ಬಾಗಲಕೋಟೆ : ಮಾನಸಿಕ ಅಸ್ವಸ್ಥನಿಗೆ ಕಟಿಂಗ್ ಹಾಗೂ ಸೇವ್ ಮಾಡುವ ಮೂಲಕ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪುರಸಭೆ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ. ಮುಖ್ಯಾಧಿಕಾರಿ ರವೀಂದ್ರ ಅಂಗಡಿ, ಸಮುದಾಯ ಸಂಘಟನಾಧಿಕಾರಿ ಸಿ.ಎಸ್.ಮಠಪತಿ ಹಾಗೂ ಸಿಬ್ಬಂದಿಯಿಂದ ಮಾನಸಿಕ ಅಸ್ವಸ್ಥನಿಗೆ ಕ್ಷೌರ ಸೇವೆ ಮಾಡಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಎಲ್ಲಿಯೂ ಕಟಿಂಗ್ ಶಾಪ್ ತೆರೆದಿರಲಿಲ್ಲ. ಕೊಳೆಯಾದ ಬಟ್ಟೆ, ಕೂದಲು ಬಿಟ್ಟುಕೊಂಡು ತಿರುಗಾಡುತ್ತಿದ್ದ
ಮಾನಸಿಕ ಅಸ್ವಸ್ಥನನ್ನು ಕರೆತಂದು ಪುರಸಭೆ ಸಿಬ್ಬಂದಿ ಆತನಿಗೆ ನೀಟಾಗಿ ಕ್ಷೌರ, ದಾಡಿ ಮಾಡಿ ಹೊಸಬಟ್ಟೆ ಕೊಡೆಸಿದರು. ಹೊಸಬಟ್ಟೆಯಲ್ಲಿ ಮಾನಸಿಕ ಅಸ್ವಸ್ಥ ಲಕಲಕ ಕಾಣಿಸುತ್ತಿದ್ದಾನೆ. ಪುರಸಭೆ ಸಿಬ್ಬಂದಿಯ ಮಾನವಿಯ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...








