ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ಸುಲಭ , ರುಚಿಕರ , ಆರೋಗ್ಯಕರ ಹಾಗೂ ಅಡುಗೆ ರೆಸಿಪಿಗಳು ನಿಮಗಾಗಿ..!

Namratha Rao by Namratha Rao
October 28, 2021
in Cooking, Newsbeat, ಅಡುಗೆ
food
Share on FacebookShare on TwitterShare on WhatsappShare on Telegram

1. ರುಚಿಯಾದ ಆರೋಗ್ಯಕರವಾದ ಮೊಸರನ್ನ

ಬೇಕಾಗುವ ಸಾಮಗ್ರಿಗಳು
ಅಕ್ಕಿ 1 ಕಪ್
ಮೊಸರು 2 ಕಪ್
ಉದ್ದಿನಬೇಳೆ 1ಚಮಚ
ಕಡ್ಲೆಬೇಳೆ 1ಚಮಚ
ಸಾಸಿವೆ 1/2 ಚಮಚ
ಸ್ವಲ್ಪ ಇಂಗು
ದಾಳಿಂಬೆ ಕಾಳು ‌- 1 ಕಪ್
ಸಣ್ಣಗೆ ಹೆಚ್ಚಿದ ಹಸಿಮೆಣಸಿನಕಾಯಿ 2
ಶುಂಠಿ 1/2 ಇಂಚು
ಚಿಕ್ಕದಾಗಿ ಕತ್ತರಿಸಿದ‌ ಕರಿಬೇವು ಸ್ವಲ್ಪ
ಒಣಮೆಣಸು 2
ಎಣ್ಣೆ 2-3 ಚಮಚ
Saakshatv cooking recipes curd rice
Saakshatv cooking recipes curd rice

ಮಾಡುವ ವಿಧಾನ

Related posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

June 25, 2026
ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026

ಮೊದಲಿಗೆ ಒಂದು ಕಪ್ ಅಕ್ಕಿಯಿಂದ ಮೆತ್ತಗೆ ಅನ್ನ ಮಾಡಿಟ್ಟುಕೊಳ್ಳಿ.
ಒಂದು ಬಾಣಲೆಯಲ್ಲಿ ಎಣ್ಣೆ ಹಾಕಿ ಬಿಸಿ ಮಾಡಿ. ನಂತರ ಸಾಸಿವೆ, ಉದ್ದಿನ ಬೇಳೆ, ಕಡಲೆಬೇಳೆ ಒಗ್ಗರಣೆ ಕೊಡಿ.
Saakshatv cooking recipes curd rice

ಸಾಸಿವೆ ಸಿಡಿದ ಮೇಲೆ ಗೋಡಂಬಿ, ಒಣಮೆಣಸಿನಕಾಯಿ, ಕರಿಬೇವು, ಹಸಿ ಮೆಣಸಿನಕಾಯಿ, ಸಣ್ಣಗೆ ಕತ್ತರಿಸಿದ ಶುಂಠಿ ಮತ್ತು ಇಂಗು ಸೇರಿಸಿ. ಬಳಿಕ ಗ್ಯಾಸ್ ಆಫ್ ಮಾಡಿ ಬೇಯಿಸಿಟ್ಟ ಅನ್ನ ಹಾಕಿ ಕಲಸಿ. ದಾಳಿಂಬೆ ಕಾಳುಗಳನ್ನು ಸೇರಿಸಿ. ತಣ್ಣಗಾದ ಮೇಲೆ ಮೊಸರು ಸೇರಿಸಿ, ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.‌ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ. ರುಚಿಯಾದ ಆರೋಗ್ಯಕರವಾದ ಮೊಸರನ್ನ ಸವಿಯಲು ಸಿದ್ಧ.

2. ಅನಾನಸ್( ಪೈನಾಪಲ್) ಗೊಜ್ಜು 

ಬೇಕಾಗುವ ಸಾಮಗ್ರಿಗಳು

ಉದ್ದಿನ ಬೇಳೆ 2 ಚಮಚ
ಜೀರಿಗೆ 1/2 ಚಮಚ
ಕಾಳುಮೆಣಸು 1/4 ಚಮಚ
ಚಿಟಕಿ ಇಂಗು
ಒಣ ಕೊಬ್ಬರಿ ತುರಿ 1/4 ಕಪ್
ಬಿಳಿ ಎಳ್ಳು 2ಚಮಚ

ಸಣ್ಣಗೆ ಹೆಚ್ಚಿದ ಪೈನಾಪಲ್ 1 ಕಪ್
ಸಾಸಿವೆ 1 ಚಮಚ
ಕತ್ತರಿಸಿದ ಕರಿಬೇವು ಸ್ವಲ್ಪ
ಹುಣಸೆ ರಸ 1/4 ಕಪ್
ಬೆಲ್ಲ ಪುಡಿ 2 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಚಿಟಕಿ‌‌ ಅರಿಶಿನ
ಒಣಮೆಣಸು 6
ಎಣ್ಣೆ

Saakshatv cooking recipes pineapple gojju
Saakshatv cooking recipes pineapple gojju

ಮಾಡುವ ವಿಧಾನ

ಪಾನ್ ಗೆ ಉದ್ದಿನ ಬೇಳೆ, ಜೀರಿಗೆ, ಕಾಳುಮೆಣಸು ಇಂಗು, ಒಣ ಮೆಣಸಿನಕಾಯಿ ಹಾಕಿ ಹುರಿಯಿರಿ. ಒಣ ಕೊಬ್ಬರಿ ತುರಿ ಸೇರಿಸಿ ಕೆಂಪಗಾಗುವ ವರೆಗೆ ಹುರಿಯಿರಿ. ನಂತರ ಬಿಳಿ ಎಳ್ಳು ಹುರಿದು ಎಲ್ಲವನ್ನೂ ಮಿಕ್ಸಿ ಗೆ ಹಾಕಿ ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿ.

Saakshatv cooking recipes pineapple gojju

ಈಗ ಬಾಣಲೆಗೆ 4 ಚಮಚ ಎಣ್ಣೆ ಹಾಕಿ ಬಿಸಿ ಮಾಡಿ. ಅದಕ್ಕೆ ಸಾಸಿವೆ ಸೇರಿಸಿ, ಸಾಸಿವೆ ಸಿಡಿದ ಬಳಿಕ ಕರಿಬೇವು ಸೇರಿಸಿ.
ಅದಕ್ಕೆ ಸಣ್ಣಗೆ ಹೆಚ್ಚಿದ ಪೈನಾಪಲ್ ಸೇರಿಸಿ ಅರಿಶಿಣ ಹಾಕಿ ಬೇಯಿಸಿ. ಬಳಿಕ ಹುಣಸೆ ರಸ ಮತ್ತು ಬೆಲ್ಲ ಸೇರಿಸಿ. ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. 5 ನಿಮಿಷ ಕುದಿಸಿದ ಬಳಿಕ ರುಬ್ಬಿದ ಮಿಶ್ರಣವನ್ನು ಸೇರಿಸಿ ಕುದಿಸಿ. ಈಗ ಸವಿಯಲು ರುಚಿಯಾದ ಅನಾನಸ್ ‌ಗೊಜ್ಜು‌ ತಯಾರಾಗಿದೆ.

3. ರವೆ ಹೆಸರುಬೇಳೆ ಪಾಯಸ
ಬೇಕಾಗುವ ಸಾಮಗ್ರಿಗಳು:

ಹೆಸರು ಬೇಳೆ 1/2 ಕಪ್
ನೀರು 4 3/4 ಕಪ್
ರವೆ 1/4 ಕಪ್
ಬೆಲ್ಲ 3/4 ಕಪ್,
ಒಣ ಕೊಬ್ಬರಿ ತುರಿ 1/4 ಕಪ್,
ಹಾಲು 1/2 ಕಪ್,
ಹುರಿದ ತುಪ್ಪ, ಗೋಡಂಬಿ, ದ್ರಾಕ್ಷಿ, ಏಲಕ್ಕಿ
Saakshatv cooking recipes payasa
Saakshatv cooking recipes payasa

ಮಾಡುವ ವಿಧಾನ

ಮೊದಲು ಹೆಸರುಬೇಳೆಯನ್ನು ಸ್ವಲ್ಪ ಕೆಂಪು ಬಣ್ಣ ಬರುವವರೆಗೆ ಹುರಿದುಕೊಳ್ಳಿ. ನಂತರ ಹೆಸರುಬೇಳೆಯನ್ನು ಒಂದೆರಡು ಬಾರಿ ತೊಳೆದು 4 ಕಪ್ ನೀರು ಸೇರಿಸಿ ಕುಕ್ಕರ್ ನಲ್ಲಿ ಮೂರು ನಾಲ್ಕು ವಿಸಿಲ್ ಕೂಗಿಸಿ ಬೇಯಿಸಿಕೊಳ್ಳಿ. ನಂತರ ಬೆಲ್ಲವನ್ನು ಅರ್ಧ ಕಪ್ ನೀರು ಹಾಕಿ ಕರಗಿಸಿ ಇಟ್ಟುಕೊಳ್ಳಿ.

ಈಗ ಬಾಣಲೆಗೆ ಒಂದು ಚಮಚ ತುಪ್ಪ ಹಾಕಿ ಬಿಸಿ ಮಾಡಿ, ದ್ರಾಕ್ಷಿ ಗೋಡಂಬಿ ಸೇರಿಸಿ ಹುರಿದಿಟ್ಟುಕೊಳ್ಳಿ.

ನಂತರ ಬಾಣಲೆಗೆ ರವೆ ಹಾಕಿ ಕೆಂಪು ಬಣ್ಣ ಬರುವವರೆಗೆ ಚೆನ್ನಾಗಿ ಹುರಿಯಿರಿ.

ನಂತರ ರವೆಯನ್ನು ಮುಕ್ಕಾಲು ಕಪ್ ಬಿಸಿ ನೀರಿಗೆ ಸೇರಿಸಿ, ಗಂಟು ಕಟ್ಟದಂತೆ ನೋಡಿಕೊಳ್ಳಿ.
ನಂತರ ಬೇಯಿಸಿಟ್ಟುಕೊಂಡ ಹೆಸರುಬೇಳೆಯನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಬಳಿಕ ಕರಗಿಸಿಟ್ಟುಕೊಂಡ ಬೆಲ್ಲವನ್ನು ಸಹ ಸೇರಿಸಿ ಮತ್ತೆ ಮಿಕ್ಸ್ ಮಾಡಿಕೊಳ್ಳಿ.
ಈ ಮಿಶ್ರಣವು ಒಂದು ಕುದಿ ಬಂದ ನಂತರ ಒಣ ಕೊಬ್ಬರಿ ತುರಿ ಮತ್ತು ಏಲಕ್ಕಿ ಪುಡಿಯನ್ನು ಸೇರಿಸಿ.
Saakshatv cooking recipes payasa
ಮಧ್ಯಮ ಉರಿಯಲ್ಲಿ 4-5 ನಿಮಿಷಗಳ ಕಾಲ ಬಿಸಿ ಮಾಡಿ. ನಂತರ ಅದಕ್ಕೆ ಕಾಯಿಸಿ ಆರಿಸಿದ ಹಾಲನ್ನು ಸೇರಿಸಿ. ಈಗ ಹುರಿದಿಟ್ಟುಕೊಂಡ ದ್ರಾಕ್ಷಿ ಗೋಡಂಬಿಯನ್ನು ಸೇರಿಸಿ ಒಂದು ಕುದಿ ಬರೆಸಿ. ರುಚಿಯಾದ ರವೆ ಹೆಸರುಬೇಳೆ ಪಾಯಸ ಸವಿಯಲು ಸಿದ್ಧ.

4. ಮಾವಿನ ಕಾಯಿ ಚಟ್ನಿ

ಬೇಕಾಗುವ ಪದಾರ್ಥಗಳು

ಸಣ್ಣ ಮಾವಿನ ಕಾಯಿ 1
ತುರಿದ ತೆಂಗಿನಕಾಯಿ 1 ಕಪ್
ಶುಂಠಿ 1 ಇಂಚು
ಬೆಳ್ಳುಳ್ಳಿ 3-4 ಎಸಳು
ಈರುಳ್ಳಿ 1/2
ಹಸಿರು ಮೆಣಸಿನಕಾಯಿ 2-3
ರುಚಿಗೆ ತಕ್ಕಷ್ಟು ಉಪ್ಪು

ಒಗ್ಗರಣೆ
ಒಣ ಕೆಂಪು ಮೆಣಸು – 1
ಸಾಸಿವೆ – 1/4 ಚಮಚ
ಎಣ್ಣೆ – 1 ಚಮಚ
Saakshatv cooking recipes mango chutney
Saakshatv cooking recipes mango chutney

ಮಾಡುವ ವಿಧಾನ:
ಮಾವಿನ ಕಾಯಿಯ ಸಿಪ್ಪೆ ತೆಗೆದು ಸಣ್ಣಗೆ ಹೆಚ್ಚಿ. ಅದಕ್ಕೆ ತುರಿದ ತೆಂಗಿನಕಾಯಿ ಶುಂಠಿ ಬೆಳ್ಳುಳ್ಳಿ, ಕತ್ತರಿಸಿದ ಈರುಳ್ಳಿ, ಹಸಿರು ಮೆಣಸಿನಕಾಯಿ ಉಪ್ಪು ಸೇರಿಸಿ. (ಮಾವಿನ ಹುಳಿಗೆ ಅನುಗುಣವಾಗಿ ಮೆಣಸಿನಕಾಯಿಗಳನ್ನು ಬಳಸಿ).
ಅಗತ್ಯವಿರುವಷ್ಟು ನೀರು ಸೇರಿಸಿ, ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿ. ಹಸಿಮೆಣಸಿನಕಾಯಿ ಚಟ್ನಿ ಸಿದ್ಧವಾಗಿದೆ. ಈಗ ಎಣ್ಣೆ ಬಿಸಿ ಮಾಡಿ ಸಾಸಿವೆ ಹಾಕಿ ಕೆಂಪು ‌ಮೆಣಸಿನ ಒಗ್ಗರಣೆ ಕೊಡಿ.
Saakshatv cooking recipes mango chutney

ಈ ಚಟ್ನಿಯನ್ನು ಸಾಮಾನ್ಯವಾಗಿ ಮಾವಿನ ಸಮಯದಲ್ಲಿ ಮಂಗಳೂರಿನ ಮನೆಗಳಲ್ಲಿ ತಯಾರಿಸಲಾಗುತ್ತದೆ ಮತ್ತು ಇದು ಗಂಜಿಯೊಂದಿಗೆ ಸೇವಿಸಲು ಚೆನ್ನಾಗಿರುತ್ತದೆ.

5. ಬಟಾಣಿ ರವೆ ಇಡ್ಲಿ  

ಬೇಕಾಗುವ ಸಾಮಗ್ರಿಗಳು

ಬಟಾಣಿ – 1ಕಪ್
ಸಾಸಿವೆ – 1 ಚಮಚ
ಸಣ್ಣಗೆ ಹೆಚ್ಚಿದ ಕರಿಬೇವಿನ ಸೊಪ್ಪು ಸ್ವಲ್ಪ
ಸಣ್ಣಗೆ ಕತ್ತರಿಸಿದ ಈರುಳ್ಳಿ 2
ಸಣ್ಣಗೆ ಹೆಚ್ಚಿದ ಹಸಿಮೆಣಸಿನಕಾಯಿ – 6
ಚಿರೋಟಿ ರವೆ -1 ಕಪ್
ಗಟ್ಟಿ ಮೊಸರು – 1 ಕಪ್
ತುರಿದ ಕ್ಯಾರೆಟ್ – 1/2ಕಪ್
ಶುಂಠಿ – 1 ಇಂಚು
ರುಚಿಗೆ ತಕ್ಕಷ್ಟು ಉಪ್ಪು
ಅಗತ್ಯವಿರುವಷ್ಟು ನೀರು Saakshatv cooking recipes Rava idli

Saakshatv cooking recipes Rava idli

ಮಾಡುವ ‌ವಿಧಾನ

ಮೊದಲಿಗೆ ಬಟಾಣಿಯನ್ನು ಬೇಯಿಸಿ ಇಟ್ಟುಕೊಳ್ಳಿ. ನಂತರ ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಬಳಿಕ ಅದಕ್ಕೆ ಈರುಳ್ಳಿ, ಹಸಿಮೆಣಸಿನಕಾಯಿ ಹಾಕಿ ಹುರಿಯಿರಿ. ಚಿರೋಟಿ ರವೆ ಸೇರಿಸಿ ಕೆಂಪಗಾಗುವವರೆಗೆ ಚೆನ್ನಾಗಿ ಹುರಿಯಿರಿ.

Saakshatv cooking recipes Rava idli

ಈಗ ಅದಕ್ಕೆ ಕ್ಯಾರೆಟ್, ಸಣ್ಣಗೆ ತುರಿದ ಶುಂಠಿ, ಬೇಯಿಸಿದ ಬಟಾಣಿ, ಗಟ್ಟಿ ಮೊಸರು ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ರುಚಿಗೆ ತಕ್ಕಷ್ಟು ಉಪ್ಪು ಮತ್ತು ಅಗತ್ಯವಿರುವಷ್ಟು ನೀರು ಸೇರಿಸಿ ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ. 20 ನಿಮಿಷ ಹಾಗೆಯೇ ಬಿಡಿ. ಬಳಿಕ ಇಡ್ಲಿ ಪಾತ್ರೆಯಲ್ಲಿ 20 ನಿಮಿಷ ಬೇಯಿಸಿ. ಈಗ ರುಚಿಕರವಾದ ಬಟಾಣಿ ರವೆ ಇಡ್ಲಿ ಸವಿಯಲು ರೆಡಿ.
ಇನ್ನಷ್ಟು ಅಡುಗೆ ರೆಸಿಪಿಗಾಗಿ ಗೂಗಲ್ ನಲ್ಲಿ Saakshatv cooking ಎಂದು ಸರ್ಚ್ ಮಾಡಿ.

Tags: #saakshatvcookingFoodtasty recipies
ShareTweetSendShare
Join us on:

Related Posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

by admin
June 25, 2026
0

ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram