ದಿಲ್ಲಿ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷದೊಳಗಿನ ಭಿನ್ನ ಮತ, ಬೇಗುದಿಯನ್ನು ಹೆಚ್ಚಿಸಿದೆ.
ಹಿರಿಯ ನಾಯಕರು ಬಹಿರಂಗವಾಗಿಯೇ ಕೆಲವು ನಾಯಕರ ಧೋರಣೆಯನ್ನು ಟೀಕಿಸಿದ್ದಾರೆ.
ಮಾಜಿ ಕೇಂದ್ರ ಸಚಿವ ಜೈರಾಂ ರಮೇಶ್ ಟ್ವಿಟರ್ ನಲ್ಲಿ, ನಾವು ಅಧಿಕಾರ ಕಳೆದುಕೊಂಡು ವರ್ಷ ಆರಾಗಿದ್ದರೂ, ಕೆಲವು ನಾಯಕರು ಇನ್ನೂ ಅಧಿಕಾರದಲ್ಲಿರುವಂತೆ ವರ್ತಿಸುತ್ತಿದ್ದಾರೆ. ಅವರೆಲ್ಲಾ ಆತ್ಮವಿಮರ್ಶೆ ಮಾಡಿಕೊಳ್ಳಬೇಕೆಂದು ಟ್ವೀಟ್ ಮಾಡಿದ್ದಾರೆ.
ಇನ್ನೊಬ್ಬ ಮಾಜಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಟ್ವೀಟ್ ಮಾಡಿ ದಿಲ್ಲಿ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಾಲಿಗೆ ನಿರಾಶಾದಾಯಕ. ಜನರನ್ನು ತಲುಪಲು ನಾವು ಹೊಸ ಧ್ಯೇಯ, ಹೊಸ ಕಾರ್ಯತಂತ್ರದೊಂದಿಗೆ ಹೊಸ ದಿಕ್ಕಿನಲ್ಲಿ ಸಾಗಬೇಕಿದೆ ಎಂದಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರಿ, ಶರ್ಮಿಷ್ಠ ಮುಖರ್ಜಿ ಬಿಜೆಪಿಯನ್ನು ಸೋಲಿಸಲು ನಾವು ಬೇರೆಯವರಿಗೆ ಹೊರಗುತ್ತಿಗೆ ನೀಡಿದ್ದೇವೆಯೇ? ಇಲ್ಲ ಎಂದಾದರೆ ನಾವು ನಮ್ಮ ಸೋಲಿನ ಬಗ್ಗೆ ಯೋಚಿಸದೆ ಅಪ್ ನ ವಿಜಯಕ್ಕೆ ಏಕೆ ಸಂತೋಷಪಡಬೇಕು? ಹೌದು ಎಂದಾದರೆ ನಾವು ನಮ್ಮ ‘ಅಂಗಡಿಯನ್ನು’ ಮುಚ್ಚುವುದು ಒಳ್ಳೆಯದಲ್ಲವೇ ಎಂದು ಟ್ವೀಟ್ ಮಾಡಿ ಅಪ್ ಗೆಲುವಿಗೆ ಸಂತೋಷ ವ್ಯಕ್ತಪಡಿಸಿದ ಮಾಜಿ ಸಚಿವ ಪಿ.ಚಿದಂಬರಂನ್ನು ತರಾಟೆಗೆ ತೆಗೆದುಕೊಂಡಿದ್ದರು.
ಆರ್ಎಸ್ಎಸ್ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್ ಭಾಗವತ್ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...







