ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಾಶ್ಮೀರ : ಪಾಕ್ ಪರ ಘೋಷಣೆ ವಿರೋಧಿಸಿದ ವಿದ್ಯಾರ್ಥಿನಿಗೆ ಜೀವ ಬೆದರಿಕೆ

Namratha Rao by Namratha Rao
October 28, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕಾಶ್ಮೀರ : ಪಾಕ್ ಪರ ಘೋಷಣೆ ವಿರೋಧಿಸಿದ ವಿದ್ಯಾರ್ಥಿನಿಗೆ ಜೀವ ಬೆದರಿಕೆ

ಕಾಶ್ಮೀರ :  ಟಿ 20 ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕ್ ಮತ್ತು ಭಾರತದ ನಡುವೆ ನಡೆದ ಹೈ ವೋಲ್ಟೇಜ್ ಮ್ಯಾಚ್ ನಲ್ಲಿ  ಪಾಕಿಸ್ತಾನವು ಭಾರತದ ವಿರುದ್ಧ ಜಯಗಳಿಸಿತ್ತು. ಈ ಮೂಲಕ ಭಾರತದ ಜೊತೆಗೆ ಪಾಕಿಸ್ತಾನ ಈವರೆಗೂ  ವಿಶ್ವ ಕಪ್ ನಲ್ಲಿ ಗೆದ್ದೇ ಇಲ್ಲ ಎಂಬ ಅಪಖ್ಯಾತಿಗೆ ಬ್ರೇಕ್ ಹಾಕಿತ್ತು.

Related posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

August 17, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026

ಅದಾದ ನಂತರ ಭಾರತದಲ್ಲಿ ಕೆಲವೆಡೆ ಕೆಲ ಕಿಡಿಗೇಡಿಗಳು ಪಾಕ್ ಪರ ಘೋಷಣೆ ಕೂಗಿದ್ದು, ವಿದ್ಯಾರ್ಥಿಗಳ ಗುಂಪುಗಳ ನಡುವೆ ಗಲಾಟೆಯಂತಹ ಪ್ರಕರಣಗಳು ಬೆಳಕಿಗೆ ಬಂದಿತ್ತು. ಅನೇಕರ ವಿರುದ್ಧ ಇದೇ ಕಾರಣಕ್ಕೆ FIR ಸಹ ದಾಖಲಾಗಿದೆ. ಇದೀಗ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದನ್ನು ವಿರೋಧಿಸಿದ್ದಕ್ಕಾಗಿ ವಿದ್ಯಾರ್ಥಿನಿಯೊಬ್ಬಳಿಗೆ ಜೀವ ಬೆದರಿಕೆ ಬಂದಿದೆ. ಈ ಬಗ್ಗೆ ಶ್ರೀನಗರದ ವೈದ್ಯಕೀಯ ವಿದ್ಯಾರ್ಥಿನಿ ದೂರಿದ್ದಾರೆ.

ಪಾಕ್ ಪರ ಘೋಷಣೆ ಕೂಗಿದ ವಿಚಾರಕ್ಕೆ ಸ್ಕಿಮ್ಸ್ ನ ಕೆಲವು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಬ್ದುಲ್ಲಾ ಘಜಿ ಎಂಬ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ಇದಕ್ಕೆಲ್ಲಾ ಕಾರಣ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಜಮ್ವಾಲ್ ಎಂದು ಆರೋಪಿಸಲಾಗಿದ್ದು, ಆಕೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ ಎನ್ನಲಾಗಿದೆ. ಇದಾದ ನಂತರ ಆಕೆಗೆ ಜೀವ ಬೆದರಿಕೆ ಬಂದಿದೆ ಎನ್ನಲಾಗ್ತಿದೆ.

ಅನನ್ಯಾ ವಿರುದ್ಧ ಅಬ್ದುಲ್ಲಾ ಘಾಜಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಸ್ಕಿಮ್ಸ್ ಎಫ್‌ಐಆರ್ ಮತ್ತು ಯುಎಪಿಎ ಕಾಯ್ದೆ ಹಿಂದೆ ಪೊಲೀಸ್ ಮಾಹಿತಿದಾರ ಮತ್ತು ಘಟನೆಯ ‘ಪ್ರಮುಖ ಆರೋಪಿ’ಯಾಗಿರುವ ಆರ್‌ಎಸ್‌ಎಸ್ ಕಾರ್ಯಕರ್ತೆ ಅನನ್ಯಾ ಜಮ್ವಾಲ್ ಇದ್ದಾರೆ. ಡೋಗ್ರಾ ನಿವಾಸಿಯಾಗಿರುವ ಅನನ್ಯಾ ಪ್ರಸ್ತುತ ಕಾಲೇಜಿನಲ್ಲಿ ವೈದ್ಯಕೀಯ ಕೋರ್ಸ್ ಓದುತ್ತಿದ್ದಾರೆ.

ಸಂಘ ಮತ್ತು ಇತರ ಆರ್‌ಎಸ್‌ಎಸ್ ಕಾರ್ಯಕರ್ತರೊಂದಿಗೆ ಸೇರಿ ಸ್ಥಳೀಯ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕುವ ಮೂಲಕ ಬೃಹತ್ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಎಂದು ಘಾಜಿ ಆರೋಪಿಸಿದ್ದಾನೆ. ಅನನ್ಯಾ ಜಮ್ವಾಲ್ ಈ ಆರೋಪಗಳನ್ನು ನಿರಾಕರಿಸಿದ್ದು, ದೇಶದ್ರೋಹಿಗಳನ್ನು ಬೆಂಬಲಿಸುವವರನ್ನು ಮಾತ್ರ ನಾನು ಎದುರು ಹಾಕಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ತನಗೆ ಬೇರೆ ಬೇರೆ ರೀತಿಯಲ್ಲಿ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ ಅನನ್ಯಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ತಾನು ಆ ವೀಡಿಯೊಗಳನ್ನು ಸೋರಿಕೆ ಮಾಡಿಲ್ಲ, ಅಥವಾ ಪೊಲೀಸ್ ಮಾಹಿತಿದಾರರೂ ಅಲ್ಲ. ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ತನ್ನ ಬಗ್ಗೆ ನಕಲಿ ಮಾಹಿತಿಯನ್ನು ಹರಡದಂತೆ ಅನನ್ಯಾ ವಿನಂತಿಸಿದ್ದಾರೆ.

ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ಇತರರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುವ ಮತ್ತು ಪಾಕಿಸ್ತಾನದ ವಿಜಯವನ್ನು ಆಚರಿಸುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶ್ರೀನಗರದ ಕರಣ್ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸ್ಕಿಮ್ಸ್ ಸೌರಾದಲ್ಲಿ ಹಾಸ್ಟೆಲ್‌ಗಳಲ್ಲಿ ವಾಸಿಸುವ ಕೆಲವು ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ.

Tags: #saakshatv#T20 World Cupindia - pakisthan matchKashmir
ShareTweetSendShare
Join us on:

Related Posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram