ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

7 ದಿನದ ನಾಷ್ಟಕ್ಕೆ , 7 ತರಹದ ಟೇಸ್ಟಿ ಬಾತ್ ಗಳ ರೆಸಿಪಿಗಳು ನಿಮಗಾಗಿ..!

Namratha Rao by Namratha Rao
December 31, 2021
in Cooking, Newsbeat, ಅಡುಗೆ
Share on FacebookShare on TwitterShare on WhatsappShare on Telegram

ಆಲೂಗಡ್ಡೆ ರೈಸ್

ಬೇಕಾಗುವ ‌ಸಾಮಾಗ್ರಿಗಳು

ಅನ್ನ – 1 ಕಪ್
ಎಣ್ಣೆ – 2 ಚಮಚ
ಉದ್ದಿನಬೇಳೆ – 1/2 ಚಮಚ
ಕಡ್ಲೆಬೇಳೆ – 1/2 ಚಮಚ
ಜೀರಿಗೆ – 1/2 ಚಮಚ
ಸಾಸಿವೆ – 1/2 ಚಮಚ
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಚಮಚ
ಈರುಳ್ಳಿ ‌- 1
ಹಸಿಮೆಣಸು – 1
ಆಲೂಗಡ್ಡೆ – 1
ಅರಿಶಿನ – 1/4 ಚಮಚ
ಮೆಣಸಿನ ಪುಡಿ – 1/2 ಚಮಚ
ಗರಂಮಸಾಲೆ – 1/2 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ನಿಂಬೆ ರಸ – 1 ಚಮಚ
ಚಿಕ್ಕದಾಗಿ ‌ಕತ್ತರಿಸಿದ ಕೊತ್ತಂಬರಿ ಸೊಪ್ಪು

ಮಾಡುವ ವಿಧಾನ

Saakshatv cooking recipe preparation of potato rice

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಮೊದಲಿಗೆ ಅನ್ನವನ್ನು ಉದುರು ಉದುರಾಗಿ ಮಾಡಿಟ್ಟುಕೊಳ್ಳಿ. ನಂತರ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಇದಕ್ಕೆ ಸಾಸಿವೆ ಹಾಕಿ. ಸಾಸಿವೆ ಸಿಡಿದ ಬಳಿಕ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಈರುಳ್ಳಿ, ಹಸಿಮೆಣಸು ಸೇರಿಸಿ ಚೆನ್ನಾಗಿ ಹುರಿಯಿರಿ. ನಂತರ ಸಿಪ್ಪೆ ತೆಗೆದು ಕತ್ತರಿಸಿದ ಆಲೂಗಡ್ಡೆಯನ್ನು ‌ಸೇರಿಸಿ. ರುಚಿಗೆ ತಕ್ಕಷ್ಟು ಉಪ್ಪು ಬೆರೆಸಿ ಸಣ್ಣ ಉರಿಯಲ್ಲಿ ಬೇಯಿಸಿ. ಆಲೂಗಡ್ಡೆ ಬೆಂದ ಬಳಿಕ ಅರಿಶಿನ, ಮೆಣಸಿನ ಪುಡಿ, ಗರಂಮಸಾಲೆ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಶ್ರ ಮಾಡಿ. ಬಳಿಕ ಮೊದಲೇ ‌ಮಾಡಿಟ್ಟುಕೊಂಡ ಅನ್ನವನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಈಗ ರುಚಿಯಾದ ಆಲೂಗಡ್ಡೆ ರೈಸ್ ಸವಿಯಲು ಸಿದ್ಧವಾಗಿದೆ.

 

ತೊಂಡೆಕಾಯಿ ಪಲಾವ್

ಬೇಕಾಗುವ ಸಾಮಗ್ರಿಗಳು

ತೊಂಡೆಕಾಯಿ – 20
ಬಾಸುಮತಿ ಅಕ್ಕಿ -3 ಕಪ್
ಆಲೂಗಡ್ಡೆ-1
ಈರುಳ್ಳಿ -2
ಉಪ್ಪು ರುಚಿಗೆ ತಕ್ಕಷ್ಟು
ಎಣ್ಣೆ – 6 ಚಮಚ
ಲಿಂಬೆ ಹಣ್ಣಿನ ರಸ -1 ಚಮಚ
ಅರಿಶಿನ ಚಿಟಿಕೆಯಷ್ಟು

ಮಸಾಲಾ ಪುಡಿ ಸಾಮಗ್ರಿಗಳು

ಕಡಲೆಬೇಳೆ – 1 ಚಮಚ
ಉದ್ದಿನಬೇಳೆ -1 ಚಮಚ
ಕಾಳುಮೆಣಸು – 1/2 ಚಮಚ
ಒಣಗಿರುವ ಕೊಬ್ಬರಿ – 4ಚಮಚ
ಎಳ್ಳು -1 ಚಮಚ
ಕೆಂಪು ಒಣ ಮೆಣಸು
ಕೊತ್ತಂಬರಿ ಬೀಜ- 1ಚಮಚ

ಮಾಡುವ ವಿಧಾನ

ಮೊದಲು ‌ತೊಂಡೆಕಾಯಿಗಳನ್ನು ಉದ್ದಗೆ ಕತ್ತರಿಸಿಕೊಂಡು ಎಣ್ಣೆ ಮತ್ತು ಅರಿಶಿನ ಹಾಕಿ ಚೆನ್ನಾಗಿ ಹುರಿಯಿರಿ. ನಂತರ ಕಡಲೆಬೇಳೆ, ಉದ್ದಿನಬೇಳೆ, ಕಾಳುಮೆಣಸು, ಒಣ ಕೊಬ್ಬರಿ, ಎಳ್ಳು, ಕೆಂಪು ಮೆಣಸು, ಕೊತ್ತಂಬರಿ ಬೀಜಗಳನ್ನು 1 ಚಮಚ ಎಣ್ಣೆಯಲ್ಲಿ ಉರಿದು ತಣ್ಣಗಾದ ನಂತರ ಮಿಕ್ಸಿ ಜಾರಿಗೆ ಹಾಕಿ ಹುಡಿ ಮಾಡಿಟ್ಟುಕೊಳ್ಳಿ.

ಮಧ್ಯಮ ಉರಿಯಲ್ಲಿ ಕುಕ್ಕರ್ ಗೆ ಎಣ್ಣೆ ಹಾಕಿ ಬಿಸಿ ಮಾಡಿ. ನಂತರ ಮಸಾಲೆ ಎಲೆಯನ್ನು ಹಾಕಿ ಬಾಡಿಸಿಕೊಳ್ಳಿ. ನಂತರ ಹೆಚ್ಚಿರುವ ಈರುಳ್ಳಿಯನ್ನು ಹಾಕಿ ಬಾಡಿಸಿಕೊಂಡು ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಆಲೂಗಡ್ಡೆಯನ್ನು ಹಾಕಿ ಚೆನ್ನಾಗಿ ಬೇಯಿಸಿ. ನಂತರ ಈ ಮೊದಲೇ ಹುರಿದಿಟ್ಟುಕೊಂಡಿರುವ ತೊಂಡೆಕಾಯಿಯನ್ನು ಸೇರಿಸಿ. ಹುಡಿ ಮಾಡಿರುವ ಮಸಾಲಾ ಪುಡಿಯನ್ನು ಸೇರಿಸಿ ಚೆನ್ನಾಗಿ ಕಲಸಿ. ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಅಕ್ಕಿ ಮತ್ತು ನೀರನ್ನು ಹಾಕಿ ಲಿಂಬೆರಸವನ್ನು ಸೇರಿಸಿ. ಕುಕ್ಕರ್ ನಲ್ಲಿ 3 ವಿಸಲ್ ಬರುವವರೆಗೆ ಬೇಯಿಸಿ. ಈಗ ರುಚಿಯಾದ ತೊಂಡೆಕಾಯಿ ಪಲಾವ್ ಸವಿಯಲು ಸಿದ್ಧವಾಗಿದೆ.

 

ವೆಜ್ ಪನೀರ್ ಫ್ರೈಡ್ ರೈಸ್

ಅಕ್ಕಿ – 1 ಕಪ್
ಪನೀರ್ – 200 ಗ್ರಾಂ
ಬೀನ್ಸ್ – 10
ಕ್ಯಾರೆಟ್ – 1
ಆಲೂಗಡ್ಡೆ -2
ಮ್ಯಾಗಿ ಮಸಾಲಾ – ರುಚಿಗೆ ತಕ್ಕಷ್ಟು
ಎಣ್ಣೆ/ತುಪ್ಪ – 2 ಚಮಚ
Saakshatv cooking recipe Paneer fried rice
ಮೊದಲಿಗೆ ಅಕ್ಕಿಯನ್ನು ತೊಳೆದು ಅನ್ನ ಮಾಡಿಟ್ಟುಕೊಳ್ಳಿ. ನಂತರ ಬಾಣಲೆಗೆ ಎಣ್ಣೆ/ತುಪ್ಪ ಹಾಕಿ ಬಿಸಿ ಮಾಡಿ. ನಂತರ ಚಿಕ್ಕದಾಗಿ ಕತ್ತರಿಸಿದ ಬೀನ್ಸ್, ಕ್ಯಾರೆಟ್, ಆಲೂಗಡ್ಡೆ ಸೇರಿಸಿ ಸ್ವಲ್ಪ ಹೊತ್ತು ಹುರಿಯಿರಿ. ಬಳಿಕ ಪನೀರ್ ತುಂಡುಗಳನ್ನು ಸೇರಿಸಿ ಚೆನ್ನಾಗಿ ಬಾಡಿಸಿ. ನಂತರ ಮ್ಯಾಗಿ ಮಸಾಲಾ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಬೆರೆಸಿ. ಇದಕ್ಕೆ ಅನ್ನವನ್ನು ಹಾಕಿ ಕಲಸಿದರೆ ವೆಜ್ ಪನೀರ್ ಫ್ರೈಡ್ ರೈಸ್ ಸವಿಯಲು ಸಿದ್ಧವಾಗಿದೆ.

 

ಬಟಾಣಿ ಬಾತ್

ಬೇಕಾಗುವ ಸಾಮಾಗ್ರಿಗಳು

ಅಕ್ಕಿ 1 ಕಪ್
ನೆನೆಸಿದ ಒಣ ಬಟಾಣಿ/ಹಸಿ ಬಟಾಣಿ – 1ಕಪ್
ಈರುಳ್ಳಿ – 1
ಟೊಮೆಟೊ – 1
ಹಸಿಮೆಣಸು – 3
ಕೆಂಪು ಮೆಣಸು – 5
ಕೊತ್ತಂಬರಿಸೊಪ್ಪು – ಸ್ವಲ್ಪ
ಶುಂಠಿ ಬೆಳ್ಳುಳಿ ಪೇಸ್ಟ್ – 1 ಚಮಚ
ಗರಂಮಸಾಲೆ ಪುಡಿ – 1 ಚಮಚ
ಚೆಕ್ಕೆ – 1 ಇಂಚು
ಲವಂಗ – 2
ಮರಾಠಿಮೊಗ್ಗು – 2
ಏಲಕ್ಕಿ – 2
ಪಲಾವ್ ಎಲೆ – 1
ರುಚಿಗೆ ತಕ್ಕಷ್ಟು ಉಪ್ಪು.
ಎಣ್ಣೆ/ತುಪ್ಪ – 2 ಚಮಚ
Saakshatv cooking recipes batani bath

ಮಾಡುವ ವಿಧಾನ

ಮೊದಲಿಗೆ ಅಕ್ಕಿಯನ್ನು ತೊಳೆದು ನೀರನ್ನು ಸೋಸಿ ಪಕ್ಕದಲ್ಲಿ ಇಡಿ. ಬಳಿಕ ಕೆಂಪು ಮೆಣಸುಗಳನ್ನು 10 ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿ ಇಡಿ. ನಂತರ ಮಿಕ್ಸಿ ಜಾರಿನಲ್ಲಿ ಹಸಿಮೆಣಸಿನಕಾಯಿ. ಕೊತ್ತಂಬರಿಸೊಪ್ಪು ಮತ್ತು ನೆನೆಸಿದ ಕೆಂಪು ಮೆಣಸು ಸೇರಿಸಿ ಚೆನ್ನಾಗಿ ರುಬ್ಬಿ.

ಈಗ ಕುಕ್ಕರಿಗೆ ಎಣ್ಣೆ ಅಥವಾ ತುಪ್ಪ ಹಾಕಿ. ಬಿಸಿಯಾದ ಮೇಲೆ ಚೆಕ್ಕೆ, ಲವಂಗ, ಮರಾಠಿಮೊಗ್ಗು, ಏಲಕ್ಕಿ, ಪಲಾವ್ ಎಲೆ ಸೇರಿಸಿ. ‌ಬಳಿಕ ಸಣ್ಣಗೆ ಹೆಚ್ಚಿದ ಈರುಳ್ಳಿ ಸೇರಿಸಿ ಕೆಂಪಗಾಗುವವರೆಗೆ ಹುರಿಯಿರಿ. ನಂತರ ಹೆಚ್ಚಿದ ಟೊಮೆಟೊ ಸೇರಿಸಿ, ಮೃದುವಾಗುವವರೆಗೆ ಬೇಯಿಸಿ. ಬಳಿಕ ಶುಂಠಿ. ಬೆಳ್ಳುಳಿ ಪೇಸ್ಟ್, ರುಬ್ಬಿದ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಗರಂ ಮಸಾಲೆ ಪುಡಿ ಸೇರಿಸಿ ಎಲ್ಲವನ್ನೂ ಚೆನ್ನಾಗಿ ಕಲಸಿ.
ನಂತರ ಬಟಾಣಿ, ಅಕ್ಕಿ, ಉಪ್ಪು, ಅಗತ್ಯವಿರುವಷ್ಟು ನೀರು ಸೇರಿಸಿ ಮುಚ್ಚಳ ಮುಚ್ಚಿ 3 ವಿಷಲ್ ಬರುವವರೆಗೆ ಬೇಯಿಸಿ.
ಈಗ ರುಚಿಯಾದ ಬಟಾಣಿ ಬಾತ್ ಸವಿಯಲು ಸಿದ್ಧ.

ಕ್ಯಾಬೇಜ್ ರೈಸ್

ಬೇಕಾಗುವ ಸಾಮಗ್ರಿಗಳು

ಅಕ್ಕಿ 11/2 ಲೋಟ
ಚಿಕ್ಕದಾಗಿ ಹೆಚ್ಚಿದ ಕ್ಯಾಬೇಜ್ 1/2ಕಪ್
ಆಲೂಗಡ್ಡೆ 1
ಗರಂ ಮಸಾಲ – 1ಚಮಚ
ಕೊತ್ತಂಬರಿ ಪುಡಿ – 1/4 ಚಮಚ
ಅರಸಿನ ಪುಡಿ – 1/4 ಚಮಚ,
ಜೀರಿಗೆ ಪುಡಿ – 1/2ಚಮಚ
ಆಲ್ ಸ್ಪೈಸ್ ಎಲೆ – 3
ಕೊತ್ತಂಬರಿ ಸೊಪ್ಪು – ಸ್ವಲ್ಪ
ತುರಿದ ಶುಂಠಿ – 1/4ಚಮಚ
ತುಪ್ಪ – 3 ಚಮಚ
ರುಚಿಗೆ ತಕ್ಕಷ್ಟು ಉಪ್ಪು
Saakshatv cooking recipe cabbage rice

ಮಾಡುವ ವಿಧಾನ

ಮೊದಲಿಗೆ ಅಕ್ಕಿಯನ್ನು ಚೆನ್ನಾಗಿ ತೊಳೆದು ಇಟ್ಟುಕೊಳ್ಳಿ. ಆಲೂಗೆಡ್ಡೆಯ ಸಿಪ್ಪೆ ತೆಗೆದು ಅದನ್ನು ಚಿಕ್ಕದಾಗಿ ಕತ್ತರಿಸಿಕೊಳ್ಳಿ.
ನಂತರ ಕುಕ್ಕರ್ ನಲ್ಲಿ ತುಪ್ಪ ಬಿಸಿ ಮಾಡಿ. ತುಪ್ಪ ಬಿಸಿಯಾದ ಬಳಿಕ ಅದಕ್ಕೆ ಕತ್ತರಿಸಿದ ಕ್ಯಾಬೇಜ್, ಆಲೂಗಡ್ಡೆ, ಶುಂಠಿ ತುರಿ ಸೇರಿಸಿ ಹುರಿಯಿರಿ. ನಂತರ ಅದಕ್ಕೆ ಅರಿಶಿನ ಪುಡಿ, ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಆಲ್ ಸ್ಪೈಸ್ ಎಲೆ ಹಾಕಿ ಚೆನ್ನಾಗಿ ಬೆರೆಸಿ. ನಂತರ ಅದಕ್ಕೆ ಅಕ್ಕಿ, ರುಚಿಗೆ ತಕ್ಕಷ್ಟು ಉಪ್ಪು, ಅಗತ್ಯವಿರುವಷ್ಟು ನೀರು ಸೇರಿಸಿ. ನಂತರ ಕುಕ್ಕರ್ ಗೆ ಮುಚ್ಚಳವನ್ನು ಮುಚ್ಚಿ 3 ವಿಸಲ್ ಕೂಗಿಸಿ. ನಂತರ ಸಣ್ಣದಾಗಿ ಕತ್ತರಿಸಿದ ಕೊತ್ತಂಬರಿ ಸೊಪ್ಪು ಹಾಕಿ ಬೆರೆಸಿ. ಈಗ ರುಚಿಯಾದ ಕ್ಯಾಬೇಜ್ ರೈಸ್ ರಾಯತದ ಜೊತೆ ಸವಿಯಲು ಸಿದ್ಧವಾಗಿದೆ.

 

ರುಚಿಯಾದ ಕ್ಯಾಪ್ಸಿಕಂ ಬಾತ್

ಬೇಕಾಗುವ ಸಾಮಾಗ್ರಿಗಳು

ಅಕ್ಕಿ – 1 ಕಪ್
ಸಣ್ಣಗೆ ಹೆಚ್ಚಿದ ಕ್ಯಾಪ್ಸಿಕಂ – 1 ಕಪ್
ಸಣ್ಣಗೆ ಹೆಚ್ಚಿದ ಈರುಳ್ಳಿ – 1
ಜೀರಿಗೆ – 1/2 ಚಮಚ
ಟೊಮೆಟೊ – 1
ಅರಿಶಿನ – ಚಿಟಿಕೆ
ಬೆಳ್ಳುಳ್ಳಿ ಶುಂಠಿ ಪೇಸ್ಟ್ – 1 ಚಮಚ
ಮೆಣಸಿನ ಹುಡಿ – 1/2 ಚಮಚ
ಪಾವ್ ಬಾಜಿ ಮಸಾಲೆ – 1 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಕೊತ್ತಂಬರಿ ಸೊಪ್ಪು ಸ್ವಲ್ಪ

Capsicum bath

ತಯಾರಿಸುವ ವಿಧಾನ

ಮೊದಲು ಉದುರುದುರಾಗಿ ಅನ್ನ ಮಾಡಿಕೊಳ್ಳಿ. ನಂತರ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ, ಜೀರಿಗೆ, ಈರುಳ್ಳಿ ಸೇರಿಸಿ ಕೆಂಪಗಾಗುವವರೆಗೆ ಹುರಿಯಿರಿ. ‌ನಂತರ ಸಣ್ಣದಾಗಿ ಕತ್ತರಿಸಿದ ಟೊಮೆಟೊ ಸೇರಿಸಿ. ಮೃದುವಾಗುವವರೆಗೆ ಬೇಯಿಸಿ. ಬಳಿಕ ಉಪ್ಪು, ಅರಿಶಿನ, ಬೆಳ್ಳುಳ್ಳಿ ಶುಂಠಿ ಪೇಸ್ಟ್ ಸೇರಿಸಿ ಸಣ್ಣ ಉರಿಯಲ್ಲಿ ಹುರಿಯಿರಿ. ಈಗ ಅದಕ್ಕೆ ಸಣ್ಣಗೆ ಹೆಚ್ಚಿದ ಕ್ಯಾಪ್ಸಿಕಂ ಸೇರಿಸಿ ಬೇಯಿಸಿಕೊಳ್ಳಿ. ಬಳಿಕ ಮೆಣಸಿನ ಪುಡಿ ಮತ್ತು ಪಾವ್ ಬಾಜಿ ಮಸಾಲೆ ಸೇರಿಸಿ 5 ನಿಮಿಷ ಚೆನ್ನಾಗಿ ಕಲಸಿ. ನಂತರ ಚಿಕ್ಕದಾಗಿ ಹೆಚ್ಚಿದ ಕೊತ್ತಂಬರಿ ಸೊಪ್ಪು ಮತ್ತು ಅನ್ನ ಸೇರಿಸಿ ಚೆನ್ನಾಗಿ ಬೆರೆಸಿ. ರುಚಿಯಾದ ಕ್ಯಾಪ್ಸಿಕಂ ಬಾತ್ ಸವಿಯಲು ಸಿದ್ಧವಾಗಿದೆ.

ಬದನೆ ಪಲಾವ್

ಬೇಕಾಗುವ ಸಾಮಗ್ರಿಗಳು

ಅಕ್ಕಿ – 2ಕಪ್
ಕೊತ್ತಂಬರಿ ಬೀಜ – 4 ಚಮಚ
ಚಕ್ಕೆ – 2 ತುಂಡು
ಲವಂಗ – 4
ಏಲಕ್ಕಿ – 2
ಪಲಾವ್ ಎಲೆ – 2
ಚಕ್ರಿ ಹೂ – 1
ಎಳ್ಳು – 2 ಚಮಚ
ತುಪ್ಪ – 3 ಚಮಚ
ಎಣ್ಣೆ – 2 ಚಮಚ
ಜೀರಿಗೆ – 1ಚಮಚ
ಈರುಳ್ಳಿ – 2
ಹಸಿಮೆಣಸಿನಕಾಯಿ – 4
ಆಲೂಗಡ್ಡೆ – 1
ಬದನೆಕಾಯಿ – 2
ಬೀನ್ಸ್ – 4
ಕೆಂಪು ಮೆಣಸಿನ ಪುಡಿ – 1ಚಮಚ
ಅರಿಶಿನ ಪುಡಿ – 1/2ಚಮಚ
ನಿಂಬೆ ರಸ – 2ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಕೊತ್ತಂಬರಿಸೊಪ್ಪು – ಸ್ವಲ್ಪ
Saakshatv cookingrecipe brinjal pulav

ಮಾಡುವ ವಿಧಾನ

ಮೊದಲಿಗೆ ಅಕ್ಕಿಯನ್ನು ತೊಳೆದು 10 ನಿಮಿಷ ನೆನೆಸಿಡಿ.
ಒಂದು ಬಾಣಲೆಯಲ್ಲಿ ‌ಕೊತ್ತಂಬರಿ ಬೀಜ, ಚಕ್ಕೆ, ಲವಂಗ, ಏಲಕ್ಕಿ, ಪಲಾವ್ ಎಲೆ, ಚಕ್ರಿ ಹೂ, ಎಳ್ಳು ಹಾಕಿ ಚೆನ್ನಾಗಿ ಹುರಿದು ತಣ್ಣಗಾದ ಮೇಲೆ ಮಿಕ್ಸಿ ಜಾರಿಗೆ ಹಾಕಿ ಪೌಡರ್ ಮಾಡಿಟ್ಟುಕೊಳ್ಳಿ.
ಈಗ ಕುಕ್ಕರ್ ನಲ್ಲಿ ತುಪ್ಪ ಮತ್ತು ‌ಎಣ್ಣೆ ಬಿಸಿ ‌ಮಾಡಿ‌. ಇದಕ್ಕೆ ಜೀರಿಗೆ, ಹೆಚ್ಚಿದ ಈರುಳ್ಳಿ ಹಾಕಿ ಹುರಿಯಿರಿ. ಈರುಳ್ಳಿ ಕೆಂಪಗಾದ ಬಳಿಕ ಕತ್ತರಿಸಿದ ‌ಹಸಿಮೆಣಸಿನಕಾಯಿ ಸೇರಿಸಿ ಹುರಿಯಿರಿ. ಈಗ ಚಿಕ್ಕದಾಗಿ ಕತ್ತರಿಸಿದ ಆಲೂಗಡ್ಡೆ, ಬದನೆಕಾಯಿ, ಬೀನ್ಸ್ ಸೇರಿಸಿ ಚೆನ್ನಾಗಿ ಹುರಿಯಿರಿ. ನಂತರ ಕೆಂಪು ಮೆಣಸಿನ ಪುಡಿ, ಅರಿಶಿನ ಪುಡಿ, ರುಬ್ಬಿಟ್ಟುಕೊಂಡ ಪೌಡರ್, ಉಪ್ಪು ಸೇರಿಸಿ ಚೆನ್ನಾಗಿ ಕಲಸಿ. ನಂತರ ನೆನೆಸಿಟ್ಟ ಅಕ್ಕಿಯ ನೀರನ್ನು ಸೋಸಿ ಅಕ್ಕಿಯನ್ನು ಸೇರಿಸಿ. 2 ನಿಮಿಷ ಚೆನ್ನಾಗಿ ಬೆರೆಸಿ. ನಂತರ ನೀರು ಸೇರಿಸಿ. ‌ಲಿಂಬೆರಸ ಹಿಂಡಿ.‌ ಕುಕ್ಕರ್ ಮುಚ್ಚಿ ಎರಡು ವಿಸಲ್ ಬರುವವರೆಗೆ ಬೇಯಿಸಿ. ನಂತರ ಅದಕ್ಕೆ ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿಸೊಪ್ಪು ಉದುರಿಸಿದರೆ, ರುಚಿಯಾದ ಬದನೆ ಪಲಾವ್ ಸವಿಯಲು ಸಿದ್ಧ.

Tags: #saakshatvcookingFoodrice batthveg bioriyani recipies
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram