ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ತರಹೇವಾರಿ ಅಡುಗೆಗಳ ರೆಸಿಪಿಗಳು…!

Namratha Rao by Namratha Rao
November 12, 2021
in Cooking, Newsbeat, ಅಡುಗೆ
food
Share on FacebookShare on TwitterShare on WhatsappShare on Telegram

ಕ್ಯಾರೆಟ್ ಹೋಳಿಗೆ

ಕಣಕ
1 ಮೈದಾ
1/4 ಚಿರೋಟಿ ರವೆ,
1/2 ಚಮಚ ಉಪ್ಪು,
ಎಣ್ಣೆ
ಅಗತ್ಯವಿರುವಷ್ಟು ನೀರು

ಹೂರಣ
1/4 ಕೆ.ಜಿ‌ ಕ್ಯಾರೆಟ್
200 ಗ್ರಾಂ ಬೆಲ್ಲ
ತುಪ್ಪ
ಏಲಕ್ಕಿ ಪುಡಿ 1/2
Saakshatv cooking recipe Carrot holige

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

August 10, 2026

ಮಾಡುವ ವಿಧಾನ

ಒಂದು ಪಾತ್ರೆಯಲ್ಲಿ ಮೈದಾ, ಚಿರೋಟಿ ರವೆ ಮತ್ತು ಉಪ್ಪು ಹಾಕಿ, ಎಷ್ಟು ಬೇಕೋ ಅಷ್ಟು ನೀರು ಸ್ವಲ್ಪ ಸ್ವಲ್ಪವೇ ಹಾಕುತ್ತಾ ಚಪಾತಿ ಹಿಟ್ಟಿಗಿಂತ ಸ್ವಲ್ಪ ಮೃದುವಾದ ಹಿಟ್ಟನ್ನು ಚೆನ್ನಾಗಿ ನಾದಿಸಿ ಕಲೆಸಿ. ಸ್ವಲ್ಪ ಎಣ್ಣೆ ಮೇಲೆ ಹಾಕಿ 2 ಗಂಟೆ ನೆನೆಯಲು ಬಿಡಿ..

ಈಗ 1/4 ಕೆ.ಜಿ‌ ಕ್ಯಾರೆಟ್ ಚೆನ್ನಾಗಿ ತೊಳೆದು ತುರಿದಿಟ್ಟುಕೊಳ್ಳಿ.
ನಂತರ ಬಾಣಲೆಗೆ ಸ್ವಲ್ಪ ತುಪ್ಪ ಹಾಕಿ ಘಂ ಎನ್ನುವ ವಾಸನೆ ಬರುವ ತನಕ ಹುರಿದು ಪಕ್ಕ ಇಡಿ.

200 ಗ್ರಾಂ ಬೆಲ್ಲ ತುರಿದು ಅಥವಾ ಜಜ್ಜಿ 4 ಚಮಚ ನೀರು ಸೇರಿಸಿ ಒಲೆಯ ಮೇಲಿಟ್ಟು ಕರಗಿಸಿ ಸೋಸಿ ಪಾಕ ಮಾಡಿಕೊಳ್ಳಿ.‌ ಪುಡಿಮಾಡಿದ ಏಲಕ್ಕಿಯನ್ನು ಸೇರಿಸಿ ಕಲಸಿ. ಈಗ ಹುರಿದಿಟ್ಟುಕೊಂಡ ಕ್ಯಾರೆಟ್ ಅನ್ನು ಮಿಶ್ರ ಮಾಡಿ. ಹೂರಣ ಸ್ವಲ್ಪ ತಣ್ಣಗಾದ ನಂತರ ಮೃದುವಾದ ಸಣ್ಣ ಗಾತ್ರದ ಉಂಡೆಗಳನ್ನು ಮಾಡಿಟ್ಟುಕೊಳ್ಳಿ.
Saakshatv cooking recipe Carrot holige

ನಂತರ ನಿಂಬೆಗಾತ್ರದ ಹಿಟ್ಟು ತೆಗೆದುಕೊಂಡು ಬಟ್ಟಲಿನಾಕಾರಕ್ಕೆ ಚಪ್ಪಟೆ ಮಾಡಿ. ಹೂರಣದ ಉಂಡೆಯನ್ನು ಒಳಗೆ ಸೇರಿಸಿ ಮತ್ತು ಅಂಚುಗಳನ್ನು ಮಡಿಸಿ.
ಬಳಿಕ ದುಂಡಗಿನ ಆಕಾರದಲ್ಲಿ ತೆಳುವಾಗಿ ಲಟ್ಟಿಸಿ.
ನಂತರ ಅದನ್ನು ತವಾದಲ್ಲಿ ಹುರಿಯಿರಿ. ಹುರಿಯುವಾಗ ತುಪ್ಪ ಅಥವಾ ಎಣ್ಣೆಯನ್ನು ಸೇರಿಸಿ ಎರಡೂ ಬದಿಗಳನ್ನು ಸ್ವಲ್ಪ ಒತ್ತಿ ಬೇಯಿಸಿ. ಈಗ ಬಿಸಿ ಬಿಸಿಯಾದ ಕ್ಯಾರೆಟ್ ಹೋಳಿಗೆ ರೆಡಿ.

ಬಾದೂಷ

ಬೇಕಾಗುವ ಸಾಮಗ್ರಿಗಳು

ಮೈದಾ ಹಿಟ್ಟು – 1 ಕಪ್
ಸಕ್ಕರೆ – 1 ಕಪ್
ತುಪ್ಪ – 5 ಚಮಚ
ಏಲಕ್ಕಿ – 3
ಅಡುಗೆ ಸೋಡಾ ಒಂದು ‌ಪಿಂಚ್
ನಿಂಬೆರಸ – 4 ಹನಿ
ಮೊಸರು – ಸ್ವಲ್ಪ
ಹುರಿಯಲು ಎಣ್ಣೆ
Saakshatv cooking recipe sweet badoosha

ಮಾಡುವ ವಿಧಾನ:

ಮೊದಲಿಗೆ ಸಕ್ಕರೆ ಪಾಕವನ್ನು ತಯಾರಿಸಿ ಇಟ್ಟುಕೊಳ್ಳಿ. 100ml ನೀರಿಗೆ 1 ಕಪ್ ಸಕ್ಕರೆಯನ್ನು ಹಾಕಿ ಚೆನ್ನಾಗಿ ಕುದಿ ಬರೆಸಿ. ನಂತರ ಇದಕ್ಕೆ ನಿಂಬೆ ರಸ ಹಾಗೂ ಏಲಕ್ಕಿ ಪುಡಿಯನ್ನು ಸೇರಿಸಿ ಪಾಕ ತಯಾರಿಸಿ.

ನಂತರ ಒಂದು ಪಾತ್ರೆಯಲ್ಲಿ ತುಪ್ಪ ಮತ್ತು ಮೊಸರನ್ನು ಸೇರಿಸಿ ಚೆನ್ನಾಗಿ ಕಲಸಿ. ನಂತರ ಅದಕ್ಕೆ ಮೈದಾ ಹಿಟ್ಟನ್ನು ಬೆರೆಸಿ, ಬೇಕಾದರೆ ಸ್ವಲ್ಪ ನೀರನ್ನು ಸೇರಿಸಿ. ಬಳಿಕ ಹಿಟ್ಟನ್ನು ಚೆನ್ನಾಗಿ ನಾದಿ.‌

ಆನಂತರ ನಿಂಬೆ ಗಾತ್ರದ ಸಣ್ಣಸಣ್ಣ ಉಂಡೆಗಳನ್ನು ಮಾಡಿ.
ಕಡಾಯಿಯಲ್ಲಿ ಎಣ್ಣೆ ಹಾಕಿ ಬಿಸಿಮಾಡಿ. ನಂತರ ಮಾಡಿಟ್ಟುಕೊಂಡ ಹಿಟ್ಟಿನ ಉಂಡೆಗಳನ್ನು ಹೊಂಬಣ್ಣಕ್ಕೆ ಬರುವವರೆಗೆ ಹುರಿಯಿರಿ.

ನಂತರ ಇದನ್ನು ತಯಾರಿಸಿ ಇಟ್ಟುಕೊಂಡ ಸಕ್ಕರೆ ಪಾಕಕ್ಕೆ ಸ ಹಾಕಿ 20 ನಿಮಿಷಗಳ ಕಾಲ ಹಾಗೆಯೇ ಬಿಡಿ. ಬೇಕಿದ್ದರೆ ಬಾದಾಮಿ,ಪಿಸ್ತಾ, ಗೋಡಂಬಿಗಳಿಂದ ಅಲಂಕರಿಸಿ.

ಸಿಹಿಯಾದ ಬಾದೂಷ ಸವಿಯಲು ಸಿದ್ಧ.

ಸುಲಭವಾಗಿ ತಯಾರಿಸಿ ಕೇರಳ ಸ್ಟೈಲ್ ಚಿಕನ್ ಫ್ರೈ

ಬೇಕಾಗುವ ಸಾಮಾಗ್ರಿಗಳು

ಚಿಕನ್ – 1/2 kg

ಜೀರಿಗೆ ಪುಡಿ 2 ಟೀಸ್ಪೂನ್

ಕೆಂಪು ಮೆಣಸು – 5 ರಿಂದ 6

ಬೆಳ್ಳುಳ್ಳಿ 5 ರಿಂದ 6 ಎಸಳುಗಳು

ಕರಿಬೇವು – ಸ್ವಲ್ಪ

ರುಚಿಗೆ ತಕ್ಕಷ್ಟು ಉಪ್ಪು

ಹುರಿಯಲು ತೆಂಗಿನ ಎಣ್ಣೆ
Saakshatv cooking recipe chicken fry

ಮಾಡುವ ವಿಧಾನ

ಮೊದಲಿಗೆ ಕೆಂಪು ಮೆಣಸನ್ನು ನೀರಿನಲ್ಲಿ ನೆನೆಸಿ. ನಂತರ ಕೆಂಪು ಮೆಣಸನ್ನು ನೀರಿನಿಂದ ತೆಗೆದು ಜೀರಿಗೆ ಪುಡಿ, ಬೆಳ್ಳುಳ್ಳಿ ಉಪ್ಪು ಮತ್ತು ಕರಿಬೇವಿನ ಸೊಪ್ಪು ಸೇರಿಸಿ ಚೆನ್ನಾಗಿ ರುಬ್ಬಿ ಪೇಸ್ಟ್ ಮಾಡಿ.
ಚಿಕ್ಕದಾಗಿ ಕತ್ತರಿಸಿದ ಚಿಕನ್ ತುಂಡುಗಳನ್ನು ಈ ಪೇಸ್ಟ್ ನಲ್ಲಿ ನೆನೆಸಿ ಮತ್ತು ಅದನ್ನು ಒಂದು ಗಂಟೆ ನೆನೆಸಿಡಿ.
Saakshatv cooking recipe chicken fry

ನಂತರ ಕಡಾಯಿಯಲ್ಲಿ ತೆಂಗಿನ ಎಣ್ಣೆಯನ್ನು ಬಿಸಿ ಮಾಡಿ. ಮಸಾಲೆಯೊಂದಿಗೆ ಚೆನ್ನಾಗಿ ಬೆರೆತ ಕೋಳಿ ಮಾಂಸವನ್ನು ಎಣ್ಣೆಯಲ್ಲಿ ಬಿಡಿ. ಅದನ್ನು ಎಣ್ಣೆಯಲ್ಲಿ 10 ನಿಮಿಷಗಳ ಕಾಲ ಹೊಂಬಣ್ಣಕ್ಕೆ ತಿರುಗುವವರೆಗೆ ಫ್ರೈ ಮಾಡಿ ತೆಗೆಯಿರಿ.
ಈಗ ರುಚಿಯಾದ ಕೇರಳ ಚಿಕನ್ ಫ್ರೈ ಸವಿಯಲು ರೆಡಿಯಾಗಿದೆ.

ನೀವು ಅದನ್ನು ತೆಂಗಿನ ಎಣ್ಣೆಯಲ್ಲಿ ಹುರಿಯುವಾಗ ಇದಕ್ಕೆ ಸ್ವಲ್ಪ ಕರಿಬೇವಿನ ಎಲೆಗಳನ್ನು ಸೇರಿಸಿ. ರೆಡಿಮೇಡ್ ಚಿಕನ್ ಫ್ರೈ ಮಸಾಲಾಗೆ ಹೋಲಿಸಿದರೆ ಇದು ತುಂಬಾ ರುಚಿಕರವಾಗಿರುತ್ತದೆ. ಕೋಳಿ ಮಾಂಸವು ಕಡಿಮೆ ಕೊಬ್ಬಿನ ಪ್ರೋಟೀನ್‌ಗಳನ್ನು ಹೊಂದಿರುತ್ತದೆ. ಸ್ನಾಯುಗಳ ಬೆಳವಣಿಗೆಗೆ ಈ ಪ್ರೋಟೀನ್‌ಗಳು ಅತ್ಯಗತ್ಯ.

ಕಲ್ಲಂಗಡಿ ಹಣ್ಣಿನ ಕೋಲ್ಡ್ ಜ್ಯೂಸ್

ಬೇಕಾಗುವ ಸಾಮಗ್ರಿಗಳು

(ಐದು ಗ್ಲಾಸ್ ಜ್ಯೂಸ್ ತಯಾರಿಸಲು)

ಕಲ್ಲಂಗಡಿ 2 – 21/2 ಕೆಜಿ

ನಿಂಬೆ – 1

ಐಸ್ ಕ್ಯೂಬ್ – 1 ಕಪ್

ಪುದೀನ ಎಲೆಗಳು

ರುಚಿಗೆ ತಕ್ಕಂತೆ ಸಕ್ಕರೆ
Saakshatv cooking recipe how to prepare watermelon juice

ತಯಾರಿಸುವ ವಿಧಾನ

ಮೊದಲಿಗೆ, ಕಲ್ಲಂಗಡಿ ಹಣ್ಣನ್ನು ತೊಳೆದು ತುಂಡುಗಳಾಗಿ ಕತ್ತರಿಸಿ.
ಕತ್ತರಿಸಿದ ನಂತರ, ಕಲ್ಲಂಗಡಿ ಹಣ್ಣಿನ ಹಸಿರು ಸಿಪ್ಪೆಯನ್ನು ತೆಗೆದು ಬೇರ್ಪಡಿಸಿ.
ಈಗ ಉಳಿದ ಕೆಂಪು ಬಣ್ಣವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಈಗ ಎಲ್ಲಾ ಕಲ್ಲಂಗಡಿ ಹಣ್ಣುಗಳ ಸಣ್ಣ ತುಂಡುಗಳನ್ನು ಮಿಕ್ಸರ್ ನಲ್ಲಿ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ.
ಈಗ ಅದನ್ನು ಸೋಸಿ. ನಂತರ ರಸದ ರುಚಿಯನ್ನು ಹೆಚ್ಚಿಸಲು, ಅದಕ್ಕೆ ಒಂದು ನಿಂಬೆಯ ರಸವನ್ನು ಹಿಸುಕಿ. ಬಳಿಕ ಐಸ್ ಕ್ಯೂಬ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಬೇಕಿದ್ದರೆ ಪುದೀನ ಎಲೆಗಳನ್ನು ಸೇರಿಸ ಬಹುದು. ಸಿಹಿ ಬೇಕಿದ್ದರೆ ಸಕ್ಕರೆ ಸೇರಿಸಿ.
ಈಗ ಕಲ್ಲಂಗಡಿ ಹಣ್ಣಿನ ಕೋಲ್ಡ್ ಜ್ಯೂಸ್ ಸಿದ್ಧವಾಗಿದೆ.

ಕ್ಯಾಬೇಜ್ ರೈಸ್

ಬೇಕಾಗುವ ಸಾಮಗ್ರಿಗಳು

ಅಕ್ಕಿ 11/2 ಲೋಟ
ಚಿಕ್ಕದಾಗಿ ಹೆಚ್ಚಿದ ಕ್ಯಾಬೇಜ್ 1/2ಕಪ್
ಆಲೂಗಡ್ಡೆ 1
ಗರಂ ಮಸಾಲ – 1ಚಮಚ
ಕೊತ್ತಂಬರಿ ಪುಡಿ – 1/4 ಚಮಚ
ಅರಸಿನ ಪುಡಿ – 1/4 ಚಮಚ,
ಜೀರಿಗೆ ಪುಡಿ – 1/2ಚಮಚ
ಆಲ್ ಸ್ಪೈಸ್ ಎಲೆ – 3
ಕೊತ್ತಂಬರಿ ಸೊಪ್ಪು – ಸ್ವಲ್ಪ
ತುರಿದ ಶುಂಠಿ – 1/4ಚಮಚ
ತುಪ್ಪ – 3 ಚಮಚ
ರುಚಿಗೆ ತಕ್ಕಷ್ಟು ಉಪ್ಪು
Saakshatv cooking recipe cabbage rice

ಮಾಡುವ ವಿಧಾನ

ಮೊದಲಿಗೆ ಅಕ್ಕಿಯನ್ನು ಚೆನ್ನಾಗಿ ತೊಳೆದು ಇಟ್ಟುಕೊಳ್ಳಿ. ಆಲೂಗೆಡ್ಡೆಯ ಸಿಪ್ಪೆ ತೆಗೆದು ಅದನ್ನು ಚಿಕ್ಕದಾಗಿ ಕತ್ತರಿಸಿಕೊಳ್ಳಿ.
ನಂತರ ಕುಕ್ಕರ್ ನಲ್ಲಿ ತುಪ್ಪ ಬಿಸಿ ಮಾಡಿ. ತುಪ್ಪ ಬಿಸಿಯಾದ ಬಳಿಕ ಅದಕ್ಕೆ ಕತ್ತರಿಸಿದ ಕ್ಯಾಬೇಜ್, ಆಲೂಗಡ್ಡೆ, ಶುಂಠಿ ತುರಿ ಸೇರಿಸಿ ಹುರಿಯಿರಿ. ನಂತರ ಅದಕ್ಕೆ ಅರಿಶಿನ ಪುಡಿ, ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಆಲ್ ಸ್ಪೈಸ್ ಎಲೆ ಹಾಕಿ ಚೆನ್ನಾಗಿ ಬೆರೆಸಿ. ನಂತರ ಅದಕ್ಕೆ ಅಕ್ಕಿ, ರುಚಿಗೆ ತಕ್ಕಷ್ಟು ಉಪ್ಪು, ಅಗತ್ಯವಿರುವಷ್ಟು ನೀರು ಸೇರಿಸಿ. ನಂತರ ಕುಕ್ಕರ್ ಗೆ ಮುಚ್ಚಳವನ್ನು ಮುಚ್ಚಿ 3 ವಿಸಲ್ ಕೂಗಿಸಿ. ನಂತರ ಸಣ್ಣದಾಗಿ ಕತ್ತರಿಸಿದ ಕೊತ್ತಂಬರಿ ಸೊಪ್ಪು ಹಾಕಿ ಬೆರೆಸಿ. ಈಗ ರುಚಿಯಾದ ಕ್ಯಾಬೇಜ್ ರೈಸ್ ರಾಯತದ ಜೊತೆ ಸವಿಯಲು ಸಿದ್ಧವಾಗಿದೆ.

Tags: #saakshatvbadushacookingfood recipiesobbattu
ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram