ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಂಚಾರಿ ಫೀವರ್ ಕ್ಲಿನಿಕ್ ಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದೆ. ಹಾಗಾಗಿ ಕೊರೊನಾ ರೋಗಲಕ್ಷಣಗಳ ತಪಾಸಣೆಗೆ ಮೊಬೈಲ್ ಫೀವರ್ ಕ್ಲಿನಿಕ್ ಆರಂಭಿಸಲಾಗುತ್ತಿದೆ. ಇದರಲ್ಲಿ ಒಬ್ಬ ವೈದ್ಯರು ಹಾಗೂ ಮೂವರು ದಾದಿಯರು ಇರಲಿದ್ದಾರೆ. ವಿವಿಧ ಸ್ಥಳಗಳಿಗೆ ತೆರಳಿ ತಪಾಸಣೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ನಾಲ್ಕು ಬಸ್ ಗಳನ್ನ ಮೊಬೈಲ್ ಫೀವರ್ ಕ್ಲಿನಿಕ್ ಆಗಿ ಮಾಡಲಾಗಿದ್ದು, ಇವು ಬೆಂಗಳೂರಿನ ನಾಲ್ಕು ವಿಭಾಗಗಳಲ್ಲೂ ಸಂಚಾರ ಮಾಡಲಿವೆ. ಈಗಾಗಲೇ ಮೈಸೂರು, ಮಂಗಳೂರಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಕಾರ್ಯನಿರ್ವಹಿಸುತ್ತಿವೆ. ಅನಾರೋಗ್ಯ ಕಂಡುಬಂದ್ರೆ ಈ ಮೊಬೈಲ್ ಫೀವರ್ ಕ್ಲಿನಿಕ್ ಸಂಪರ್ಕಿಸಿ ಎಂದು ಯಡಿಯೂರಪ್ಪ ಹೇಳಿದರು.
ಫೀವರ್ ಕ್ಲಿನಿಕ್ ಉದ್ಘಾಟನೆ ವೇಳೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಕಂದಾಯ ಸಚಿವ ಆರ್.ಅಶೋಕ್ ಉಪಸ್ಥಿತರಿದ್ದರು.








