ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು : ಹೆಚ್ಡಿಕೆ

Mahesh M Dhandu by Mahesh M Dhandu
December 29, 2021
in Newsbeat, Politics, ರಾಜಕೀಯ
Former Prime Minister HD Devegowda tests positive for COVID-19 saaksha tv
Share on FacebookShare on TwitterShare on WhatsappShare on Telegram

ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು H D Deve Gowda : ಹೆಚ್ಡಿಕೆ

ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು. ಜೀವಜಲ ತಂದು ಬವಣೆ ನೀಗಿಸಿದವರು ಅವರೇ. ಈ ಭಗೀರಥನನ್ನೇ ಮರೆತ ಕಾಂಗ್ರೆಸ್ ‘ ಕೃತಘ್ನ ‘ ರಾಜಕಾರಣಕ್ಕೆ ಏನು ಹೇಳುವುದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Related posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

August 26, 2026
ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

August 26, 2026

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ಕಾಂಗ್ರೆಸ್’ನ 5 ವರ್ಷದ ಸರಕಾರವೇ ಇತ್ತು. ʼಸಿದ್ದಹಸ್ತರೇʼ ಸಿಎಂ ಆಗಿದ್ದರು. ಆಗ ಕೇಂದ್ರದ ಮುಂದೆ ಪ್ರತಾಪ ತೋರಬಹುದಿತ್ತು. ಬರೀ ಮಾತಿನ ಉತ್ತರ ಪೌರುಷ. ಆಗ ಗಾಂಧೀಜಿ ಪ್ರತಿಮೆ ಮುಂದೆ ಉಪವಾಸ ಕೂತ ಮಣ್ಣಿನಮಗನ ಖದರಿಗೆ ಕೇಂದ್ರವೇ ನಡುಗಿತ್ತು. ದಿಲ್ಲಿಯಿಂದ ಮಂತ್ರಿಗಳು ಓಡಿಬಂದರು. ಅದೆಲ್ಲವನ್ನೂ ಕಾಂಗ್ರೆಸ್ ಮರೆತಿದೆಯಾ ಎಂದು ಪ್ರಶ್ನಿಸಿದ್ದಾರೆ.

ಹೌದು. ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ದೋರಣೆಯೇ ಮೈವೇತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ʼಉತ್ತರಕುಮಾರ ಸಿದ್ದಸೂತ್ರಧಾರʼ, ಈಗೇನು ಮಾಡಲು ಸಾಧ್ಯ? ಆದರೆ; ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ.

ಇಲ್ಲಿ 30 ವರ್ಷ ಆಳಿದವರು ಕಾವೇರಿ-ಕೃಷ್ಣಾ ವಿಚಾರದಲ್ಲಿ ಕೊಟ್ಟ ಕೊಡುಗೆ ಏನು? ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಸ್ಲೋಗನ್ ಹೇಳಿಕೊಂಡು ಹೋಗಿ ಉತ್ತರ ಕರ್ನಾಟಕಕ್ಕೆ ಟೋಪಿ ಹಾಕಿದ್ದಾಗಿದೆ. ಮೇಕೆದಾಟು ವಿಚಾರದಲ್ಲಿಯೂ ಅದೇ ಆಗಲಿದೆ.

ನಿಮ್ಮ ʼಬ್ರೂಟಸ್ʼ ಬುದ್ಧಿ, ಸರಕಾರವನ್ನೇ ಸ್ವಾಹ ಮಾಡಿದ ʼಸಿದ್ಧಕಲೆʼಯ ಬಗ್ಗೆ 2018ರಲ್ಲೇ ನನಗೆ ಅರಿವಾಯಿತು. ‘ಕೈ’ ಚಿಹ್ನೆ ಇಟ್ಟುಕೊಂಡು ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ ರಾಜಕಾರಣದ ಅನುಭವ ನನಗೂ, ದೇವೇಗೌಡರಿಗೂ ಆಗಿದೆ. ಈ ಪಾದಯಾತ್ರೆ ಯಿಂದ ಜನರಿಗೇನು ಸಂದೇಶ ನೀಡುತ್ತಿದ್ದೀರಿ. 23/13

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2021

ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು.

ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗೆ ಒಪ್ಪಿಗೆ ಪಡೆಯಲು ಹೋರಾಟ ನಡೆಸಬೇಕು. ಅದು ಬಿಟ್ಟು ಹೊಸ ಸ್ಲೋಗನ್ ಅಗತ್ಯ ಇಲ್ಲ.

ಪಾಪ ತೊಳೆಯುವ ತಾಯಿ ʼಲೋಕಪಾವನಿʼ ಈಗ ವೋಟಿನ ದಾಳವಾಗುತ್ತಿರುವುದು ನಾಡಿನ ದುರ್ದೈವ. ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಡಿಸೈನ್ ಶೂರರಿಗೆ ಮುಂದೆ ಕಾದಿದೆ ಶಾಸ್ತಿ. ಭೂತಾಯಿ ಒಡಲಿನ ಮಣ್ಣು ಬಗೆದ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣʼದ ಕಾಕದೃಷ್ಟಿ ಈಗ ತಾಯಿ ಕಾವೇರಿ ಮೇಲೂ ಬಿದ್ದಿದೆ.

ನಿಮ್ಮ ʼಬ್ರೂಟಸ್ʼ ಬುದ್ಧಿ, ಸರಕಾರವನ್ನೇ ಸ್ವಾಹ ಮಾಡಿದ ʼಸಿದ್ಧಕಲೆʼಯ ಬಗ್ಗೆ 2018ರಲ್ಲೇ ನನಗೆ ಅರಿವಾಯಿತು. ‘ಕೈ’ ಚಿಹ್ನೆ ಇಟ್ಟುಕೊಂಡು ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ ರಾಜಕಾರಣದ ಅನುಭವ ನನಗೂ, ದೇವೇಗೌಡರಿಗೂ ಆಗಿದೆ. ಈ ಪಾದಯಾತ್ರೆ ಯಿಂದ ಜನರಿಗೇನು ಸಂದೇಶ ನೀಡುತ್ತಿದ್ದೀರಿ ಎಂದು ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Tags: #Saaksha TVH D KUMARASWAMYH.D Deve Gowdakaveri
ShareTweetSendShare
Join us on:

Related Posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

by Shwetha
August 26, 2026
0

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಅಥವಾ ತಲೆಗೆ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ತರಗತಿಯಲ್ಲಿ ಹಿಜಾಬ್...

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

by Shwetha
August 26, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

by Shwetha
August 26, 2026
0

ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram