ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ಸಿಂಪಲ್ ಮತ್ತು ಟೇಸ್ಟಿ ಅಡುಗೆ ರೆಸಿಪಿಗಳು..!

Namratha Rao by Namratha Rao
November 26, 2021
in Cooking, Newsbeat, ಅಡುಗೆ
food
Share on FacebookShare on TwitterShare on WhatsappShare on Telegram

5 ಸಿಂಪಲ್ ಮತ್ತು ಟೇಸ್ಟಿ ಅಡುಗೆ ರೆಸಿಪಿಗಳು..!

ಹೆಸರುಬೇಳೆ ಪಾಯಸ

ಬೇಕಾಗುವ ಸಾಮಗ್ರಿಗಳು

ಹೆಸರುಬೇಳೆ – 1 ಕಪ್
ಪುಡಿ ಮಾಡಿದ ಬೆಲ್ಲ – 11/2 ಕಪ್
ತೆಂಗಿನಕಾಯಿ ತುರಿ – 3/4 ಕಪ್
ಗೋಡಂಬಿ,ದ್ರಾಕ್ಷಿ, ಬಾದಾಮಿ – ಸ್ವಲ್ಪ
ಏಲಕ್ಕಿ ಪುಡಿ – 1ಚಮಚ
ಗಸಗಸೆ – 1ಚಮಚ
ತುಪ್ಪ- 1 ಚಮಚ

Related posts

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

July 2, 2026
ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

July 2, 2026

ಮಾಡುವ ವಿಧಾನ
Saakshatv cooking recipe hesarubele payasa

ಮೊದಲಿಗೆ ಗಸಗಸೆ, ತೆಂಗಿನಕಾಯಿ ತುರಿ, ಬಾದಾಮಿ ಗೋಡಂಬಿ ಒಣದ್ರಾಕ್ಷಿಯನ್ನು ಮಿಕ್ಸಿ ಜಾರಿನಲ್ಲಿ ಹಾಕಿ ಸ್ವಲ್ಪ ನೀರು ಹಾಕಿ ರುಬ್ಬಿ ಪೇಸ್ಟ್ ಮಾಡಿ.
ನಂತರ ಒಂದು ಪ್ಯಾನ್ ನಲ್ಲಿ ತುಪ್ಪ ಹಾಕಿ ಹೆಸರುಬೇಳೆಯನ್ನು ಹುರಿಯಿರಿ. ನಂತರ ಕುಕ್ಕರ್ ನಲ್ಲಿ ಅಗತ್ಯವಿರುವಷ್ಟು ನೀರು ‌ಸೇರಿಸಿ 3 ವಿಸಲ್ ಬರುವವರೆಗೆ ಚೆನ್ನಾಗಿ ಬೇಯಿಸಿ, ಮ್ಯಾಶ್ ಮಾಡಿಟ್ಟುಕೊಳ್ಳಿ.
ಒಂದು ಪಾತ್ರೆಯಲ್ಲಿ ಸ್ವಲ್ಪ ನೀರು ಸೇರಿಸಿ ಅದಕ್ಕೆ ಪುಡಿ ಮಾಡಿದ ಬೆಲ್ಲ ಸೇರಿಸಿ ಚೆನ್ನಾಗಿ ಕಲಸಿ. ನಂತರ ಅದಕ್ಕೆ ಮ್ಯಾಶ್ ಮಾಡಿದ ಹೆಸರುಬೇಳೆಯನ್ನು ಸೇರಿಸಿ. ಅದಕ್ಕೆ ರುಬ್ಬಿಟ್ಟುಕೊಂಡ ಮಿಶ್ರಣವನ್ನು ಸೇರಿಸಿ, ಏಲಕ್ಕಿ ಪುಡಿ ಹಾಕಿ ಚೆನ್ನಾಗಿ ಕಲಸಿ. ಅಗತ್ಯವಿರುವಷ್ಟು ನೀರನ್ನು ಸೇರಿಸಿ ಕುದಿ ಬರಿಸಿ. ಈಗ ಬಿಸಿ ಬಿಸಿ ಹೆಸರುಬೇಳೆ ಪಾಯಸ ಸವಿಯಲು ಸಿದ್ಧವಾಗಿದೆ.

ರವೆ ಲಾಡು

ಬೇಕಾಗಿರುವ ಪದಾರ್ಥಗಳು

ಚಿರೋಟಿ ರವೆ 1ಕಪ್
ತೆಂಗಿನಕಾಯಿ ತುರಿ 1 ಕಪ್
ಸಕ್ಕರೆಹುಡಿ 1 ಕಪ್
ಏಲಕ್ಕಿ ಪುಡಿ – 1/4 ಚಮಚ
ತುಪ್ಪ – 4 ಚಮಚ
ದ್ರಾಕ್ಷಿ, ಗೋಡಂಬಿ, ಬಾದಾಮಿ ಇತ್ಯಾದಿ – ಅಗತ್ಯವಿರುವಷ್ಟು
Saakshatv cooking recipe rave laddu

ಮಾಡುವ ವಿಧಾನ

ಮೊದಲಿಗೆ ಬಾಣಲೆಯಲ್ಲಿ ತುಪ್ಪ ಹಾಕಿ ಬಿಸಿ ಮಾಡಿ. ‌ ನಂತರ ಅದರಲ್ಲಿ ದ್ರಾಕ್ಷಿ, ಗೋಡಂಬಿ, ಬಾದಾಮಿಯನ್ನು ಹುರಿದು ಪಕ್ಕದಲ್ಲಿ ಇಟ್ಟುಕೊಳ್ಳಿ. ನಂತರ ಅದೇ ಬಾಣಲೆಯಲ್ಲಿ ಸಣ್ಣ ಉರಿಯಲ್ಲಿ ಚಿರೋಟಿ ರವೆಯನ್ನು ಅದರ ಹಸಿ ವಾಸನೆ ಹೋಗುವವರೆಗೆ ಹುರಿಯಿರಿ. ನಂತರ ತಣ್ಣಗಾಗಲು ಬಿಡಿ.
ಬಳಿಕ ಒಂದು ಮಿಕ್ಸಿಂಗ್ ಬೌಲ್ ತೆಗೆದುಕೊಂಡು ಅದಕ್ಕೆ ತೆಂಗಿನಕಾಯಿ ತುರಿ, ಸಕ್ಕರೆ ಪುಡಿ, ಏಲಕ್ಕಿ ಪುಡಿ, ಹುರಿದ ದ್ರಾಕ್ಷಿ, ಗೋಡಂಬಿ, ಬಾದಾಮಿ, ಚಿರೋಟಿ ರವೆ ಸೇರಿಸಿ ಚೆನ್ನಾಗಿ ಕಲಸಿ. ಬಳಿಕ 30 ನಿಮಿಷಗಳ ಕಾಲ ಹಾಗೆಯೇ ಬಿಡಿ. ಬೇಕಿದ್ದರೆ ಸ್ವಲ್ಪ ಹಾಲನ್ನು ಸೇರಿಸಿ ಕಲಸಿ. ನಂತರ ಉಂಡೆ ಕಟ್ಟಿ. ಈಗ ರುಚಿಯಾದ ರವೆ ಲಾಡು ಸವಿಯಲು ಸಿದ್ಧವಾಗಿದೆ.

ಬಟಾಟೆ ಬೋಂಡಾ

ಬೇಕಾಗುವ ಸಾಮಗ್ರಿಗಳು

ಸಾಸಿವೆ – 1/2 ಚಮಚ
ಉದ್ದಿನ ಬೇಳೆ -1/2 ಚಮಚ
ಹಸಿಮೆಣಸಿನಕಾಯಿ – 2
ಶುಂಠಿ ತುರಿ – 1 ಚಮಚ
ಕರಿಬೇವಿನ ಸೊಪ್ಪು – ಸ್ವಲ್ಪ
ಬೇಯಿಸಿದ ಬಟಾಣಿ – 1/2 ಕಪ್
ಬೇಯಿಸಿದ ಬಟಾಟೆ – 2
ರುಚಿಗೆ ತಕ್ಕಷ್ಟು ಉಪ್ಪು
ಕೊತ್ತಂಬರಿ ಸೊಪ್ಪು ಸ್ವಲ್ಪ
ಹುರಿಯಲು ಎಣ್ಣೆ

ಕಡ್ಲೆಹಿಟ್ಟು – 1 ಕಪ್
ಅಕ್ಕಿ ಹಿಟ್ಟು – 1 ಚಮಚ
ಕೆಂಪು ಮೆಣಸಿನ ಪುಡಿ – 1/2 ಚಮಚ
ಅಜ್ವೈನ್ – 1/4 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಬಿಸಿ ಎಣ್ಣೆ – 1 ಚಮಚ
ಅಗತ್ಯವಿರುವಷ್ಟು ನೀರು
Saakshatv cooking recipe

ಮಾಡುವ ವಿಧಾನ

ಮೊದಲಿಗೆ ಬಟಾಟೆಗಳನ್ನು ಬೇಯಿಸಿ ಚೆನ್ನಾಗಿ ಮ್ಯಾಶ್ ಮಾಡಿ.‌ ನಂತರ ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಅದಕ್ಕೆ ಸಾಸಿವೆ ಸೇರಿಸಿ. ಸಾಸಿವೆ ಸಿಡಿದ ನಂತರ ಉದ್ದಿನ ಬೇಳೆ, ಹಸಿ ಮೆಣಸಿನಕಾಯಿ, ಶುಂಠಿ, ಕರಿಬೇವಿನ ಸೊಪ್ಪು ಸೇರಿಸಿ ಹುರಿಯಿರಿ. ಬಳಿಕ ಅದಕ್ಕೆ ಬಟಾಣಿ ಮತ್ತು ಮ್ಯಾಶ್ ಮಾಡಿದ ಬಟಾಟೆಗಳನ್ನು ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ಈ ಮಿಶ್ರಣಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಕತ್ತರಿಸಿದ ಕೊತ್ತಂಬರಿ ಸೊಪ್ಪುಗಳನ್ನು ಉದುರಿಸಿ. ನಂತರ ಈ ಮಿಶ್ರಣದಿಂದ ಸಣ್ಣ ಸಣ್ಣ ಉಂಡೆಗಳನ್ನು ತಯಾರಿಸಿ ಇಟ್ಟುಕೊಳ್ಳಿ.

ಕಡ್ಲೆಹಿಟ್ಟು, ಅಕ್ಕಿ ಹಿಟ್ಟು, ಕೆಂಪು ಮೆಣಸಿನ ಪುಡಿ, ಅಜ್ವೈನ್, ಉಪ್ಪು, ಬಿಸಿ ಎಣ್ಣೆ ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ನಂತರ ಅಗತ್ಯವಿರುವಷ್ಟು ನೀರು ಸೇರಿಸಿ ಹಿಟ್ಟನ್ನು ತಯಾರಿಸಿ.
ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ತಯಾರಿಸಿ ಇಟ್ಟುಕೊಂಡ ಅಲೂಪಲ್ಯದ ಉಂಡೆಗಳನ್ನು ಕಡ್ಲೆಹಿಟ್ಟಿನಲ್ಲಿ ಮುಳುಗಿಸಿ ಎಣ್ಣೆಯಲ್ಲಿ ಬಿಡಿ. ಹೊಂಬಣ್ಣಕ್ಕೆ ತಿರುಗುವವರೆಗೆ ಕಾಯಿಸಿ ತೆಗೆಯಿರಿ. ಈಗ ರುಚಿಯಾದ ಬಿಸಿ ಬಿಸಿ ಅಲೂ ಬೋಂಡ ಸವಿಯಲು ಸಿದ್ಧವಾಗಿದೆ.

ಅನಾನಸ್ (ಪೈನಾಪಲ್) ಹಣ್ಣಿನ ಗೊಜ್ಜು

ಬೇಕಾಗುವ ಪದಾರ್ಥಗಳು

ಅನಾನಸ್ ಅಥವಾ ಪೈನಾಪಲ್ – 1/2 ಹಣ್ಣು
ಬ್ಯಾಡಗಿ ಮೆಣಸು – 8-10
ಕಡಲೆ ಬೇಳೆ- 2 ಚಮಚ
ಉದ್ದಿನ ಬೇಳೆ -2 ಚಮಚ
ಎಳ್ಳು -2 ಚಮಚ
ಮೆಂತೆ- 1/4 ಚಮಚ
ಸಾಸಿವೆ- 1/2 ಚಮಚ
ಎಣ್ಣೆ- ಒಗ್ಗರಣೆಗೆ ಸ್ವಲ್ಪ
ಕೊಬ್ಬರಿ ತುರಿ- 2 ಚಮಚ
ಬೆಲ್ಲ – 1 ತುಂಡು
ರುಚಿಗೆ ತಕ್ಕಷ್ಟು ಉಪ್ಪು
ಅರಿಶಿನ – ಸ್ವಲ್ಪ

ಮಾಡುವ ವಿಧಾನ

ಮೊದಲಿಗೆ ಅನಾನಸ್ ಹಣ್ಣಿನ ಮೇಲಿನ ಸಿಪ್ಪೆಯನ್ನು ತೆಗೆದು ಸಣ್ಣ ಹೋಳುಗಳನ್ನಾಗಿ ಹೆಚ್ಚಿ ಪಕ್ಕದಲ್ಲಿ ಇಡಿ. ನಂತರ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ, ಅದಕ್ಕೆ ಸಾಸಿವೆ ಸೇರಿಸಿ. ಸಾಸಿವೆ ಸಿಡಿದ ಬಳಿಕ ಕಡಲೆ ಬೇಳೆ, ಉದ್ದಿನ ಬೇಳೆ, ಮೆಂತ್ಯ, ಬ್ಯಾಡಗಿ ಮೆಣಸು, ಎಳ್ಳು, ಕೊಬ್ಬರಿ ತುರಿ ಸೇರಿಸಿ ಹುರಿಯಿರಿ.
ಅದು ತಣ್ಣಗಾದ ನಂತರ ಅದನ್ನು ಮಿಕ್ಸಿ ಜಾರಿಗೆ ಹಾಕಿ ಅಗತ್ಯವಿರುವಷ್ಟು ನೀರು ಸೇರಿಸಿ ಚೆನ್ನಾಗಿ ರುಬ್ಬಿ. ಈಗ ಪಾತ್ರೆಯಲ್ಲಿ ಸ್ವಲ್ಪ ಎಣ್ಣೆ ಬಿಸಿ ಮಾಡಿ ಸಾಸಿವೆ ಸೇರಿಸಿ. ಅದು ಸಿಡಿದ ಬಳಿಕ ಅರಿಶಿನ ಮತ್ತು ಅನಾನಸ್ ಹೋಳುಗಳನ್ನು ಹಾಕಿ ಸ್ವಲ್ಪ ಹುರಿದು ನಂತರ ನೀರು ಹಾಕಿ ಬೇಯಿಸಿಕೊಳ್ಳಿ. ಬಳಿಕ ರುಬ್ಬಿಕೊಂಡ ಮಿಶ್ರಣವನ್ನು ಸೇರಿಸಿ ಒಂದು ಕುದಿ ಬರಿಸಿಕೊಳ್ಳಿ. ಒಂದು ಕುದಿ ಬಂದ ಮೇಲೆ ಅದಕ್ಕೆ ಬೆಲ್ಲ, ಉಪ್ಪು ಹಾಕಿ ಚೆನ್ನಾಗಿ ಕುದಿಸಿ. ಈಗ ರುಚಿಯಾದ ಪೈನಾಪಲ್ ಗೊಜ್ಜು ಅನ್ನದ ಜೊತೆಗೆ ‌ಸವಿಯಲು ಸಿದ್ಧವಾಗಿದೆ.

ನುಗ್ಗೆ ಸೊಪ್ಪು ಮಸಾಲಾ ಚಪಾತಿ

ಬೇಕಾಗುವ ಸಾಮಗ್ರಿಗಳು

ಗೋಧಿ ಹಿಟ್ಟು – 1 ಕಪ್
ಕತ್ತರಿಸಿದ ನುಗ್ಗೆ ಸೊಪ್ಪು – 1 ಕಪ್
ರುಚಿಗೆ ತಕ್ಕಷ್ಟು ಉಪ್ಪು
ಹಸಿ ಮೆಣಸಿನಕಾಯಿ ಪೇಸ್ಟ್
ಕೆಂಪು ಮೆಣಸಿನ ಪುಡಿ
ಜೀರಿಗೆ – 1/2 ಚಮಚ
ಅಜ್ವೈನ್ – 1/4 ಚಮಚ
ಅರಿಶಿನ – 1/4 ಚಮಚ
ಅಗತ್ಯವಿರುವಷ್ಟು ನೀರು
Saakshatv cooking recipe drumstick masala chapathi

ತಯಾರಿಸುವ ‌ವಿಧಾನ
ಮೊದಲಿಗೆ ಗೋಧಿ ಹಿಟ್ಟು, ನುಗ್ಗೆ ಸೊಪ್ಪು, ಹಸಿ ಮೆಣಸಿನಕಾಯಿ ಪೇಸ್ಟ್, ಕೆಂಪು ಮೆಣಸಿನ ಪುಡಿ, ಜೀರಿಗೆ, ಅಜ್ವೈನ್, ಅರಿಶಿನ, ಉಪ್ಪುಅನ್ನು ಒಟ್ಟಿಗೆ ಸೇರಿಸಿ ಚೆನ್ನಾಗಿ ಬೆರೆಸಿ. ನಂತರ ಅಗತ್ಯವಿರುವಷ್ಟು ನೀರು ಸೇರಿಸಿ ‌ಮೃದುವಾದ ಚಪಾತಿ ಹಿಟ್ಟನ್ನು ತಯಾರಿಸಿಕೊಳ್ಳಿ. 10 ನಿಮಿಷಗಳ ಕಾಲ ಹಾಗೆ ಬಿಡಿ.
ನಂತರ ಚಪಾತಿಗಳನ್ನು ಲಟ್ಟಿಸಿ. ತವಾವನ್ನು ಬಿಸಿ ಮಾಡಿ ತುಪ್ಪವನ್ನು ಸವರಿ ಚಪಾತಿಯ ಎರಡೂ ಬದಿಯನ್ನು ಚೆನ್ನಾಗಿ ಕಾಯಿಸಿಕೊಳ್ಳಿ. ಈಗ ನುಗ್ಗೆ ಸೊಪ್ಪು ಮಸಾಲಾ ಚಪಾತಿ ಸಿದ್ಧವಾಗಿದೆ. ನಿಂಬೆ ಉಪ್ಪಿನಕಾಯಿ ಅಥವಾ ಈರುಳ್ಳಿ ಚಟ್ನಿಯೊಂದಿಗೆ ನುಗ್ಗೆ ಸೊಪ್ಪು ಮಸಾಲಾ ಚಪಾತಿ ಸವಿಯಿರಿ.

Tags: #saakshatvcookingFoodfood recipiesindia
ShareTweetSendShare
Join us on:

Related Posts

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

by Shwetha
July 2, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ...

ಮೋದಿಯವರ ಪ್ರಶಸ್ತಿ ವ್ಯಾಮೋಹಕ್ಕೆ ದೇಶದ ತೆರಿಗೆ ಹಣ ಬಲಿ ಕಾಂಗ್ರೆಸ್ ಮತ್ತು ಟಿಎಂಸಿ ಗಂಭೀರ ಆರೋಪ

ಮೋದಿಯವರ ಪ್ರಶಸ್ತಿ ವ್ಯಾಮೋಹಕ್ಕೆ ದೇಶದ ತೆರಿಗೆ ಹಣ ಬಲಿ ಕಾಂಗ್ರೆಸ್ ಮತ್ತು ಟಿಎಂಸಿ ಗಂಭೀರ ಆರೋಪ

by Shwetha
July 2, 2026
0

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಷೆಲ್ಸ್ ರಾಷ್ಟ್ರವು ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್ ಎಂಬ ಪ್ರಶಸ್ತಿ ನೀಡಿ ಗೌರವಿಸಿರುವುದು ಈಗ ದೊಡ್ಡ ರಾಜಕೀಯ ವಿವಾದಕ್ಕೆ ನಾಂದಿ...

BJP ನಾಯಕರಿಗೆ ದೆಹಲಿ ಬುಲಾವ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬಿಜೆಪಿಗೆ ದೇಶಕ್ಕಿಂತ ದೇಣಿಗೆಯೇ ದೊಡ್ಡದು ಅಯೋಧ್ಯೆ ಹಗರಣಕ್ಕೆ ಪ್ರಿಯಾಂಕ್ ಖರ್ಗೆ ಕಿಡಿ

by Shwetha
July 2, 2026
0

ಬಿಜೆಪಿ ಮತ್ತು ಆರೆಸ್ಸೆಸ್ ಸಂಘಟನೆಗಳಿಗೆ ದೇಶದ ಹಿತಕ್ಕಿಂತ ದೇಣಿಗೆ ಸಂಗ್ರಹವೇ ಮುಖ್ಯವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯ ರಾಮ ಮಂದಿರ...

ದಿನಕ್ಕೊಂದು ದರ್ಬಾರು ಕ್ಷಣಕ್ಕೊಂದು ನಿಯಮ ಮತ ಹಾಕಿದ ಜನರಿಗೆ ಸರ್ಕಾರ ಕೊಟ್ಟ ಉಡುಗೊರೆ ಇದೇನಾ :ಆಸೆ ತೋರಿಸಿ ಉರುಳು ಹಾಕಿದ ಸರ್ಕಾರ ಗ್ಯಾರಂಟಿಗಳು -ಮೌನಕ್ಕೆ ಶರಣಾದ ವಿರೋಧ ಪಕ್ಷಗಳು ಜನರ ಗೋಳು ಕೇಳುವವರಾರು!?

ದಿನಕ್ಕೊಂದು ದರ್ಬಾರು ಕ್ಷಣಕ್ಕೊಂದು ನಿಯಮ ಮತ ಹಾಕಿದ ಜನರಿಗೆ ಸರ್ಕಾರ ಕೊಟ್ಟ ಉಡುಗೊರೆ ಇದೇನಾ :ಆಸೆ ತೋರಿಸಿ ಉರುಳು ಹಾಕಿದ ಸರ್ಕಾರ ಗ್ಯಾರಂಟಿಗಳು -ಮೌನಕ್ಕೆ ಶರಣಾದ ವಿರೋಧ ಪಕ್ಷಗಳು ಜನರ ಗೋಳು ಕೇಳುವವರಾರು!?

by Shwetha
July 2, 2026
0

ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಬಣ್ಣ ಬಣ್ಣದ ಮಾತುಗಳನ್ನು ನಂಬಿ ಮತ ಹಾಕಿದ್ದ ಜನಸಾಮಾನ್ಯರಿಗೆ ಈಗ ಸರ್ಕಾರದ ಒಂದೊಂದೇ ನಿರ್ಧಾರಗಳು ಮಗ್ಗುಲ ಮುಳ್ಳಾಗಿ ಪರಿಣಮಿಸಿವೆ. ಆರಂಭದಲ್ಲಿ ಯಾವುದೇ ಷರತ್ತುಗಳಿಲ್ಲದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram