ಪೂರ್ಣಿಮೆ, ಗಣೇಶ ಚತುರ್ಥಿ, ಶ್ರೀಕೃಷ್ಣ ಜನ್ಮಾಷ್ಟಮಿ, ಕದಿರುಹಬ್ಬ ಮತ್ತು ಲಕ್ಷ ದೀಪೋತ್ಸವವನ್ನು ಒಳಗೊಂಡಿವೆ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಇಲ್ಲಿನ ದೇವಾಲಯದ ಟ್ರಸ್ಟ್ ಹಲವು ವಿದ್ಯಾಸಂಸ್ಥೆಗಳನ್ನು ನಡೆಸುತ್ತಿದ್ದು, ಬರುವ ಭಕ್ತಾದಿಗಳಿಗೆ ಅನ್ನ ಪ್ರಸಾದ ವ್ಯವಸ್ಥೆ ಮಾಡಿದೆ. ಅಲ್ಲದೇ ಯಕ್ಷಗಾನದಂತಹ ಜಾನಪದ ಕಲೆಗಳಿಗೆ ಪ್ರೋತ್ಸಾಹವನ್ನು ನೀಡುತ್ತಿದೆ.

ಕಟೀಲು ನಂದಿನ ತಟದ ಮೇಲೆ ನೆಲೆಸಿರುವ ದುರ್ಗಾಪರಮೇಶ್ವರಿಯು ಸಕಲ ಭಕ್ತರನ್ನು ಹರಸುವ ಶ್ರೀಕ್ಷೇತ್ರವಾಗಿ ಹೆಸರುವಾಸಿಯಾಯಿತು. ಪ್ರಸ್ತುತ ಕಟೀಲು ಶ್ರೀಕ್ಷೇತ್ರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ. ಮಂಗಳೂರಿನಿಂದ ಸುಮಾರು 26 ಕಿ.ಮೀ ಗಳಷ್ಟು ದೂರದಲ್ಲಿದ್ದು ತೆರಳಲು ಅನುಕೂಲಕರವಾಗಿದೆ.

ಬೆಂಕಿಯ ಕಾಳಗ: ಪಟ್ಟೆ ಸೀರೆ ದೇವಿಗೆ ಏನಾದರೂ ಕೋರಿಕೊಂಡು ಪಟ್ಟೆಸೀರೆಯ ಹರಕೆ ನೀಡಿದ್ರೆ ದೇವಿ ಆ ಕೋರಿಕೆಯನ್ನು ಈಡೇರಿಸುತ್ತಾಳೆ ಎನ್ನುವುದು ಭಕ್ತರ ನಂಬಿಕೆ. ಹಾಗಾಗಿ ಇಲ್ಲಿ ಪ್ರತಿದಿನ ಸಾಕಷ್ಟು ಪಟ್ಟೆ ಸೀರೆ ಸೇವೆಗಳು ಕಾಣಸಿಗುತ್ತವೆ. ದುರ್ಗಾಪರಮೇಶ್ವರಿಯ ಜೊತೆಗೆ ಪರಿವಾರ ದೇವತೆಗೂ ಪೂಜೆ ನಡೆಯುತ್ತದೆ. ನವರಾತ್ರಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಇನ್ನೂ ಎಪ್ರಿಲ್ ತಿಂಗಳಲ್ಲಿ ವಾರ್ಷಿಕ ಪೂಜೆಯೂ ಅದ್ದೂರಿಯಾಗಿ ನಡೆಯುತ್ತದೆ. ಜಾತ್ರೆಯ ಸಂದರ್ಭದಲ್ಲಿ ಬೆಂಕಿಯ ಕಾಳಗ ಇಲ್ಲಿನ ಮತ್ತೊಂದು ವಿಶೇಷ. ನಿತ್ಯವೂ ಅನ್ನದಾಸೋಹವನ್ನು ನೀಡುತ್ತದೆ. ಅಕ್ಕ ಪಕ್ಕದ ಊರಿನ ಮಕ್ಕಳಿಗೆ ಅಕ್ಷರದಾಸೋಹವನ್ನೂ ನೀಡುತ್ತಿದೆ ಈ ಕ್ಷೇತ್ರ.ಕಟೀಲು ದೇವಿಯ ಆರಾಧಕರು ಆಗಿರುವ ಮಹಾ ಪಂಡಿತ ಶ್ರೀ ಜ್ಞಾನೇಶ್ವರ್ ರಾವ್ ಅವರಿಂದ ನಿಮ್ಮ ಜೀವನದ ಅತ್ಯಂತ ಕಷ್ಟದ ಸಮಸ್ಯೆಗಳಿಗೆ ಫೋನ್ ನಲ್ಲಿ ಶಾಶ್ವತ ಪರಿಹಾರ ಅದು ಮೂರೂ ದಿನದಲ್ಲಿ ಮಾತ್ರ. ನೀವು ಅದೆಷ್ಟೋ ಪೂಜೆ ಮತ್ತು ಜೋತಿಷ್ಯರನ್ನ ನೋಡಿರಬಹುದು ಆದ್ರೆ ಕಟೀಲು ದೇವಿಯ ಆರಾಧನೆ ಮಾಡುವ ಮಹಾ ಪಂಡಿತ ಜ್ಞಾನೇಶ್ವರ್ ರಾವ್ ಅವರು ಸಾಕಷ್ಟು ತಂತ್ರ ಮಂತ್ರ ವಶೀಕರಣ ವಿದ್ಯೆ ಪಾರಂಗತ ಮಾಡಿಕೊಂಡಿದ್ದು ನಿಮ್ಮ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ನೀಡಲಿದ್ದಾರೆ. ಅನೇಕ ವರ್ಷಗಳಿಂದ ಆಗದೆ ಇರುವ ಕೆಲಸ ಕಾರ್ಯಗಳು ಕೆಲವೇ ದಿನದಲ್ಲಿ ಸಂಪೂರ್ಣ ಆಗಲಿದೆ. ಈ ಕೂಡಲೇ ಕರೆ ಮಾಡಿರಿ 8548998564.
ಕಟೀಲು ಯಕ್ಷಗಾನ ಮೇಳಗಳು

ಶ್ರೀ ಕಟೀಲು ದೇವಿಗೆ ಆಟವೆಂದರೆ ಇಷ್ಟ. ಹಾಗಾಗಿ ಶ್ರೀ ಕ್ಷೇತ್ರದ ಹರಕೆ ಆಟಗಳಿಗೆ ವಿಶೇಷ ಮಹತ್ವವಿದೆ. ಅರುಣಾಸುರನನ್ನು ಮರ್ಧಿಸಿ ನೆಲೆಯಾದ ಭ್ರಮರಾಂಬಿಕೆ ಖುದ್ದು ತಮ್ಮ ಮನೆಗೆ ಬರುತ್ತಾಳೆ ಎಂಬ ನಂಬಿಕೆಯಿಂದ ಬಹು ಶ್ರದ್ಧೆಯಿಂದ ಆಟ ಆಡಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ದಿನಂಪ್ರತಿ ಸರಾಸರಿ ಮೂರ‍್ನಾಲ್ಕು ಹರಕೆಯಾಟಗಳು ಬುಕ್ಕಿಂಗ್ ಆಗುತ್ತಿವೆ. ಇಪ್ಪತ್ತು ವರುಷಗಳಿಗೂ ಮಿಕ್ಕಿ ಆಟಗಳ ಬುಕ್ಕಿಂಗ್ ಆಗಿವೆ ಎಂದರೆ ಬಹುಶಃ ಮತ್ಯಾವ ಕಲೆಯೂ ಈ ಪರಿಯ ದಾಖಲೆ ಮಾಡಿರಲಿಕ್ಕಿಲ್ಲ. ಒಂದರ್ಥದಲ್ಲಿ ಇದು ಗಿನ್ನಿಸ್ ದಾಖಲೆ.

ಒಟ್ಟಾರೆ ಮುನ್ನೂರು ಮಂದಿ ಕಲಾವಿದರಿಗೆ ಬದುಕು ನೀಡುವ ಕಟೀಲಿನ ಆರು ಮೇಳಗಳು ಕ್ಷೇತ್ರದ ಪ್ರಚಾರವನ್ನೂ ಕೇವಲ ಪೌರಾಣಿಕ ಪ್ರಸಂಗಗಳ ಪ್ರದರ್ಶನದಿಂದ ಧರ್ಮ ಪ್ರಚಾರವನ್ನೂ ಮಾಡುತ್ತಿವೆ. ಕಲೆಯನ್ನೂ ಉಳಿಸಿ, ಬೆಳೆಸುವ ಮಹತ್ತರ ಕಾರ‍್ಯವನ್ನು ಮಾಡುತ್ತಿದೆ.

ಸಾಧಾರಣ 125ರಿಂದ 150 ವರುಷಗಳ ಇತಿಹಾಸವಿರುವ ಕಟೀಲು ಮೇಳ 1975ರಲ್ಲಿ ವ್ಯವಸ್ಥಿತ ಎರಡನೇ ಮೇಳ ಆರಂಭಿಸಿತು. 1982ರಲ್ಲಿ ಮೂರನೇ ಮೇಳ, 1993ರಲ್ಲಿ ನಾಲ್ಕನೇ ಮೇಳ, 2010ರಲ್ಲಿ ಐದನೇ ಮೇಳ ಆರಂಭಿಸಿದ ಕಟೀಲು ಕ್ಷೇತ್ರ 2013ರಲ್ಲಿ ಆರನೇ ಮೇಳ ಆರಂಭಿಸಿದೆ. ಆದರೂ 25-30 ವರುಷಗಳ ಆಟ ಬಾಕಿಯಾಗುತ್ತಿದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
Kateel temple astrology
ಸರ್ವಾಭೀಷ್ಟ ಸಿದ್ಧಿಗಾಗಿ ಆಟ ಆಡಿಸುವ ಭಕ್ತರು ಇದ್ದಾರೆ. ಕಾಣಿಕೆ ಡಬ್ಬಿಯಲ್ಲಿ ಹಣ ಸಂಗ್ರಹಿಸಿ ಆಟ ಆಡಿಸುವ ಭಕ್ತರೂ ಇದ್ದಾರೆ. ಮುಸ್ಲಿಂ, ಕ್ರೈಸ್ತರೂ ಹರಿಕೆ ಆಟ ಆಡಿಸುತ್ತಾರೆ. ಆಟ ಆಡಿಸಿದವರ ಅಭೀಷ್ಟಗಳನ್ನು ಈಡೇರಿಸುವ ಜಗನ್ಮಾತೆಯ ಸಾನಿಧ್ಯದಿಂದ ಸಾಮಾನ್ಯವಾಗಿ ನವೆಂಬರ್ ತಿಂಗಳಲ್ಲಿ ಮೇಳಗಳ ತಿರುಗಾಟ ಆರಂಭವಾಗಿ ಮೇ ತಿಂಗಳ ಕೊನೆಗೆ ಮುಕ್ತಾಯ ಕಾಣುತ್ತದೆ.

ಆಡಳಿತ ಮಂಡಳಿ
ಈ ದೇವಾಲಯವು ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿದೆ. ದೇವಸ್ಥಾನವು ಅನೇಕ ಬಗೆಯ ಕಲೆಗಳಿಗೆ ಆಶ್ರಯವನ್ನು, ಪ್ರೋತ್ಸಾಹವನ್ನು ನೀಡುತ್ತಿದೆ. ಆವುಗಳಲ್ಲಿ ಮುಖ್ಯವಾದ್ದು ಯಕ್ಷಗಾನ. 6 ಯಕ್ಷಗಾನ ಮೇಳಗಳು ಸೇವಾರೂಪದಲ್ಲಿ ಯಕ್ಷಗಾನ ಬಯಲಾಟ ವನ್ನು ನಡೆಸಿಕೊಡುತ್ತವೆ. ವಿಶೇಷ ದಿನಗಳಂದು ಇಲ್ಲಿ ಚಂಡಿಕಾ ಹೋಮ, ತುಲಾಭಾರ, ವೇದ ಪಾರಾಯಣ, ಹರಿಕಥೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಇಲ್ಲಿ ಜರುಗುತ್ತವೆ.
ದಾರಿಯ ವಿವರ:
ಉಡುಪಿ – ಮಂಗಳೂರಿನಿಂದ ಶ್ರೀ ದೇವಾಲಯವನ್ನು ತಲುಪಲು ಮೂಲ್ಕಿ ಅಥವಾ ಮಂಗಳೂರಿನಿಂದ ಬಸ್ಸಿನ ವ್ಯವಸ್ಥೆಗಳು ಇವೆ.

Tags: saakshatv astrologyshreee durgaparameshwari kateel punyakshetra
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram