ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಂಬಿ ಅಭಿಮಾನಿಗಳ ಬೇಡಿಕೆಗೆ ಬೇಸರ ವ್ಯಕ್ತಪಡಿಸಿದ ಸುಮಲತ ಅಂಬರೀಶ್

Naveen Kumar B C by Naveen Kumar B C
November 23, 2021
in Cinema, Newsbeat, ಮನರಂಜನೆ
MP Sumalatha
Share on FacebookShare on TwitterShare on WhatsappShare on Telegram

ಅಂಬಿ ಅಭಿಮಾನಿಗಳ ಬೇಡಿಕೆಗೆ ಬೇಸರ ವ್ಯಕ್ತಪಡಿಸಿದ ಸುಮಲತ ಅಂಬರೀಶ್

ಪುನೀತ್ ಅಮರರಾದ ನಂತರ ಅವರ ಹೆಸರನ್ನ ಚಿರಸ್ಥಾಯಿಯಾಗಿಸಲು ಹಲವು ಕೆಲಸಗಳು ಕರ್ನಾಟಕದಲ್ಲಿ ನಡೆಯುತ್ತಿವೆ. ಅಪ್ಪು ಅವರಿಗೆ ‘ಕರ್ನಾಟಕ ರತ್ನ’  ಪ್ರಶಸ್ತಿ ನೀಡಿ ಅವರ ಹೆಸರನ್ನ ಅಮರವಾಗಿಸಿದೆ.

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

ಅದೇ ರೀತಿ ಅಂಬರೀಶ್ ಅವರಿಗೂ ಇಂಥಹ ಗೌರವಗಳನ್ನ ಕೊಡಬೇಕು ಎಂದು ಅಂಬಿ ಅಭಿಮಾನಿಗಳು ಬೇಡಿಕೆ ಇಡುತ್ತಿದ್ದಾರೆ. ಅದೇ ರೀತಿ ಬೀದಿಗಿಳಿದು ಹೋರಾಟ ಮಾಡುವ ಬಗ್ಗೆ ಎಚ್ಚರಿಸಿದ್ದಾರೆ,  ಇದು ಸುಮಲತ ಅಂಬರೀಶ್ ಅವರ ಗಮನಕ್ಕೆ ಬಂದಿದ್ದು ಬೇಸರ ವ್ಯಕ್ತ ಪಡಿಸಿದ್ದಾರೆ.

ನನ್ನ ಮನವಿ

ನಮ್ಮ ಪ್ರೀತಿಯ ಡಾ|| ಅಂಬರೀಶ್ ಅವರನ್ನು ಆರಾಧ್ಯ ದೈವದಂತೆ ಪ್ರೀತಿಸಿ, ಅವರ ನೆನಪನ್ನು ಚಿರಸ್ಥಾಯಿಯಾಗಿ ಬೆಳಗಿಸುತ್ತಿರುವ ನೆಚ್ಚಿನ ಅಭಿಮಾನಿ ಸಂಘಗಳು ಹಾಗೂ ಇನ್ನಿತರ ಸಂಘಟನೆಗಳು ಇಂದು ಅಂಬರೀಶ್ ಅವರ ಸ್ಮಾರಕ ಅಭಿವೃದ್ಧಿಗೊಳಸುವುದು, ಅವರ ಹೆಸರಿನಲ್ಲಿ ರಸ್ತೆಗಳನ್ನು ನಾಮಕರಣ ಮಾಡುವುದು ಮತ್ತು ಇನ್ನಿತರ ಬೇಡಿಕೆಗಳನ್ನು ಒತ್ತಾಯಿಸಿ ಹೋರಾಟ ಮಾಡುವುದಾಗಿ ಹೇಳಿರುವುದು ಸಾಮಾಜಿಕ ಜಾಲತಾಣಗಳ ಮೂಲಕ ನನ್ನ ಗಮನಕ್ಕೆ ಬಂದಿದೆ.

ನಮ್ಮ ಕುಟುಂಬದೊಂದ್ಧಗೆ ಅತಿ ಹೆಚ್ಚು ಒಡನಾಟ ಹೊಂದಿದ್ದ ಹಾಗೂ ನಮ್ಮ ಮನೆ ಮಗನಂತಿದ್ದ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡಿರುವ ಆಘಾತಕಾರಿ ಘಟನೆಯಿಂದ ನನಗಾಗಿರುವ ನೋವನ್ನು ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ.

ಇದರೊಂದಿಗೆ ಚಿತ್ರರಂಗ, ಅಭಿಮಾನಿಗಳು, ಹಾಗೂ ಕರ್ನಾಟಕ ರಾಜ್ಯದ ಜನತೆಗೆ ತುಂಬಲಾರದಂತ ನಷ್ಟ ಉಂಟಾಗಿದ್ದು, ಈ ಸಮಯದಲ್ಲಿ ತಾವುಗಳು ಹೋರಾಟ ಮಾಡುವ ನಿರ್ಧಾರ ಮಾಡಿರುವುದು ಎಲ್ಲರ ಹೃದಯದ ಮೇಲೆ ಆಗಿರುವ ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ. ಆದುದರಿಂದ, ಈ ಸಮಯದಲ್ಲಿ ಈ ವಿಷಯ ಪ್ರಸ್ತಾಪಿಸುವುದು ಸಮಂಜಸವಲ್ಲ.

ನಿಮ್ಮ ಭಾವನೆಗಳನ್ನು ನಾನು ಗೌರವಿಸುತ್ತೇನೆ, ಆದರೆ ಪ್ರಸ್ತುತ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದರಿಂದ ಅಂಬರೀಷ್ ಅವರ ಘನತೆ ಹಾಗೂ ಗೌರವಕ್ಕೆ ಧಕ್ಕೆಯಾಗುತ್ತದೆ. ಯಾವುದೇ ಪ್ರಶಸ್ತಿಯಾದರು ಕೇಳಿ ಪಡೆಯುವುದು ಅತಿಶಯೋಕ್ತಿಯಾಗಬಾರದು.

ಎಲ್ಲಾ ಪ್ರಶಸ್ತಿಗಳನ್ನು ಮೀರಿದಂತ ಪ್ರೀತಿ ಮತ್ತು ಅಭಿಮಾನವನ್ನು ನೀವುಗಳು ನಮ್ಮ ಕುಟುಂಬಕ್ಕೆ ನೀಡಿದ್ದೀರಿ. ಅಂಬರೀಷ್ ಅವರು ತಮ್ಮ ಜೀವನದಲ್ಲಿ ಯಾವ ಪ್ರಶಸ್ತಿ, ಹುದ್ದೆ ಅಥವಾ ಸನ್ಮಾನವನ್ನು ಬಯಸಿದವರಲ್ಲ. ಹೀಗಾಗಿ ಅಂಬರೀಷ್ ಅವರ ಅಭಿಮಾನಿಗಳಾಗಿ ತಾವುಗಳು ಸಹ ಅವರ ಹಾದಿಯಲ್ಲಿ ನಡೆಯಬೇಕು ಎನ್ನುವುದು ನನ್ನ ಆಶಯ. ಆದುದರಿಂದ, ಈ ಸಮಯದಲ್ಲಿ ಪ್ರಶಸ್ತಿ ಕೋರಿ ಹೋರಾಟ ಅಥವಾ ಪ್ರತಿಭಟನೆ ನಡೆಸುವುದು ಅಂಬರೀಷ್ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ವಿಷಯವಾಗಿದೆ.

ಆದುದರಿಂದ, ತಮ್ಮೆಲ್ಲರ ಅಭಿಮಾನ ಮತ್ತು ಪ್ರೀತಿ-ವಾತ್ಸಲ್ಯಗಳನ್ನು ಗೌರವಿಸುತ್ತ, ಹಾಗೂ ನಿಮ್ಮೆಲ್ಲರ ಆಸೆಯನ್ನು ಮುಂದಿನ ದಿನಗಳಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಈಡೇರಿಸುತ್ತದೆ ಎಂದು ಮಾನ್ಯ ಮುಖ್ಯಮಂತ್ರಿಗಳ ಮೇಲೆ ಭರವಸೆಯನ್ನು ಇಡುತ್ತಾ, ತಾವು ತೆಗೆದುಕೊಂಡಿರುವ ಈ ಹೋರಾಟದ ನಿರ್ಧಾರವನ್ನು ಹಿಂಪಡೆದು ನವೆಂಬರ್ 24ನೇ ತಾರೀಕಿನಂದು ಅಂಬರೀಷ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯನ್ನು ಶಾಂತಿಯುತವಾಗಿ ನೆರವೇರಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರೋಣ ಎಂದು ತಮ್ಮಲ್ಲಿ ಕಳಕಳಿಯಿಂದ ಪ್ರಾರ್ಥಿಸುತ್ತೇನೆ.

ವಂದನೆಗಳೊಂದಿಗೆ
ತಮ್ಮ ವಿಶ್ವಾಸಿ

(ಸುಮಲತಾ ಅಂಬರೀಷ್)

Tags: ambi fanskarnatakasaakshaatvSumalatha Ambarish
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram