ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಯುಪಿಯಲ್ಲಿ ಬಿಜೆಪಿ ಗೆಲ್ಲುತ್ತೆ… ಆದ್ರೆ 108 ಸ್ಥಾನಗಳು ಕುಸಿಯುತ್ತೆ… ಕಾರಣ ಲಖಿಂಪುರ ಪ್ರರಣ – ಸಮೀಕ್ಷೆ..!

Namratha Rao by Namratha Rao
November 13, 2021
in National, Newsbeat, ದೇಶ - ವಿದೇಶ
job
Share on FacebookShare on TwitterShare on WhatsappShare on Telegram

ಯುಪಿಯಲ್ಲಿ ಬಿಜೆಪಿ ಗೆಲ್ಲುತ್ತೆ… ಆದ್ರೆ 108 ಸ್ಥಾನಗಳು ಕುಸಿಯುತ್ತೆ… ಕಾರಣ ಲಖಿಂಪುರ ಪ್ರರಣ – ಸಮೀಕ್ಷೆ..!

ನವದೆಹಲಿ: ಉತ್ತರಪ್ರದೇಶದಲ್ಲಿ ಪ್ರಸ್ತುತ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ.. ಇನ್ನೇನು 2022 ರಲ್ಲಿ ವಿಧಾನಸಭಾ ಚುನಾವಣೆಯಿದ್ದು ಈಗಾಗಲೇ ಬಿಜೆಪಿ , ಕಾಂಗ್ರೆಸ್, ಮಾಯಾವತಿ ನೇತೃತ್ವದ ಬಿಎಸ್ ಪಿ ಭರ್ಜರಿ ಪ್ರಚಾರದಲ್ಲಿ ತೊಡಗಿವೆ.. ಪ್ರಣಾಳಿಕೆಗಳಲ್ಲಿ ಹುಬ್ಬೇರಿಸುವಂತಹ ಭರವಸೆಗಳನ್ನೇ ಕಾಂಗ್ರೆಸ್ – ಬಿಜಿಪಿ ನಾಯಕರು ನೀಡಿದ್ದಾರೆ.. ಮತ್ತೊಂದ್ ಕಡೆ ಪ್ರಚಾರ ರ್ಯಾಲಿಗಳು ಭರದಿಂದ ನಡೆಯುತ್ತಿದ್ರೆ, ಎಲ್ಲಾ ಪಕ್ಷಗಳ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪಗಳು ಜಾರಿಯಲ್ಲಿವೆ..

Related posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

June 23, 2026

ಒಟ್ಟಾರೆ ವಿಧಾನಸಭಾ ಚುನಾವಣಾ ಕಾವು ಈಗಿನಿಂದಲೇ ರಂಗೇರಿದೆ.. ಈ ನಡುವೆ ಸಮೀಕ್ಷೆ ವರದಿ ಕೂಡ ಬಂದಿದ್ದು ಗೆಲುವು ಬಿಜೆಪಿಗೆ ಎಂಬ ಫಲಿತಾಂಶ ಹೊರಬಂದಿದೆ. ಆದ್ರೂ ಇದು ಪ್ರಯಾಸದ ಗೆಲುವಾಗಿರಲಿದೆ ಎನ್ನಲಾಗ್ತಿದೆ.. ಹೌದು ಸಮೀಕ್ಷೆ ಪ್ರಕಾರ ಬಿಜೆಪಿ ಈ ಬಾರಿ 108 ಸ್ಥಾನಗಳನ್ನ ಕಳೆದುಕೊಳ್ಳಲಿದೆ ಎನ್ನಲಾಗ್ತಿದೆ.. ಅದ್ರಲ್ಲೂ ಇದಕ್ಕೆ ಮುಖ್ಯ ಕಾರಣ ಲಖೀಮ್ ಪುರ ಹಿಂಸಾಚಾರವೆಂಬ ಅಂಶ ಬಹಿರಂಗವಾಗಿದೆ..

ಹೌದು.. ಈ ಬಾರಿ 108 ಸ್ಥಾನಗಳಲ್ಲಿ ಬಿಜೆಪಿ ಕುಸಿದ್ರೂ , ಸಮಾಜವಾದಿ ಪಕ್ಷದ ಗಳಿಕೆ ಹೆಚ್ಚಾಗಲಿದೆ ಎಂದು ‘ಎಬಿಪಿ-ಸಿ-ವೋಟರ್-ಐಎಎನ್‌ಎಸ್’ ಸಮೀಕ್ಷಾ ವರದಿ ಹೇಳಿದೆ. ಉತ್ತರಾಖಂಡ ಮತ್ತು ಪಂಜಾಬ್‌ ಗಳಲ್ಲಿ ಕಾಂಗ್ರೆಸ್ ಇನ್ನಷ್ಟು ಬಲಯುತವಾಗಲಿದೆ ಎಂದೂ ಸಮೀಕ್ಷೆ ತಿಳಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿಯೇ ಉತ್ತರ ಪ್ರದೇಶದಲ್ಲಿ ಗೆಲ್ಲುವ ನೆಚ್ಚಿನ ಪಕ್ಷವಾಗಿದೆ. ಸಮಾಜವಾದಿ ಪಕ್ಷವೂ ಬೆಳೆಯುತ್ತಿದ್ದು, ಉಭಯ ಪಕ್ಷಗಳ ನಡುವಿನ ಅಂತರ ಕಡಿಮೆಯಾಗುತ್ತಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನೂ ಚುನಾವಣೆ ನಡೆಯಲಿರುವ ರಾಜ್ಯಗಳ 690 ಕ್ಷೇತ್ರಗಳ 1,07,193 ಮಂದಿಯನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು. 403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 217 ಸ್ಥಾನ ಗಳಿಸಲಿವೆ. ಇದು ಕಳೆದ ಬಾರಿಗಿಂತ (325) 108 ಕಡಿಮೆಯಾಗಿದೆ ಎಂದು ಸಮೀಕ್ಷಾ ವರದಿ ಹೇಳಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ವರ್ಚಸ್ಸು ವೃದ್ಧಿಸುತ್ತಿದೆ. ಅವರ ಪಕ್ಷವು 156 ಸ್ಥಾನ ಗಳಿಸಲಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ಮಧ್ಯೆಯೇ ನೇರ ಹಣಾಹಣಿ ಏರ್ಪಡಲಿದೆ. ಎರಡು ಪಕ್ಷಗಳ ನಡುವಣ ಅಂತರ ಸುಮಾರು 60ರಷ್ಟು ಇರಬಹುದು ಎಂದು ಸಮೀಕ್ಷೆ ತಿಳಿಸಿದೆ.

ಬೇರೆ ಗುಂಪಿನ ರಕ್ತ ಹಾಕಿ ವೈದ್ಯರ ಯಡವಟ್ಟು – ಯುವತಿ ಸಾವು

ಉತ್ತರಾಖಂಡದಲ್ಲಿ 38 ಸ್ಥಾನಗಳೊಂದಿಗೆ ಬಿಜೆಪಿಯೇ ಮುಂಚೂಣಿಯಲ್ಲಿದೆ. ಆದರೆ, ಹಿಂದಿನ ಚುನಾವಣೆಯಲ್ಲಿ ಗಳಿಸಿದ್ದ 57ಕ್ಕಿಂತ ಈ ಬಾರಿ 19 ಸ್ಥಾನ ಕಡಿಮೆ ಇದೆ. ಇಲ್ಲಿ ಕಾಂಗ್ರೆಸ್ ತೀವ್ರ ಪೈಪೋಟಿ ನೀಡುತ್ತಿದ್ದು, ಈ ಬಾರಿ 21 ಸ್ಥಾನ ಹೆಚ್ಚು ಗಳಿಸಿ ತನ್ನ ಬಲವನ್ನು 32ಕ್ಕೆ ಹೆಚ್ಚಿಸಿಕೊಳ್ಳಲಿದೆ. ಪಂಜಾಬ್‌ನಲ್ಲಿ ಎಎಪಿ ಮತ್ತು ಕಾಂಗ್ರೆಸ್ ನಡುವಣ ಅಂತರ ಕಡಿಮೆಯಾಗಲಿದೆ. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಎಎಪಿ 51 ಸ್ಥಾನ ಗಳಿಸಲಿದೆ. ಕಾಂಗ್ರೆಸ್ 46 ಸ್ಥಾನ ಗಳಿಸಲಿದೆ. ಕಳೆದ ಬಾರಿ ಕಾಂಗ್ರೆಸ್ 77 ಸ್ಥಾನ ಗಳಿಸಿತ್ತು. ಅಕಾಲಿ ದಳ 20 ಸ್ಥಾನಗಳೊಂದಿಗೆ 3ನೇ ಸ್ಥಾನದಲ್ಲಿದೆ.

40 ಸದಸ್ಯ ಬಲದ ವಿಧಾನಸಭೆಯ ಗೋವಾದಲ್ಲಿ 21 ಸ್ಥಾನದೊಂದಿಗೆ ಬಿಜೆಪಿಯೇ ಮುಂಚೂಣಿಯಲ್ಲಿದೆ. ಸಮೀಕ್ಷೆಯಲ್ಲಿ ಇತರರಿಗೆ 10, ಎಎಪಿಗೆ 5 ಹಾಗೂ ಕಾಂಗ್ರೆಸ್‌ಗೆ 4 ಸ್ಥಾನ ದೊರೆತಿವೆ. 60 ಸದಸ್ಯ ಬಲದ ವಿಧಾನಸಭೆಯ ಮಣಿಪುರದಲ್ಲಿ 27 ಸ್ಥಾನಗಳೊಂದಿಗೆ ಬಿಜೆಪಿ ಮುಂಚೂಣಿಯಲ್ಲಿದೆ. ಕಾಂಗ್ರೆಸ್ 22 ಸ್ಥಾನ ಗಳಿಸಿರುವುದಾಗಿ ಸಮೀಕ್ಷಾ ವರದಿ ತಿಳಿಸಿದೆ.

ಸಿದ್ದರಾಮಯ್ಯ , ಡಿಕೆಶಿ ವಿರುದ್ಧ ಬಿಜೆಪಿ ಟ್ವೀಟ್ ವಾರ್…!

Tags: #saakshatvBJPcongress electionsindiauttara pradeshyogi-adithyanath
ShareTweetSendShare
Join us on:

Related Posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram