ಜನಸಂಖ್ಯಾ ಅಸಮತೋಲನ ತಡೆಗೆ ಹೊಸ ನೀತಿ ರೂಪಿಸಬೇಕು : ಮೋಹನ್ ಭಾಗವತ್ Mohan Bhagwat saaksha tv
ನಾಗಪುರ : ದೇಶದಲ್ಲಿ ಜನಸಂಖ್ಯಾ ಅಸಮತೋಲನ ತಡೆಗೆ ಹೊಸ ನೀತಿ ರೂಪಿಸಬೇಕು ಮತ್ತು ಅದನ್ನು ಸಮನಾಗಿ ಪಾಲಿಸಬೇಕು ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ವಿಜಯ ದಶಮಿ ಹಬ್ಬದ ಹಿನ್ನೆಲೆಯಲ್ಲಿ ನಾಗಪುರದಲ್ಲಿ ಮಾತನಾಡಿದ ಅವರು, ಸ್ವಾಧೀನತದಿಂದ ಸ್ವಾತಂತ್ರ್ಯದವರೆಗೂ ದೇಶದ ಪ್ರಯಾಣ ಇನ್ನೂ ಪೂರ್ಣಗೊಂಡಿಲ್ಲ.
ಏಕೆಂದರೆ ಭಾರತ ಪ್ರಗತಿ ಮತ್ತು ಗೌರವಾನ್ವಿತ ಸ್ಥಾನಕ್ಕೆ ಜನಸಂಖ್ಯಾ ಅಸಮತೋಲನ ಅಡ್ಡಿಯನ್ನುಂಟು ಮಾಡುತ್ತಿದೆ.
ಹೀಗಾಗಿ ದೇಶದಲ್ಲಿ ಜನಸಂಖ್ಯಾ ಅಸಮತೋಲನ ದೊಡ್ಡ ಸಮಸ್ಯೆಯಾಗಿದೆ.
ಹೀಗಾಗಿ ಜನಸಂಖ್ಯಾ ನೀತಿಯನ್ನು ಮತ್ತೊಮ್ಮೆ ಪರಿಗಣಿಸಿ, ಮುಂದಿನ 50 ವರ್ಷಗಳವರೆಗೆ ಹೊಸ ನೀತಿಯನ್ನು ರೂಪಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾವು ಸಂಸ್ಕøತಿಯನ್ನು ವಿಭಜನೆಗೊಳಿಸಲು ಇಷ್ಟಪಡುವುದಿಲ್ಲ. ಆದರೆ ರಾಷ್ಟ್ರವನ್ನು ಪ್ರೀತಿ ಎಂಬ ಸಂಸ್ಕೃತಿಯಿಂದ ಬಂಧಿಸುತ್ತೇವೆ.
ಹೀಗಾಗಿ ಹುಟ್ಟುಹಬ್ಬದಂತೆ ಎಲ್ಲಾ ಹಬ್ಬಗಳನ್ನು ಕೂಡ ಒಟ್ಟಿಗೆ ಆಚರಿಸಬೇಕು. ದೇಶವನ್ನು ವಿಭಜನೆಗೊಳಿಸುವುದು ದುಃಖಕರವಾದ ಇತಿಹಾಸ.
ಈ ಇತಿಹಾಸದ ಸತ್ಯವನ್ನು ಅರಿತು ಕಳೆದುಹೋದ ಸಮಗ್ರತೆ ಮತ್ತು ಏಕತೆಯನ್ನು ಮರಳಿ ತರಲು ಹೊಸ ಪೀಳಿಗೆಯವರು ಇತಿಹಾಸದ ಬಗ್ಗೆ ತಿಳಿದಿರಬೆಕು ಎಂದಿದ್ದಾರೆ.









