ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಷ್ಟ್ರದ ಸರ್ವಾಂಗೀಣ ಬೆಳವಣಿಗೆಗೆ ಪಿಎಂ ಗತಿಶಕ್ತಿ ಯೋಜನೆ ಹೊಸ ಆಯಾಮ ತಂದು ಕೊಡಲಿದೆ : ವಿ.ಸೋಮಣ್ಣ

Mahesh M Dhandu by Mahesh M Dhandu
October 13, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ರಾಷ್ಟ್ರದ ಸರ್ವಾಂಗೀಣ ಬೆಳವಣಿಗೆಗೆ ಪಿಎಂ ಗತಿಶಕ್ತಿ ಯೋಜನೆ ಹೊಸ ಆಯಾಮ ತಂದು ಕೊಡಲಿದೆ : ವಿ.ಸೋಮಣ್ಣ

ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮನಿರ್ಭರ ಭಾರತಕ್ಕಾಗಿ ವಿವಿಧ ಆರ್ಥಿಕ ವಲಯಗಳಿಗೆ ಬಹುಮುಖ ಸಂಪರ್ಕವನ್ನು ಕಲ್ಪಿಸುವ ಘನೋದ್ದೇಶದ ಪಿ ಎಂ ಗತಿಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

Related posts

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

August 28, 2026
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

August 28, 2026

ಈ ಮಹಾತ್ವಾಕಾಂಕ್ಷಿ ಯೋಜನೆ ರಾಷ್ಟ್ರದ ಸರ್ವಾಂಗೀಣ ಬೆಳವಣಿಗೆಗೆ ಮತ್ತೊಂದು ಹೊಸ ಆಯಾಮ ತಂದು ಕೊಡಲಿದೆ.

ಈ ಮಹಾಯೋಜನೆ ಸಮಗ್ರ ಮೂಲಸೌಕರ್ಯ ನಿರ್ಮಿಸುವುದಲ್ಲದೇ ನಮ್ಮ ಆರ್ಥಿಕ ವ್ಯವಸ್ಥೆಯನ್ನು ಏಕೀಕರಣಗೊಳಿಸುವುದರ ಜೊತೆಗೆ ಸಮಗ್ರ ಪ್ರಗತಿಯತ್ತ ಕೊಂಡೊಯ್ಯಲಿದೆ ಎಂದು ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ನಗರದ ಲಲಿತ್ ಅಶೋಕ್ ನಲ್ಲಿ ನಡೆದ ಪಿಎಂ ಗತಿಶಕ್ತಿ ಯೋಜನೆಯ ಉದ್ಘಾಟನಾ ಸಮಾರಂಭದ ವಿಡಿಯೋ ಕಾನ್ಫೆರನ್ಸ್ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಪರವಾಗಿ ಪಾಲ್ಗೊಂಡು ಮಾತನಾಡಿದ ವಿ.ಸೋಮಣ್ಣ , ಈ ವೇದಿಕೆಯು ಉದ್ಯಮದ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ, ಸ್ಥಳೀಯ ಉತ್ಪಾದಕರಿಗೆ ಬೆಂಬಲ ನೀಡುವಲ್ಲಿ, ಉದ್ಯಮದ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವಲ್ಲಿ ನೆರವು ನೀಡುವುದಲ್ಲದೆ, ಭವಿಷ್ಯದ ಆರ್ಥಿಕ ವಲಯಗಳ ಸೃಜನೆಗೆ ಇರುವ ಹೊಸ ಸಾಧ್ಯತೆಗಳನ್ನು ಅಭಿವೃದ್ಧಿಪಡಿಸುವಲ್ಲಿಯೂ ಸಹ ನೆರವಾಗುತ್ತದೆ ಎಂದು ಹೇಳಿದರು.

ಇನ್ನು, ರಾಜ್ಯದಲ್ಲಿ ಕೈಗಾರಿಕಾ-ಸ್ನೇಹಿ ವಾತಾವರಣವನ್ನು ನಿರ್ಮಿಸಲು ಮತ್ತು ವಾಣಿಜ್ಯ ವಹಿವಾಟನ್ನು ಸುಗಮಗೊಳಿಸಲು ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು ರಾಜ್ಯ ಸರ್ಕಾರವು ಕೈಗೊಳ್ಳುತ್ತಿದೆ ಮತ್ತು ರಾಷ್ಟೀಯ ಯೋಜನೆಯ ಅನುಸಾರವಾಗಿಯೇ ರಾಜ್ಯದಲ್ಲಿನ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಗೊಳಿಸಲು ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸುತ್ತಿದೆ. ನಮ್ಮ ರಾಜ್ಯ ಸರ್ಕಾರವು ಈಗಾಗಲೇ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಮೂಲಕ ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ವಿಮಾನ ನಿಲ್ಧಾಣಗಳನ್ನು ನಿರ್ಮಿಸುತ್ತಿದೆ. ಪೂರ್ವ, ಪಶ್ಚಿಮ, ಉತ್ತರ ಹಾಗೂ ದಕ್ಷಿಣ ವಲಯಗಳಲ್ಲಿ ವಿಮಾನ ನಿಲ್ದಾಣಗಳನ್ನು ನಿರ್ಮಿಸುವುದರಿಂದ ವಿವಿಧ ಆರ್ಥಿಕ ವಲಯಗಳಿಗೆ ತ್ವರಿತಗತಿಯ ಸಂಪರ್ಕ ಸಿಗುವುದಲ್ಲದೇ ಆಯಾ ವಲಯಗಳಲ್ಲಿನ ಆರ್ಥಿಕ ಹಾಗೂ ಔದ್ಯಮಿಕ ಪ್ರಗತಿ ಹೆಚ್ಚುತ್ತದೆ.

V. Somanna saaksha tv

ರಾಜ್ಯದಲ್ಲಿನ ಹಾಗೂ ಅಂತರರಾಜ್ಯ ರೈಲು ಮಾರ್ಗಗಳ ನಿರ್ಮಾಣಕ್ಕೆ ಮತ್ತು ರೈಲ್ವೆ ಕೆಳಸೇತುವೆ/ಮೇಲುಸೇತುವೆಗಳ ನಿರ್ಮಾಣದಲ್ಲಿ ರಾಜ್ಯ ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದು. ರೈಲು ಮಾರ್ಗಗಳ ನಿರ್ಮಾಣ ವೆಚ್ಚದಲ್ಲಿ ಶೇ.50ರ ಭಾಗವನ್ನು ರಾಜ್ಯ ಸರ್ಕಾರ ಭರಿಸುವುದಲ್ಲದೇ ಈ ಮಾರ್ಗಗಳ ನಿರ್ಮಾಣಕ್ಕೆ ಅಗತ್ಯವಾದ ಭೂಮಿಯನ್ನು ರಾಜ್ಯ ಸರ್ಕಾರ ಉಚಿತವಾಗಿ ನೀಡುತ್ತದೆ.

ರಾಜ್ಯದಲ್ಲಿನ ರೈಲು ಮಾರ್ಗಗಳ ಸಾಂದ್ರತೆಯನ್ನು ಹೆಚ್ಚಿಸುವ ದೃಷ್ಠಿಯಿಂದ ಈಗಾಗಲೇ 9 ನೂತನ ರೈಲು ಮಾರ್ಗಗಳ ನಿರ್ಮಾಣ ಯೋಜನೆಯನ್ನು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕೈಗೊಳ್ಳಲಾಗಿದೆ. ಇನ್ನು, ಬಂದರುಗಳ ನಿರ್ಮಾಣ ಹಾಗೂ ಅಭಿವೃದ್ಧಿ ಜೊತೆಗೆ ಅಂತರ ಜಲ ಸಾರಿಗೆ ಮೂಲಕ ವಿವಿಧ ಆರ್ಥಿಕ ವಲಯಗಳನ್ನು ಬೆಸೆಯುತ್ತಿರುವ ರಾಜ್ಯ ಸರ್ಕಾರ ಪೂರ್ಣ ಪ್ರಮಾಣದ ಆರ್ಥಿಕ ಪ್ರಗತಿಯನ್ನು ಸಾಧಿಸುತ್ತಿದೆ. ರಾಜ್ಯದಲ್ಲಿ ರಾಷ್ಟ್ರೀಯ ನಿಯಂತ್ರಕ ಯೋಜನೆಯನ್ನು ಅನುಷ್ಠಾನಗೊಳಿಸಲು ಮತ್ತು ರಾಜ್ಯ ಮತ್ತು ರಾಷ್ಟ್ರಕ್ಕೆ ಹೆಚ್ಚಿನ ಬಂಡವಾಳವನ್ನು ಆಕರ್ಷಿಸಲು ಕೇಂದ್ರ ಸರ್ಕಾರದೊಂದಿಗೆ ಕಾರ್ಯ ನಿರ್ವಹಿಸಲು ಉತ್ಸುಕರಾಗಿದ್ದೇವೆ ಮತ್ತು ಈ ಯೋಜನೆಯ ಯಶಸ್ಸಿಗೆ ಎಲ್ಲಾ ಪಾಲುದಾರರ ಸಹಕಾರವನ್ನು ನಿರೀಕ್ಷಿಸುತ್ತೇನೆ ಎಂದು ಇದೇ ವೇಳೆ ಸಚಿವರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಕೆಐಎಡಿಬಿ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಶಿವಶಂಕರ್, ಸರ್ಕಾರದ ಹೆಚ್ಚೂವರಿ ಮುಖ್ಯ ಕಾರ್ಯದರ್ಶಿಗಳಾದ ರಮಣ ರೆಡ್ಡಿ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags: bangalorekarnatakaSaakshsa tvv somanna
ShareTweetSendShare
Join us on:

Related Posts

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

by Shwetha
August 28, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿದ್ದರಾಮಯ್ಯ ಮತ್ತು ಜಿ ಪರಮೇಶ್ವರ ಅವರ ನಡುವಿನ ಸಂಬಂಧದ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೆ ಅಧಿಕಾರ...

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

by Shwetha
August 28, 2026
0

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆಗಳನ್ನು...

ನೇಪಾಳದಲ್ಲಿ ಭೀಕರ ಪ್ರವಾಹ; ಕೈಲಾಸ ಮಾನಸ ಸರೋವರ ಯಾತ್ರೆಯ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆ

ನೇಪಾಳದಲ್ಲಿ ಭೀಕರ ಪ್ರವಾಹ; ಕೈಲಾಸ ಮಾನಸ ಸರೋವರ ಯಾತ್ರೆಯ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆ

by Shwetha
August 28, 2026
0

ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ 133 ಭಾರತೀಯರು ಹಾಗೂ 37 ಅನಿವಾಸಿ ಭಾರತೀಯರು ಸೇರಿದಂತೆ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು...

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

by Shwetha
August 28, 2026
0

ಮಾಸ್ ಮಹಾರಾಜ ರವಿ ತೇಜ ಅಭಿನಯದ ಇತ್ತೀಚಿನ ಚಿತ್ರ ಇರುಮುಡಿ ಪ್ರೇಕ್ಷಕರ ಮನ ಗೆಲ್ಲುವುದರ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ...

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

by Shwetha
August 28, 2026
0

ಬೆಂಗಳೂರು: ಆರ್‌ಎಸ್‌ಎಸ್ ನೊಂದಣಿ ವಿಷಯವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಮತ್ತು ಹಾಕಿದ್ದ ಸವಾಲಿಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿ ತಿರುಗೇಟು ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram