ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

Namratha Rao by Namratha Rao
October 26, 2021
in Cooking, Newsbeat, ಅಡುಗೆ
food
Share on FacebookShare on TwitterShare on WhatsappShare on Telegram

5 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

1 ನಿಮಿಷದಲ್ಲಿ ಅತಿ ಸುಲಭದಲ್ಲಿ ಮಾಡಿ ಕೊರಿಯಾದ ಫೇಮಸ್ ಶುಗರ್ ಕ್ಯಾಂಡಿ..!

ಕೊರಿಯಾದಲ್ಲಿ ಸ್ಟ್ರೀಟ್ ಫುಡ್ ಗಳಲ್ಲಿ ಫೇಮಸ್ ಶುಗರ್ ಕ್ಯಾಂಡಿ , ಮಕ್ಕಳಿಗೆ ಬಹಳ ಇಷ್ಟವಾಗುವ ಸ್ವೀಟ್ ಕ್ಯಾಂಡಿ ಮಾಡುವುದು ತುಂಬಾನೆ ಸಿಂಪಲ್.
ಪದಾರ್ಥಗಳು
ಐಸ್ ಸ್ಟಿಕ್ಸ್
ಸಕ್ಕರೆ
ಬೇಕಿಂಗ್ ಸೋಡಾ
ಮಾಡುವ ವಿಧಾನ
ಮೊದಲಿಗೆ ಐಸ್ ಸ್ಟಿಕ್ಸ್ ನ ಬಿಡಿ ಬಿಡಿಯಾಗಿ ಒಂದಕ್ಕೊಂದು ತಾಗದಂತೆ ಜಾಗ ಬಿಟ್ಟು ಇಡಿ. ಒಂದು ಚಿಕ್ಕ ಪ್ಯಾನ್ ಅನ್ನ ಲೋ ಫ್ಲೇಮ್ ನಲ್ಲಿ ಸ್ಯಾಸ್ ಮೇಲೆ ಕಾಯಲಿಕ್ಕೆ ಇಡಿ ಅದಕ್ಕೆ 1 ಚಮಚ ಸಕ್ಕರೆ ಹಾಕಿ. ಸಕ್ಕರೆ ಇನ್ನೇನು ಒಂದು ಕುದಿ ಬರುತ್ತಿದ್ದಂತೆ ಒಂದು ಚಿಟಕಿಗಿಂತಲೂ ಕಡಿಮೆ ಬೇಕಿಂಗ್ ಸೋಡಾ ಹಾಗಿ ಚೆನ್ನಾಗಿ ಐಸ್ ಸ್ಟಿಕ್ ನಲ್ಲಿ ಕಲಸಿ ಪಟ್ ಅಂತ ಬದಿಗೆ ಇಟ್ಟಿರುವ ಒಂದು ಐಸ್ ಸ್ಟಿಕ್ ನ ಮೇಲ್ಭಾಕ್ಕೆ ವೃತ್ತಾಕಾರದಲ್ಲಿ ಹಾಕಿ. ನೆನಪಿರಲಿ ಐಸ್ ಸ್ಟಿಕ್ ನ ಕೆಳ ಭಾಗ ಕೈಯಲ್ಲಿ ಹಿಡಿಯುವಷ್ಟು ಜಾಗ ಬಿಟ್ಟಿರಬೇಕು. ಸಕ್ಕರೆ ಮಿಶ್ರಣ ಐಸ್ ಸ್ಟಿಕ್ ಮೇಲೆ ಸುರಿದ ಕೆಲವೇ ಸೆಂಕೆಂಡ್ ಗಳಲ್ಲಿ ಅದು ಗಟ್ಟಿಯಾಗುತ್ತೆ. ಆದ್ರೆ ಬಾಯಿಗೆ ಇಟ್ಟರೆ ಕಾಟನ್ ಕ್ಯಾಂಡಿಯಂತೆಯೇ ಕರಗಿಬಿಡುತ್ತೆ. ಈ ಕ್ಯಾಂಡಿ ಮಕ್ಕಳಿಗೆ ತುಂಬಾನೆ ಇಷ್ಟವೂ ಆಗುತ್ತೆ.

5 ವಿಭಿನ್ನ , ಸುಲಭ ಹಾಗೂ ರುಚಿಕರ ಅಡುಗೆಗಳ ರೆಸಿಪಿಗಳು..!

2. ಆಲೂಗಡ್ಡೆ ಸಮೋಸ

ಮೈದಾ /ಗೋಧಿ ಹಿಟ್ಟು – 2 ಕಪ್
ಆಲೂಗಡ್ಡೆ 3-4
ಈರುಳ್ಳಿ – 1
ಕೊತ್ತಂಬರಿ ಸೊಪ್ಪು ಕಾಲು ಕಪ್,
ಹಸಿ ಮೆಣಸಿನ ಕಾಯಿ – 1 ರಿಂದ 2,
ಜೀರಿಗೆ – 1/2 ಚಮಚ,
ಶುಂಠಿ – ಅರ್ಧ ಇಂಚು,
ಧನಿಯಾ ಪೌಡರ್ – 1/2 ಚಮಚ,
ಚಾಟ್ ಮಸಾಲ – 1/4 ಚಮಚ,
ಅರಿಶಿನ – 1/4 ಚಮಚ,
ಗರಂ ಮಸಾಲ – 1/2 ಚಮಚ,
ಕೆಂಪು ಮೆಣಸಿನ ಪುಡಿ – 1/2 ಚಮಚ,
ಓಂ ಕಾಳು – 1/2 ಚಮಚ,
ನಿಂಬೆ ಹಣ್ಣು – ಅರ್ಧ
ಹಸಿ ಬಟಾಣಿ (ಅಥವಾ ಬೇಯಿಸಿದ ಒಣ ಬಟಾಣಿ) – 1/2 ಕಪ್,
ತುಪ್ಪ – 2 ಚಮಚ,
ಉಪ್ಪು,
ಎಣ್ಣೆ

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026
Saakshatv cooking recipes potato samosa
ಒಂದು ದೊಡ್ಡ ಪಾತ್ರೆಯಲ್ಲಿ ಮೈದಾ /ಗೋಧಿ ಹಿಟ್ಟನ್ನು ತೆಗೆದುಕೊಳ್ಳಿ. ಅದಕ್ಕೆ ಎರಡು ಚಮಚ ತುಪ್ಪ, ಓಂ ಕಾಳು, ಸ್ವಲ್ಪ ಉಪ್ಪು ಹಾಕಿ ಚೆನ್ನಾಗಿ ಕಲಸಿ, ಸ್ವಲ್ಪ ಸ್ವಲ್ಪವೇ ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ಬಳಿಕ ಹಿಟ್ಟಿಗೆ ಒಂದು ಚಮಚ ಎಣ್ಣೆ ಸವರಿ 15-20 ನಿಮಿಷ ಹಾಗೆ ಬಿಡಿ.
ನಂತರ ಆಲೂಗಡ್ಡೆ ಬೇಯಿಸಿ, ಸ್ಮಾಷ್ ಮಾಡಿಟ್ಟುಕೊಳ್ಳಿ.
ಈಗ ಒಂದು ಬಾಣಲೆಗೆ ಎರಡೂ ಚಮಚ ಎಣ್ಣೆ ಸೇರಿಸಿ ಬಿಸಿ ಮಾಡಿ. ಎಣ್ಣೆ ಕಾದ ಬಳಿಕ ಅದಕ್ಕೆ ಜೀರಿಗೆ, ಸಣ್ಣದಾಗಿ ಕತ್ತರಿಸಿದ ಹಸಿಮೆಣಸಿನ ಕಾಯಿ, ಚಿಕ್ಕದಾಗಿ ಕತ್ತರಿಸಿದ ಶುಂಠಿ, ಕತ್ತರಿಸಿದ ಈರುಳ್ಳಿ, ಬಟಾಣಿ, ಸ್ಮಾಷ್ ಮಾಡಿದ ಆಲೂಗಡ್ಡೆ ಸೇರಿಸಿ. ಒಂದು ನಿಮಿಷ ಹುರಿಯಿರಿ. ಬಳಿಕ ರುಚಿಗೆ ತಕ್ಕಷ್ಟು ಉಪ್ಪು, ಧನಿಯಾ ಪೌಡರ್, ಚಾಟ್ ಮಸಾಲ, ಗರಂ ಮಸಾಲ, ಮೆಣಸಿನ ಪುಡಿ, ಅರಿಶಿನ ಪುಡಿ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ, ಹುರಿಯಿರಿ.
ಬಾಣಲೆಯನ್ನು ಕೆಳಗಿಳಿಸಿ, ಅದಕ್ಕೆ ಕೊತ್ತಂಬರಿ ಸೊಪ್ಪು ಮತ್ತು ನಿಂಬೆ ರಸ ಸೇರಿಸಿ ಚೆನ್ನಾಗಿ ಬೆರೆಸಿ.

4 ವಿವಿಧ ಬಗೆಯ ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

ನಂತರ ಹಿಟ್ಟನ್ನು ತೆಗೆದುಕೊಂಡು ಸಣ್ಣ ಸಣ್ಣ ಉಂಡೆಗಳನ್ನು ಮಾಡಿ. ತ್ರಿಕೋನ ಆಕಾರದಲ್ಲಿ ಲಟ್ಟಿಸಿ. ಈಗಾಗಲೇ ಮಾಡಿಟ್ಟುಕೊಂಡ ಆಲೂಗಡ್ಡೆ ಮಿಶ್ರಣವನ್ನು ಸೇರಿಸಿ. ನಂತರ ಬೆರಳುಗಳ ಸಹಾಯದಿಂದ ಮುಚ್ಚಿ.
ಬಳಿಕ ಒಂದು ಪಾತ್ರೆಯಲ್ಲಿ ಎಣ್ಣೆಯನ್ನು ಕಾಯಿಸಿ. ಎಣ್ಣೆ ಕಾದ ನಂತರ ಸಮೋಸವನ್ನು ಎಣ್ಣೆಯಲ್ಲಿ ಬಿಡಿ. ಮಧ್ಯಮ ಉರಿಯಲ್ಲಿ ಎರಡೂ ಬದಿಯನ್ನು ಹೊಂಬಣ್ಣಕ್ಕೆ ಬರುವವರೆಗೆ ಕರಿದು ತೆಗೆಯಿರಿ. ‌ರುಚಿಯಾದ ಬಿಸಿ ಬಿಸಿ ಸಮೋಸ ಸವಿಯಲು ರೆಡಿ.

3. ಮಸಾಲಾ ಕುಷ್ಕಾ ರೈಸ್ 

ಬೇಕಾಗುವ ಪದಾರ್ಥಗಳು

ಅಕ್ಕಿ- 1 ಕಪ್
ಶುಂಠಿ, ಬೆಳ್ಳುಳ್ಳಿ ಪೇಸ್ಟ್ – 1 ಚಮಚ
ಮೆಣಸಿನ ಪುಡಿ- 1 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಎಣ್ಣೆ- 4 ಚಮಚ
ತುಪ್ಪ ‌- 2 ಚಮಚ

ಚಕ್ಕೆ, ಲವಂಗ, ಏಲಕ್ಕಿ, ಮರಾಠಿ ಮೊಗ್ಗು, ಸೋಂಪು- ಸ್ವಲ್ಪ
ಉದ್ದಕ್ಕೆ ಹೆಚ್ಚಿಕೊಂಡ‌ ಈರುಳ್ಳಿ – 1
ಗರಂ ಮಸಾಲೆ ಪುಡಿ – 1/2 ಚಮಚ
ಹಸಿಮೆಣಸಿನಕಾಯಿ-2
ಟೊಮೆಟೋ-2
ಮೊಸರು-ಅರ್ಧ ಕಪ್
ಪುದೀನಾ, ಕೊತ್ತಂಬರಿ ಸೊಪ್ಪು
ಅರಿಶಿನ ಹುಡಿ- ಸ್ವಲ್ಪ

Saakshatv cooking recipes Kuska rice

ಮಾಡುವ ವಿಧಾನ

ಅಕ್ಕಿಯನ್ನು ತೊಳೆದು ನೀರಿನಲ್ಲಿ 10ನಿಮಿಷ ನೆನೆಸಿಡಿ. ‌ನಂತರ ಒಲೆಯ ಮೇಲೆ ಕುಕ್ಕರ್ ಇಟ್ಟು, ಅದಕ್ಕೆ 4 ಚಮಚ ಎಣ್ಣೆ ಮತ್ತು 2 ಚಮಚ ತುಪ್ಪ ‌ಹಾಕಿ.‌ ಕಾದ ಬಳಿಕ ಅದಕ್ಕೆ ಚಕ್ಕೆ ಲವಂಗ, ಎಲಕ್ಕಿ, ಮರಾಠಿ ಮೊಗ್ಗು, ಸೋಂಪು ಹಾಕಿ 30 ಸೆಕೆಂಡ್ ಕೆಂಪಗಾಗುವವರೆಗೆ ಹುರಿಯಿರಿ.
ಕತ್ತರಿಸಿದ ಹಸಿಮೆಣಸಿನ ಕಾಯಿ ಸೇರಿಸಿ 30 ಸೆಕೆಂಡ್ ‌ಹುರಿಯಿರಿ. ಕತ್ತರಿಸಿ ಇಟ್ಟುಕೊಂಡ ಈರುಳ್ಳಿ ಪುದೀನ ಸೇರಿಸಿ ಮಧ್ಯಮ ಜ್ವಾಲೆಯಲ್ಲಿ ‌ 3 ನಿಮಿಷ ಹುರಿಯಿರಿ. ಶುಂಠಿ ಬೆಳ್ಳುಳ್ಳಿ ಪೇಸ್ಟ್ ಸೇರಿಸಿ 30‌ ಸೆಕೆಂಡ್ ‌ಹುರಿಯಿರಿ. ನಂತರ ಕತ್ತರಿಸಿದ ಟೊಮೆಟೊ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ, ಟೊಮೆಟೊ ಮೃದುವಾಗುವವರೆಗೆ ಬೇಯಿಸಿ. ‌
Saakshatv cooking recipes Kuska rice

ನಂತರ ಅದಕ್ಕೆ ಅರಿಶಿನ ಪುಡಿ, ಖಾರದ ಪುಡಿ, ಗರಂ ಮಸಾಲೆ ಪುಡಿ, ಮೊಸರು ಹಾಕಿ 5 ನಿಮಿಷ ಬೆರೆಸಿ. ನೆನೆಸಿಟ್ಟುಕೊಂಡ ಅಕ್ಕಿಯನ್ನು ಹಾಕಿ 2 ನಿಮಿಷ ಚೆನ್ನಾಗಿ ಬೆರೆಸಿ.ಕೊತ್ತಂಬರಿ ಸೊಪ್ಪು ಸೇರಿಸಿ ಮಿಕ್ಸ್ ಮಾಡಿ.
ಈಗ 2 ಬಟ್ಟಲು ನೀರು ಹಾಕಿ ಕುಕ್ಕರ್ ಮುಚ್ಚಳವನ್ನು ಮುಚ್ಚಿ 1-2 ವಿಸಿಲ್ ಕೂಗಿಸಿದರೆ ರುಚಿಕರವಾದ ಕುಷ್ಕಾ ರೈಸ್ ಸವಿಯಲು ಸಿದ್ಧ.

4. ಅನ್ನ ಮಿಕ್ಕಿದ್ದರೆ ತಯಾರಿಸಿ ಸಿಹಿಯಾದ ರಸಗುಲ್ಲಾ !

ಬೇಕಾಗುವ ಸಾಮಗ್ರಿಗಳು

ಅನ್ನ – 2 1/2 ಕಪ್
ಮೈದಾ – 1 ಟೀಸ್ಪೂನ್
ಹಾಲಿನ ಪುಡಿ – 1 ಟೀಸ್ಪೂನ್
ತುಪ್ಪ – 1 ಟೀಸ್ಪೂನ್
ಕಾರ್ನ್ ಪ್ಲೋರ್ – 1 ಟೀಸ್ಪೂನ್

ಸಕ್ಕರೆ ‌ಪಾಕ‌ ತಯಾರಿಸಲು

ಸಕ್ಕರೆ 1 ಕಪ್
ನೀರು ‌1 ಕಪ್
ಏಲಕ್ಕಿ ಪುಡಿ
ನಿಂಬೆ ರಸ
Saakshatv cooking recipes rice rasgulla
Saakshatv cooking recipes rice rasgulla

ಮಾಡುವ ‌ವಿಧಾನ

ಉಳಿದ ಅನ್ನವನ್ನು ‌ ಮಿಕ್ಸಿಯಲ್ಲಿ ನೀರು ಹಾಕದೆ ರುಬ್ಬಿಕೊಳ್ಳಿ. ನಂತರ ತುಪ್ಪದಿಂದ ಗ್ರೀಸ್ ಮಾಡಿದ ಪಾತ್ರೆಗೆ ಅದನ್ನು ಹಾಕಿ.
ಅದಕ್ಕೆ ಮೈದಾ ಹಿಟ್ಟು, ಹಾಲಿನ‌ ಹುಡಿ ಮತ್ತು ಕಾರ್ನ್ ಪ್ಲೋರ್ ಸೇರಿಸಿ‌ ಚೆನ್ನಾಗಿ ಮಿಕ್ಸ್ ಮಾಡಿ.
ಈ ಮಿಶ್ರಣವನ್ನು ಹಿಟ್ಟಿನಂತೆ ಚೆನ್ನಾಗಿ ಕಲೆಸಿಕೊಳ್ಳಿ. ಹೆಚ್ಚು ನಾದಿದಷ್ಷು ರಸಗುಲ್ಲಾ ಮೃದುವಾಗುತ್ತದೆ.
ಬಳಿಕ ಆ ಹಿಟ್ಟಿನಿಂದ ‌ಚಿಕ್ಕ ‌ಚಿಕ್ಕ‌ ಉಂಡೆಗಳನ್ನು ಮಾಡಿ. ಅವುಗಳು ಒಡೆದಿಲ್ಲ ಎಂಬುದನ್ನು ಖಾತ್ರಿ ‌ಪಡಿಸಿಕೊಳ್ಳಿ.
ಬಳಿಕ ಒಂದು ಪಾತ್ರೆಯಲ್ಲಿ ‌ 1 ಕಪ್ ಸಕ್ಕರೆ ಮತ್ತು 1 ಕಪ್ ನೀರನ್ನು ತೆಗೆದುಕೊಂಡು ಚೆನ್ನಾಗಿ ಕುದಿಸಿ. ಅದಕ್ಕೆ ನಿಂಬೆ ರಸ ಮತ್ತು ಏಲಕ್ಕಿ ಪುಡಿ ಹಾಕಿ ಸಕ್ಕರೆ ಪಾಕ ತಯಾರಿಸಿ.
Saakshatv cooking recipes rice rasgulla

ಪಾಕ ಸಿದ್ಧವಾದ ನಂತರ ಸಕ್ಕರೆ ಪಾಕದಲ್ಲಿ, ರಸಗುಲ್ಲಾವನ್ನು ಚೆನ್ನಾಗಿ ಬೇಯಿಸಿ.‌ ಸಕ್ಕರೆ ‌ಪಾಕದ ಪಾತ್ರೆಯನ್ನು ಅರ್ಧ ಮುಚ್ಚಿ ಮಧ್ಯಮ ಉರಿಯಲ್ಲಿ 2 ರಿಂದ 3 ನಿಮಿಷ ಬೇಯಿಸಿ. 2 ನಿಮಿಷಗಳ ನಂತರ, ರಸಗುಲ್ಲಾಗಳ ಇನ್ನೊಂದು ಬದಿಯನ್ನು ಬೇಯಿಸಿ. ಇದರ ನಂತರ, ಕಡಿಮೆ ಉರಿಯಲ್ಲಿ 10 ರಿಂದ 15 ನಿಮಿಷಗಳ ಕಾಲ ಬೇಯಿಸಿ.
ಸ್ವಲ್ಪ ತಣ್ಣಗಾದ ಬಳಿಕ‌ ಸರ್ವ್ ಮಾಡಿ. ಸಿಹಿಯಾದ ರಸಗುಲ್ಲಾವನ್ನು‌ ಸವಿಯಿರಿ.

5. ಗರಿಗರಿಯಾದ ದಿಢೀರ್ (instant dosa) ದೋಸೆ

ಬೇಕಾಗುವ ಸಾಮಗ್ರಿಗಳು

ಅಕ್ಕಿ 11/2 ಕಪ್
ಉದ್ದಿನ ಬೇಳೆ 1/2 ಕಪ್
ತೊಗರಿಬೇಳೆ 2 ಟೇಬಲ್ಸ್ಪೂನ್
ಕಡಲೆಬೇಳೆ 2 ಟೇಬಲ್ಸ್ಪೂನ್
ಮೆಂತ್ಯೆ 1/4 ಟೇಬಲ್ಸ್ಪೂನ್
ಅವಲಕ್ಕಿ- 1 ಟೇಬಲ್ಸ್ಪೂನ್
ರವೆ 2 ಟೇಬಲ್ಸ್ಪೂನ್
ಸಕ್ಕರೆ 1 ಟೀಸ್ಪೂನ್
ಬಿಸಿ ಮಾಡಿದ ಎಣ್ಣೆ 2 ಟೇಬಲ್ಸ್ಪೂನ್
ರುಚಿಗೆ ತಕ್ಕಷ್ಟು ಉಪ್ಪು
ಅಡಿಗೆ ಸೋಡಾ/ಬೇಕಿಂಗ್ ಸೋಡಾ- 1/4 ಚಮಚ
ಮೊಸರು 1/2 ಕಪ್
Saakshatv cooking recipes instant dosa

Saakshatv cooking recipes instant dosa

ಮಾಡುವ ವಿಧಾನ

ಮೊದಲಿಗೆ ಅಕ್ಕಿಯನ್ನು ಚೆನ್ನಾಗಿ ತೊಳೆಯಿರಿ. ಬಳಿಕ ಬಾಣಲೆ ಬಿಸಿ ಮಾಡಿ ಅದಕ್ಕೆ ಅಕ್ಕಿಯನ್ನು ಹಾಕಿ ನೀರಿನ ಅಂಶ ಹೋಗುವವರೆಗೆ ಸ್ವಲ್ಪ ಪ್ರಮಾಣದಲ್ಲಿ ಹುರಿಯಿರಿ. ನಂತರ ಅಕ್ಕಿ ಸಂಪೂರ್ಣವಾಗಿ ತಣ್ಣಗಾದ ಬಳಿಕ ಅದನ್ನು ಪುಡಿ ಮಾಡಿ.
ನಂತರ ಅದೇ ಬಾಣಲೆಯಲ್ಲಿ ಉದ್ದಿನ ಬೇಳೆ, ತೊಗರಿಬೇಳೆ, ಕಡಲೆಬೇಳೆ, ಮೆಂತ್ಯೆ, ಅವಲಕ್ಕಿ, ರವೆ ಎಲ್ಲವನ್ನೂ ಹುರಿದಿಟ್ಟುಕೊಳ್ಳಿ. ತಣ್ಣಗಾದ ಬಳಿಕ ಅವೆಲ್ಲವನ್ನೂ ಹುಡಿ ಮಾಡಿ.

Saakshatv cooking recipes instant dosa

ಬಳಿಕ ಈಗಾಗಲೇ ಪುಡಿ ಮಾಡಿಟ್ಟುಕೊಂಡ ಅಕ್ಕಿ ಹಿಟ್ಟಿಗೆ ಸೇರಿಸಿ ಚೆನ್ನಾಗಿ ಕಲಸಿ. ಈಗ 2 ಟೀಸ್ಪೂನ್ ಬಿಸಿ ಎಣ್ಣೆ, ರುಚಿಗೆ ತಕ್ಕಷ್ಟು ‌ಉಪ್ಪು, ಮೊಸರು, ಅಡಿಗೆ ಸೋಡಾ, ಸಕ್ಕರೆ ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ನಂತರ ಅಗತ್ಯವಿದ್ದಷ್ಟು ನೀರು ಸೇರಿಸಿ ಹಿಟ್ಟು ತಯಾರಿಸಿ.
ಈಗ ಒಲೆಯ ಮೇಲೆ ಕಾವಲಿ ಇಟ್ಟು ಬಿಸಿ ಮಾಡಿ. ದೋಸೆ ಹಿಟ್ಟನ್ನು ಕಾವಲಿಯ ಮೇಲೆ ಬಿಡಿ. ‌ ವೃತ್ತಾಕಾರದಲ್ಲಿ ಹರಡಿ.
ಎಣ್ಣೆಯನ್ನು ಚಿಮುಕಿಸಿ, ಎರಡು ಬದಿಗಳನ್ನು ಮಧ್ಯಮ ಉರಿಯಲ್ಲಿ ಚೆನ್ನಾಗಿ ಬೇಯಿಸಿ.
ರುಚಿಕರವಾದ ಗರಿಗರಿ ದಿಢೀರ್ ದೋಸೆ ಸವಿಯಲು ಸಿದ್ಧವಾಗಿದೆ.

ಇನ್ನಷ್ಟು ಅಡುಗೆ ರೆಸಿಪಿಗಾಗಿ ಗೂಗಲ್ ನಲ್ಲಿ Saakshatv cooking ಎಂದು ಸರ್ಚ್ ಮಾಡಿ.

Tags: #saakshatvcookingfood recipies
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram