ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಯಣ್ಣ ಅವರನ್ನ ಅಪಮಾನಿಸ್ತಾರೆ.. ಶಿವಾಜಿಯನ್ನ ಕೊಂಡಾಡ್ತಾರೆ.. ಇದೆಂಥಾ ದೇಶಪ್ರೇಮ

Mahesh M Dhandu by Mahesh M Dhandu
December 21, 2021
in Newsbeat, Politics, ರಾಜಕೀಯ
Kannada saaksha tv
Share on FacebookShare on TwitterShare on WhatsappShare on Telegram

ರಾಯಣ್ಣ ಅವರನ್ನ ಅಪಮಾನಿಸ್ತಾರೆ.. ಶಿವಾಜಿಯನ್ನ ಕೊಂಡಾಡ್ತಾರೆ.. ಇದೆಂಥಾ ದೇಶಪ್ರೇಮ

ಬೆಂಗಳೂರು : ಬೆಳಗಾವಿಯ ಒಂದು ಹಳ್ಳಿಯಲ್ಲಿ ಹುಟ್ಟಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ, ಅದೇ ಬ್ರಿಟಿಷರು ಬಿಗಿದ ನೇಣು ಹಗ್ಗಕ್ಕೆ ಕೊರಳು ಕೊಟ್ಟ ಸಂಗೊಳ್ಳಿ ರಾಯಣ್ಣ ಅವರನ್ನು ಅಪಮಾನಿಸುತ್ತಾರೆ. ಅದೇ ಮೊಘಲರ ವಿರುದ್ಧ ಹೋರಾಡಿದ ಶಿವಾಜಿಯನ್ನು ಕೊಂಡಾಡುತ್ತಾರೆ. ಇದೆಂಥಾ ದೇಶಪ್ರೇಮ? ರಾಷ್ಟ್ರಪ್ರೇಮದಲ್ಲೂ ಬೇಧ ಭಾವವೇ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ,    ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿ ನಡೆದ ವಿಕೃತಿ ಬಗ್ಗೆ, #ಕನ್ನಡಿಗರಹೆಮ್ಮೆ ಸಂಗೊಳ್ಳಿ ರಾಯಣ್ಣ ಅವರಿಗಾದ ಅಪಚಾರದ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ಬದ್ಧತೆ ಬಗ್ಗೆ ಈಗ ಪ್ರಶ್ನೆ ಉಂಟಾಗಿದೆ.

ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕ ಕೇವಲ ಚುನಾವಣೆ ಬಂದಾಗ ವೋಟ್ ಮಾಡುವ ಮತಯಂತ್ರ ಹಾಗೂ ತೆರಿಗೆ ರೂಪದಲ್ಲಿ ಕೇಂದ್ರದ ಖಜಾನೆ ತುಂಬುವ ಅಕ್ಷಯ ಪಾತ್ರೆ. ಆದರೆ; ನಮಗೆ ನೆರೆ, ಬರ ಬಂದಾಗ ಅವರ ಮುಂದೆಯೇ ಭಿಕ್ಷೆಗೆ ನಿಲ್ಲಬೇಕು! ಇದೆಂಥಾ ವಿಪರ್ಯಾಸ? 3/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 21, 2021

ಮಾತೆತ್ತಿದರೆ ರಾಷ್ಟ್ರದ ಸಮಗ್ರತೆಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕವು 30 ರಾಜ್ಯಗಳಲ್ಲಿ ಒಂದು ರಾಜ್ಯವಷ್ಟೆ. ಕನ್ನಡವು ದೇಶ ಭಾಷೆಗಳಲ್ಲಿ ಒಂದು ಭಾಷೆ ಮಾತ್ರ. ಆದರೆ ನಮಗೆ ಕರ್ನಾಟಕವೇ ಕರ್ಮಭೂಮಿ. ಕನ್ನಡವೇ ತಾಯಿ. ನಾವು ಕನ್ನಡಮ್ಮನ ಕರುಳಬಳ್ಳಿಗಳು.

ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕ ಕೇವಲ ಚುನಾವಣೆ ಬಂದಾಗ ವೋಟ್ ಮಾಡುವ ಮತಯಂತ್ರ ಹಾಗೂ ತೆರಿಗೆ ರೂಪದಲ್ಲಿ ಕೇಂದ್ರದ ಖಜಾನೆ ತುಂಬುವ ಅಕ್ಷಯ ಪಾತ್ರೆ. ಆದರೆ; ನಮಗೆ ನೆರೆ, ಬರ ಬಂದಾಗ ಅವರ ಮುಂದೆಯೇ ಭಿಕ್ಷೆಗೆ ನಿಲ್ಲಬೇಕು! ಇದೆಂಥಾ ವಿಪರ್ಯಾಸ?

2006ರಲ್ಲಿ ಶಿವಸೇನೆ-ಎಂಇಎಸ್ ಗಡಿತಂಟೆ ಮಾಡಿದಾಗ, ಆಗ ಕೇಂದ್ರದಲ್ಲಿ ಗೃಹಮಂತ್ರಿಯಾಗಿದ್ದ ಅದೇ ರಾಜ್ಯದ ನಾಯಕರು ಬೆಳಗಾವಿ ಮೇಲೆ ಕಣ್ಣು ಹಾಕಿದಾಗ, ಅಲ್ಲಿ ವಿಧಾನಕಲಾಪ ನಡೆಯಿತು. ಸುವರ್ಣಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆಯೂ ಆಯಿತು. ಇದು ಕನ್ನಡದ ಒಂದು ಸಣ್ಣ ಪಕ್ಷಕ್ಕೆ ಇದ್ದ ಬದ್ಧತೆ. ಈ ಎದೆಗಾರಿಕೆ ರಾಷ್ಟ್ರೀಯ ಪಕ್ಷಗಳಿಗೆ ಏಕಿಲ್ಲ? 6/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 21, 2021

ಗಡಿ, ಭಾಷೆ, ಜಲದ ಪ್ರಶ್ನೆ ಬಂದಾಗ ಆ ಪಕ್ಷಗಳ ಆದ್ಯತೆ ಕನ್ನಡ-ಕರ್ನಾಟಕ ಅಲ್ಲ. ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಬಂದವರನ್ನು ಸಹಿಸಿಕೊಳ್ಳುತ್ತಿದ್ದೇವೆ. ಕನ್ನಡಿಗರ ತೆರಿಗೆ ಹಣದಲ್ಲಿ ಜಾರಿ ಮಾಡಿದ ಯೋಜನೆ, ರಸ್ತೆ, ಸೇತುವೆಗಳಿಗೆ ಮಹಾರಾಷ್ಟ್ರದಲ್ಲಿ ಹುಟ್ಟಿದವರ ಹೆಸರಿಟ್ಟು ಔದಾರ್ಯ ತೋರುತ್ತಿದ್ದೆವೆ. ಇದು ಇನ್ನೆಷ್ಟು ದಿನ ಎಂದು ಬೇಸರ ಹೊರಹಾಕಿದ್ದಾರೆ.

2006ರಲ್ಲಿ ಶಿವಸೇನೆ-ಎಂಇಎಸ್ ಗಡಿತಂಟೆ  ಮಾಡಿದಾಗ, ಆಗ ಕೇಂದ್ರದಲ್ಲಿ ಗೃಹಮಂತ್ರಿಯಾಗಿದ್ದ ಅದೇ ರಾಜ್ಯದ  ನಾಯಕರು ಬೆಳಗಾವಿ ಮೇಲೆ ಕಣ್ಣು ಹಾಕಿದಾಗ, ಅಲ್ಲಿ ವಿಧಾನಕಲಾಪ ನಡೆಯಿತು. ಸುವರ್ಣಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆಯೂ ಆಯಿತು. ಇದು ಕನ್ನಡದ ಒಂದು ಸಣ್ಣ ಪಕ್ಷಕ್ಕೆ ಇದ್ದ ಬದ್ಧತೆ. ಈ ಎದೆಗಾರಿಕೆ ರಾಷ್ಟ್ರೀಯ ಪಕ್ಷಗಳಿಗೆ ಏಕಿಲ್ಲ ಎಂದು ಪ್ರಶ್ನಿಸಿದ್ದಾರೆ.

ನಮ್ಮ ರಾಯಣ್ಣರ ಪ್ರತಿಮೆ ಮೇಲೆ ʼಕೈʼ ಇಟ್ಟವರ ಮೇಲೆ ಕರುಣೆ ಯಾಕೆ? ಎಂಇಎಸ್ ಬಗ್ಗೆ ಎರಡು ನಾಲಗೆಯಲ್ಲಿ ಮಾತನಾಡುವ ʼಕೈಚಳಕʼದ ಮರ್ಮವೇನು? ಮಸೂದೆಗಳನ್ನು ಇಟ್ಟುಕೊಂಡು ಕನ್ನಡದ ಆಸ್ಮಿತೆಯ ಮೇಲಾದ ದಾಳಿಯನ್ನು ʼವಿಷಯಾಂತರʼ ಮಾಡುವ ಹುನ್ನಾರ ಏಕೆ ಎಂದು ಗರಂ ಆಗಿದ್ದಾರೆ.

Tags: #Saaksha TVbangaloreH D KUMARASWAMYJDS
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram