ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 36 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ 12 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದರೆ, ಭಟ್ಕಳದಲ್ಲಿ 07 ಜನರಿಗೆ ಸೋಂಕು ತಗುಲಿದೆ. ಜೊತೆಗೆ ಚಿತ್ರದುರ್ಗದಲ್ಲೂ ಮತ್ತೆ ಮೂವರಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕಿನ ಕಾರಣದಿಂದಾಗಿ ಒಟ್ಟು 30 ಜನರು ಸಾವನ್ನಪ್ಪಿದ್ದರೆ, ಆತ್ಮಹತ್ಯೆ ಮಾಡಿಕೊಂಡ ಒಬ್ಬ ಸೋಂಕಿತನೂ ಸೇರಿ ಒಟ್ಟು 31 ಸೋಂಕಿತರು ಸಾವನ್ನಪ್ಪಿದಂತಾಗಿದೆ.
ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್ ಪತ್ತೆ
ಬೆಂಗಳೂರು ನಗರ-12
ಉತ್ತರಕನ್ನಡ (ಭಟ್ಕಳ)-07
ದಾವಣಗೆರೆ -06
ತುಮಕೂರು-01
ವಿಜಯಪುರ-01
ಬೀದರ್-03
ಚಿತ್ರದುರ್ಗ-03
ದಕ್ಷಿಣ ಕನ್ನಡ (ಬಂಟ್ವಾಳ)-03








