ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆರ್ ಸಿಬಿಗೂ ಬೇಕು.. ಲಖನೌಗೂ ಬೇಕು.. ರಾಹುಲ್ ಗೆ ಯಾಕಿಷ್ಟು ಡಿಮ್ಯಾಂಡ್..?

Mahesh M Dhandu by Mahesh M Dhandu
November 25, 2021
in Newsbeat, Sports, ಕ್ರೀಡೆ
KL Rahul
Share on FacebookShare on TwitterShare on WhatsappShare on Telegram

ಆರ್ ಸಿಬಿಗೂ ಬೇಕು.. ಲಖನೌಗೂ ಬೇಕು.. ರಾಹುಲ್ ಗೆ ಯಾಕಿಷ್ಟು ಡಿಮ್ಯಾಂಡ್..?

ಟೀಂ ಇಂಡಿಯಾದ ರಾಕಿಂಗ್ ಸ್ಟಾರ್ ಕೆ.ಎಲ್.ರಾಹುಲ್ ಸದ್ಯ ಕ್ರಿಕೆಟ್ ಜಗತ್ತಿನ ಭಾರಿ ಹವಾ ಮಾಡುತ್ತಿದ್ದಾರೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಟೆಸ್ಟ್, ಏಕದಿನ, ಟಿ 20, ಪ್ರಿಮಿಯರ್ ಲೀಗ್ ಹೀಗೆ ಎಲ್ಲಾ ಕಡೆ ಕನ್ನಡಿಗನ ಬ್ಯಾಟ್ ಘರ್ಜಿಸುತ್ತಿದೆ.

ಈ ಮಧ್ಯೆ ಇಂಡಿಯನ್ ಪ್ರಿಮಿಯರ್ ಲೀಗ್ ನ 15ನೇ ಆವೃತ್ತಿಯಲ್ಲಿ ರಾಹುಲ್ ಗೆ ಭಾರಿ ರಿಮ್ಯಾಂಡ್ ಕ್ರಿಯೇಟ್ ಆಗಿದೆ.

ಮೂಲಗಳ ಪ್ರಕಾರ ರಾಹುಲ್, ಪಂಜಾಬ್ ತಂಡವನ್ನು ತ್ಯಜಿಸೋದು ಪಕ್ಕಾ ಆಗಿದೆ. ಹಾಗಾದ್ರೆ ರಾಹುಲ್ ಯಾವ ತಂಡ ಸೇರಲಿದ್ದಾರೆ.

kl rahul saakshatv team india

ಯಾವ ತಂಡ ರಾಹುಲ್ ಅವರನ್ನು ಖರೀದಿಸಲಿದೆ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡಿದೆ.

ಈ ಮಧ್ಯೆ ಲಖನೌ ತಂಡಕ್ಕೆ ರಾಹುಲ್ ಕ್ಯಾಪ್ಟನ್ ಆಗಲಿದ್ದಾರೆ ಅನ್ನೋ ಸುದ್ದಿ ಕೂಡ ಹರಿದಾಡುತ್ತಿದೆ.

ಇನ್ನೊಂದು ಕುತೂಹಲಕಾರಿ ಸಂಗತಿ ಏನಂದರೇ ರಾಹುಲ್ ಟ್ವಿಟ್ಟರ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನ ಫಾಲೋ ಮಾಡುತ್ತಿದ್ದಾರೆ.

ಇದನ್ನ ಗಮನಿಸಿದರೇ ರಾಹುಲ್ ಪಂಜಾಬ್ ತಂಡ ಬಿಡೋದು ಗ್ಯಾರಂಟಿ.. ಆದ್ರೆ ಅವರು ಸೇರಲಿರುವ ತಂಡ ಯಾವುದು..?

ಅದರಲ್ಲೂ ಅಂದಹಾಗೆ ರಾಹುಲ್ ಗಾಗಿ ಬರೋಬ್ಬರಿ ಐದು ತಂಡಗಳು ಕ್ಯೂನಲ್ಲಿವೆ.

ಅದರಲ್ಲಿ ಮುಖ್ಯವಾಗಿ ಅಹ್ಮದಾಬಾದ್, ಲಖನೌ, ಆರ್ ಸಿಬಿ, ಎಸ್ ಆರ್ ಎಚ್, ಆರ್ ಆರ್ ತಂಡಗಳು ರಾಹುಲ್ ಗೆ ಗಾಳ ಹಾಕಲು ಸಜ್ಜಾಗಿವೆ.

kl rahul saakshatv team india

ರಾಹುಲ್ ಗೆ ಯಾಕಿಷ್ಟು ಡಿಮ್ಯಾಂಡು..!

ಕಿಂಗ್ ಕೊಹ್ಲಿ, ಹಿಟ್ ಮ್ಯಾನ್ ರೋಹಿತ್ ಶರ್ಮಾ ಬಳಿಕ ಟೀಂ ಇಂಡಿಯಾದ ಆಧಾರ ಸ್ತಂಭ ಯಾರು..? ಎಂಬ ಪ್ರಶ್ನೆಗೆ ತಟ್ ಅಂತ ಬರೋ ಉತ್ತರ ಕೆ.ಎಲ್.ರಾಹುಲ್..!

ಸದ್ಯ ಟೀಂ ಇಂಡಿಯಾದಲ್ಲಿ ವಿರಾಟ್ ಮತ್ತು ರೋಹಿತ್ ಶರ್ಮಾ ಬ್ಯಾಟಿಂಗ್ ದರ್ಬಾರ್ ನಡೆಸುತ್ತಿದ್ದಾರೆ.

ಅದೆಷ್ಟೋ ಮ್ಯಾಚ್ ಗಳನ್ನು ಈ ಇಬ್ಬರು ಆಟಗಾರರು ಸಿಂಗಲ್ ಹ್ಯಾಂಡೆಡ್ ಆಗಿ ಗೆಲ್ಲಿಸಿಕೊಟ್ಟಿದ್ದಾರೆ.

ಆದ್ರೆ ಇವರ ಬಳಿಕ ಯಾರು ಅಂತ ಪ್ರಶ್ನೆ ಬಂದ್ರೆ ಸದ್ಯದ ಮಟ್ಟಿಗೆ ಆ ಭರವಸೆಯನ್ನ ಮೂಡಿಸಿರುವುದು ಕನ್ನಡಿಗ ಕೆ.ಎಲ್.ರಾಹುಲ್..!!

ಹೌದು..! ಈಗಿನ ಕ್ರಿಕೆಟರ್ಸ್ ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಬಳಿಕ ಒಬ್ಬ ಟಾಪ್ ಕ್ಲಾಸ್ ಕ್ರಿಕೆಟರ್ ಅಂದ್ರೆ ಅದು ಕೆ.ಎಲ್.ರಾಹುಲ್.

ಇದ್ರಲ್ಲಿ ಯಾವುದೇ ಅನುಮಾನ ಪಡುವ ಅವಶ್ಯಕತೆಯೇ ಇಲ್ಲ. ಯಾಕೆಂದ್ರೆ ರಾಹುಲ್ ಪಕ್ಕಾ ಕ್ಲಾಸ್ ಪ್ಲೇಯರ್.

ಗ್ಯಾಪ್ ಹುಡುಕುವುದು, ಟೈಮಿಂಗ್, ಬ್ಯಾಟಿಂಗ್ ಟೆಕ್ನಿಕ್, ರೇಂಜಿಂಗ್ ಶಾಟ್ಸ್ ಸೇರಿದಂತೆ ಕ್ರಿಕೆಟ್ ಬುಕ್ ನ ಎಲ್ಲ ಶಾಟ್ ಗಳನ್ನ ರಾಹುಲ್ ಕರಗತ ಮಾಡಿಕೊಂಡಿದ್ದಾರೆ.

ಮುಖ್ಯವಾಗಿ ಭಾರತೀಯ ಕ್ರಿಕೆಟ್ ನಲ್ಲಿ ಕೆಲ ಅಪರೂಪದ ಬ್ಯಾಟ್ಸ್ ಮೆನ್ ಗಳು ಮಾತ್ರ ಸ್ವೀಪ್ ಶಾಟ್ ಗಳನ್ನ ಆಡುತ್ತಾರೆ. ಅದರಲ್ಲಿ ರಾಹುಲ್ ಕೂಡ ಒಬ್ಬರು..!

ರಾಹುಲ್ ಸ್ವೀಪ್ ಜೊತೆಗೆ ರಿವರ್ಸ್ ಸ್ವೀಪ್ ಕೂಡ ಮಾಡುವುದು ವಿಶೇಷ. ಕೇವಲ ಕ್ಲಾಸ್ ಶಾಟ್ ಗಳಲ್ಲದೇ ಬಿಗ್ ಸಿಕ್ಸರ್ ಗಳನ್ನ ಹೊಡೆಯೋದ್ರಲ್ಲಿ ರಾಹುಲ್ ಪಂಟರ್.

kl rahul saakshatv team india

ಒಂದೇ ಮಾತಿನಲ್ಲಿ ಹೇಳೋದಾದ್ರೆ ರಾಹುಲ್ ಬ್ಯಾಟಿಂಗ್ ನಲ್ಲಿ ವಿರಾಟ್ ಕೊಹ್ಲಿಯ ಕ್ಲಾಸ್, ರೋಹಿತ್ ರ ಮಾಸ್ ಎರಡೂ ಒಳಗೊಂಡಿರುತ್ತೆ.

ಯಾವುದೇ ರೀತಿಯಿಂದ ನಾವು ಯೋಚನೆ ಮಾಡಿದ್ರೂ ಕೆ.ಎಲ್. ರಾಹುಲ್, ವಿರಾಟ್, ರೋಹಿತ್ ರ ಉತ್ತರಾಧಿಕಾರಿ ಅನ್ನೋದ್ರಲ್ಲಿ ಡೌಟೇ ಇಲ್ಲ.

ಇದಲ್ಲದೇ ಟಿ20 ಮಾದರಿ ಯಲ್ಲಿ ರಾಹುಲ್ ಉತ್ತಮ ದಾಖಲೆ ಹೊಂದಿದ್ದಾರೆ. ಇತ್ತೀಚೆಗಷ್ಟೇ ಟೀಂ ಇಂಡಿಯಾದ ಉಪ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಇದು ಯಾವುದೇ ಫ್ರಾಂಚೈಸಿಯ ಬ್ರ್ಯಾಂಡ್ ವಾಲ್ಯೂ ಹೆಚ್ಚಿಸುತ್ತದೆ. ಐಪಿಎಲ್‍ನಲ್ಲಿ ರಾಹುಲ್ ಅವರ ಅಂಕಿಅಂಶಗಳು ಇತರ ಆಟಗಾರರಿಗಿಂತ ಉತ್ತಮವಾಗಿವೆ.

ನಾಲ್ಕು ಋತುಗಳಲ್ಲಿ 550ಕ್ಕೂ ಹೆಚ್ಚು ರನ್ ಗಳಿಸಿರುವ ರಾಹುಲ್ ನಾಲ್ಕು ಬಾರಿ ಆರೆಂಜ್ ಕ್ಯಾಪ್ ಗೆದ್ದಿದ್ದಾರೆ.

ವಿಕೆಟ್-ಕೀಪರ್-ಬ್ಯಾಟ್ಸ್‍ಮನ್ ಆಗಿ ತಂಡಕ್ಕೆ ಹೆಚ್ಚುವರಿ ಶಕ್ತಿ. ಐಪಿಎಲ್-2021ರ ಋತುವಿನಲ್ಲಿ ರಾಹುಲ್ 13 ಇನ್ನಿಂಗ್ಸ್‍ಗಳಲ್ಲಿ 626 ರನ್ ಗಳಿಸಿದ್ದರು.

ಔಟಾಗದೆ 98 ರನ್ ಗಳಿಸಿದ್ದು ಗರಿಷ್ಠ ಸ್ಕೋರ್. ದೇಶದಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ರಾಹುಲ್ ಮೂರನೇ ಸ್ಥಾನದಲ್ಲಿದ್ದಾರೆ.

Tags: #Saaksha TVCricketipl 2022k l rahulRCB
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram